ಕರಾವಳಿ

12 ದಿನಗಳ ಬಳಿಕ ಮಂಗಳೂರು – ಬೆಂಗಳೂರು ರೈಲು ಸಂಚಾರ ಪುನರಾರಂಭ| ಪೂರ್ಣಗೊಂಡ ಮಾರ್ಗ ದುರಸ್ತಿ ಕಾರ್ಯ

ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರೈಲು ಮಾರ್ಗದ ಎಡಕುಮೇರಿ -ಕಡಗರವಳ್ಳಿ ನಡುವಣ ದೋಣಿಗಲ್‌ನಲ್ಲಿ ಭೂಕುಸಿತ ನಡೆದಲ್ಲಿ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಸುಮಾರು 12 ದಿನಗಳ ಬಳಿಕ ಗುರುವಾರದಿಂದ ರೈಲು ಸಂಚಾರ ಪುನರಾರಂಭಗೊಂಡಿದೆ. ಭಾರೀ ಮಳೆಯಿಂದಾಗಿ ಕಡಗರವಳ್ಳಿ ಮತ್ತು ಯಡಕುಮೇರಿ ನಡುವಿನ ರೈಲು ಮಾರ್ಗದ ಕೆಳಬದಿಯಲ್ಲಿ ಭೂಕುಸಿತವಾಗಿತ್ತು, ರೈಲ್ವೆ ಇಲಾಖೆ ನಿರಂತರ ಮಳೆಯ ನಡುವೆಯೂ ಕ್ರಿಬ್‌ ಗೋಡೆ, ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿದೆ. ಆಗಸ್ಟ್ 4 ರಂದು ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ರೈಲಿನ […]

12 ದಿನಗಳ ಬಳಿಕ ಮಂಗಳೂರು – ಬೆಂಗಳೂರು ರೈಲು ಸಂಚಾರ ಪುನರಾರಂಭ| ಪೂರ್ಣಗೊಂಡ ಮಾರ್ಗ ದುರಸ್ತಿ ಕಾರ್ಯ Read More »

ಕರಾವಳಿಯನ್ನು ಬೆಚ್ಚಿಬೀಳಿಸಿದ ಸೌಮ್ಯ ಭಟ್ ಕೊಲೆಗೆ 27 ವರ್ಷ| ಇನ್ನೂ ಪತ್ತೆಯಾಗಿಲ್ಲ ಮಿಲಿಟ್ರಿ ಅಶ್ರಫ್

ಸಮಗ್ರ ನ್ಯೂಸ್: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಪುತ್ತೂರಿನ ವಿದ್ಯಾರ್ಥಿನಿ ಸೌಮ್ಯಾ ಭಟ್‌ ಕೊಲೆ ಪ್ರಕರಣ ನಡೆದು 27 ವರ್ಷ ತುಂಬಿದೆ ಆದರೆ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಆರೋಪಿ ಮಿಲಿಟ್ರಿ ಅಶ್ರಫ್ ಸುಳಿವು ಇನ್ನೂ ಪತ್ತೆಯಾಗಿಲ್ಲ. ದಕ್ಷಿಣ ಕನ್ನಡದ ಪುತ್ತೂರು ವಿವೇಕಾನಂದ ಕಾಲೇಜಿನ ಬಿಎಸ್‌ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಸೌಮ್ಯಾ ಭಟ್‌ ಅವರನ್ನು ಹಿಂಬಾಲಿಸಿ ಕುದಂಬ್ಲಾಜೆಯ ಮಿಲಿಟ್ರಿ ಅಶ್ರಫ್‌ ಬರ್ಬರವಾಗಿ ಕೊಲೆಗೈದಿದ್ದ ಆ ಘಟನೆ ಇಡೀ ಪುತ್ತೂರು ಕೆರಳಿ ಕೆಂಡದಂತೆ ಮಾಡಿತ್ತು. ಅದು 1997ರ ಆಗಸ್ಟ್‌ 7 ರಂದು

ಕರಾವಳಿಯನ್ನು ಬೆಚ್ಚಿಬೀಳಿಸಿದ ಸೌಮ್ಯ ಭಟ್ ಕೊಲೆಗೆ 27 ವರ್ಷ| ಇನ್ನೂ ಪತ್ತೆಯಾಗಿಲ್ಲ ಮಿಲಿಟ್ರಿ ಅಶ್ರಫ್ Read More »

ಮಂಗಳೂರು: ಚಿಕಿತ್ಸೆಗೆಂದು ಬಂದಿದ್ದ ಬಾಲಕಿಯ ಕೊಲೆಗೈದ ಪ್ರಕರಣ| ಆರೋಪಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್ : ಜೋಕಟ್ಟೆಯ ಬಾಡಿಗೆ ಮನೆಗೆ ಅತಿಥಿಯಾಗಿ ಬಂದಿದ್ದ ಬೆಳಗಾವಿ ಮೂಲದ 14 ವರ್ಷದ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಳೆದ 6 ತಿಂಗಳಿನಿಂದ ಜೋಕಟ್ಟೆಯಲ್ಲಿ ವಾಸಿಸುತ್ತಿದ್ದ ಬೆಳಗಾವಿ ಜಿಲ್ಲೆ ಪರಸಘಡ ನಿವಾಸಿ ಫಕ್ಕೀರಪ್ಪ ಹಣಮಪ್ಪ ಮಾದರ (51) ಕೊಲೆ ಆರೋಪಿ. ಆರೋಪಿಯು ಜೋಕಟ್ಟೆಯಲ್ಲಿ ವಿಜಯ ವಿಠಲ ಭಜನಾ ಮಂದಿರದ ಹಿಂಭಾಗದಲ್ಲಿ ಕೇಶವ ಎಂಬವರ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಆರೋಪಿಯು ಜೋಕಟ್ಟೆ ಪರಿಸರದಲ್ಲಿ ದಿನಗೂಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ. ಕೃತ್ಯ ನಡೆದ

ಮಂಗಳೂರು: ಚಿಕಿತ್ಸೆಗೆಂದು ಬಂದಿದ್ದ ಬಾಲಕಿಯ ಕೊಲೆಗೈದ ಪ್ರಕರಣ| ಆರೋಪಿಯನ್ನು ಬಂಧಿಸಿದ ಪೊಲೀಸರು Read More »

ಶಿರಾಡಿ ಘಾಟ್ ಈಗ ಸಂಚಾರಕ್ಕೆ ಮುಕ್ತ| ಎಲ್ಲಾ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿದ ಹಾಸನ ಡಿಸಿ

ಸಮಗ್ರ ನ್ಯೂಸ್: ಹಲವು ದಿನಗಳ ಆತಂಕದ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು, ದಿನದ 24 ಗಂಟೆಯೂ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆನಾಡಿನಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಹಲವು ಭಾರಿ ಗುಡ್ಡ ಕುಸಿದಿದ್ದ ಸ್ಥಳದಲ್ಲಿ ಮಣ್ಣನ್ನು ತೆರವು ಮಾಡಿ ಆತಂಕ ನಿವಾರಣೆ ಮಾಡಲಾಗಿದೆ. ಈ ಹಿನ್ನಲೆ ವಾಹನಗಳು ಸಂಚರಿಸಲು ಅನುವು ಮಾಡಿಕೊಡಲಾಗಿದೆ. ಮಂಗಳೂರು – ಬೆಂಗಳೂರು ರೈಲು ಮಾರ್ಗದ ಎಡಕುಮೇರಿ- ಕಡಗರವಳ್ಳಿ ನಡುವಿನಲ್ಲಿ

ಶಿರಾಡಿ ಘಾಟ್ ಈಗ ಸಂಚಾರಕ್ಕೆ ಮುಕ್ತ| ಎಲ್ಲಾ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿದ ಹಾಸನ ಡಿಸಿ Read More »

ಉಡುಪಿ: ಹಾಡಹಗಲೇ ಕಾರೊಳಗೆ ಕಾಮಕೇಳಿಗೆ ಇಳಿದ ಜೋಡಿ| ಸಾರ್ವಜನಿಕರ ಕೈಗೆ ಸಿಕ್ಕಿಬೀಳುವ ಭಯದಲ್ಲಿ ಕಾರು ಬಿಟ್ಟು ಪರಾರಿ

ಸಮಗ್ರ ನ್ಯೂಸ್: ಉಡುಪಿ ನಗರದಲ್ಲಿ ಹಾಡಹಗಲಲ್ಲೇ ಕಾರಿನೊಳಗೆ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಜೋಡಿ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದು ಅಲ್ಲಿಂದ ಪರಾರಿಯಾದ ಘಟನೆ ಬುಧವಾರ (ಆಗಸ್ಟ್ 7) ರಂದು ನಡೆದಿದೆ. ಕವಿ ಮುದ್ದಣ ಮಾರ್ಗದಿಂದ ಚಿತ್ತರಂಜನ್ ಸರ್ಕಲ್ ಸಂಪರ್ಕಿಸುವ ರಸ್ತೆಯ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಎದುರು ಈ ಘಟನೆ ನಡೆದಿದೆ. ಕಾರು ನಿಲ್ಲಿಸಿ ಒಳ ಭಾಗದಲ್ಲಿ ಹಾಡ ಹಗಲಲ್ಲೇ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಈ ಜೋಡಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಕಾರನ್ನು ಸ್ಥಳದಲ್ಲಿ ಬಿಟ್ಟು

ಉಡುಪಿ: ಹಾಡಹಗಲೇ ಕಾರೊಳಗೆ ಕಾಮಕೇಳಿಗೆ ಇಳಿದ ಜೋಡಿ| ಸಾರ್ವಜನಿಕರ ಕೈಗೆ ಸಿಕ್ಕಿಬೀಳುವ ಭಯದಲ್ಲಿ ಕಾರು ಬಿಟ್ಟು ಪರಾರಿ Read More »

ಉಪ್ಪಿನಂಗಡಿ: ಟಿಕೆಟ್ ವಿಚಾರಕ್ಕೆ ನಿರ್ವಾಹಕನಿಗೆ ಪರಚಿದ ಪ್ರಯಾಣಿಕ| ಠಾಣೆಯಲ್ಲಿ ಪ್ರಕರಣ ಇತ್ಯರ್ಥ

ಸಮಗ್ರ ನ್ಯೂಸ್: ಟಿಕೆಟ್ ವಿಚಾರಕ್ಕೆ ಪ್ರಯಾಣಿಕನೊಬ್ಬ ಕಂಡೆಕ್ಟರ್ ಮೇಲೆ ಹಲ್ಲೆ ಮಾಡಿರುವ ಘಟನೆ ಉಪ್ಪಿನಂಗಡಿಯಿಂದ ಸುಬ್ರಹ್ಮಣ್ಯಕ್ಕೆ ಹೋಗುವ ಬಸ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯಿಂದ ಸುಬ್ರಹ್ಮಣ್ಯಕ್ಕೆ ಹೋಗುವ ಬಸ್ ನಲ್ಲಿ ವಿಪರೀತ ಪ್ರಯಾಣಿಕರು, ಶಾಲಾ ಮಕ್ಕಳು ತುಂಬಿ ತುಳುಕುತ್ತಿದ್ದರು. ಈ ವೇಳೆ ಕೆಮ್ಮಾರ ಬಳಿ ತಲುಪುತ್ತಿದ್ದಂತೆ ಪ್ರಯಾಣಿಕನೊಬ್ಬನಲ್ಲಿ ಕಂಡಕ್ಟರ್ ರಫೀಕ್ ಅವರು ಟಿಕೇಟ್ ಕೇಳಿದ್ದಾರೆ. ಬಳಿಕ ಈತ ಚಿಲ್ಲರೆ ವಿಚಾರದಲ್ಲಿ ತಗಾದೆ ತೆಗೆದಿದ್ದಾನೆ ಎನ್ನಲಾಗಿದೆ. ಪ್ರಯಾಣಿಕ ಜಗಳ ಮಾಡಿದ್ದಲ್ಲದೇ ಬಸ್ ನಲ್ಲಿ ರಂಪಾಟವಾಡಿ ಬಸ್ ಕಿಟಕಿಗೆ

ಉಪ್ಪಿನಂಗಡಿ: ಟಿಕೆಟ್ ವಿಚಾರಕ್ಕೆ ನಿರ್ವಾಹಕನಿಗೆ ಪರಚಿದ ಪ್ರಯಾಣಿಕ| ಠಾಣೆಯಲ್ಲಿ ಪ್ರಕರಣ ಇತ್ಯರ್ಥ Read More »

ಕಡಬ: ಅಪ್ರಾಪ್ತೆಯ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಅಪ್ರಾಪ್ತ ವಯಸ್ಕ ಬಾಲಕಿಯೋರ್ವಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಕಡಬ ಪೊಲೀಸರು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಡಬ ತಾಲೂಕಿನ ಮರ್ಧಾಳ ಸಮೀಪದ ನಿವಾಸಿಗಳಾದ ನಂದನ್‌ ಹಾಗೂ ಮಾಹಿಝ್ ಬಂಧಿತ ಆರೋಪಿಗಳು. ಆರೋಪಿಗಳನ್ನು ಸೋಮವಾರ ರಾತ್ರಿ ವಶಕ್ಕೆ ಪಡೆದಿದ್ದ ಪೊಲೀಸರು, ಪ್ರತ್ಯೇಕ 2 ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಮಂಗಳವಾರ ಸ್ಥಳ ಮಹಜರು ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕಡಬ: ಅಪ್ರಾಪ್ತೆಯ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಇಬ್ಬರು ಅರೆಸ್ಟ್ Read More »

ಪುತ್ತೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಸಮಿತಿ ರಚನೆ

ಸಮಗ್ರ ನ್ಯೂಸ್: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರು ಗ್ರಾಮ ಸಮಿತಿಯ ಆಂತರಿಕ ಚುನಾವಣೆಯು ಸವಣೂರಿನ ಅಂಬೇಡ್ಕರ್ ಭವನದಲ್ಲಿ ಆ.2 ರಂದು ನಡೆಯಿತು. ಸಮಿತಿಯ ಅಧ್ಯಕ್ಷರಾಗಿ ಇಕ್ಬಾಲ್ ಕೆನರ, ಕಾರ್ಯದರ್ಶಿಯಾಗಿ ರಫೀಕ್ ಪಣೆಮಜಲು ,ಕೋಶಾಧಿಕಾರಿಯಾಗಿ ಅಶ್ರಫ್ ಜನತಾ, ಉಪಾಧ್ಯಕ್ಷರಾಗಿ ಶಹೀರ್ ರಾಯಲ್, ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ರಹಿಮಾನ್ ಸರ್ವೆ, ಸದಸ್ಯರಾಗಿ ಬಶೀರ್ ಕಾಯರ್ಗ, ಮಹಮ್ಮದ್ ಕುಞಿ ಬಾಬ ಆಯ್ಕೆಯಾದರು. ಪಕ್ಷದ ಚುನಾವಣಾ ಅಧಿಕಾರಿಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿಯಾದ ಉಸ್ಮಾನ್

ಪುತ್ತೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಸಮಿತಿ ರಚನೆ Read More »

ಮಂಗಳೂರು: ಹೋಂ‌‌ ಸ್ಟೇ ದಾಳಿ ಪ್ರಕರಣದ ತೀರ್ಪು ಪ್ರಕಟ| 11 ವರ್ಷಗಳ ಬಳಿಕ ಪ್ರಕರಣ ಖುಲಾಸೆ

ಸಮಗ್ರ ನ್ಯೂಸ್: ದೇಶಾದ್ಯಂತ ಸುದ್ದಿ ಮಾಡಿದ್ದ 2012ರ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಮಹತ್ವದ ತೀರ್ಪನ್ನು ನ್ಯಾಯಾಲಯ ಮಂಗಳವಾರ (ಆ.6) ಪ್ರಕಟಿಸಿದೆ. ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಆದೇಶ ಹೊರಡಿಸಿದ್ದಾರೆ. 2009ರ ಪಬ್ ದಾಳಿ ನಂತರ 2012ರಲ್ಲಿ ನಡೆದ ಹೋಂ ಸ್ಟೇ ದಾಳಿಯೂ ಬಾರಿ ಸುದ್ದಿಯಾಗಿತ್ತು. ಹುಟ್ಟುಹಬ್ಬ ಆಚರಿಸುತ್ತಿದ್ದ ವೇಳೆ ಈ ದಾಳಿ

ಮಂಗಳೂರು: ಹೋಂ‌‌ ಸ್ಟೇ ದಾಳಿ ಪ್ರಕರಣದ ತೀರ್ಪು ಪ್ರಕಟ| 11 ವರ್ಷಗಳ ಬಳಿಕ ಪ್ರಕರಣ ಖುಲಾಸೆ Read More »

ಮಂಗಳೂರು: ಬಿಜೈನಿಂದ‌ ಕಾಣೆಯಾಗಿದ್ದ ಹುಡುಗಿ ಕಾರ್ಕಳದ ಯುವಕನ ಮನೆಯಲ್ಲಿ ಪತ್ತೆ| ಮಕ್ಕಳ ಕೈಗೆ ಮೊಬೈಲ್ ಕೊಟ್ರೆ‌ ಹೀಗೆಲ್ಲಾ ಆಗುತ್ತೆ ಜೋಪಾನ…

ಸಮಗ್ರ ನ್ಯೂಸ್: ಬಿಜೈನ ನಿವಾಸಿಯಾಗಿರುವ 18 ವರ್ಷದ ಯುವತಿ ಸಿಮ್ ಇಲ್ಲದ ಮೊಬೈಲ್ ನೊಂದಿಗೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಯುವತಿಯನ್ನು ಕಾರ್ಕಳದಲ್ಲಿ ಪತ್ತೆ ಹಚ್ಚಿದ್ದಾರೆ. ಜುಲೈ 30 ರಂದು ಯುವತಿ ಮನೆಯಿಂದ ಯಾರಿಗೂ ಹೇಳದೆ ನಾಪತ್ತೆಯಾಗಿದ್ದಳು. ಈ ವೇಳೆ ಸಿಮ್ ಇಲ್ಲದ ಮೊಬೈಲ್ ನ್ನು ತೆಗೆದುಕೊಂಡು ಹೋಗಿದ್ದಳು. ಈ ಕುರಿತಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ತನಿಖೆ ಕೈಗೊಂಡ ಬರ್ಕೆ ಪೊಲೀಸ್ ಇನ್ಸ್ಪೆಕ್ಟರ್ ತಂಡ, CC TV ದೃಶ್ಯಾವಳಿಗಳನ್ನು ಆಧರಿಸಿ

ಮಂಗಳೂರು: ಬಿಜೈನಿಂದ‌ ಕಾಣೆಯಾಗಿದ್ದ ಹುಡುಗಿ ಕಾರ್ಕಳದ ಯುವಕನ ಮನೆಯಲ್ಲಿ ಪತ್ತೆ| ಮಕ್ಕಳ ಕೈಗೆ ಮೊಬೈಲ್ ಕೊಟ್ರೆ‌ ಹೀಗೆಲ್ಲಾ ಆಗುತ್ತೆ ಜೋಪಾನ… Read More »