ಕರಾವಳಿ

ಮಂಗಳೂರು:ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆ|ಬದಲಿ ರಸ್ತೆ ವ್ಯವಸ್ಥೆ

ಸಮಗ್ರ ನ್ಯೂಸ್: ಮಂಗಳೂರು ತಾಲೂಕಿನ ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ ಸಂಖ್ಯೆ 67ರ 16.20 ಕಿ.ಮೀ. ನಿಂದ 19 ಕಿ.ಮೀ. ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ ಆದೇಶ ಹಾಗೂ ಸಾರ್ವಜನಿಕರ ಓಡಾಟಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಿ ಅಪರ ದಂಡಾಧಿಕಾರಿಗಳೂ ಆಗಿರುವ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಬದಲಿ ರಸ್ತೆ ವ್ಯವಸ್ಥೆ: ಕಟೀಲು ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ವಾಹನಗಳು ಬಜಪೆ […]

ಮಂಗಳೂರು:ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆ|ಬದಲಿ ರಸ್ತೆ ವ್ಯವಸ್ಥೆ Read More »

ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ಸಿನಿಂದ ಮಹಿಳೆಯೊಬ್ಬರು ಹೊರಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೇಪು ಲಕ್ಷ್ಮಿ ಜನಾರ್ಧನ ದೇವಸ್ಥಾನದ ಬಳಿ ಈ ದುರ್ಘಟನೆ ನಡೆದಿದೆ. ಬೆಂಗಳೂರಿನ ದಾಸರಹಳ್ಳಿಯ ನಾಗರತ್ಮಮ್ಮ( 58) ಮೃತಪಟ್ಟವರು. ಇವರು ಬೆಂಗಳೂರಿನಿಂದ ತಮ್ಮ ಕುಟುಂಬಸ್ಥರೊಂದಿಗೆ ಬೆಂಗಳೂರಿನಿಂದ ರೈಲು ಮೂಲಕ ಬಂದು ನೆಟ್ಟಣ ನಲ್ಲಿ ಬಂದಿಳಿದಿದ್ದರು. ಅಲ್ಲಿಂದ ಕೆ.ಎಸ್.ಆರ್.ಟಿ.ಸಿ ಬಸ್ ಮೂಲಕ ಧರ್ಮಸ್ಥಳಕ್ಕೆ ತೆರಳಲು ಬಸ್ ಏರಿ ಬಸ್ ಮುಂಭಾಗ ಕುಳಿತ್ತಿದ್ದ ಮಹಿಳೆಯು ಕೇಪು ದೇವಸ್ಥಾನದ ಬಳಿ

ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆ ಸಾವು Read More »

ಮೂಡಬಿದ್ರೆ, ಉತ್ತರ ಎರಡೂ ಕ್ಷೇತ್ರದತ್ತ “ಪ್ರತಿಭಾ” ಕಣ್ಣು!

ಸಮಗ್ರ ನ್ಯೂಸ್: ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು ಮಂಗಳೂರು ಉತ್ತರ ಮತ್ತು ಮೂಲ್ಕಿ ಮೂಡಬಿದ್ರೆ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್ ಗಾಗಿ ಹೈಕಮಾಂಡ್ ಗೆ ಅರ್ಜಿ ಸಲ್ಲಿಸಿದ್ದಾರೆ. ಮಂಗಳೂರು ಉತ್ತರದಲ್ಲಿ ಟಿಕೆಟ್ ಗಾಗಿ ಲಾಬಿ ಜೋರಾಗಿ ನಡೆಯುತ್ತಿದ್ದು ಮಾಜಿ ಶಾಸಕ ಮೊಯಿದೀನ್ ಬಾವಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಟಿಕೆಟ್ ಆಕಾಂಕ್ಷಿಗಳಾಗಿ ಮುಂಚೂಣಿಯಲ್ಲಿದ್ದಾರೆ. ಇವರಲ್ಲದೆ ಮಮತಾ ಗಟ್ಟಿ, ಮಾಜಿ ಮೇಯರ್ ಗಳಾದ ಶಶಿಧರ್ ಹೆಗ್ಡೆ, ಕವಿತಾ ಸನಿಲ್, ಲುಕ್ಮಾನ್ ಬಂಟ್ವಾಳ, ಪುರುಷೋತ್ತಮ ಚಿತ್ರಾಪುರ ಹಾಗೂ ಇತರರು

ಮೂಡಬಿದ್ರೆ, ಉತ್ತರ ಎರಡೂ ಕ್ಷೇತ್ರದತ್ತ “ಪ್ರತಿಭಾ” ಕಣ್ಣು! Read More »

“ಪುದುಚೇರಿಯಲ್ಲಿ ಉಗ್ರ ಚಟುವಟಿಕೆಗೆ ಕಡಿವಾಣ, ಪ್ರವಾಸಿಗರ ಸುರಕ್ಷತೆಗೆ ಆದ್ಯತೆ”
-ಪುದುಚೇರಿ ಗೃಹಸಚಿವ ಎ. ನಮಸ್ಸಿವಾಯಂ

ಸುರತ್ಕಲ್: “ಪುದುಚೇರಿ ಸರಕಾರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ವಿದೇಶಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಉಗ್ರ ಚಟುವಟಿಕೆಗೆ ಮೇಲೆ ಹದ್ದಿನ ಕಣ್ಣಿರಿಸಲಾಗಿದ್ದು ಸುರಕ್ಷತಾ ಕ್ರಮಕ್ಕೆ ಒತ್ತು ,ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ” ಎಂದು ಪುದುಚೇರಿ ಗೃಹಸಚಿವ ಎ. ನಮಸ್ಸಿವಾಯಂ ಅವರು ಹೇಳಿದರು. ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಶ್ರೀ ಕಟೀಲೇಶ್ವರಿ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ ಅವರು ಕಲ್ಲಿದ್ದಲು ಉದ್ಯಮದ ಕುರಿತು ಮಾಹಿತಿ ಪಡೆದುಕೊಂಡರು.ಪುದುಚೇರಿ ಸಣ್ಣ ರಾಜ್ಯವಾಗಿದ್ದು ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಹೆಚ್ಚೆಚ್ಚು ಆಕರ್ಷಿಸುತ್ತಿದೆ. ಕರ್ನಾಟಕದ ಯುವ

“ಪುದುಚೇರಿಯಲ್ಲಿ ಉಗ್ರ ಚಟುವಟಿಕೆಗೆ ಕಡಿವಾಣ, ಪ್ರವಾಸಿಗರ ಸುರಕ್ಷತೆಗೆ ಆದ್ಯತೆ”
-ಪುದುಚೇರಿ ಗೃಹಸಚಿವ ಎ. ನಮಸ್ಸಿವಾಯಂ
Read More »

ಮಂಗಳೂರು:KSRTC ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ..!

ಸಮಗ್ರ ನ್ಯೂಸ್: ಆಟೋ ರಿಕ್ಷಾ ಸ್ಫೋಟವಾದ ಬೆನ್ನಲ್ಲೇ ಇದೀಗ ಬಿಜೈಯ KSRTC ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿ ಕೆಲ ಕಾಲ ಆತಂಕಕ್ಕೆ ಕಾರಣವಾದ ಘಟನೆ ಇಂದು ನಡೆದಿದೆ. ಈ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ತೀವ್ರ ಪರಿಶೀಲನೆಗೆ ಒಳಪಡಿಸಿತು‌. ಬಳಿಕ ಇದು ಪ್ರಯಾಣಿಕನೋರ್ವನ ಬ್ಯಾಗ್ ಅನ್ನೋದು ತಿಳಿದು ಬಂದಿದ್ದು, ಪೊಲೀಸರು ಮತ್ತು ಸಾರ್ವಜನಿಕರು ನಿರಾಳರಾದರು‌.

ಮಂಗಳೂರು:KSRTC ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ..! Read More »

ಮಂಗಳೂರು: ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಬಾಂಬ್ ಸ್ಫೋಟ|ಚಾಲಕ ಪುರುಷೋತ್ತಮ್ ಅಚ್ಚರಿಯ ರೀತಿಯಲ್ಲಿ ಪಾರಾಗಿದ್ದು ಹೇಗೆ..!! ಕಾಪಾಡಿದನೇ ಕೊರಗಜ್ಜ!?

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಆಟೋದಲ್ಲಿ ಭಾರಿ ಪ್ರಮಾಣದ ಬಾಂಬ್ ಸ್ಫೋಟ. ಈ ವೇಳೆ ಸುತ್ತಮುತ್ತಲು ಆವರಿಸಿಕೊಂಡ ದಟ್ಟ ಹೊಗೆ. ಶೇಕಡ 60 ಸುಟ್ಟುಹೋದ ಆತಂಕವಾದಿ. ಅಚ್ಚರಿಯ ರೀತಿಯಲ್ಲಿ ಪಾರಾದ ಆಟೋ ಚಾಲಕ ಪುರುಷೋತ್ತಮ್. ಈ ಗ್ರೇಟ್ ಎಸ್ಕೇಪ್ ಗೆ ಪುರುಷೋತ್ತಮ್ ದೈವಗಳ ಮೇಲಿಟ್ಟ ನಂಬಿಕೆ ಅಂತ ಮಂಗಳೂರಿನ ಜನ ಮಾತನಾಡುತ್ತಿದ್ದಾರೆ. ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಭಾರಿ ಪ್ರಮಾಣದ ಸ್ಪೋಟವಾಗಿದೆ. ಮಂಗಳೂರಿನ ನಾಗುರಿ ಪರಿಸರದಲ್ಲಿ ಆತಂಕ ಮನೆ ಮಾಡಿದೆ. ಆಟೋರಿಕ್ಷಾ ಸ್ಪೋಟ ಆದ ದೃಶ್ಯ ಕಂಡ್ರೆ ಎಂತವರು ಕೂಡ ಬೆಚ್ಚಿ

ಮಂಗಳೂರು: ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಬಾಂಬ್ ಸ್ಫೋಟ|ಚಾಲಕ ಪುರುಷೋತ್ತಮ್ ಅಚ್ಚರಿಯ ರೀತಿಯಲ್ಲಿ ಪಾರಾಗಿದ್ದು ಹೇಗೆ..!! ಕಾಪಾಡಿದನೇ ಕೊರಗಜ್ಜ!? Read More »

ಕಾರ್ಕಳ: ಕಣಿವೆಗೆ ಬಿದ್ದ ಕಾರು – ಓರ್ವ ಮೃತ್ಯು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಣಿವೆಗೆ ಉರುಳಿ ಬಿದ್ದು ಓರ್ವ ಸಾವನಪ್ಪಿದ ಘಟನೆ ಕಾರ್ಕಳ ತಾಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆಯಲ್ಲಿ ನ.21 ರ ಬೆಳಿಗ್ಗೆ ಸಂಭವಿಸಿದೆ. ಉಡುಪಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಪ್ರಥಮ ಪಿಯುಸಿ ವಿದ್ಯಾರ್ಥಿ ವೈಷ್ಣವ್ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ. ಇನ್ನೂ ಕಾರಿನಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಉಚ್ಚಿಲದಲ್ಲಿ ತಮ್ಮದೇ ಮನೆಯಲ್ಲಿ ಬಾಡಿಗೆಗೆ ಇರುವ ಕುಟುಂಬದ ಸದಸ್ಯರೊಟ್ಟಿಗೆ ಬೆಂಗಳೂರಿಗೆ ತಿರುಗಾಡಲು ಹೋಗಿ

ಕಾರ್ಕಳ: ಕಣಿವೆಗೆ ಬಿದ್ದ ಕಾರು – ಓರ್ವ ಮೃತ್ಯು Read More »

ಮೂಡಬಿದಿರೆ: ಬೈಕ್ ಸ್ಕಿಡ್; ಸವಾರ ಮೃತ್ಯು

ಸಮಗ್ರ ನ್ಯೂಸ್: ಬೈಕ್ ಸ್ಕಿಡ್ ಆಗಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸಾವನಪ್ಪಿದ ಘಟನೆ ಭಾನುವಾರ ರಾತ್ರಿ ಬೆಳುವಾಯಿಲ್ಲಿ ಸಂಭವಿಸಿದೆ. ಮೃತ ಯುವಕನ್ನು ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ರಾಣಿಕೇರಿ ನಿವಾಸಿ, ಮೂಲತಃ ಚಿಕ್ಕಮಗಳೂರಿನ ರಾಜೇಶ್ (28) ಎಂದು ಗುರುತಿಸಲಾಗಿದೆ. ಈತ ಬಾಳೆಹೊನ್ನೂರಿನಲ್ಲಿ ಅಜ್ಜಿಯ ಅಂತ್ಯ ಸಂಸ್ಕಾರ ಮುಗಿಸಿ ಮೂಡುಬಿದಿರೆಗೆ ಬೈಕ್ ನಲ್ಲಿ ಮರಳುತ್ತಿದ್ದ ವೇಳೆ ಬೆಳುವಾಯಿಯಲ್ಲಿ ಬೈಕ್ ಸ್ಕಿಡ್ ಆಗಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತೆರವುಗೊಳಿಸಿದ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತಲೆಗೆ ಬಲವಾದ ಪೆಟ್ಟು

ಮೂಡಬಿದಿರೆ: ಬೈಕ್ ಸ್ಕಿಡ್; ಸವಾರ ಮೃತ್ಯು Read More »

ಮಂಗಳೂರು: ಆಟೋ ಸ್ಪೋಟದ ಕಿಂಗ್ ಪಿನ್ ಮತೀನ್ ಪತ್ತೆಗೆ 3 ಲಕ್ಷ ಘೋಷಿಸಿದ NIA

ಸಮಗ್ರ ನ್ಯೂಸ್: ಉಗ್ರ ಮತೀನ್​​ ತಾಹ ಜೊತೆ ಶಾರಿಕ್​​​ ನಂಟು ಹೊಂದಿದ್ದು, NIA ದೇಶಭ್ರಷ್ಟ ಮತೀನ್​​ಗಾಗಿ ಹುಡುಕುತ್ತಿದೆ. NIA ಮತೀನ್​​ ತಲೆಗೆ 3 ಲಕ್ಷ ಇನಾಮು ಘೋಷಣೆ ಮಾಡಿದೆ. ಮಂಗಳೂರು ಸ್ಫೋಟಕ್ಕೂ ಮತೀನ್​ಗೂ ನಂಟಿದೆ ಎಂದು ವರದಿಗಳು ತಿಳಿಸಿವೆ. ಅಬ್ದುಲ್​​​​ ಮತೀನ್​​​ ಥಾಹಾ ಶಿವಮೊಗ್ಗ ತೀರ್ಥಹಳ್ಳಿಯವನಾಗಿದ್ದು, ಈ ಮತೀನ್​​​ ಮಂಗಳೂರು ಸ್ಫೋಟದ ಮಾಸ್ಟರ್​​ ಮೈಂಡ್​ ಎನ್ನಲಾಗ್ತಿದೆ.. ಅಲ್​​​​ ಹಿಂದ್​ ಐಸಿಸ್ ಕೇಸ್​ನ ಪ್ರಮುಖ ಆರೋಪಿ ಮತೀನ್​​​ ಆಗಿದ್ದು, ತಮಿಳುನಾಡಿನ ಹಿಂದೂ ಮುಖಂಡನ ಕೊಲೆಯಲ್ಲೂ ಪಾತ್ರದಲ್ಲಿದ್ದನು. ಮಾಜ್​ ಮುನೀರ್​​

ಮಂಗಳೂರು: ಆಟೋ ಸ್ಪೋಟದ ಕಿಂಗ್ ಪಿನ್ ಮತೀನ್ ಪತ್ತೆಗೆ 3 ಲಕ್ಷ ಘೋಷಿಸಿದ NIA Read More »

ವಿಟ್ಲ: ಮುಸ್ಲಿಂ ಯುವಕರೊಂದಿಗೆ ಹಿಂದೂ ಹುಡುಗಿ ಗುಡ್ಡದಲ್ಲಿ ಸಿಕ್ಕಿಬಿದ್ದ ಪ್ರಕರಣಕ್ಕೆ ತಿರುವು

ಸಮಗ್ರ ನ್ಯೂಸ್: ಮುಸ್ಲಿಂ ಯುವಕರೊಂದಿಗೆ ಹಿಂದೂ ಅಪ್ರಾಪ್ತ ಹುಡುಗಿ ಅಳಕಮಜಲು ಸಮೀಪದ ನಿನ್ನಿಕಲ್ಲು ಗುಡ್ಡದಲ್ಲಿ ಪತ್ತೆಯಾದ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಮುಸ್ಲಿಂ ಯುವಕರು, ಒಬ್ಬಳು ಮುಸ್ಲಿಂ ಯುವತಿ ಹಾಗೂ ಹಿಂದೂ ಅಪ್ರಾಪ್ತ ಹುಡುಗಿ ನಿನ್ನಿ ಕಲ್ಲು ಎಂಬಲ್ಲಿ ಸ್ಥಳೀಯರ ಕೈಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದು ಇದೀಗ ಪೊಲೀಸ್ ಠಾಣಾ ಮೆಟ್ಟಿಲೇರಿದೆ.ಈ ಕುರಿತು ಹಿಂದೂ ಹುಡುಗಿಯ ಪೋಷಕರು ವಿಟ್ಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಏನಿದೆ..?ಕಬಕ ಗ್ರಾಮ ಪಂಚಾಯತ್ ನ

ವಿಟ್ಲ: ಮುಸ್ಲಿಂ ಯುವಕರೊಂದಿಗೆ ಹಿಂದೂ ಹುಡುಗಿ ಗುಡ್ಡದಲ್ಲಿ ಸಿಕ್ಕಿಬಿದ್ದ ಪ್ರಕರಣಕ್ಕೆ ತಿರುವು Read More »