ಕರಾವಳಿ

ಬಪ್ಪನಾಡು ದುರ್ಗಾಪರಮೇಶ್ವರಿ ಕೃಪೆಯಿಂದ ಬೆಳೆದೆ – ಸುನಿಲ್ ಶೆಟ್ಟಿ

ಸಮಗ್ರ ನ್ಯೂಸ್: ಮಂಗಳೂರಿನ ಮುಲ್ಕಿಯಲ್ಲಿ ಹುಟ್ಟಿದ್ದೆ, ಬಪ್ಪನಾಡಿನ‌ ದುರ್ಗಾ ದೇವಿಯ ಕೃಪೆಯಲ್ಲಿ ಬೆಳೆದೆ ಎಂದು ಬಾಲಿವುಡ್ ನಟ ಸುನಿಲ್ ಶೆಟ್ಟಿ ತಮ್ಮ ಬಾಲ್ಯವನ್ನು ಸ್ಮರಿಸಿಕೊಂಡರು. ಬೆಂಗಳೂರು ತಂತ್ರಜ್ಞಾನ ಸಮ್ಮೇಳನದಲ್ಲಿನ‌ ಸಂವಾದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತ, ತಂದೆಯೇ ನನ್ನ ಹೀರೋ ಆಗಿದ್ದಾರೆ. ಅವರು ತಮ್ಮ 9ನೇ ವಯಸ್ಸಿನಲ್ಲಿ ಮುಂಬೈಗೆ ತೆರಳಿ ಅನೇಕ ರೆಸ್ಟೋರೆಂಟ್‌ಗಳಲ್ಲಿ ಕೆಲಸ ಮಾಡಿದ್ದರು. ಅಲ್ಲಿ ಟೇಬಲ್ ಕ್ಲೀನ್‌ ಮಾಡುತ್ತಿದ್ದರು. ಐಸ್ ಬ್ಯಾಗ್ ಮೇಲೆ‌ ಮಲಗುತ್ತಿದ್ದರು. ಅವರು ಯಾವ ರೆಸ್ಟೋರೆಂಟ್​ನಲ್ಲಿ ಕೆಲಸ‌ ಮಾಡುತ್ತಿದ್ದರೋ ಬಳಿಕ ಅದೇ ರೆಸ್ಟೋರೆಂಟ್​​ನ‌ […]

ಬಪ್ಪನಾಡು ದುರ್ಗಾಪರಮೇಶ್ವರಿ ಕೃಪೆಯಿಂದ ಬೆಳೆದೆ – ಸುನಿಲ್ ಶೆಟ್ಟಿ Read More »

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ| ಗಾಂಜಾ ದಂಗೆಕೋರರ ಬಂಧನ;132 ಕೆಜಿ ಮಾಲು ವಶ

ಸಮಗ್ರ ನ್ಯೂಸ್: ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರಾವಳಿಯಲ್ಲಿ ಕಿಕ್ ಏರಿಸುತ್ತಿದ್ದ ಗಾಂಜಾ ದಂಧೆಕೋರರನ್ನು ಬಂಧಿಸಿದ್ದಾರೆ. ಬಂಧಿತರಿಂದ 32 ಲಕ್ಷ ರೂ. ಮೌಲ್ಯದ 132 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. 17 ರಂದು ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಹೇಂದ್ರ XUV 500 ಕಾರ್ ನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಬಂಟ್ವಾಳ ತಾಲೂಕು ನರಿಂಗಾನ ಗ್ರಾಮ ತೌಡುಗೋಳಿ ಕ್ರಾಸ್ ನಿವಾಸಿ ರಮೀಝ್ ರಾಝ್(30), ಕೇರಳದ ಕಾಸರಗೋಡು ಜಿಲ್ಲೆ

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ| ಗಾಂಜಾ ದಂಗೆಕೋರರ ಬಂಧನ;132 ಕೆಜಿ ಮಾಲು ವಶ Read More »

ಧರ್ಮಸ್ಥಳ: ಇಂದಿನಿಂದ ಲಕ್ಷದೀಪೋತ್ಸವ ಸಂಭ್ರಮ

ಸಮಗ್ರ ನ್ಯೂಸ್: ಶ್ರೀ‌‌ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷ ದೀಪೋತ್ಸವ ಕಾರ್ಯಕ್ರಮ ಆರಂಭವಾಗಲಿದ್ದು, ನವೆಂಬರ್ 23ರ ವರೆಗೆ ಇದು ನಡೆಯಲಿದೆ. ಐದು ದಿನಗಳ ಕಾಲ ನಡೆಯುವ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರತಿನಿತ್ಯ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ನವೆಂಬರ್ 19ರ ಇಂದು ರಾತ್ರಿ 9:00 ಗಂಟೆಗೆ ಹೊಸ ಕಟ್ಟೆ ಉತ್ಸವ ನಡೆಯಲಿದ್ದು, ನವೆಂಬರ್ 20 ರಂದು ಕೆರೆಕಟ್ಟೆ ಉತ್ಸವ, ನವೆಂಬರ್ 21ರಂದು ಲಲಿತೋದ್ಯಾನ ಉತ್ಸವ, ನವೆಂಬರ್ 22ರಂದು ಕಂಚಿ ಮಾರುಕಟ್ಟೆ ಉತ್ಸವ, ನವೆಂಬರ್ 23ರಂದು ಗೌರಿಮಾರು ಕಟ್ಟೆ ಉತ್ಸವ ಹಾಗೂ ನವೆಂಬರ್

ಧರ್ಮಸ್ಥಳ: ಇಂದಿನಿಂದ ಲಕ್ಷದೀಪೋತ್ಸವ ಸಂಭ್ರಮ Read More »

69 ಸಹಕಾರ ಸಪ್ತಾಹದಲ್ಲಿ‌ ಉಡುಪಿ‌ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೊಕ್| ಸಚಿವ ಎಸ್.ಅಂಗಾರರಿಗೆ ಆಮಂತ್ರಣವೇ ಇಲ್ಲ…!

ಸಮಗ್ರ ನ್ಯೂಸ್: 69ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಬಂದರು, ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರರನ್ನು ಕೈ ಬಿಟ್ಟಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಮಂಗಳೂರಿನ ಕರಾವಳಿ ಮೈದಾನದಲ್ಲಿ ನಡೆದ ರಾಜ್ಯಮಟ್ಟದ ಈ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಸೇರಿದಂತೆ ಹಲವು ಪ್ರಮುಖ ಗಣ್ಯರು ಭಾಗವಹಿಸಿದ್ದರು. ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ಸಹಕಾರ ಇಲಾಖೆ

69 ಸಹಕಾರ ಸಪ್ತಾಹದಲ್ಲಿ‌ ಉಡುಪಿ‌ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೊಕ್| ಸಚಿವ ಎಸ್.ಅಂಗಾರರಿಗೆ ಆಮಂತ್ರಣವೇ ಇಲ್ಲ…! Read More »

ಮಂಗಳೂರು: ನೇಣಿಗೆ ಕೊರಳೊಡ್ಡಿದ ಭಾಗವತ ಕೀರ್ತನ್ ವಗೆನಾಡು| ಕಾರಣ ಇಷ್ಟೇ…

ಸಮಗ್ರ ನ್ಯೂಸ್: ಯಕ್ಷಗಾನ ಭಾಗವತರೊಬ್ಬರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ನಡೆದಿದೆ. ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದ ದುರ್ದೈವಿ‌. ಇವರು ಇಂದು(ನ.18) ಮುಡಿಪು ಸಮೀಪ ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ. ಕೀರ್ತನ್ ಅವರು ಈ ಹಿಂದೆ ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಕೊರೊನ ಸಂಧರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು. ದಂಪತಿ‌ ಕಲಹ ಹಾಗೂ ಕುಡಿತದ ಚಟ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ

ಮಂಗಳೂರು: ನೇಣಿಗೆ ಕೊರಳೊಡ್ಡಿದ ಭಾಗವತ ಕೀರ್ತನ್ ವಗೆನಾಡು| ಕಾರಣ ಇಷ್ಟೇ… Read More »

ನ. 20ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ನಿರ್ಬಂಧ

ಸಮಗ್ರ ನ್ಯೂಸ್: ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾಷಷ್ಟಿ ಮಹೋತ್ಸವ ಪೂರ್ವ ಕಾರ್ಯಕ್ರಮಗಳು ನ.20ರಿಂದ ಆರಂಭಗೊಳ್ಳಲಿದ್ದು, ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ. 20ರಂದು ಬೆಳಗ್ಗೆಯಿಂದ ಮಧ್ಯಾಹ್ನ 2 ಘಂಟೆಗಳ ಕಾಲ ದರ್ಶನಕ್ಕೆ ನಿರ್ಬಂಧಿಸಲಾಗಿದೆ. ಚಂಪಾಷಷ್ಥಿ ವಾರ್ಷಿಕ ಮೂಲಮೃತ್ತಿಕೆಯ ಪ್ರಸಾದ ತೆಗೆಯುವ ಆಚರಣೆಯ ಕಾರಣದಿಂದ ದರ್ಶನಕ್ಕೆ ನಿರ್ಬಂಧ ಮಾಡಲಾಗಿದೆ. ಕಳೆದೆರಡು ವರ್ಷಗಳಿಂದ ಕರೋನಾ ಹಿನ್ನೆಲೆಯಿಂದ ಎಡೆಸ್ನಾನ ಸೇವೆಗೆ ನಿರ್ಬಂಧಿಸಲಾಗಿತ್ತು. ಈ ವರ್ಷ ಎಡೆಸ್ನಾನ ಸೇವೆಗೆ ಆವಕಾಶ ನೀಡಲಾಗಿದೆ.

ನ. 20ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ನಿರ್ಬಂಧ Read More »

“ಸುಂಕ ವಸೂಲಿ ನಿಲ್ಲುವ ತನಕ ನಿರಂತರ ಹೋರಾಟ” -ರಮಾನಾಥ್ ರೈ|ಸುರತ್ಕಲ್ ಟೋಲ್ ವಿರೋಧಿಸಿ ಕಾಲ್ನಡಿಗೆ ಜಾಥಾ

ಸಮಗ್ರ ನ್ಯೂಸ್: ಸುರತ್ಕಲ್ ಟೋಲ್ ಗೇಟ್ ವಿರೋಧಿಸಿ ಹೋರಾಟ ಸಮಿತಿ ಕಳೆದ 22 ದಿನಗಳಿಂದ ನಡೆಸುತ್ತಿರುವ ಧರಣಿ ಪ್ರತಿಭಟನೆ ಬೆಂಬಲಿಸಿ ಸಮಾನ ಮನಸ್ಕ ಸಂಘಟನೆಗಳು ಶುಕ್ರವಾರ ಸಂಜೆ ತಡಂಬೈಲ್ ಜಂಕ್ಷನ್ ನಿಂದ ಧರಣಿ ಸ್ಥಳಕ್ಕೆ ಕಾಲ್ನಡಿಗೆ ಜಾಥಾ ನಡೆಸಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತಾಡಿದ ಮಾಜಿ ಸಚಿವ ರಮಾನಾಥ್ ರೈ ಅವರು, “ಸುರತ್ಕಲ್ ಟೋಲ್ ಹೋರಾಟ ನಿರಂತರವಾಗಿ 22 ದಿನಗಳಿಂದ ನಡೆಯುತ್ತಿದ್ದು ಜನರಿಂದ ಸುಂಕ ವಸೂಲಿ ಮಾಡುವುದು ಸಂಪೂರ್ಣ ನಿಲ್ಲುವ ತನಕ ಅಹೋರಾತ್ರಿ ಧರಣಿ ಮುಂದುವರಿಯುತ್ತದೆ. ಜಿಲ್ಲೆಯ ಗ್ರಾಮೀಣ

“ಸುಂಕ ವಸೂಲಿ ನಿಲ್ಲುವ ತನಕ ನಿರಂತರ ಹೋರಾಟ” -ರಮಾನಾಥ್ ರೈ|ಸುರತ್ಕಲ್ ಟೋಲ್ ವಿರೋಧಿಸಿ ಕಾಲ್ನಡಿಗೆ ಜಾಥಾ Read More »

ಉಡುಪಿ: ಭಾರತದ ತಂಟೆಗೆ ಬಂದ್ರೆ ನಾವು ಮುಖಮೂತಿ ನೋಡಲ್ಲ|ಶತ್ರು ರಾಷ್ಟ್ರಗಳಿಗೆ ರಾಜನಾಥ್ ಸಿಂಗ್ ಎಚ್ಚರಿಕೆ

ಸಮಗ್ರ ನ್ಯೂಸ್: ಆ ಕಾಲ ಹೋಯ್ತು..ಇಡೀ ಪ್ರಪಂಚ ಭಾರತದ ಮಾತು ಕೇಳುವ ಕಾಲ ಬಂದಿದೆ ಹಾಗಾಗಿ ಭಾರತದ ತಂಟೆಗೆ ಬಂದ್ರೆ ನಾವು ಮುಖಮೂತಿ ನೋಡಲ್ಲ ಎಂದು ಶತ್ರು ರಾಷ್ಟ್ರಗಳಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಉಡುಪಿಯ ಮಣಿಪಾಲ ಮಾಹೆ ವಿವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾಜನಾಥ್ ಸಿಂಗ್, ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಐದು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಿ ಮಾತನಾಡಿದರು. ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು

ಉಡುಪಿ: ಭಾರತದ ತಂಟೆಗೆ ಬಂದ್ರೆ ನಾವು ಮುಖಮೂತಿ ನೋಡಲ್ಲ|ಶತ್ರು ರಾಷ್ಟ್ರಗಳಿಗೆ ರಾಜನಾಥ್ ಸಿಂಗ್ ಎಚ್ಚರಿಕೆ Read More »

ಸೀಟು ಬಿಟ್ಟು ಕೊಡಲು ಅದು ಬಸ್ಸ್ ನ ಸೀಟ್ ಅಲ್ಲಾ|ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಶಕುಂತಲಾ ಶೆಟ್ಟಿ ವ್ಯಂಗ್ಯ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅಭ್ಯರ್ಥಿತನ ಬಿಟ್ಟು ಕೊಡುವ ಪ್ರಮಾಣ ಮಾಡಿದ ವಿಚಾರ ಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ವ್ಯಂಗ್ಯವಾಡಿದ್ದಾರೆ. ಸೀಟು ಬಿಟ್ಟು ಕೊಡಲು ಅದು ಬಸ್ಸ್ ನ ಸೀಟ್ ಅಲ್ಲಾ, ಹೈಕಮಾಂಡ್ ತೀರ್ಮಾನಿಸಿ ಕೊಡುವ ಅಭ್ಯರ್ಥಿತನದ ಸೀಟು, ನಾನು ಈ ಬಾರಿ ಹೇಮನಾಥ ಶೆಟ್ಟಿಗೆ ಅಭ್ಯರ್ಥಿತನ ಬಿಟ್ಟುಕೊಡುವುದಾಗಿ ಪ್ರಮಾಣ ಮಾಡಿಯೇ ಇಲ್ಲ, ಹೀಗೆ ಪ್ರಮಾಣ ಮಾಡುವ

ಸೀಟು ಬಿಟ್ಟು ಕೊಡಲು ಅದು ಬಸ್ಸ್ ನ ಸೀಟ್ ಅಲ್ಲಾ|ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಶಕುಂತಲಾ ಶೆಟ್ಟಿ ವ್ಯಂಗ್ಯ Read More »

ಬಂಟ್ವಾಳ: ಮಗಳನ್ನೇ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ

ಸಮಗ್ರ ನ್ಯೂಸ್: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ರಾಮನಿವಾಸ ನಿವಾಸಿ ವೆಂಕಟೇಶ ಕಾರಂತ ಆರೋಪಿ. ವೆಂಕಟೇಶ ಕಾರಂತ ಅವರು ತುಂಬೆ ಪುರೋಹಿತ ಕೆಲಸ ಮಾಡುತ್ತಿದ್ದು, ಮಗಳ ಮೇಲೆಯೇ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಾಲಕಿಗೆ ವೆಂಕಟೇಶ ಕಾರಂತ ಅವರು ಮಲತಂದೆ ಸಂಬಂಧಿ ಎಂದು ತಿಳಿದುಬಂದಿದೆ. ಬಾಲಕಿಯ ತಂದೆ

ಬಂಟ್ವಾಳ: ಮಗಳನ್ನೇ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ Read More »