ಕರಾವಳಿ

75ನೇ ವಸಂತಕ್ಕೆ ಕಾಲಿಟ್ಟ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ನ. 25ರಂದು 75ನೇ ವಸಂತಕ್ಕೆ ಕಾಲಿಡಲಿದ್ದು, ತಮ್ಮ ನಿವಾಸದಲ್ಲಿ ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಳ್ಳಲಿರುವರು. ಧರ್ಮಾಧಿಕಾರಿಗಳಾಗಿದ್ದ ಕೀರ್ತಿಶೇಷ ಡಿ. ರತ್ಮವರ್ಮ ಹೆಗ್ಗಡ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರನಾಗಿ 1948ರ ನ. 25ರಂದು ಜನಿಸಿದ ವೀರೇಂದ್ರ ಕುಮಾರ್‌ ಅವರು ಡಿ. ವೀರೇಂದ್ರ ಹೆಗ್ಗಡೆಯಾಗಿ 1964ರ ಅ. 24ರಂದು ಧರ್ಮಸ್ಥಳದ 21 ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾಗಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ವಉದ್ಯೋಗ […]

75ನೇ ವಸಂತಕ್ಕೆ ಕಾಲಿಟ್ಟ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ Read More »

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಎಡಿಜಿಪಿ ಅಲೋಕ್ ಕುಮಾರ್ ಕೂಡಾ ಟಾರ್ಗೆಟ್? ಪೋಸ್ಟರ್ ವೈರಲ್; ತನಿಖೆ ಚುರುಕು

ಸಮಗ್ರ ನ್ಯೂಸ್: ಮಂಗಳೂರು ನಗರದ ಕಂಕನಾಡಿ ಸಮೀಪದಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ವಿವಿಧ ಆಯಾಮಗಳಲ್ಲಿ ಮುನ್ನಡೆಸಲಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್ ಒಂದು ವೈರಲ್ ಆಗುತ್ತಿದೆ. ವೈರಲ್ ಆಗುತ್ತಿರುವ ಪೋಸ್ಟ್ ಗೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಒಂದು ಸಂಘಟನೆ ಏಕಾಏಕಿ ಪೋಸ್ಟ್ ಹಾಕಿಕೊಂಡಿದ್ದು ಸ್ವತಃ ಈ ಕೃತ್ಯದ ಹೊಣೆ ಹೆಗಲೇರಿಸಿಕೊಂಡಿದೆ. ವೈರಲ್ ಆಗುತ್ತಿರುವ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಅವರು ‘ನಾವು ಸಂಘಟನೆ ಮತ್ತು ಆ ಪೋಸ್ಟ್

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಎಡಿಜಿಪಿ ಅಲೋಕ್ ಕುಮಾರ್ ಕೂಡಾ ಟಾರ್ಗೆಟ್? ಪೋಸ್ಟರ್ ವೈರಲ್; ತನಿಖೆ ಚುರುಕು Read More »

ಉಡುಪಿ:ರಕ್ತದೊತ್ತಡ ಕಡಿಮೆಯಾಗಿ‌ ಯುವತಿ ಸಾವು

ಸಮಗ್ರ ನ್ಯೂಸ್: ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ರೋಸ್ ಕಾರ್ಯಕ್ರಮದ ವೇಳೆ ರಕ್ತದೊತ್ತಡ ಕಡಿಮೆಯಾಗಿ ಕುಸಿದುಬಿದ್ದು ಯುವತಿ ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿ ಕೊಳಲಗಿರಿ ಹಾವಂಜೆಯ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಸಮಾರಂಭಕ್ಕೆ ತೆರಳಿದ್ದರು. ಅಲ್ಲಿ 8.30ರ ಸುಮಾರಿಗೆ ಏಕಾಏಕಿಯಾಗಿ ರಕ್ತದ ಒತ್ತಡ ಕಡಿಮೆಯಾದ ಪರಿಣಾಮ ಜೋಸ್ನಾ ಅವರು ಅಲ್ಲೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಮಣಿಪಾಲ

ಉಡುಪಿ:ರಕ್ತದೊತ್ತಡ ಕಡಿಮೆಯಾಗಿ‌ ಯುವತಿ ಸಾವು Read More »

ಸುರತ್ಕಲ್ ನ ಟೋಲ್ ಹೆಜಮಾಡಿಗೆ ಶಿಪ್ಟ್| ಪರಿಷ್ಕೃತ ದರ ಜಾರಿಗೊಳಿಸಿದ ಹೆದ್ದಾರಿ ಪ್ರಾಧಿಕಾರ| ಈಗ ಡಬ್ಬಲ್ ಅಲ್ಲ, ಅದಕ್ಕಿಂತಲೂ ಹೆಚ್ಚು!!

ಸಮಗ್ರ ನ್ಯೂಸ್: ಸುರತ್ಕಲ್ ಟೋಲ್‌ಗೇಟ್‌ನ್ನು ಹೆಜಮಾಡಿ ಟೋಲ್‌ಗೇಟ್‌ನೊಂದಿಗೆ ವಿಲೀನಗೊಳಿಸಿರುವ ಹಿನ್ನೆಲೆಯಲ್ಲಿ ಹೆಜಮಾಡಿ ಟೋಲ್‌ಗೇಟ್‌ನ ದರವನ್ನು ಪರಿಷ್ಕೃರಿಸಿ ಟೋಲ್ ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗುರುವಾರ ಸುತ್ತೋಲೆಯೊಂದನ್ನು ಹೊರಡಿಸಿದೆ. “ಕರ್ನಾಟಕ ಸರ್ಕಾರದ ನಿರಂತರ ವಿನಂತಿ/ಬೇಡಿಕೆ ಮೇರೆಗೆ, ಸ್ಥಳೀಯ ಸಾರ್ವಜನಿಕ/ವಿಐಪಿ ಒತ್ತಾಯಗಳ ಆಧಾರದ ಮೇಲೆ, ಸಕ್ಷಮ ಪ್ರಾಧಿಕಾರವು ಹೊಸ ಮಂಗಳೂರು ಬಂದರು ರಸ್ತೆಯ ಸುರತ್ಕಲ್ ಟೋಲ್ ಪ್ಲಾಜಾ (NITK ಹತ್ತಿರ, NH-66 ರ ಕ್ಯಾಂಪಸ್) ವಿಲೀನಕ್ಕೆ ಅನುಮೋದನೆ ನೀಡಿದೆ. ನವಯುಗ ಉಡುಪಿ ಟೋಲ್‌ವೇ ಪ್ರೈವೇಟ್ ಲಿಮಿಟೆಡ್‌ನ (ಟೋಲ್) ಯೋಜನೆಯ ಅಡಿಯಲ್ಲಿ

ಸುರತ್ಕಲ್ ನ ಟೋಲ್ ಹೆಜಮಾಡಿಗೆ ಶಿಪ್ಟ್| ಪರಿಷ್ಕೃತ ದರ ಜಾರಿಗೊಳಿಸಿದ ಹೆದ್ದಾರಿ ಪ್ರಾಧಿಕಾರ| ಈಗ ಡಬ್ಬಲ್ ಅಲ್ಲ, ಅದಕ್ಕಿಂತಲೂ ಹೆಚ್ಚು!! Read More »

ಸುಳ್ಯ: ಅಟೋ ಚಾಲಕ ನಾಪತ್ತೆ| ಮಾಹಿತಿ ಸಿಕ್ಕಿದಲ್ಲಿ ಠಾಣೆಗೆ ತಿಳಿಸುವಂತೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ರಿಕ್ಷಾ ಚಾಲಕನಾಗಿರುವ ಯುವಕನೋರ್ವ ನಾಪತ್ತೆಯಾಗಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಐವರ್ನಾಡು ಪೇಟೆಯಲ್ಲಿ ರಿಕ್ಷಾ ಓಡಿಸುತ್ತಿದ್ದ ಯತೀಶ (32) ನಾಪತ್ತೆಯಾದವರು. ಇವರು ನ.21 ರಂದು ಮನೆಯಿಂದ ತನ್ನ ಅಟೋ ರಿಕ್ಷಾದಲ್ಲಿ ಪುತ್ತೂರಿಗೆ ಬಾಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಮನೆಗೆ ಬಾರದೆ ಇದ್ದು ಫೋನ್ ಕೂಡಾ ಸಿಗದೆ ಇದ್ದುದರಿಂದ ಈ ಬಗ್ಗೆ ಮನೆಯವರು ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಾಣೆಯಾದ ಯುವಕನ ಚಹರೆ:ಹೆಸರು. ಯತೀಶ್ ಪ್ರಾಯ

ಸುಳ್ಯ: ಅಟೋ ಚಾಲಕ ನಾಪತ್ತೆ| ಮಾಹಿತಿ ಸಿಕ್ಕಿದಲ್ಲಿ ಠಾಣೆಗೆ ತಿಳಿಸುವಂತೆ ಮನವಿ Read More »

ಮಂಗಳೂರು ಸ್ಪೋಟ ಪ್ರಕರಣ| ಬಯಲಾಯ್ತು ಮತ್ತೊಂದು ಸ್ಪೋಟಕ ಮಾಹಿತಿ| ಉಗ್ರರ ಟಾರ್ಗೆಟ್ ನಲ್ಲಿ ಕರಾವಳಿಯ ಮೂರು ದೇವಾಲಯಗಳು

ಸಮಗ್ರ ನ್ಯೂಸ್: ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿಗಳು ಲಭ್ಯವಾಗುತ್ತಿವೆ. ಇದೀಗ ಉಗ್ರರ ಮತ್ತೊಂದು ಕರಾಳ ಮುಖ ಬಯಲಾಗಿದ್ದು, ‘ಹಿಂದೂ’ ದೇವಾಲಯಗಳ ಸ್ಪೋಟಕ್ಕೆ ಉಗ್ರರು ಸ್ಕೆಚ್ ಹಾಕಿದ್ದರು ಎಂಬುದು ಗೊತ್ತಾಗಿದೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯ , ಮಂಗಳಾದೇವಿ ದೇವಾಲಯ, ಮಂಜುನಾಥ ಸ್ವಾಮಿ ದೇವಾಲಯಕ್ಕೂ ಉಗ್ರರು ಸ್ಕೆಚ್ ಹಾಕಿದ್ದರು ಎಂಬ ಮಾಹಿತಿ ಬಯಲಾಗಿದೆ. ಶಾರೀಖ್ ಮೊಬೈಲ್ ತನಿಖೆ ನಡೆಸಿದ ಪೊಲೀಸರಿಗೆ ಈ ವಿಚಾರ ಗೊತ್ತಾಗಿದೆ. ಅದೇ ರೀತಿ ಮಂಗಳೂರು

ಮಂಗಳೂರು ಸ್ಪೋಟ ಪ್ರಕರಣ| ಬಯಲಾಯ್ತು ಮತ್ತೊಂದು ಸ್ಪೋಟಕ ಮಾಹಿತಿ| ಉಗ್ರರ ಟಾರ್ಗೆಟ್ ನಲ್ಲಿ ಕರಾವಳಿಯ ಮೂರು ದೇವಾಲಯಗಳು Read More »

ಮಂಗಳೂರು: ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ಮುನ್ನ ಜಿಲ್ಲೆಯ ಹಲವು ಕಡೆ ಸ್ಯಾಟಲೈಟ್ ಫೋನ್ ರಿಂಗ್…

ಸಮಗ್ರ ನ್ಯೂಸ್: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ಮುನ್ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ರಿಂಗಣಿಸಿದೆ. ಈ ಬಗೆಗಿನ ಮಾಹಿತಿ ಗುಪ್ತಚರ ಇಲಾಖೆಗೆ ಲಭಿಸಿದ್ದು, ಈ ನಿಟ್ಟಿನಲ್ಲೂ ತನಿಖೆ ಮುಂದುವರಿದಿದೆ. ನಿಷೇಧಿತ ತುರಾಯ ಸ್ಯಾಟಲೈಟ್ ಫೋನ್ ಬಳಸಲಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಸ್ಫೋಟಕ್ಕೂ ಮುನ್ನಾ ದಿನ ಅಂದರೆ ನವೆಂಬರ್‌ 18ರಂದು ಬಂಟ್ವಾಳದ ಕಕ್ಕಿಂಜೆಯಲ್ಲಿ ಸ್ಯಾಟಲೈಟ್ ಫೋನ್ ರಿಂಗಣಿಸಿದ್ದು, ನವೆಂಬರ್‌ 19ರ ಸಂಜೆ 4:29ರ ಹೊತ್ತಿಗೆ ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವಾಗಿತ್ತು.

ಮಂಗಳೂರು: ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ಮುನ್ನ ಜಿಲ್ಲೆಯ ಹಲವು ಕಡೆ ಸ್ಯಾಟಲೈಟ್ ಫೋನ್ ರಿಂಗ್… Read More »

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಬೈಕ್ ಪಲ್ಟಿ; ಸವಾರ ಸಾವು

ಸಮಗ್ರ ನ್ಯೂಸ್ : ಬೈಕ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ರಾತ್ರಿ ಮುಂಡಾಜೆ ಗ್ರಾಮದ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಮೀಪ ಬಳಿ ಸಂಭವಿಸಿದೆ. ಮೃತ ವ್ಯಕ್ತಿ ಅಣಿಯೂರು ನಿವಾಸಿಯಾಗಿರುವ ಪ್ರದೀಪ್ ಗೌಡ(22) ಎಂದು ಗುರುತಿಸಲಾಗಿದೆ. ಇವರು ರಾತ್ರಿಯ ವೇಳೆ ತಮ್ಮ ಸಂಬಂಧಿಕರಲ್ಲಿಗೆ ಹೋಗುತ್ತಿದ್ದಾಗ ಇವರೇ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಹೊರಗೆ ಚಲಿಸಿ ಮನೆಯೊಂದರ ಗೇಟಿಗೆ ಡಿಕ್ಕಿ ಹೊಡೆದಿದೆ . ಅಪಘಾತದ ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿದ್ದ

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಬೈಕ್ ಪಲ್ಟಿ; ಸವಾರ ಸಾವು Read More »

ಬೆಳ್ತಂಗಡಿ: ರಿಕ್ಷಾ-ಬೈಕ್ ಡಿಕ್ಕಿ; ಯುವಕ ಮೃತ್ಯು

ಸಮಗ್ರ ನ್ಯೂಸ್: ರಿಕ್ಷಾ ಹಾಗೂ ಬೈಕ್ ನಡುವೆ ಡಿಕ್ಕಿ‌ ಸಂಭವಿಸಿ ಯುವಕ ಸಾವನ್ನಪ್ಪಿದ ಘಟನೆ ಮಡಂತ್ಯಾರ್ ಸಮೀಪದ ಪಾರೆಂಕಿ ರಸ್ತೆಯಲ್ಲಿ ಸಂಭವಿಸಿದೆ. ಮಡಂತ್ಯಾರ್ ಸೆಕ್ರೆಟ್ ಹಾರ್ಟ್ ಕಾಲೇಜಿನ ಪ್ರಥಮ ವರ್ಷ ಪದವಿ ವಿದ್ಯಾರ್ಥಿ ಪಾರೆಂಕಿಯ ಶಿವಪ್ರಸಾದ್ ಮೃತಪಟ್ಟವರು. ಇವರು ಕಾಲೇಜಿನಿಂದ ಸಂಜೆ ಮನೆಗೆ ತೆರಳುತ್ತಿದ್ದಾಗ ರಿಕ್ಷಾಕ್ಕೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಮಧ್ಯರಾತ್ರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪುಂಜಾಲಕಟ್ಟೆ

ಬೆಳ್ತಂಗಡಿ: ರಿಕ್ಷಾ-ಬೈಕ್ ಡಿಕ್ಕಿ; ಯುವಕ ಮೃತ್ಯು Read More »

ಕುಕ್ಕೆ ಸುಬ್ರಹ್ಮಣ್ಯ: ಮತ್ತೆ ಧರ್ಮ ದಂಗಲ್| ಪ್ರತ್ಯಕ್ಷವಾಯ್ತು ಅನ್ಯಧರ್ಮೀಯರ ವ್ಯಾಪಾರ ನಿಷೇಧಿಸಿದ ಬ್ಯಾನರ್

ಸಮಗ್ರ ನ್ಯೂಸ್: ರಾಜ್ಯದ ನಂಬರ್ ವನ್ ಯಾತ್ರಾಸ್ಥಳವಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಸಂಭ್ರಮ ಹೆಚ್ಚುತ್ತಿದೆ. ದೇಗುಲದಲ್ಲಿ ಇದೀಗ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ಭಕ್ತಾಧಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಈ ನಡುವೆ ಕೆಲಕಾಲ ಸ್ತಬ್ಧವಾಗಿದ್ದ ಧರ್ಮ ದಂಗಲ್ ಕೂಡಾ ಶುರುವಾಗುವ ಲಕ್ಷಣ ಕಂಡುಬಂದಿದೆ. ದೇವಳದ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂಬ ಬ್ಯಾನರ್ ಪ್ರತ್ಯಕ್ಷವಾಗಿದ್ದು, ಮತ್ತೊಂದು ವಿವಾದಕ್ಕೆ ಕುಕ್ಕೆ ಸುಬ್ರಹ್ಮಣ್ಯ ಸಾಕ್ಷಿಯಾಗುವ ಲಕ್ಷಣಗಳು ಕಂಡುಬಂದಿದೆ. ಕುಮಾರಧಾರ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ ಹಿಂದೂ

ಕುಕ್ಕೆ ಸುಬ್ರಹ್ಮಣ್ಯ: ಮತ್ತೆ ಧರ್ಮ ದಂಗಲ್| ಪ್ರತ್ಯಕ್ಷವಾಯ್ತು ಅನ್ಯಧರ್ಮೀಯರ ವ್ಯಾಪಾರ ನಿಷೇಧಿಸಿದ ಬ್ಯಾನರ್ Read More »