ಕರಾವಳಿ

ರಾಜ್ಯ ಐಎಂಎ ಕುಟುಂಬ ವೈದ್ಯರ ರಾಜ್ಯ ನಿರ್ದೇಶಕರಾಗಿ ಡಾ. ಅಣ್ಣಯ್ಯ ಕುಲಾಲ್ ಅವಿರೋಧ ಆಯ್ಕೆ

ಮಂಗಳೂರು: 1927ರಲ್ಲಿ ಆರಂಭವಾಗಿರುವ ಭಾರತೀಯ ವೈದ್ಯಕೀಯ ಸಂಘದ ಪ್ರತಿಷ್ಠಿತ ಅಂಗ ಸಂಸ್ಥೆಗಳಲ್ಲಿ ಒಂದಾಗಿರುವ ಕರ್ನಾಟಕ ರಾಜ್ಯ ಕುಟುಂಬ ವೈದ್ಯರ (ಐಎಂಎ) ನಿರ್ದೇಶಕ/ಅಧ್ಯಕ್ಷರಾಗಿ ಖ್ಯಾತ ಕುಟುಂಬ ವೈದ್ಯರಾದ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು 2022-24 ರ ಸಾಲಿಗೆ ಅವಿರೋದವಾಗಿ ಆಯ್ಕೆ ಆಗಿರುತ್ತಾರೆ ಎಂದು ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಶಾಖೆಯ ಪ್ರಕಟಣೆ ತಿಳಿಸಿದೆ. ಮಂಗಳೂರು ಕುಟುಂಬ ವೈದ್ಯರ ಸಂಘದ ಸ್ಥಾಪಕ ಕಾರ್ಯದರ್ಶಿ, ಪ್ರಸ್ತುತ ಅಧ್ಯಕ್ಷರೂ ಆಗಿರುವ ಡಾ ಕುಲಾಲ್ ಈ ಹಿಂದೆ 2012 ರಲ್ಲಿ ಇದೆ ಹುದ್ದೆಯನ್ನ ಅಲಂಕರಿಸಿ […]

ರಾಜ್ಯ ಐಎಂಎ ಕುಟುಂಬ ವೈದ್ಯರ ರಾಜ್ಯ ನಿರ್ದೇಶಕರಾಗಿ ಡಾ. ಅಣ್ಣಯ್ಯ ಕುಲಾಲ್ ಅವಿರೋಧ ಆಯ್ಕೆ Read More »

ಬಂಟ್ವಾಳ:ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನ…!!

ಸಮಗ್ರ ನ್ಯೂಸ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ಯಿಯ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಸಮೀಪ ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನಿಸಿದ ಗಂಭೀರ ಆರೋಪ ಕೇಳಿ ಬಂದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ. ಡಿ. 14ರಂದು ಇಬ್ಬರು ಮಕ್ಕಳ ತಮ್ಮ ಮನೆಯಿಂದ ಕುಟ್ಟಿಕಳ ಹಿ.ಪ್ರಾ.ಶಾಲೆಗೆ ಆಗಮಿಸುತ್ತಿದ್ದ ವೇಳೆ ಕಾರೊಂದಲ್ಲಿ ಬಂದ ವ್ಯಕ್ತಿ ಅಂಗಿಯಲ್ಲಿ ಎಳೆಯಲು ಯತ್ನಿಸಿದ್ದು, ಈ ವೇಳೆ ಮಕ್ಕಳ ಅಂಗಿಯ ಗುಬ್ಬಿಗಳು ಎದ್ದು ಹೋಗಿದೆ. ಘಟನೆಯ ಕುರಿತು ಮಕ್ಕಳು ಪೋಷಕರಿಗೆ ಮಾಹಿತಿ ನೀಡಿದ್ದು,

ಬಂಟ್ವಾಳ:ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನ…!! Read More »

ಸುಳ್ಯ: ವಿವಿಧ ಬೇಡಿಕೆ ಈಡೇರಿಕೆಗಾಗಿ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ

ಸಮಗ್ರ ನ್ಯೂಸ್: ವಿವಿಧ ಬೇಡಿಕೆ ಈಡೇರಿಕೆಗಾಗಿ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಡಿ.೧೯ರಂದು ಸುಳ್ಯ ತಾಲೂಕು ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಸುಂದರ ಪಾಟಾಜೆ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಸುಳ್ಯ ತಾಲೂಕಿನಲ್ಲಿ ಒಟ್ಟು ೭೦೦ ಎಕ್ರೆ ಡಿಸಿ ಮನ್ನಾಜಾಗ ಇದೆ. ಅದರಲ್ಲಿ ೩೦೦ ಎಕ್ರೆ ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಿಕ್ಕಿದೆ. ಉಳಿದ ಜಾಗವೆಲ್ಲ ಮೇಲ್ವರ್ಗದವರು ರೆಕಾರ್ಡ್ ಮಾಡಿಕೊಂಡಿದ್ದಾರೆ. ಇದನ್ನು ಸರ್ವೆ ಮಾಡಿ ಪ.ಜಾತಿ

ಸುಳ್ಯ: ವಿವಿಧ ಬೇಡಿಕೆ ಈಡೇರಿಕೆಗಾಗಿ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ Read More »

ಮುಸ್ಲಿಂ ಯುವಕನಿಗೆ ಲವ್ ಲೆಟರ್ ಬರೆದ ಹಿಂದೂ ವಿದ್ಯಾರ್ಥಿನಿ| ಎರಡೂ ಕೋಮಿನವರು ಸಸ್ಪೆಂಡ್

ಸಮಗ್ರ ನ್ಯೂಸ್: ಖಾಸಗಿ ವಿದ್ಯಾಸಂಸ್ಥೆಯ ಹಿಂದೂ ವಿದ್ಯಾರ್ಥಿನಿಯೋರ್ವಳು ಮುಸ್ಲಿಂ ಯುವಕನಿಗೆ ಪತ್ರ ಬರೆದ ವಿಚಾರವಾಗಿ ಗೊಂದಲವುಂಟು ಮಾಡಿದ ಎರಡೂ ಕೋಮಿನ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಬಗ್ಗೆ ವರದಿಯಾಗಿದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಬಂಟ್ವಾಳ ತಾಲೂಕಿನ ಕೇಪು ಮೂಲದ ಹಿಂದೂ ವಿದ್ಯಾರ್ಥಿನಿ ಹಾಗೂ ಕೆಲಿಂಜದ ಮುಸ್ಲಿಂ ವಿದ್ಯಾರ್ಥಿ ನಡುವೆ ಪ್ರೇಮಾಂಕುರವಾಗಿದ್ದು, ಈ ಹಿಂದೆಯೇ ಪ್ರಾಂಶುಪಾಲರು ಇಬ್ಬರಿಗೂ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಇದರ ಮುಂದುವರಿದ ಭಾಗವಾಗಿ ಬ್ಯಾಗ್ ನಲ್ಲಿ ಲವ್ ಲೆಟರ್ ಪತ್ತೆಯಾಗಿದ್ದು, ಎರಡು ಕೋಮಿನ ವಿದ್ಯಾರ್ಥಿಗಳು ಗುಂಪು

ಮುಸ್ಲಿಂ ಯುವಕನಿಗೆ ಲವ್ ಲೆಟರ್ ಬರೆದ ಹಿಂದೂ ವಿದ್ಯಾರ್ಥಿನಿ| ಎರಡೂ ಕೋಮಿನವರು ಸಸ್ಪೆಂಡ್ Read More »

ಉಡುಪಿಯಲ್ಲಿ ಡಿ.15ರಂದು ಎನ್.ಸಿ.ಎಸ್ ಉದ್ಯೋಗ ಮೇಳ| ವಿವರಗಳಿಗಾಗಿ ಇಲ್ಲಿ ನೋಡಿ…

ಸಮಗ್ರ ನ್ಯೂಸ್ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಎನ್.ಸಿ.ಎಸ್ ಉದ್ಯೋಗ ಮೇಳವು ಡಿಸೆಂಬರ್ 15 ರಂದು ಬೆಳಗ್ಗೆ 10.30 ಕ್ಕೆ ಪೆರ್ಡೂರು ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿAಗ್, ಡಿಪ್ಲೋಮಾ ಬಿ.ಸಿ.ಎ, ಬಿ.ಸಿ.ಎಸ್, ಎಮ್.ಸಿ.ಎ, ಬಿ.ಕಾಂ, ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ

ಉಡುಪಿಯಲ್ಲಿ ಡಿ.15ರಂದು ಎನ್.ಸಿ.ಎಸ್ ಉದ್ಯೋಗ ಮೇಳ| ವಿವರಗಳಿಗಾಗಿ ಇಲ್ಲಿ ನೋಡಿ… Read More »

ಬೆಳ್ತಂಗಡಿ: ಜ್ವರದಿಂದ ಬಳಲಿ ಯುವತಿ ಸಾವು

ಸಮಗ್ರ ನ್ಯೂಸ್: ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಯುವತಿಯನ್ನು ತಾಲೂಕಿನ ತೆಂಕಕಾರಂದೂರು ಗ್ರಾಮದ ಸಿಂಗ ಎಂಬವರ ಪುತ್ರಿ ಪವಿತ್ರ(22) ಎಂದು ಗುರುತಿಸಲಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಪವಿತ್ರಾಳನ್ನು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು ಎಂದು ತಿಳಿದುಬಂದಿದೆ

ಬೆಳ್ತಂಗಡಿ: ಜ್ವರದಿಂದ ಬಳಲಿ ಯುವತಿ ಸಾವು Read More »

ಮಂಗಳೂರು: ವ್ಯಕ್ತಿಯೊರ್ವನಿಗೆ ನೋಟಿನ ಬ್ಯಾಗ್‌ ಸಿಕ್ಕಿದ ಪ್ರಕರಣ| ವಾರಸುದಾರ ಠಾಣೆಗೆ ಹಾಜರು

ಸಮಗ್ರ ನ್ಯೂಸ್: ಪಂಪ್‌ವೆಲ್‌ನಲ್ಲಿ ವ್ಯಕ್ತಿಯೊರ್ವನಿಗೆ ನೋಟಿನ ಬ್ಯಾಗ್‌ ದೊರೆತಿದ್ದು, ಸುದ್ದಿ ವೈರಲ್ ಅಗುತ್ತಿದ್ದಂತೆ ಭಾರೀ ಸಂಚಲನ ಕೂಡ ಮೂಡಿತ್ತು. ಇದೀಗ ಪತ್ತೆಯಾಗಿದ್ದ ನೋಟುಗಳ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ವರದಿಯಾಗಿದೆ. ಠಾಣೆಗೆ ಹಾಜರಾದ ವ್ಯಕ್ತಿ ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ ತೆಗೆದುಕೊಂಡು ಹೋಗುವಾಗ ಬಿದ್ದಿದೆ. ಅದರಲ್ಲಿ ಒಟ್ಟು 10 ಲ.ರೂ ಇತ್ತು ಎಂಬುದಾಗಿ ಆ ವ್ಯಕ್ತಿ ಪೊಲೀಸರಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನ್ಯಾಯಾಲಯದಲ್ಲಿ ದೃಢಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು

ಮಂಗಳೂರು: ವ್ಯಕ್ತಿಯೊರ್ವನಿಗೆ ನೋಟಿನ ಬ್ಯಾಗ್‌ ಸಿಕ್ಕಿದ ಪ್ರಕರಣ| ವಾರಸುದಾರ ಠಾಣೆಗೆ ಹಾಜರು Read More »

ಕಾರು ಪಲ್ಟಿ| ಸುಳ್ಯ ಮೂಲದ ತಾಯಿ, ಮಗು ಮೃತ್ಯು

ಸಮಗ್ರ ನ್ಯೂಸ್: ಇನೋವಾ ಕಾರೊಂದು ಸ್ಕಿಡ್ ಆಗಿ ಪಲ್ಟಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಸುಳ್ಯ ಮೂಲದ ಇಬ್ಬರು ಮೃತಪಟ್ಟಿದ್ದು ಹಾಗೂ ನಾಲ್ವರು ತೀವ್ರ ಗಾಯಗೊಂಡ ಘಟನೆ ಜಾಲ್ಸೂರು – ಕಾಸರಗೋಡು ರಸ್ತೆಯ ಪರಪ್ಪೆ ಬಳಿ ಸಂಭವಿಸಿದೆ. ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಪರಪ್ಪೆಯ ಶಾನ್ ಎಂಬವರ ಪತ್ನಿ ಶಾಹಿನಾ(28) ಹಾಗೂ ಮಗು ೩ ವರ್ಷ ಪ್ರಾಯದ ಶಜಾ ಮೃತಪಟ್ಟಿದ್ದಾರೆ. ಇನ್ನೂ ಕಾರಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು ಅವರನ್ನು ಕಾಸರಗೋಡು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಂಗಳೂರಿನ

ಕಾರು ಪಲ್ಟಿ| ಸುಳ್ಯ ಮೂಲದ ತಾಯಿ, ಮಗು ಮೃತ್ಯು Read More »

ಪುತ್ತೂರು: ಆಳ್ವಾಸ್ ಕಾಲೇಜಿನ ವೈಟ್ ಲಿಪ್ಟಿಂಗ್ ಕೋಚ್ ಗೆ ಹೃದಯಾಘಾತ

ಸಮಗ್ರ ನ್ಯೂಸ್: ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಸುಳ್ಯಪದವು ನಿವಾಸಿ ಪ್ರಸ್ತುತ ಪಡೀಲಿನಲ್ಲಿ ವಾಸವಿರುವ ರಾಜೇಂದ್ರ ಪ್ರಸಾದ್(42) ರವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತ ರಾಜೇಂದ್ರ ಪ್ರಸಾದ್ ರವರಿಗೆ ಮನೆಯಲ್ಲಿದ್ದ ಸಂದರ್ಭ ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಸ್ವತಃ ತಮ್ಮ ಕಾರಿನಲ್ಲಿ ಡ್ರೈವ್ ಮಾಡಿಕೊಂಡು ರಾಜೇಂದ್ರ ಪ್ರಸಾದ್ ರವರು ತಮ್ಮ ಮಗಳನ್ನು ಶಾಲೆಗೆ ಬಿಟ್ಟು ಬಳಿಕ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಆದರೆ ಅಲ್ಲಿ ಇಸಿಜಿ ತೆಗೆಯುವ

ಪುತ್ತೂರು: ಆಳ್ವಾಸ್ ಕಾಲೇಜಿನ ವೈಟ್ ಲಿಪ್ಟಿಂಗ್ ಕೋಚ್ ಗೆ ಹೃದಯಾಘಾತ Read More »

“ಸಮಾಜಪರ ಕಾಳಜಿಯ ವೀರಕೇಸರಿ ಸಮಾಜಕ್ಕೆ ಮಾದರಿ ಸಂಘಟನೆ”
-ಶಾಸಕ ವೈ. ಭರತ್ ಶೆಟ್ಟಿ

“ವೀರಕೇಸರಿ ಕಪ್ 2022” ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಮಂಗಳೂರು: ಸಾಮಾಜಿಕ ಸಂಘಟನೆಯಾದ “ವೀರಕೇಸರಿ” ಇದರ ಆಶ್ರಯದಲ್ಲಿ ವೀರಕೇಸರಿ ಕಪ್-2022 ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಕ್ರೀಡಾಕೂಟ ಇತ್ತೀಚಿಗೆ ಶುಭಾಷಿತನಗರ ಬಳಿಯ ಮೈದಾನದಲ್ಲಿ ನಡೆಯಿತು.ಮಂಗಳೂರು ಉತ್ತರ ಕ್ಷೇತ್ರ ಶಾಸಕ ಭರತ್ ವೈ. ಶೆಟ್ಟಿ ಅವರು ಬೆಲೂನ್ ಹಾರಿಬಿಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಬಳಿಕ ಸಭೆಯನ್ನುದ್ದೇಶಿಸಿ ಮಾತಾಡಿದ ಅವರು, “44 ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿರುವ ವೀರಕೇಸರಿ ಸಂಘಟನೆ ಸಮಾಜಕ್ಕೆ ಮಾದರಿಯಾಗಿದೆ. ಸ್ವಂತಕ್ಕೆ ಸ್ವಲ್ಪ ಉಳಿಸಿಕೊಂಡು

“ಸಮಾಜಪರ ಕಾಳಜಿಯ ವೀರಕೇಸರಿ ಸಮಾಜಕ್ಕೆ ಮಾದರಿ ಸಂಘಟನೆ”
-ಶಾಸಕ ವೈ. ಭರತ್ ಶೆಟ್ಟಿ
Read More »