ಕರಾವಳಿ

ದ.ಕ ಜಿಲ್ಲೆಯಲ್ಲಿ 6600 ಕುಟುಂಬಕ್ಕೆ ಬೆಳಕು – ಸಚಿವ ಸುನಿಲ್ ಕುಮಾರ್

ಸಮಗ್ರ ನ್ಯೂಸ್: ಬೆಳಕು ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 6,600 ಜನರಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಒಂದೂವರೆ ವರ್ಷದಲ್ಲಿ ರಾಜ್ಯದಲ್ಲಿ 200ಕ್ಕೂ ಹೆಚ್ಚು ಸಬ್‌ಸ್ಟೇಷನ್‌ ನಿರ್ಮಿಸಿದ್ದೇವೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌ ತಿಳಿಸಿದರು. ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತದ ವತಿಯಿಂದ 110/33/11 ಕೆ.ವಿ. ವಿದ್ಯುತ್‌ ಉಪಕೇಂದ್ರ ಸುಳ್ಯ ಮತ್ತು 110 ಕೆ.ವಿ. ಮಾಡಾವು-ಸುಳ್ಯ ವಿದ್ಯುತ್‌ ಪ್ರಸರಣ ಮಾರ್ಗದ ಕಾಮಗಾರಿಗೆ ಸುಳ್ಯದ ಅಂಬಟಡ್ಕ 33/11 ಕೆ.ವಿ. ಉಪ ಕೇಂದ್ರದ

ದ.ಕ ಜಿಲ್ಲೆಯಲ್ಲಿ 6600 ಕುಟುಂಬಕ್ಕೆ ಬೆಳಕು – ಸಚಿವ ಸುನಿಲ್ ಕುಮಾರ್ Read More »

ಸುಬ್ರಹ್ಮಣ್ಯ: ಕಾಣೆಯಾಗಿದ್ದ ಗ್ರಾ.ಪಂ ಸದಸ್ಯೆ ಪ್ರಿಯಕರನೊಂದಿಗೆ ಠಾಣೆಗೆ ಹಾಜರ್!!

ಸಮಗ್ರ ನ್ಯೂಸ್: ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ದ.ಕ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಸದಸ್ಯೆ ಭಾರತಿ ಮೂಕಮಲೆ ಜ. 5ರಂದು ಸುಬ್ರಹ್ಮಣ್ಯ ಠಾಣೆಗೆ ಪ್ರಿಯಕರನೊಂದಿಗೆ ಹಾಜರಾಗಿ ಆತನೊಂದಿಗೇ ತೆರಳಿದ್ದಾರೆ. ಭಾರತಿ ಮೂಕಮಲೆ ತನ್ನ ಪ್ರಿಯಕರ ನಂದನ್‌ ಮತ್ತು ಅವರ ನ್ಯಾಯವಾದಿ ಮುಖಾಂತರ ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ನಂದನ್‌ನೊಂದಿಗೆ ಜೀವನ ಮುಂದುವರೆಸುವ ನಿರ್ಧಾರ ಪ್ರಕಟಿಸಿದ್ದಾರೆ. ಠಾಣೆಯಲ್ಲಿ ತನ್ನ ನಿರ್ಧಾರವನ್ನು ಲಿಖೀತ ರೂಪದಲ್ಲಿ ಬರೆದು ಕೊಟ್ಟು ನಂದನ್‌ನೊಂದಿಗೆ ತೆರಳಿದ್ದಾರೆ. ತನ್ನಿಬ್ಬರು ಸಣ್ಣ ಹೆಣ್ಣು

ಸುಬ್ರಹ್ಮಣ್ಯ: ಕಾಣೆಯಾಗಿದ್ದ ಗ್ರಾ.ಪಂ ಸದಸ್ಯೆ ಪ್ರಿಯಕರನೊಂದಿಗೆ ಠಾಣೆಗೆ ಹಾಜರ್!! Read More »

ಕುಕ್ಕೆಸುಬ್ರಹ್ಮಣ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಹಿಂದೂ ಹುಡುಗಿಯ ಜೊತೆ ತಿರುಗಾಟ ನಡೆಸಿದ ಆರೋಪದಲ್ಲಿ ಮುಸ್ಲಿಂ ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಎಂದು ಗುರುತಿಸಲಾಗಿದೆ. ಯುವತಿಯ ಜೊತೆ ತಿರುಗಾಡುತ್ತಿದ್ದ ಎಂದು ಆರೋಪಿಸಿ ಯುವಕನೋರ್ವನಿಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರೆಂದು ಹೇಳಲಾದ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿತ್ತು. ಜ.5ರಂದು ಕಲ್ಲುಗುಂಡಿಯ ಹಫೀದ್ ಎಂಬಾತ ಸುಬ್ರಹ್ಮಣ್ಯಕ್ಕೆ ಬಂದಿದ್ದ ವೇಳೆ ಕುಮಾರಧಾರ ಬಳಿಯ ಹಳೆ ಕಟ್ಟಡದ

ಕುಕ್ಕೆಸುಬ್ರಹ್ಮಣ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್ Read More »

ಸುಳ್ಯ ತಾಲೂಕು ಆಡಳಿತದಲ್ಲಿ ಅಧಿಕಾರಿಗಳು ಆಡಿದ್ದೇ ಆಟ| ಮೌನಕ್ಕೆ ಶರಣಾದ ಜನಪ್ರತಿ”ನಿಧಿ”ಗಳು|

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನಾದ್ಯಂತ ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಮರಳು ಗಣಿಗಾರಿಕೆಯಲ್ಲಿ ವಾಸನೆ ಬಡಿಯುತ್ತಿದ್ದು ಇದೀಗ ಇದೇ ರೀತಿಯಲ್ಲಿ ನ್ಯಾಯಾಲಯದ ಆದೇಶ ಧಿಕ್ಕರಿಸಿ ಅಕ್ರಮವಾಗಿ ಕಟ್ಟಡವನ್ನು ನಿರ್ಮಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಸುಳ್ಯದಲ್ಲಿ ಹಲವಾರು ತಿಂಗಳುಗಳ ಕಾಲ ಪೋಲೀಸ್ ಕಾವಲು ಕುಳಿತು ಕೋಮು ಸಂಘರ್ಷವನ್ನು ತಹಬದಿಗೆ ತಂದಿರುವ ಮೇನಾಲ ದರ್ಗಾ ಬಳಿಯ 155/1 ಮತ್ತು 155/ 2 ಸರ್ವೆ ನಂಬರ್ ಸರಕಾರಿ ಸ್ಥಳವಾಗಿದ್ದು ಕೆಲ ದಿನಗಳ ಹಿಂದೆ ಕಾಂಪೌಂಡ್ ವಿಚಾರವಾಗಿ ಭಾರಿ ಹೈ ಡ್ರಾಮವೇ ನಡೆದು

ಸುಳ್ಯ ತಾಲೂಕು ಆಡಳಿತದಲ್ಲಿ ಅಧಿಕಾರಿಗಳು ಆಡಿದ್ದೇ ಆಟ| ಮೌನಕ್ಕೆ ಶರಣಾದ ಜನಪ್ರತಿ”ನಿಧಿ”ಗಳು| Read More »

ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ ಹಿನ್ನಲೆ ಖಾಸಗಿ‌ ಕಾಲೇಜಿನ ಮೇಲೆ ಎನ್ಐಎ ದಾಳಿ| ಓರ್ವ ವಿದ್ಯಾರ್ಥಿ ವಶಕ್ಕೆ

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದಂತ ಆಟೋದಲ್ಲಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್‌ಐಎ ಚುರುಕುಗೊಳಿಸಿದೆ. ಈ ಸಂಬಂಧ ನಗರದಲ್ಲಿನ ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದು, ಪಿ.ಎ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ತಾಜುದ್ದೀನ್ ಶೇಖ್ ಎಂಬಾತನನ್ನು ವಶಕ್ಕೆ ಪಡೆದಿದ್ದಾಗಿ ತಿಳಿದು ಬಂದಿದೆ. ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣ ಸಂಬಂಧ ಉಗ್ರ ಶಾರಿಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆತ ನೀಡಿದ

ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ ಹಿನ್ನಲೆ ಖಾಸಗಿ‌ ಕಾಲೇಜಿನ ಮೇಲೆ ಎನ್ಐಎ ದಾಳಿ| ಓರ್ವ ವಿದ್ಯಾರ್ಥಿ ವಶಕ್ಕೆ Read More »

ಮಂಗಳೂರು: ಎನ್ ಐಎ ದಾಳಿ|ಶಂಕಿತ ಉಗ್ರನ ಜತೆಗೆ ಸಂಪರ್ಕ ಹೊಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ

ಸಮಗ್ರ ನ್ಯೂಸ್: ಕೊಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿದ ಏಳು ಮಂದಿಯ ಎನ್ ಐಎ ತಂಡ ಶಿವಮೊಗ್ಗದಿಂದ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ಜತೆಗೆ ಸಂಪರ್ಕ ಹೊಂದಿದ್ದ ವಿದ್ಯಾರ್ಥಿಯನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಮೆಕ್ಯಾನಿಕಲ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಉಡುಪಿ ಮೂಲದ ರಿಹಾನ್ ಶೇಖ್ ವಶದಲ್ಲಿರುವಾತ. ಈತ ಶಿವಮೊಗ್ಗದ ಪುರಲೆ ಸಮೀಪದ ತುಂಗಾ ನದಿ ತೀರದಲ್ಲಿ ಪ್ರಾಯೋಗಿಕವಾಗಿ ಸ್ಪೋಟಕವನ್ನು ಸ್ಪೋಟಿಸುತ್ತಿದ್ದ ಪ್ರಕರಣದಲ್ಲಿ ಐಸಿಸ್ ಉಗ್ರ ಸಂಘಟನೆ ಜತೆಗೆ ಸಂಪರ್ಕ ಹೊಂದಿದ್ದರೆನ್ನಲಾದ

ಮಂಗಳೂರು: ಎನ್ ಐಎ ದಾಳಿ|ಶಂಕಿತ ಉಗ್ರನ ಜತೆಗೆ ಸಂಪರ್ಕ ಹೊಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ Read More »

ಪುತ್ತೂರು: ಚಿಗುರು ಮೀಸೆ ಹುಡುಗನಿಂದ ಅಮಾಯಕ ಹೆಣ್ಮಕ್ಕಳಿಗೆ ಕಿರುಕುಳ| ಕಾಮುಕನ ಮೇಲೆ ಫೋಕ್ಸೋ ದಾಖಲಿಸಿದ ಪೊಲೀಸರು

ಸಮಗ್ರ ನ್ಯೂಸ್: ಮೀಸೆ ಚಿಗುರುವ ಹೊತ್ತಿನಲ್ಲಿ ಕಾಮ ತೀರಿಸಿಕೊಳ್ಳಲು ಅಮಾಯಕ ಹೆಣ್ಣು ಮಕ್ಕಳನ್ನು ಬಳಸಿಕೊಳ್ಳುತ್ತಿದ್ದ ಕಾಮುಕ ಯುವಕನೋರ್ವನ ವಿರುದ್ಧ ಪುತ್ತೂರಿನ ಸಂಪ್ಯ ಹೊರಠಾಣೆ ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಪುತ್ತೂರಿನಲ್ಲಿ ಖಾಸಗಿ ಕೆಲಸ ಮಾಡುತ್ತಿರುವ ನಿತೇಶ್ ರೈ ಎಂದು ಆರೋಪಿಯನ್ನು ಗುರುತಿಸಲಾಗಿದ್ದು ಈತನ ಕಾಮದ ವಿಚಾರ ಎರಡು ಮೂರು ತಿಂಗಳ ಹಿಂದೆ ಬಯಲಾಗಿತ್ತು. ಈತ ನೀಡಿದ ಕಿರುಕುಳದ ಬಗ್ಗೆ ಹಲವು ಹೆಣ್ಣು ಮಕ್ಕಳು ಆರೋಪವನ್ನು ಮಾಡಿದ್ದರು. ಈತ ತನ್ನ ಕೆಲಸದ ಸಂದರ್ಭಗಳಲ್ಲಿ ಹಲವು ಊರುಗಳಿಗೆ ತೆರಳುತ್ತಿದ್ದ. ಈ

ಪುತ್ತೂರು: ಚಿಗುರು ಮೀಸೆ ಹುಡುಗನಿಂದ ಅಮಾಯಕ ಹೆಣ್ಮಕ್ಕಳಿಗೆ ಕಿರುಕುಳ| ಕಾಮುಕನ ಮೇಲೆ ಫೋಕ್ಸೋ ದಾಖಲಿಸಿದ ಪೊಲೀಸರು Read More »

ಮನವಿ ಕೊಟ್ರೆ ಕೆಲ್ಸ ಆಗಲ್ಲ; ಸರ್ಕಾರ ದುಡ್ಡು ಕೊಟ್ರೆ ಮಾತ್ರ ಕೆಲ್ಸ ಆಗುತ್ತೆ| ಸಚಿವನಾಗಿದ್ರೂ ಬೇರೆ ಪಕ್ಷದ ಶಾಸಕನಂತೆ ಹೇಳಿಕೆ‌ ನೀಡಿದ ಎಸ್.ಅಂಗಾರ

ಸಮಗ್ರ ನ್ಯೂಸ್: ನಾಗರೀಕರು ಮನವಿ ಕೊಟ್ಟರೆ ಯಾವುದೇ ಕೆಲಸಗಳು ಆಗುವುದಿಲ್ಲ. ಕಾಮಗಾರಿ‌ ನಡೆಸಲು ಸರ್ಕಾರ ಹಣ‌ ಬಿಡುಗಡೆ‌ ಮಾಡಬೇಕು, ಮನವಿ ಕೊಟ್ಟ ಮಾತ್ರಕ್ಕೆ ಕೆಲಸವಾಗದು, ಎಂದು ಸಚಿವ ಎಸ್.ಅಂಗಾರ ಹೇಳಿದ್ದಾರೆ. ಸಚಿವರ ಈ ಒಟ್ಟಾರೆ ಹೇಳಿಕೆಯಿಂದ ಕಡಬ ತಾಲೂಕಿನ ಬಲ್ಯ ಗ್ರಾಮದ ಜನರಿಗೆ ನಾವು ಬೇರೆ ಪಕ್ಷದ ಶಾಸಕನೊಂದಿಗೆ ಮಾತನಾಡ್ತಿದ್ದೆವೆಯೋ ಎಂಬ ಅನುಮಾನ ಕಾಡಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಮತದಾರರ ಆಕ್ರೋಶ ಅಲ್ಲಲ್ಲಿ ಪ್ರಕಟವಾಗತೊಡಗಿದ್ದು, ಗುದ್ದಲಿ ಪೂಜೆಗೆಂದು ಆಗಮಿಸಿದ ಸುಳ್ಯ ಶಾಸಕ , ಸಚಿವ ಎಸ್‌.ಅಂಗಾರ ಅವರಿಗೆ ‘ಮೊದಲು

ಮನವಿ ಕೊಟ್ರೆ ಕೆಲ್ಸ ಆಗಲ್ಲ; ಸರ್ಕಾರ ದುಡ್ಡು ಕೊಟ್ರೆ ಮಾತ್ರ ಕೆಲ್ಸ ಆಗುತ್ತೆ| ಸಚಿವನಾಗಿದ್ರೂ ಬೇರೆ ಪಕ್ಷದ ಶಾಸಕನಂತೆ ಹೇಳಿಕೆ‌ ನೀಡಿದ ಎಸ್.ಅಂಗಾರ Read More »

ಸುಳ್ಯ ಜಾತ್ರೋತ್ಸವದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ| ತುರ್ತುಸಭೆಯಲ್ಲಿ ಸಂಘಟನೆಗಳ ಒತ್ತಡಕ್ಕೆ ಮಣಿದ ಆಡಳಿತ ಮಂಡಳಿ

ಸಮಗ್ರ ನ್ಯೂಸ್: ಸುಳ್ಯ ಜಾತ್ರೋತ್ಸವದಲ್ಲಿ ಎಲ್ಲ ಧರ್ಮೀಯರಿಗೆ ಮುಕ್ತ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಆಡಳಿತ ಮಂಡಳಿ ಸಭೆಯಲ್ಲಿ ಈ ಮೊದಲು ಘೋಷಿಸಲಾಗಿದ್ದು, ಇದನ್ನು ಹಿಂದೂ ಸಂಘಟನೆಗಳು ವಿರೋಧ ಮಾಡಿದ್ದವು. ಈ ಕುರಿತಂತೆ ಇಂದು ತುರ್ತು ಸಭೆ ನಡೆಸಿದ ಹಿಂದೂ ಸಂಘಟನೆಗಳ ಪ್ರಮುಖರು ಹಿಂದೂಗಳಿಗೆ ಮಾತ್ರ ಅವಕಾಶ ನೀಡಬೇಕೆಂದು ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ|ಕೆ.ವಿ. ಚಿದಾನಂದ ಅವರಿಗೆ ಮನವಿ ಮಾಡಿದ್ದರು. ತಕ್ಷಣ ಇದಕ್ಕೆ ಸ್ಪಂದಿಸಿದ ಡಾ|ಕೆ.ವಿ. ಚಿದಾನಂದ ಅವರು ತುರ್ತು ಸಭೆಯನ್ನು ಕರೆದಿದ್ದರು. ಅದರಂತೆ

ಸುಳ್ಯ ಜಾತ್ರೋತ್ಸವದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ| ತುರ್ತುಸಭೆಯಲ್ಲಿ ಸಂಘಟನೆಗಳ ಒತ್ತಡಕ್ಕೆ ಮಣಿದ ಆಡಳಿತ ಮಂಡಳಿ Read More »

ಕರ್ನಾಟಕದಲ್ಲಿ ಕಾಣಿಸಿಕೊಂಡ ಓಮಿಕ್ರಾನ್ XBB 1.5 ಉಪತಳಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕೊರೊನಾ ಸೋಂಕಿನ ಹೆಚ್ಚಳದ ಆತಂಕದ ನಡುವೆಯೇ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ಅಮೆರಿಕದ ಜನರನ್ನು ಕಾಡಿದ್ದ ಕೋವಿಡ್ ಒಮಿಕ್ರಾನ್ ನ ಎಕ್ಸ್ ಬಿಬಿ 1.5 ಉಪತಳಿ ಕರ್ನಾಟಕದಲ್ಲೂ ಪತ್ತೆಯಾಗಿದೆ. ಜಿನೋಮಿಕ್ ಸೀಕ್ವೇನ್ಸ್ ಪರೀಕ್ಷೆಯಲ್ಲಿ ಉಪತಳಿ ಎಕ್ಸ್ ಬಿಬಿ 1.5 ಸೋಂಕು ಪತ್ತೆಯಾಗಿದ್ದು, ದೇಶದಲ್ಲಿ ಎಚ್ ಬಿಬಿ 1.5 ತಳಿಯ ಸೋಂಕು ಪ್ರಕರಣಗಳ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಒಂದು, ಗುಜರಾತ್ ನಲ್ಲಿ ಮೂವರಲ್ಲಿ ಹಾಗೂ ಕರ್ನಾಟಕದ ಒಬ್ಬರಲ್ಲಿ ಎಕ್ಸ್ ಬಿಬಿ 1.5

ಕರ್ನಾಟಕದಲ್ಲಿ ಕಾಣಿಸಿಕೊಂಡ ಓಮಿಕ್ರಾನ್ XBB 1.5 ಉಪತಳಿ Read More »