ಕರಾವಳಿ

ಡಿ.12ರಿಂದ ಯಶವಂತಪುರ- ಮುರುಡೇಶ್ವರ ವಿಶೇಷ ರೈಲು ಸಂಚಾರ

ಸಮಗ್ರ ನ್ಯೂಸ್: ಪ್ರಯಾಣಿಕರಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಯಶವಂತಪುರ – ಮುರುಡೇಶ್ವರ ನಡುವೆ ಸಾಪ್ತಾಹಿಕ ವಿಶೇಷ ರೈಲು ಆರಂಭಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ. ಡಿಸೆಂಬರ್ 10 ರಿಂದ ಜನವರಿ 28 ರ ವರೆಗೆ ಯಶವಂತಪುರ ನಿಲ್ದಾಣದಿಂದ ಪ್ರತಿ ಶನಿವಾರ ರಾತ್ರಿ 11.55 ಕ್ಕೆ ಈ ರೈಲು ಹೊರಡಲಿದ್ದು ಮರುದಿನ ಮಧ್ಯಾಹ್ನ 12.55 ಕ್ಕೆ ಮುರುಡೇಶ್ವರ ತಲುಪಲಿದೆ. ಅದೇ ರೀತಿ ಡಿಸೆಂಬರ್ 11 ರಿಂದ ಜನವರಿ 29 ರವರೆಗೆ ಮುರುಡೇಶ್ವರ ನಿಲ್ದಾಣದಿಂದ ಪ್ರತಿ ಭಾನುವಾರ ಮಧ್ಯಾನ 1.30 […]

ಡಿ.12ರಿಂದ ಯಶವಂತಪುರ- ಮುರುಡೇಶ್ವರ ವಿಶೇಷ ರೈಲು ಸಂಚಾರ Read More »

ವಿಟ್ಲ: ಛದ್ಮವೇಶದಲ್ಲೂ ‘ಕಾಂತಾರ’ ದೈವ – ತೀವ್ರ ಆಕ್ರೋಶ

ಸಮಗ್ರ ನ್ಯೂಸ್: ವಿಟ್ಲದ ಖಾಸಗಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶವನ್ನು ಛದ್ಮವೇಶದ ಮೂಲಕ ಪ್ರದರ್ಶಿಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಿಷಬ್‌ ಶೆಟ್ಟಿ ಅಭಿನಯದ ಕಾಂತಾರ ಚಲನಚಿತ್ರ ಇನ್ನಿಲ್ಲದಂತೆ ಯಶಸ್ವಿ ಕಂಡ ಬಳಿಕ ಎಲ್ಲೆಡೆ ದೈವಾರಾಧನೆ, ಭೂತಾರಾಧನೆ ಬಗ್ಗೆ ಜನತೆಗೆ ಒಲವು ಜಾಸ್ತಿಯಾಗಿದೆ. ಇದೇ ವೇಳೆ ಕೆಲವರು ಭೂತಾರಾಧನೆಯ ವೇಷ ಹಾಕಿಕೊಂಡು ವೇದಿಕೆಗೆ ಏರಿ ದೈವಕ್ಕೆ ಅಪಚಾರ ಎಸಗುವ ಕೆಲಸ ಮಾಡುತ್ತಿದ್ದಾರೆ. ಟಿವಿಗಳಲ್ಲಿನ ರಿಯಾಲಿಟಿ ಶೋಗಳಲ್ಲಿ ಕಾಂತಾರ ಚಲನಚಿತ್ರದಲ್ಲಿ ಕಾಣುವ ಪಂಜುರ್ಲಿಯಂತೆ

ವಿಟ್ಲ: ಛದ್ಮವೇಶದಲ್ಲೂ ‘ಕಾಂತಾರ’ ದೈವ – ತೀವ್ರ ಆಕ್ರೋಶ Read More »

ಮಂಗಳೂರು: ‘ಮಲೇಷ್ಯಾ ಮರಳನ್ನು ಕೆಲವೇ ದಿನಗಳಲ್ಲಿ ವಿತರಿಸಲಾಗುವುದು’- ಡಿ.ಸಿ

ಸಮಗ್ರ ನ್ಯೂಸ್: ಮಲೇಷ್ಯಾದಿಂದ ಐದು ವರ್ಷಗಳ ಹಿಂದೆ ಆಮದು ಮಾಡಿ ನವಮಂಗಳೂರು ಬಂದರಿನಲ್ಲಿ ಶೇಖರಿಸಿಟ್ಟಿರುವ ಮರಳನ್ನು ಕೆಲವೇ ದಿನಗಳಲ್ಲಿ ಜಿಲ್ಲೆಯಲ್ಲಿ ವಿತರಿಸುವುದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಎನ್‌ಎಂಪಿಎಯಲ್ಲಿ ಅಷ್ಟು ಪ್ರಮಾಣದ ಮರಳು ಸಂಗ್ರಹ ಇರುವ ವಿಚಾರ ತಿಳಿದು ಅಚ್ಚರಿಯಾಗಿದ್ದು, ಇದು ಎಂಸ್ಯಾಂಡ್‌ ಅಲ್ಲ, ಆದರೆ ಉತ್ತಮ ಗುಣಮಟ್ಟದ ಮರಳಾಗಿದೆ. ಅದನ್ನು 10 ಟನ್‌ಗೆ 10,000 ರೂ.ಗಳಂತೆ ಜಿಲ್ಲೆಯಲ್ಲಿ ಪೂರೈಕೆ ಮಾಡಲಾಗುವುದು ಎಂದರು. ಇನ್ನು ಜಿಲ್ಲೆಯಲ್ಲಿ

ಮಂಗಳೂರು: ‘ಮಲೇಷ್ಯಾ ಮರಳನ್ನು ಕೆಲವೇ ದಿನಗಳಲ್ಲಿ ವಿತರಿಸಲಾಗುವುದು’- ಡಿ.ಸಿ Read More »

ಕತಾರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬಂಟ್ವಾಳದ ಫಹದ್ ಸಾವು

ಸಮಗ್ರ ನ್ಯೂಸ್: ಕತಾರ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಕಂಚಿನಡ್ಕ ಪದವು ಸಮೀಪದ ಚಟ್ಟೆಕಲ್ಲು ನಿವಾಸಿ ಫಹದ್ ಮೃತಪಟ್ಟ ಯುವಕ. ಈತಈ ಹಿಂದೆ ಒಂದು ವರ್ಷ ಸೌದಿ ಅರೇಬಿಯಾದಲ್ಲಿ ಡ್ರೈವರ್ ಆಗಿ ಕೆಲಸ ನಿರ್ವಹಿಸಿದ್ದ ಫಹದ್ ಕೊರೋನಾ ಕಾರಣದಿಂದ ಊರಿಗೆ ಬಂದು ಒಂದು ವರ್ಷ ಕಾಲ ಊರಿನಲ್ಲೇ ಚಾಲಕ ವೃತ್ತಿ ಮಾಡುತ್ತಿದ್ದ. ಬಳಿಕ ಕಳೆದ ಐದು ತಿಂಗಳ ಹಿಂದೆ ಕತಾರಿಗೆ ತೆರಳಿದ್ದ. ಮಂಗಳವಾರ ರಾತ್ರಿ ಅಪಘಾತ ನಡೆಯುವ

ಕತಾರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬಂಟ್ವಾಳದ ಫಹದ್ ಸಾವು Read More »

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ| ಮಹಿಳೆ ಸೇರಿ ನಾಲ್ವರ ಬಂಧನ

ಸಮಗ್ರ ನ್ಯೂಸ್: ಯುವತಿಯರನ್ನು ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದುದಲ್ಲದೆ ಮಾಂಸ ಧಂದೆ ನಡೆಸುತ್ತಿದ್ದ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿ ದಂಪತಿ ಸಹಿತ ನಾಲ್ವರನ್ನ ಬಂಧಿಸಿದ ಘಟನೆ ಮಂಗಳೂರಿನ ಉಳ್ಳಾಲದ ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. ಬೀರಿ ಬಾಡಿಗೆ ಮನೆ ನಿವಾಸಿ ಮೊಹಮ್ಮದ್ ಇಕ್ಬಾಲ್, ಆತನ ಪತ್ನಿ ಅಲಿಮಮ್ಮ, ಉಳ್ಳಾಲ ನಿವಾಸಿ ಶರ್ಫುದ್ದೀನ್, ಇರ್ಶಾದ್ ಅಡ್ಯನಡ್ಕ ಬಂಧಿತರು. ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಮೊಹಮ್ಮದ್ ಇಕ್ಬಾಲ್ ಈ ಪ್ರಕರಣದ ಮುಖ್ಯ

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ| ಮಹಿಳೆ ಸೇರಿ ನಾಲ್ವರ ಬಂಧನ Read More »

ಮಂಗಳೂರು: ವ್ಯಕ್ತಿಯೋರ್ವನಿಗೆ ಸಿಕ್ಕಿದ ನೋಟಿನ ಬಂಡಲ್ | ಪ್ರಮುಖ ಮಾಹಿತಿ ನೀಡಿದ ಪೊಲೀಸ್‌ ಆಯುಕ್ತರು

ಸಮಗ್ರ ನ್ಯೂಸ್: ಮಂಗಳೂರಿನ ಪಂಪ್ ವೆಲ್ ಬಸ್ ನಿಲ್ದಾಣ ಸಮೀಪ ಪಾರ್ಕಿಂಗ್ ಸ್ಥಳದಲ್ಲಿ ನ.26 ರಂದು ಶಿವರಾಜ್ ಎಂಬವರಿಗೆ ನೋಟಿನ ಬಂಡಲ್ ಗಳು ಸಿಕ್ಕಿದ್ದರ ಬಗ್ಗೆ ಪೊಲೀಸ್‌ ಆಯುಕ್ತರು ಮಾಹಿತಿ ನೀಡಿದ್ದಾರೆ. ನೋಟಿಮ ಬಂಡಲ್‌ ನಲ್ಲಿ ಕೆಲ ನೋಟುಗಳನ್ನು ತುಕಾರಾಮ್ ಎನ್ನುವವರಿಗೆ ನೀಡಿದ್ದ. ತುಕಾರಾಮ್ ಮನೆಯವರು 2.99 ಲ.ರೂ.ಗಳನ್ನು ತಂದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಶಿವರಾಜ್ ಬಳಿ ಇದ್ದ 49,000 ರೂ. ಕೂಡ ಪೊಲೀಸರ ಸುಪರ್ದಿಯಲ್ಲಿದೆ. ಬಂಡಲ್ ಗಳಲ್ಲಿ ಒಟ್ಟು ಎಷ್ಡು ಹಣ ಇತ್ತು, ಅದನ್ನು ಯಾರು ತಂದಿಟ್ಟಿದ್ದರು, ಆ

ಮಂಗಳೂರು: ವ್ಯಕ್ತಿಯೋರ್ವನಿಗೆ ಸಿಕ್ಕಿದ ನೋಟಿನ ಬಂಡಲ್ | ಪ್ರಮುಖ ಮಾಹಿತಿ ನೀಡಿದ ಪೊಲೀಸ್‌ ಆಯುಕ್ತರು Read More »

ಡಿ.8ಕ್ಕೆ ತಮಿಳುನಾಡಿಗೆ ಅಪ್ಪಳಿಸಲಿದೆ ಮ್ಯಾಂಡಸ್ ಚಂಡಮಾರುತ| ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಡಿಸೆಂಬರ್ 8 ರಂದು ತಮಿಳುನಾಡು, ಪುದುಚೆರಿಗೆ ಮ್ಯಾಂಡಸ್ ಚಂಡಮಾರುತ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳಲಿದ್ದು, ಚಂಡಮಾರುತದ ಅಬ್ಬರದಿಂದ ರಕ್ಷಿಸಲು ಎನ್‌ಡಿಆರ್‌ಎಫ್ ತಂಡಗಳು, ಸೇನೆ, ನೌಕಾಪಡೆ ಸಜ್ಜುಗೊಂಡಿದೆ. ಬುಧವಾರ(ಡಿ.7) ಸಂಜೆ ವೇಳೆಗೆ ವಾಯುಭಾರ ಕುಸಿತ ತೀವ್ರತೆ ಕಾಣಲಿದ್ದು, ನಾಳೆ ಬೆಳಗ್ಗೆ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ಚಂಡಮಾರುತ ಅಪ್ಪಳಿಸಲಿದೆ. ಮ್ಯಾಂಡಸ್ ಹೆಸರಿನ ಈ ಚಂಡಮಾರುತ ಭಾರೀ ಮಳೆ ಜೊತೆ ಗುಡುಗು ಮಿಂಚನ್ನೂ

ಡಿ.8ಕ್ಕೆ ತಮಿಳುನಾಡಿಗೆ ಅಪ್ಪಳಿಸಲಿದೆ ಮ್ಯಾಂಡಸ್ ಚಂಡಮಾರುತ| ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ Read More »

ಆಸ್ಪತ್ರೆಯ ಸ್ಕ್ಯಾನಿಂಗ್ ರೂಂನಲ್ಲಿ ಬಟ್ಟೆ ಬದಲಿಸುವಾಗ ಜೋಕೆ..|ಮಂಗಳೂರಲ್ಲಿ ಸಿಕ್ಕಿ ಬಿದ್ದ ”ಸ್ಕ್ಯಾನಿಂಗ್ ‌” ಕಾಮುಕ

ಸಮಗ್ರ ನ್ಯೂಸ್: ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮೆರಾವನ್ನು ರೆಕಾರ್ಡಿಂಗ್ ನಲ್ಲಿ ಇರಿಸಿದ್ದ ಘಟನೆ ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಬೆಳಕಿಗೆ ಬಂದಿದೆ. ನರ್ಸಿಂಗ್‌ ವಿದ್ಯಾರ್ಥಿಯಾದ ಪವನ್ ಕುಮಾರ್(21) ಎಂಬಾತ ಈ ಕೃತ್ಯವೆಸಗಿದವನು. ಈತ ಮೂಲತಃ ಕಲಬುರಗಿಯವನಾಗಿದ್ದು ಬಜಪೆಯಲ್ಲಿ ವಾಸವಾಗಿದ್ದ. ಆಸ್ಪತ್ರೆಗೆ ಚಿಕಿತ್ಸೆಗೆ, ತಪಾಸಣೆಗೆ ಹೋಗುವವರು ಸ್ಯಾನಿಂಗ್‌ಗೆ ಒಳಗಾಗುವ ಮೊದಲು ತಮ್ಮ ಬಟ್ಟೆ ಬದಲಾಯಿಸಬೇಕು. ಇದು ತಿಳಿದಿರುವ ಆರೋಪಿ ಪವನ್ ಮಹಿಳೆಯರು ಬಟ್ಟೆ ಬದಲಾಯಿಸುವ ಕೋಣೆಯಲ್ಲಿ ರಹಸ್ಯವಾಗಿ ಕ್ಯಾಮೆರಾ ಇರಿಸಿ, ಮಹಿಳೆಯರು ಬಟ್ಟೆ ಬದಲಾಯಿಸುವ

ಆಸ್ಪತ್ರೆಯ ಸ್ಕ್ಯಾನಿಂಗ್ ರೂಂನಲ್ಲಿ ಬಟ್ಟೆ ಬದಲಿಸುವಾಗ ಜೋಕೆ..|ಮಂಗಳೂರಲ್ಲಿ ಸಿಕ್ಕಿ ಬಿದ್ದ ”ಸ್ಕ್ಯಾನಿಂಗ್ ‌” ಕಾಮುಕ Read More »

ಮಂಗಳೂರಿನಲ್ಲಿ ವ್ಯಕ್ತಿಯೋರ್ವನಿಗೆ ಸಿಕ್ತು ಕಂತೆಕಂತೆ ಹಣ| ಆದ್ರೆ ಒಂದು ಪೆಗ್ ಹಾಕಿದ್ದಷ್ಟೇ ಲಾಭ!!

ಸಮಗ್ರ ನ್ಯೂಸ್: ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಗಾದೆ ಮಾತಿನಂತೆ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ವ್ಯಕ್ತಿಯೋರ್ವರಿಗೆ ಸಿಕ್ಕಿದ ಹಣ ಉಪಯೋಗಕ್ಕೆ ಬಂದಿಲ್ಲ. ಮದ್ಯ ವ್ಯಸನಿಯಾಗಿರುವ ಶಿವರಾಜ ಎಂಬುವರಿಗೆ ಕಳೆದು ತಿಂಗಳು ನವೆಂಬರ್​ 27ರಂದು ನಗರದ ಪಂಪ್​ವೆಲ್ ಬಾರ್​ ಬಳಿ ಕಂತೆ ಕಂತೆ ಹಣ ಇರುವ ಬಾಕ್ಸ್ ಸಿಕ್ಕಿದ್ದು ಒಂದು ಪೆಗ್ ಮಾತ್ರ ಅದರಲ್ಲಿ ಅವರಿಗೆ ಲಾಭವಾಗಿದ್ದು!! ಬಾಕ್ಸ್​ನಲ್ಲಿ ​ 500, 2,000 ರೂ. ಮುಖಬೆಲೆಯ ಗರಿ ಗರಿ ನೋಟುಗಳ ಹಣವಿದ್ದರೂ ಅದು ಯಾವುದೇ ಪ್ರಯೋಜನಕ್ಕೆ

ಮಂಗಳೂರಿನಲ್ಲಿ ವ್ಯಕ್ತಿಯೋರ್ವನಿಗೆ ಸಿಕ್ತು ಕಂತೆಕಂತೆ ಹಣ| ಆದ್ರೆ ಒಂದು ಪೆಗ್ ಹಾಕಿದ್ದಷ್ಟೇ ಲಾಭ!! Read More »

ಮಂಗಳೂರು:ಹಿಂದೂ ಯುವತಿಯ ಜೊತೆ ಮಾತನಾಡಿದ್ದಕ್ಕೆ ಶೋರೂಂ ಸಿಬ್ಬಂದಿ ಮೇಲೆ ಹಲ್ಲೆ| ಯದ್ವಾತದ್ವ ಥಳಿಸಿದ ಸಂಘಪರಿವಾರದ ಕಾರ್ಯಕರ್ತರು

ಸಮಗ್ರ ನ್ಯೂಸ್: ಸಂಘಪರಿವಾರ ಕಾರ್ಯಕರ್ತರು ಚಿನ್ನದ ಶೋರೂಮಿಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ. ಮಂಗಳವಾರ ಸಂಘಪರಿವಾರ ಕಾರ್ಯಕರ್ತರ ತಂಡವೊಂದು ಕಂಕನಾಡಿ ಬಳಿ ಇರುವ ಚಿನ್ನದ ಶೋರೂಮ್ ಒಂದಕ್ಕೆ ಏಕಾಏಕಿ ನುಗ್ಗಿ ದಾಂಧಲೆ ನಡೆಸಿದೆ. ಈ ತಂಡ ರಜೆಯಲ್ಲಿದ್ದ ಸಿಬ್ಬಂದಿಯನ್ನು ಎಳೆದು ತಂದು ಶೋರೂಮ್ ಒಳಗೆ ಯದ್ವಾತದ್ವ ಥಳಿಸಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಹಲ್ಲೆಗೀಡಾದ ಸಿಬ್ಬಂದಿ ಮುಸ್ಲಿಮನಾಗಿದ್ದು, ತನ್ನ ಸಹೋದ್ಯೋಗಿಯಾಗಿರುವ ಅನ್ಯಮತೀಯ ಯುವತಿಯ ಜೊತೆ ಮಾತನಾಡುತ್ತಿದ್ದರು ಎಂಬ ಕಾರಣಕ್ಕೆ ಈ ಹಲ್ಲೆ

ಮಂಗಳೂರು:ಹಿಂದೂ ಯುವತಿಯ ಜೊತೆ ಮಾತನಾಡಿದ್ದಕ್ಕೆ ಶೋರೂಂ ಸಿಬ್ಬಂದಿ ಮೇಲೆ ಹಲ್ಲೆ| ಯದ್ವಾತದ್ವ ಥಳಿಸಿದ ಸಂಘಪರಿವಾರದ ಕಾರ್ಯಕರ್ತರು Read More »