ಕರಾವಳಿ

ಮಂಗಳೂರು: ಪಿಜಿ ನಿಯಮದಲ್ಲಿ ಬಿಗಿ ಕ್ರಮ ಸಾಧ್ಯತೆ

ಸಮಗ್ರ ನ್ಯೂಸ್: ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಪಿಜಿಗಳಿಗೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸಲು ಪೊಲೀಸರು ಮುಂದಾಗಿದ್ದು, ಶೀಘ್ರದಲ್ಲಿ ಸಮಗ್ರ ನಿಯಮಾವಳಿ ರೂಪುಗೊಳ್ಳುವ ಸಾಧ್ಯತೆ ಇದೆ. ಪಿಜಿ ಆರಂಭಿಸಲು ಸ್ಥಳೀಯಾಡಳಿತ ಸಂಸ್ಥೆಗಳ ಪರವಾನಿಗೆ ಹಾಗೂ ಪೊಲೀಸ್‌ ಆಯುಕ್ತರ ಕಚೇರಿಯಿಂದಲೂ ನಿರಾಕ್ಷೇಪಣ ಪತ್ರ (ಎನ್‌ಒಸಿ) ಪಡೆಯುವುದು ಮತ್ತು ಪಿಜಿ ನಿವಾಸಿಗಳಿಗೆ ಪೊಲೀಸ್‌ ದೃಢೀಕರಣ ಪ್ರಮಾಣಪತ್ರ (ಪಿಸಿಸಿ)ವನ್ನು ಕಡ್ಡಾಯ ಮಾಡಲಾಗುತ್ತಿದೆ. ಜತೆಗೆ ಸ್ಥಳೀಯ ಆಗುಹೋಗುಗಳ ಮೇಲೆ ಸಾರ್ವಜನಿಕರು ನಿಗಾ ಇಡುವಂತಹ “ನೇಬರ್‌ಹುಡ್‌ ವಾಚ್‌’ ಪರಿಕಲ್ಪನೆಯನ್ನೂ ಜಾರಿಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಮಂಗಳೂರಿನಲ್ಲಿ ನ.19ರಂದು […]

ಮಂಗಳೂರು: ಪಿಜಿ ನಿಯಮದಲ್ಲಿ ಬಿಗಿ ಕ್ರಮ ಸಾಧ್ಯತೆ Read More »

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಟ್ರ್ಯಾಕ್ಟರ್ ಪಲ್ಟಿ| ಓರ್ವ ಸಾವು, ಮತ್ತೋರ್ವ ಗಂಭೀರ

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ ಹೋಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಟರ್ ಟ್ಯಾಂಕರ್ ಪಲ್ಟಿಯಾಗಿ ಅದರಲ್ಲಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ದಿಬೋ ಶಂಕರ್ ನಾಯಕ್ (22)ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಕಾರ್ಮಿಕನಿಗೆ ಗಂಬೀರ ಗಾಯಗೊಂಡಿದ್ದು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ.

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಟ್ರ್ಯಾಕ್ಟರ್ ಪಲ್ಟಿ| ಓರ್ವ ಸಾವು, ಮತ್ತೋರ್ವ ಗಂಭೀರ Read More »

ವಿಟ್ಲ: ಮರಾಟಿ ಯುವವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ|
ಅಧ್ಯಕ್ಷರಾಗಿ ಉಮೇಶ್ ಅನ್ನಮೂಲೆ|ಕಾರ್ಯದರ್ಶಿಯಾಗಿ ಹರ್ಷಿತ್ ಗಾಳಿಹಿತ್ಲು

ಸಮಗ್ರ ನ್ಯೂಸ್: ವಿಟ್ಲ ಇಲ್ಲಿನ ಮರಾಟಿ ಯುವವೇದಿಕೆ ರಿ. ವಿಟ್ಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಡಿ.4 ರಂದು ನಡೆಯಿತು. ಅಧ್ಯಕ್ಷರಾಗಿ ಉಮೇಶ್ ಅನ್ನಮೂಲೆ, ಉಪಾಧ್ಯಕ್ಷರಾಗಿ ದಿನೇಶ್ ಗೋಳ್ತಮಜಲು, ಕಾರ್ಯದರ್ಶಿಯಾಗಿ ಹರ್ಷಿತ್ ಗಾಳಿಹಿತ್ಲು, ಜೊತೆ ಕಾರ್ಯದರ್ಶಿಯಾಗಿ ಚಿತ್ರಾಕ್ಷ ನೆಕ್ಕರೆಕಾಡು, ಕ್ರೀಡಾ ಕಾರ್ಯದರ್ಶಿಯಾಗಿ ರಾಮಚಂದ್ರ ನೆಕ್ಕರೆಕಾಡು, ಕ್ರೀಡಾ ಜೊತೆ ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ, ಸಿ ಎಚ್ ಸಾಮಾಜಿಕ ಜಾಲತಾಣದ ನಿರ್ವಹಕರಾಗಿ ವಿವೇಕ್ ಅನ್ನಮೂಲೆ, ಗೌರವಾಧ್ಯಕ್ಷರಾಗಿ ರವಿ ಕಲ್ಲಜರಿ ರವರು ಆಯ್ಕೆಯಾಗಿದ್ದಾರೆ.

ವಿಟ್ಲ: ಮರಾಟಿ ಯುವವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ|
ಅಧ್ಯಕ್ಷರಾಗಿ ಉಮೇಶ್ ಅನ್ನಮೂಲೆ|ಕಾರ್ಯದರ್ಶಿಯಾಗಿ ಹರ್ಷಿತ್ ಗಾಳಿಹಿತ್ಲು
Read More »

ಕಟೀಲು ದುರ್ಗೆಯ ದರ್ಶನ ಪಡೆದ ನಟ ಸುದೀಪ್ ದಂಪತಿ

ಸಮಗ್ರ ನ್ಯೂಸ್: ಪ್ರಸಿದ್ಧ ದೇವಿಕ್ಷೇತ್ರ ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪತ್ನಿ ಪ್ರಿಯಾ ಜೊತೆ ನಟ ಕಿಚ್ಚ ಸುದೀಪ್ ಭಾನುವಾರ ಭೇಟಿ ನೀಡಿದರು. ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿರುವ ನಟ ಸುದೀಪ್ ಕಟೀಲು ಶ್ರೀದೇವಿಗೆ ವಿಶೇಷ ಪೂಜೆ ನೆರವೇರಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇಗುಲದ ವತಿಯಿಂದ ಸುದೀಪ್ ರನ್ನು ಗೌರವಿಸಲಾಯಿತು.

ಕಟೀಲು ದುರ್ಗೆಯ ದರ್ಶನ ಪಡೆದ ನಟ ಸುದೀಪ್ ದಂಪತಿ Read More »

ಕಟೀಲು ಯಕ್ಷಗಾನ ಮೇಳಗಳ ಧ್ವನಿವರ್ಧಕ ಬಳಕೆ ನಿರ್ಬಂಧ ಸಡಿಲಿಸಿ ಡಿಸಿ ಆದೇಶ

ಸಮಗ್ರ ನ್ಯೂಸ್: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮೇಳಗಳಿಗೆ ರಾತ್ರಿ 12 ರವರೆಗೆ ಧ್ವನಿವರ್ಧಕಗಳ ಬಳಕೆಗೆ ಹೇರಲಾಗಿದ್ದ ನಿರ್ಬಂಧ ಸಡಿಲಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.ತಿಳಿಸಿದ್ದಾರೆ. ರಾತ್ರಿ 10ರ ನಂತರ ಧ್ವನಿವರ್ಧಕಗಳ ಬಳಕೆ ಸುಪ್ರೀಂ ಕೋರ್ಟ್‌ನಿಂದ ನಿಷೇಧ ಹೇರಲಾಗಿತ್ತು.ಕಟೀಲು ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿಯ ಭಕ್ತರು ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕಗಳ ಬಳಕೆಗೆ ಸಡಿಲಿಕೆ ಕೋರಿ ಮನವಿ ಪತ್ರ ಸಲ್ಲಿಸಿದ್ದರು. ಕಟೀಲು ದೇವಸ್ಥಾನದ ಅಧಿಕಾರಿಗಳು ಮತ್ತು ಭಕ್ತರೊಂದಿಗೆ ಚರ್ಚಿಸಿದ ನಂತರ ಈ

ಕಟೀಲು ಯಕ್ಷಗಾನ ಮೇಳಗಳ ಧ್ವನಿವರ್ಧಕ ಬಳಕೆ ನಿರ್ಬಂಧ ಸಡಿಲಿಸಿ ಡಿಸಿ ಆದೇಶ Read More »

ಸುರತ್ಕಲ್ ಟೋಲ್ ಎತ್ತಂಗಡಿ!
ಟೋಲ್ ಕಾರ್ಮಿಕರಿಗೆ ಉದ್ಯೋಗ ನೀಡಿದ ಪ್ರತಿಭಾ ಕುಳಾಯಿ!

ಸಮಗ್ರ ನ್ಯೂಸ್: ಇಲ್ಲಿನ ಟೋಲ್ ಗೇಟ್ ನಲ್ಲಿ ಉದ್ಯೋಗದಲ್ಲಿದ್ದು ಟೋಲ್ ತೆರವು ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಂಡಿರುವ 35 ಮಂದಿಗೆ ಕೆಲಸ ನೀಡುವುದಾಗಿ ಹೇಳಿದ್ದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು ತಮ್ಮನ್ನು ಸಂಪರ್ಕಿಸಿದ 19 ಮಂದಿಯಲ್ಲಿ ಹೆಚ್ಚಿನ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಮೂಲಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಈ ಕುರಿತು ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಪ್ರತಿಭಾ ಕುಳಾಯಿ ಅವರು, “ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡ 35 ಮಂದಿಯನ್ನು ನಾನು ಭೇಟಿಯಾಗಿ ಅವರಿಗೆ ಅವರ

ಸುರತ್ಕಲ್ ಟೋಲ್ ಎತ್ತಂಗಡಿ!
ಟೋಲ್ ಕಾರ್ಮಿಕರಿಗೆ ಉದ್ಯೋಗ ನೀಡಿದ ಪ್ರತಿಭಾ ಕುಳಾಯಿ!
Read More »

ಸುಬ್ರಹ್ಮಣ್ಯ: ಲಂಚಕ್ಕೆ ಬೇಡಿಕೆ ಇರಿಸಿ‌ ಅಂಗಡಿ ಮಾಲೀಕನಿಗೆ ಥಳಿಸಿದ ಪೊಲೀಸ್ ಸಿಬ್ಬಂದಿ..? | ಕುಕ್ಕೆ ಜಾತ್ರೆಯಲ್ಲೊಂದು ಪೊಲೀಸ್ ದೌರ್ಜನ್ಯದ ಆರೋಪ

ಸಮಗ್ರ ನ್ಯೂಸ್ : ಸುಬ್ರಹ್ಮಣ್ಯ ಜಾತ್ರೋತ್ಸವ ಸಮಯದಲ್ಲಿ ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿ, ಚಿತ್ರ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಯುವಕ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಟ್ರುಪಾಡಿ ಗ್ರಾಮದ ಬೀಮಗುಂಡಿ ನಿವಾಸಿ ಶಶಿಕಿರಣ್ ಎಂಬವರು ಪೋಲಿಸ್ ಸಿಬ್ಬಂದಿಯಿಂದ ಹಲ್ಲೆಗೊಳಗಾದವರು. ಈ ಬಗ್ಗೆ ಹೇಳಿಕೆ ನೀಡಿರುವ ಶಶಿಕಿರಣ್ ಅವರು ಚಂಪಾಷಷ್ಠಿಯಂದು ನಾನು ಜ್ಯೂಸ್ ಐಸ್ ಕ್ರೀಂ ವ್ಯಾಪಾರ ಮಾಡುತ್ತಿದ್ದು, ಪಂಚಮಿಯ ರಾತ್ರಿ 12 ಗಂಟೆ ಸುಮಾರಿಗೆ

ಸುಬ್ರಹ್ಮಣ್ಯ: ಲಂಚಕ್ಕೆ ಬೇಡಿಕೆ ಇರಿಸಿ‌ ಅಂಗಡಿ ಮಾಲೀಕನಿಗೆ ಥಳಿಸಿದ ಪೊಲೀಸ್ ಸಿಬ್ಬಂದಿ..? | ಕುಕ್ಕೆ ಜಾತ್ರೆಯಲ್ಲೊಂದು ಪೊಲೀಸ್ ದೌರ್ಜನ್ಯದ ಆರೋಪ Read More »

ಕೊನೆಗೂ ಸುರತ್ಕಲ್- ಹೆಜಮಾಡಿ‌ ಟೋಲ್ ಗೇಟ್ ಗೆ ವಿವಾಹ ಮಾಡಿಸಿದ ಬಿಜೆಪಿ ‌ಸರ್ಕಾರ| ಹೀಗೊಂದು ವೆಡ್ಡಿಂಗ್ ಕಾರ್ಡ್ ವೈರಲ್!!

ಸಮಗ್ರ ನ್ಯೂಸ್: ಸುರತ್ಕಲ್ ಹಾಗೂ ಹೆಜಮಾಡಿ ಟೋಲ್ ಗೇಟ್ ಗೆ ಬಿಜೆಪಿ ಸರ್ಕಾರದ ಕೃಪೆಯಿಂದ ಶುಭ ವಿವಾಹ. ಇಂತಹದ್ದೊಂದು ವಿವಾಹ ಆಮಂತ್ರಣದ ಪತ್ರಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಸುರತ್ಕಲ್ ನ ಎನ್ ಐಟಿಕೆ ಬಳಿಯಿದ್ದ ಅಕ್ರಮ ಟೋಲ್ ಗೇಟ್ ಇತ್ತೀಚೆಗೆ ಸಾರ್ವಜನಿಕರ ಭಾರೀ ಆಕ್ರೋಶದ ಹಿನ್ನೆಲೆಯಲ್ಲಿ ರದ್ದಾಗಿತ್ತು. ಆದರೆ, ಇದಾದ ಬಳಿಕ ಹೆಜಮಾಡಿ ಟೋಲ್ ಗೇಟ್ ನಲ್ಲಿ ಸುರತ್ಕಲ್ ಟೋಲ್ ಗೇಟ್ ನ ಟೋಲ್ ಅನ್ನೂ ಸೇರಿಸಿ ದುಪ್ಪಟ್ಟು ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಟೋಲ್

ಕೊನೆಗೂ ಸುರತ್ಕಲ್- ಹೆಜಮಾಡಿ‌ ಟೋಲ್ ಗೇಟ್ ಗೆ ವಿವಾಹ ಮಾಡಿಸಿದ ಬಿಜೆಪಿ ‌ಸರ್ಕಾರ| ಹೀಗೊಂದು ವೆಡ್ಡಿಂಗ್ ಕಾರ್ಡ್ ವೈರಲ್!! Read More »

ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದವನ ಶವ ಗುರುವಾಯನಕೆರೆಯಲ್ಲಿ ಪತ್ತೆ…!1

ಸಮಗ್ರ ನ್ಯೂಸ್ :ಗೆಳೆಯರಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದೇನೆ ಎಂದು ಹೇಳಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ಗುರುವಾಯನಕೆರೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಆಟೊ ರಿಕ್ಷಾ ಡ್ರೈವರ್ ಪ್ರವೀಣ್ ಎಂದು ಗುರುತಿಸಲಾಗಿದ್ದು, ಇವರು ನ. 30ರ ಮುಂಜಾನೆ ತನ್ನ ಸ್ನೇಹಿತರೊಬ್ಬರಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಆ ಕೂಡಲೇ ಸ್ನೇಹಿತರು ಹಾಗೂ ಸಂಬಂಧಿಕರು ಹುಡುಕಾಟ ನಡೆಸಿದಾಗ ಗುರುವಾಯನಕೆರೆಯ ಕೆರೆಯ ಬಳಿ ಪ್ರವೀಣ್ ರಿಗೆ ಸೇರಿದ ಕೆಲವು ದಾಖಲೆಗಳು ಪತ್ತೆಯಾಗಿದ್ದವು. ಇದರಿಂದಾಗಿ ಕೆರೆಗೆ ಹಾರಿ ಅವರು

ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದವನ ಶವ ಗುರುವಾಯನಕೆರೆಯಲ್ಲಿ ಪತ್ತೆ…!1 Read More »

ಬೆಳ್ತಂಗಡಿ: ಅಡಿಕೆ‌ ಮರ ಬಿದ್ದು ಕಾರ್ಮಿಕ ಸಾವು

ಸಮಗ್ರ ನ್ಯೂಸ್: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ತಲೆ ಮೇಲೆ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಮುಂಡಾಜೆ ಗ್ರಾಮದ ಕುಂಟಾಲಪಳಿಕೆ ನಿವಾಸಿ ಅಣ್ಣು ನಲ್ಕೆ (66) ಎಂದು ಗುರುತಿಸಲಾಗಿದೆ. ಇವರು ಕುವೆತ್ಯಾರು ನಿವಾಸಿ ನವೀನ್ ಎಂಬವರ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ತೋಟದ ಹಳೆಯ ಅಡಿಕೆ ಮರಗಳನ್ನು ನೌಫಾಲ್ ಎಂಬರು ಕಡಿಯುತ್ತಿದ್ದರು. ಈ ವೇಳೆ ಅಡಿಕೆ ಮರವೊಂದು ಆಕಸ್ಮಿಕವಾಗಿ ಅಣ್ಣು ಅವರ ತಲೆ ಮೇಲೆ ಬಿದ್ದಿದ್ದು

ಬೆಳ್ತಂಗಡಿ: ಅಡಿಕೆ‌ ಮರ ಬಿದ್ದು ಕಾರ್ಮಿಕ ಸಾವು Read More »