ಕರಾವಳಿ

ಅಡಿಕೆ ಮಾರುಕಟ್ಟೆಯಲ್ಲಿ ಭಾರಿ ಕುಸಿತ| ಮತ್ತಷ್ಟು ಬೆಲೆ ಇಳಿಕೆ ಭೀತಿ

ಸಮಗ್ರ ನ್ಯೂಸ್: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಶನಿವಾರ ದೊಡ್ಡ ಮಟ್ಟದ ಕುಸಿತ ಕಂಡಿದೆ. ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆ ನಿರಂತರವಾಗಿ ಕುಸಿಯುತ್ತ ಸಾಗಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ ಬೆಲೆ ಇಳಿಕೆಯಾಗಿದೆ. ಬೇಡಿಕೆ ಕಡಿಮೆಯಾಗಿರುವ ಹಿನ್ನೆಲೆ ಅಡಿಕೆ ದರ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ

ಅಡಿಕೆ ಮಾರುಕಟ್ಟೆಯಲ್ಲಿ ಭಾರಿ ಕುಸಿತ| ಮತ್ತಷ್ಟು ಬೆಲೆ ಇಳಿಕೆ ಭೀತಿ Read More »

ಪ್ರವಾಸಿ ತಾಣಗಳ ಪಟ್ಟಿಗೆ ಸೇರ್ಪಡೆಯಾಯ್ತು ಬಪ್ಪನಾಡು ದೇಗುಲ!

ಸಮಗ್ರ ನ್ಯೂಸ್: ಮೂಲ್ಕಿ ಸಮೀಪದ ಇತಿಹಾಸ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ಕರ್ನಾಟಕ ರಾಜ್ಯದ ಪ್ರವಾಸಿ ತಾಣಗಳ ಸೇರ್ಪಡೆಯಾಗಿದ್ದು ಭಕ್ತರ ಹರ್ಷಕ್ಕೆ ಕಾರಣವಾಗಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆ ಗುರುತಿಸಿರುವ ಪ್ರವಾಸಿ ತಾಣಗಳ ಪಟ್ಟಿಗೆ ಬಪ್ಪನಾಡು ದೇವಸ್ಥಾನವನ್ನು ಸೇರ್ಪಡೆಗೊಳಿಸಬೇಕೆಂದು ಭಕ್ತರ ಪರವಾಗಿ ಜೀವನ್ ಕೆ. ಶೆಟ್ಟಿ ಅವರು ಸರಕಾರಕ್ಕೆ ಮನವಿ ಮಾಡಿದ್ದರು.ರಾಜ್ಯ ಪ್ರವಾಸೋದ್ಯಮ ಸಚಿವರಾದ ಸಿ.ಪಿ.ಯೋಗೀಶ್ವರ್, ಮಾಜಿ ಸಚಿವ ಪಿ.ಜಿ. ಆರ್. ಸಿಂಧ್ಯಾ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರು, ರಾಜ್ಯ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು, ಹಿಂದಿನ

ಪ್ರವಾಸಿ ತಾಣಗಳ ಪಟ್ಟಿಗೆ ಸೇರ್ಪಡೆಯಾಯ್ತು ಬಪ್ಪನಾಡು ದೇಗುಲ! Read More »

ಡಿ.1 ರಿಂದ ದ.ಕ ಜಿಲ್ಲೆಯಲ್ಲಿ ಆಟೋ ರಿಕ್ಷಾಗಳ ಪ್ರಯಾಣ ದರ ಹೆಚ್ಚಳ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ಸಂಚರಿಸುವ ಆಟೋ ರಿಕ್ಷಾಗಳ ಪ್ರಯಾಣ ದರವನ್ನು ಡಿ. 1ರಿಂದ ಅನ್ವಯವಾಗುವಂತೆ ಜಿಲ್ಲಾ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಆದೇಶ ಹೊರಡಿಸಿದ್ದಾರೆ. 1.5 ಕಿ.ಮೀ. ವ್ಯಾಪ್ತಿಗೆ ಕನಿಷ್ಠ ದರ 35 ರೂ. (ಗರಿಷ್ಠ ಮೂವರು ಪ್ರಯಾಣಿಕರು), ಅನಂತರ ಪ್ರತೀ ಕಿ.ಮೀ.ಗೆ 20 ರೂ. ನಿಗದಿಪಡಿಸಲಾಗಿದೆ. ಕಾಯುವಿಕೆ ಮೊದಲ 15 ನಿಮಿಷ ಉಚಿತ. ಅನಂತರ 15 ನಿಮಿಷದ ವರೆಗೆ 5 ರೂ. ಇರಲಿದೆ. ಪ್ರಯಾಣಿಕರ ಸರಕಿಗೆ (ಲಗೇಜ್‌) ಒಬ್ಬ ಪ್ರಯಾಣಿಕ ಕಡ್ಡಾಯವಾಗಿ

ಡಿ.1 ರಿಂದ ದ.ಕ ಜಿಲ್ಲೆಯಲ್ಲಿ ಆಟೋ ರಿಕ್ಷಾಗಳ ಪ್ರಯಾಣ ದರ ಹೆಚ್ಚಳ Read More »

75ನೇ ವಸಂತಕ್ಕೆ ಕಾಲಿಟ್ಟ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ನ. 25ರಂದು 75ನೇ ವಸಂತಕ್ಕೆ ಕಾಲಿಡಲಿದ್ದು, ತಮ್ಮ ನಿವಾಸದಲ್ಲಿ ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಳ್ಳಲಿರುವರು. ಧರ್ಮಾಧಿಕಾರಿಗಳಾಗಿದ್ದ ಕೀರ್ತಿಶೇಷ ಡಿ. ರತ್ಮವರ್ಮ ಹೆಗ್ಗಡ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರನಾಗಿ 1948ರ ನ. 25ರಂದು ಜನಿಸಿದ ವೀರೇಂದ್ರ ಕುಮಾರ್‌ ಅವರು ಡಿ. ವೀರೇಂದ್ರ ಹೆಗ್ಗಡೆಯಾಗಿ 1964ರ ಅ. 24ರಂದು ಧರ್ಮಸ್ಥಳದ 21 ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾಗಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ವಉದ್ಯೋಗ

75ನೇ ವಸಂತಕ್ಕೆ ಕಾಲಿಟ್ಟ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ Read More »

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಎಡಿಜಿಪಿ ಅಲೋಕ್ ಕುಮಾರ್ ಕೂಡಾ ಟಾರ್ಗೆಟ್? ಪೋಸ್ಟರ್ ವೈರಲ್; ತನಿಖೆ ಚುರುಕು

ಸಮಗ್ರ ನ್ಯೂಸ್: ಮಂಗಳೂರು ನಗರದ ಕಂಕನಾಡಿ ಸಮೀಪದಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ವಿವಿಧ ಆಯಾಮಗಳಲ್ಲಿ ಮುನ್ನಡೆಸಲಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್ ಒಂದು ವೈರಲ್ ಆಗುತ್ತಿದೆ. ವೈರಲ್ ಆಗುತ್ತಿರುವ ಪೋಸ್ಟ್ ಗೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಒಂದು ಸಂಘಟನೆ ಏಕಾಏಕಿ ಪೋಸ್ಟ್ ಹಾಕಿಕೊಂಡಿದ್ದು ಸ್ವತಃ ಈ ಕೃತ್ಯದ ಹೊಣೆ ಹೆಗಲೇರಿಸಿಕೊಂಡಿದೆ. ವೈರಲ್ ಆಗುತ್ತಿರುವ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಅವರು ‘ನಾವು ಸಂಘಟನೆ ಮತ್ತು ಆ ಪೋಸ್ಟ್

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಎಡಿಜಿಪಿ ಅಲೋಕ್ ಕುಮಾರ್ ಕೂಡಾ ಟಾರ್ಗೆಟ್? ಪೋಸ್ಟರ್ ವೈರಲ್; ತನಿಖೆ ಚುರುಕು Read More »

ಉಡುಪಿ:ರಕ್ತದೊತ್ತಡ ಕಡಿಮೆಯಾಗಿ‌ ಯುವತಿ ಸಾವು

ಸಮಗ್ರ ನ್ಯೂಸ್: ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ರೋಸ್ ಕಾರ್ಯಕ್ರಮದ ವೇಳೆ ರಕ್ತದೊತ್ತಡ ಕಡಿಮೆಯಾಗಿ ಕುಸಿದುಬಿದ್ದು ಯುವತಿ ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿ ಕೊಳಲಗಿರಿ ಹಾವಂಜೆಯ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಸಮಾರಂಭಕ್ಕೆ ತೆರಳಿದ್ದರು. ಅಲ್ಲಿ 8.30ರ ಸುಮಾರಿಗೆ ಏಕಾಏಕಿಯಾಗಿ ರಕ್ತದ ಒತ್ತಡ ಕಡಿಮೆಯಾದ ಪರಿಣಾಮ ಜೋಸ್ನಾ ಅವರು ಅಲ್ಲೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಮಣಿಪಾಲ

ಉಡುಪಿ:ರಕ್ತದೊತ್ತಡ ಕಡಿಮೆಯಾಗಿ‌ ಯುವತಿ ಸಾವು Read More »

ಸುರತ್ಕಲ್ ನ ಟೋಲ್ ಹೆಜಮಾಡಿಗೆ ಶಿಪ್ಟ್| ಪರಿಷ್ಕೃತ ದರ ಜಾರಿಗೊಳಿಸಿದ ಹೆದ್ದಾರಿ ಪ್ರಾಧಿಕಾರ| ಈಗ ಡಬ್ಬಲ್ ಅಲ್ಲ, ಅದಕ್ಕಿಂತಲೂ ಹೆಚ್ಚು!!

ಸಮಗ್ರ ನ್ಯೂಸ್: ಸುರತ್ಕಲ್ ಟೋಲ್‌ಗೇಟ್‌ನ್ನು ಹೆಜಮಾಡಿ ಟೋಲ್‌ಗೇಟ್‌ನೊಂದಿಗೆ ವಿಲೀನಗೊಳಿಸಿರುವ ಹಿನ್ನೆಲೆಯಲ್ಲಿ ಹೆಜಮಾಡಿ ಟೋಲ್‌ಗೇಟ್‌ನ ದರವನ್ನು ಪರಿಷ್ಕೃರಿಸಿ ಟೋಲ್ ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗುರುವಾರ ಸುತ್ತೋಲೆಯೊಂದನ್ನು ಹೊರಡಿಸಿದೆ. “ಕರ್ನಾಟಕ ಸರ್ಕಾರದ ನಿರಂತರ ವಿನಂತಿ/ಬೇಡಿಕೆ ಮೇರೆಗೆ, ಸ್ಥಳೀಯ ಸಾರ್ವಜನಿಕ/ವಿಐಪಿ ಒತ್ತಾಯಗಳ ಆಧಾರದ ಮೇಲೆ, ಸಕ್ಷಮ ಪ್ರಾಧಿಕಾರವು ಹೊಸ ಮಂಗಳೂರು ಬಂದರು ರಸ್ತೆಯ ಸುರತ್ಕಲ್ ಟೋಲ್ ಪ್ಲಾಜಾ (NITK ಹತ್ತಿರ, NH-66 ರ ಕ್ಯಾಂಪಸ್) ವಿಲೀನಕ್ಕೆ ಅನುಮೋದನೆ ನೀಡಿದೆ. ನವಯುಗ ಉಡುಪಿ ಟೋಲ್‌ವೇ ಪ್ರೈವೇಟ್ ಲಿಮಿಟೆಡ್‌ನ (ಟೋಲ್) ಯೋಜನೆಯ ಅಡಿಯಲ್ಲಿ

ಸುರತ್ಕಲ್ ನ ಟೋಲ್ ಹೆಜಮಾಡಿಗೆ ಶಿಪ್ಟ್| ಪರಿಷ್ಕೃತ ದರ ಜಾರಿಗೊಳಿಸಿದ ಹೆದ್ದಾರಿ ಪ್ರಾಧಿಕಾರ| ಈಗ ಡಬ್ಬಲ್ ಅಲ್ಲ, ಅದಕ್ಕಿಂತಲೂ ಹೆಚ್ಚು!! Read More »

ಸುಳ್ಯ: ಅಟೋ ಚಾಲಕ ನಾಪತ್ತೆ| ಮಾಹಿತಿ ಸಿಕ್ಕಿದಲ್ಲಿ ಠಾಣೆಗೆ ತಿಳಿಸುವಂತೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ರಿಕ್ಷಾ ಚಾಲಕನಾಗಿರುವ ಯುವಕನೋರ್ವ ನಾಪತ್ತೆಯಾಗಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಐವರ್ನಾಡು ಪೇಟೆಯಲ್ಲಿ ರಿಕ್ಷಾ ಓಡಿಸುತ್ತಿದ್ದ ಯತೀಶ (32) ನಾಪತ್ತೆಯಾದವರು. ಇವರು ನ.21 ರಂದು ಮನೆಯಿಂದ ತನ್ನ ಅಟೋ ರಿಕ್ಷಾದಲ್ಲಿ ಪುತ್ತೂರಿಗೆ ಬಾಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಮನೆಗೆ ಬಾರದೆ ಇದ್ದು ಫೋನ್ ಕೂಡಾ ಸಿಗದೆ ಇದ್ದುದರಿಂದ ಈ ಬಗ್ಗೆ ಮನೆಯವರು ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಾಣೆಯಾದ ಯುವಕನ ಚಹರೆ:ಹೆಸರು. ಯತೀಶ್ ಪ್ರಾಯ

ಸುಳ್ಯ: ಅಟೋ ಚಾಲಕ ನಾಪತ್ತೆ| ಮಾಹಿತಿ ಸಿಕ್ಕಿದಲ್ಲಿ ಠಾಣೆಗೆ ತಿಳಿಸುವಂತೆ ಮನವಿ Read More »

ಮಂಗಳೂರು ಸ್ಪೋಟ ಪ್ರಕರಣ| ಬಯಲಾಯ್ತು ಮತ್ತೊಂದು ಸ್ಪೋಟಕ ಮಾಹಿತಿ| ಉಗ್ರರ ಟಾರ್ಗೆಟ್ ನಲ್ಲಿ ಕರಾವಳಿಯ ಮೂರು ದೇವಾಲಯಗಳು

ಸಮಗ್ರ ನ್ಯೂಸ್: ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿಗಳು ಲಭ್ಯವಾಗುತ್ತಿವೆ. ಇದೀಗ ಉಗ್ರರ ಮತ್ತೊಂದು ಕರಾಳ ಮುಖ ಬಯಲಾಗಿದ್ದು, ‘ಹಿಂದೂ’ ದೇವಾಲಯಗಳ ಸ್ಪೋಟಕ್ಕೆ ಉಗ್ರರು ಸ್ಕೆಚ್ ಹಾಕಿದ್ದರು ಎಂಬುದು ಗೊತ್ತಾಗಿದೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯ , ಮಂಗಳಾದೇವಿ ದೇವಾಲಯ, ಮಂಜುನಾಥ ಸ್ವಾಮಿ ದೇವಾಲಯಕ್ಕೂ ಉಗ್ರರು ಸ್ಕೆಚ್ ಹಾಕಿದ್ದರು ಎಂಬ ಮಾಹಿತಿ ಬಯಲಾಗಿದೆ. ಶಾರೀಖ್ ಮೊಬೈಲ್ ತನಿಖೆ ನಡೆಸಿದ ಪೊಲೀಸರಿಗೆ ಈ ವಿಚಾರ ಗೊತ್ತಾಗಿದೆ. ಅದೇ ರೀತಿ ಮಂಗಳೂರು

ಮಂಗಳೂರು ಸ್ಪೋಟ ಪ್ರಕರಣ| ಬಯಲಾಯ್ತು ಮತ್ತೊಂದು ಸ್ಪೋಟಕ ಮಾಹಿತಿ| ಉಗ್ರರ ಟಾರ್ಗೆಟ್ ನಲ್ಲಿ ಕರಾವಳಿಯ ಮೂರು ದೇವಾಲಯಗಳು Read More »

ಮಂಗಳೂರು: ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ಮುನ್ನ ಜಿಲ್ಲೆಯ ಹಲವು ಕಡೆ ಸ್ಯಾಟಲೈಟ್ ಫೋನ್ ರಿಂಗ್…

ಸಮಗ್ರ ನ್ಯೂಸ್: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ಮುನ್ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ರಿಂಗಣಿಸಿದೆ. ಈ ಬಗೆಗಿನ ಮಾಹಿತಿ ಗುಪ್ತಚರ ಇಲಾಖೆಗೆ ಲಭಿಸಿದ್ದು, ಈ ನಿಟ್ಟಿನಲ್ಲೂ ತನಿಖೆ ಮುಂದುವರಿದಿದೆ. ನಿಷೇಧಿತ ತುರಾಯ ಸ್ಯಾಟಲೈಟ್ ಫೋನ್ ಬಳಸಲಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಸ್ಫೋಟಕ್ಕೂ ಮುನ್ನಾ ದಿನ ಅಂದರೆ ನವೆಂಬರ್‌ 18ರಂದು ಬಂಟ್ವಾಳದ ಕಕ್ಕಿಂಜೆಯಲ್ಲಿ ಸ್ಯಾಟಲೈಟ್ ಫೋನ್ ರಿಂಗಣಿಸಿದ್ದು, ನವೆಂಬರ್‌ 19ರ ಸಂಜೆ 4:29ರ ಹೊತ್ತಿಗೆ ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವಾಗಿತ್ತು.

ಮಂಗಳೂರು: ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ಮುನ್ನ ಜಿಲ್ಲೆಯ ಹಲವು ಕಡೆ ಸ್ಯಾಟಲೈಟ್ ಫೋನ್ ರಿಂಗ್… Read More »