ಕರಾವಳಿ

ಚಾರ್ಮಾಡಿ ಘಾಟ್ ನಲ್ಲಿ ಹಂದಿಗಳ ಕಳೇಬರ| ಮೂಗು ಮುಚ್ಚಿಕೊಂಡು ಓಡಾಡುವ ಪ್ರಯಾಣಿಕರು

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟ್‍ನ ಮಲಯಮಾರುತ ಸಮೀಪ ಕಿಡಿಗೇಡಿಗಳು ರಸ್ತೆ ಬದಿಯಲ್ಲಿ ಹಂದಿಗಳ ಕಳೇಬರವನ್ನು ಎಸೆದು ಹೋದ ಘಟನೆ ನಡೆದಿದೆ. ನಾಲ್ಕಕ್ಕೂ ಹೆಚ್ಚು ಬಾರಿ ಗಾತ್ರ ಹಂದಿಗಳನ್ನು ಎಸೆದು ಹೋಗಿದ್ದು ರಸ್ತೆ ಬದಿಯಲ್ಲಿ ಎಸೆದಿರುವುದರಿಂದ ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ.ಸಮೀಪದಲ್ಲೆ ತೊರೆಯೊಂದು ಹರಿಯುತ್ತಿದ್ದು ಹಂದಿಯ ಕಳೇಬರ ಕೊಳೆತು ತೊರೆಯನ್ನು ಸೇರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಮಂಗಳೂರು ಕಡೆಗೆ ಹಂದಿಗಳನ್ನು ಸಾಗಾಟ ಮಾಡುವ ವಾಹನ ಚಾಲಕರು ಸತ್ತ ಹಂದಿಗಳನ್ನು ಹೀಗೆ ಎಸೆದು […]

ಚಾರ್ಮಾಡಿ ಘಾಟ್ ನಲ್ಲಿ ಹಂದಿಗಳ ಕಳೇಬರ| ಮೂಗು ಮುಚ್ಚಿಕೊಂಡು ಓಡಾಡುವ ಪ್ರಯಾಣಿಕರು Read More »

“ವಶೀಕರಣ ಸ್ಪೆಷಲಿಸ್ಟ್ಗೆ” ಮಹಾ ಮಂಗಳಾರತಿ|ನಕಲಿ ಜ್ಯೋತಿಷಿಯ ಚಳಿ ಬಿಡಿಸಿದ ಸಾಮಾಜಿಕ ಕಾರ್ಯಕರ್ತ

ಸಮಗ್ರ ನ್ಯೂಸ್: ಸೋಷಿಯಲ್ ಮೀಡಿಯಾದಲ್ಲಿ “ವಶೀಕರಣ ಸ್ಪೆಷಲಿಸ್ಟ್” ಎಂದು ತೀರಾ ಅಶ್ಲೀಲವಾಗಿ ಜಾಹೀರಾತು ಹಾಕಿಕೊಂಡಿದ್ದಲ್ಲದೆ ಮಂಗಳೂರಿನ ಸ್ಟೇಟ್ ಬ್ಯಾಂಕ್, ಹಂಪನಕಟ್ಟೆ ಹಾಗೂ ಉಡುಪಿಯನ್ನು ಕಾರ್ಯಸ್ಥಾನ ಮಾಡಿಕೊಂಡಿದ್ದ ನಕಲಿ ಜ್ಯೋತಿಷಿಗೆ ಸಾಮಾಜಿಕ ಕಾರ್ಯಕರ್ತ ದೀಪು ಶೆಟ್ಟಿಗಾರ್ ಎಂಬವರು ಮಂಗಳಾರತಿ ಮಾಡಿದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಕೇರಳ, ಶಿವಮೊಗ್ಗ, ಭದ್ರಾವತಿ, ಮೈಸೂರು, ಬೆಂಗಳೂರು, ಕೊಳ್ಳೇಗಾಲ ಕಡೆಯಿಂದ ಮಂಗಳೂರಿಗೆ ವಕ್ಕರಿಸುವ ಇವರು ಆಡಿದ್ದೇ ಆಟ ಎಂಬಂತಾಗಿದ್ದು ನಗರದ ಪ್ರಮುಖ ನಿಲ್ದಾಣಗಳಲ್ಲಿ ಲಾಡ್ಜ್, ಎಸಿ ರೂಮ್‌ಗಳಲ್ಲಿ

“ವಶೀಕರಣ ಸ್ಪೆಷಲಿಸ್ಟ್ಗೆ” ಮಹಾ ಮಂಗಳಾರತಿ|ನಕಲಿ ಜ್ಯೋತಿಷಿಯ ಚಳಿ ಬಿಡಿಸಿದ ಸಾಮಾಜಿಕ ಕಾರ್ಯಕರ್ತ Read More »

ಸುಳ್ಯ: ಕಾಂಗ್ರೆಸ್ ಬಿಜೆಪಿ ಮಧ್ಯೆ ಜಂಗಿಕುಸ್ತಿ| ನೀರಿಗಾಗಿ ಚುನಾವಣೆ ಬಹಿಷ್ಕರಿಸಿದ ಬಡ ಕುಟುಂಬ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕುದ್ಪಾಜೆ ಎಂಬಲ್ಲಿ ದಲಿತ ನಿವಾಸಿಗಳಿಗೆ ಕಾಂಗ್ರೆಸ್ ಬಿಜೆಪಿಯವರ ಜಂಗಿಕುಸ್ತಿಯಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಈ ಹಿನ್ನಲೆ ಮುಂದಿನ ದಿನಗಳಲ್ಲಿ ಬರುವ ಚುನಾವಣೆಗೆ ಮತದಾನವನ್ನು ಬಹಿಷ್ಕರಿಸಿ ಬ್ಯಾನರ್ ಅಳವಡಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕುದ್ಪಾಜೆಯ ದಲಿತ ನಿವಾಸಿಗಳು ಕುಡಿಯಲು ನೀರು ಇಲ್ಲದೆ ತುಂಬಾ ತೊಂದರೆ ಉಂಟಾಗಿದ್ದು ಈ ಕಾರಣ ಗಂಗಾಕಲ್ಯಾಣ ಯೋಜನೆ ಅಡಿಯಲ್ಲಿ ಬೋರ್ವೆಲ್ ಕೊರೆಯಲು ಗುರುತು ಮಾಡಿದ್ದರು. ಈ ನಡುವೆ ಕಾಂಗ್ರೆಸ್ ಪಕ್ಷದವರು ನಾವು ಹೇಳಿದ ಜಾಗದಲ್ಲಿ ಬೋರ್ವೆಲ್ ಕೊರೆಯಬೇಕು,

ಸುಳ್ಯ: ಕಾಂಗ್ರೆಸ್ ಬಿಜೆಪಿ ಮಧ್ಯೆ ಜಂಗಿಕುಸ್ತಿ| ನೀರಿಗಾಗಿ ಚುನಾವಣೆ ಬಹಿಷ್ಕರಿಸಿದ ಬಡ ಕುಟುಂಬ Read More »

ಕರಾವಳಿ ನಿಯಂತ್ರಣ ವಲಯದಲ್ಲಿ(CRZ) ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ| ದ.ಕ‌ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಹಸಿರು ನಿಶಾನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ನಿಯಂತ್ರಣ ವಲಯದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಪುನರಾರಂಭಿಸಲು ಜಿಲ್ಲಾಡಳಿತ ಮತ್ತೆ ಹಸಿರು ನಿಶಾನೆ ತೋರಿದೆ. ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಏಳು ಸದಸ್ಯರ ಸಮಿತಿಯ ಸಭೆಯಲ್ಲಿ ಸಿಆರ್‌ಜೆಡ್‌ ವಲಯದಲ್ಲೂ ಮರಳುಗಾರಿಕೆ ನಡೆಸಲು ಅನುಮತಿ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ಸಿಆರ್‌ಜೆಡ್‌ ವಲಯದಲ್ಲಿ ನೇತ್ರಾವತಿ ಮತ್ತು ಫಲ್ಗುಣಿ ನದಿಗಳಲ್ಲಿ ಮರಳು ದಿಬ್ಬ ತೆರವುಗೊಳಿಸಲು ಜಿಲ್ಲಾಡಳಿತವು 14 ಕಡೆ ಸ್ಥಳಗಳನ್ನು ಗುರುತಿಸಿತ್ತು. ಅಲ್ಲಿ ಸಾಂಪ್ರದಾಯಿಕವಾಗಿ ಮರಳುಗಾರಿಕೆಗೆ ಅನುಮತಿ ನೀಡಲು ಜಿಲ್ಲಾಡಳಿತವು ಮೇ

ಕರಾವಳಿ ನಿಯಂತ್ರಣ ವಲಯದಲ್ಲಿ(CRZ) ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ| ದ.ಕ‌ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಹಸಿರು ನಿಶಾನೆ Read More »

ಉಡುಪಿ: ಬೈಕ್- ಟಿಪ್ಪರ್ ಡಿಕ್ಕಿ: ಯುವತಿ ಸಾವು, ಯುವಕ ಪಾರು

ಸಮಗ್ರ ನ್ಯೂಸ್ : ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ರಿಕ್ಷಾ ನಿಲ್ದಾಣ ಬಳಿ ಟಿಪ್ಪರ್ ಒಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಯುವತಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತ ಪಟ್ಟ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಯುವಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಮೃತ ಯುವತಿಯನ್ನು ಪಡುಬಿದ್ರಿ ಕಂಚುನಡ್ಕದ ನಿವಾಸಿ ನಿಹಾಲ ಮತ್ತು ಯುವಕನನ್ನು ಬೆಳಪುವಿನ ಷರೀಫ್ ಎಂದು ಗುರುತಿಸಲಾಗಿದೆ. ಅವರಿಗೆ ಮದುವೆ ನಿಶ್ಚಯವಾಗಿದ್ದು, ಉಡುಪಿ ಕಡೆಯಿಂದ ಅವರು ತಮ್ಮ ಪಲ್ಸರ್ ಬೈಕನ್ನಲ್ಲಿ

ಉಡುಪಿ: ಬೈಕ್- ಟಿಪ್ಪರ್ ಡಿಕ್ಕಿ: ಯುವತಿ ಸಾವು, ಯುವಕ ಪಾರು Read More »

ಕುಕ್ಕೆ ಸುಬ್ರಹ್ಮಣ್ಯ: ಚಂಪಾ ಷಷ್ಠಿಯಲ್ಲಿ ಎಡೆಸ್ನಾನಕ್ಕೆ ಅವಕಾಶ

ಸಮಗ್ರ ನ್ಯೂಸ್: ಕೊರೊನಾ ಹಿನ್ನೆಲೆ ಕಳೆದೆರಡು ವರ್ಷಗಳಿಂದ ನಿರ್ಬಂಧಿಸಲಾಗಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿನ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಸಚಿವ ಎಸ್‌ ಅಂಗಾರ ನೇತೃತ್ವದಲ್ಲಿ ಚಂಪಾ ಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನ ಪಾಲಿಸಿಕೊಂಡು ಸೇವೆಗೆ ಅವಕಾಶ ನೀಡಲು ತೀರ್ಮಾನಿಸಲಾಯಿತು. ಕೊರೊನಾ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ನಿರ್ಬಂಧಿಸಲಾಗಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿನ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಈ ಬಾರಿ ಅವಕಾಶ ನೀಡಲು ಸಮ್ಮತಿಸಲಾಯಿತು. ಕುಕ್ಕೆ ಶ್ರೀ

ಕುಕ್ಕೆ ಸುಬ್ರಹ್ಮಣ್ಯ: ಚಂಪಾ ಷಷ್ಠಿಯಲ್ಲಿ ಎಡೆಸ್ನಾನಕ್ಕೆ ಅವಕಾಶ Read More »

ಮಂಗಳೂರು ಉತ್ತರದಲ್ಲಿ “ಟಿಕೆಟ್”ಗಾಗಿ ಜಂಗೀಕುಸ್ತಿ!

ಕೈ ಪಾಳಯದಲ್ಲಿ ಬಿರುಸಿನ ಕಸರತ್ತು, ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿ ಇನಾಯತ್ ಅಲಿ ಅರ್ಜಿ ಸಲ್ಲಿಕೆ ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಇನ್ನೇನು ಕೆಲವೇ ತಿಂಗಳಲ್ಲಿ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಡಿಸೆಂಬರ್ ಮೊದಲ ವಾರದಲ್ಲಿ ಬಿಡುಗಡೆ ಮಾಡೋದಾಗಿ ಕಾಂಗ್ರೆಸ್ ವರಿಷ್ಠ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮಧ್ಯೆ ಟಿಕೆಟ್ ಗಾಗಿ ಆಕಾಂಕ್ಷಿಗಳ ಮಧ್ಯೆ ಜಂಗೀಕುಸ್ತಿ ಆರಂಭವಾಗಿದ್ದು ಮಾಜಿಗಳ ಜೊತೆಗೆ ಹೊಸ ಮುಖಗಳು ಟಿಕೆಟ್ ಗಿಟ್ಟಿಸಿಕೊಳ್ಳಲು ಪ್ರಬಲ ಪೈಪೋಟಿಯಲ್ಲಿ ನಿರತರಾಗಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಳೆದ ಬಾರಿ ಮಾಜಿ

ಮಂಗಳೂರು ಉತ್ತರದಲ್ಲಿ “ಟಿಕೆಟ್”ಗಾಗಿ ಜಂಗೀಕುಸ್ತಿ! Read More »

ಬಂಟ್ವಾಳ:ದಿಢೀರ್ ಏರಿಕೆಯಾದ ನೀರಿನ ಹರಿವು|ಹೊಳೆ ಮಧ್ಯದಲ್ಲಿ ಬಾಕಿಯಾದ ಲಾರಿ

ಸಮಗ್ರ ನ್ಯೂಸ್: ನದಿ ನೀರಿನ ಹರಿವು ದಿಢೀರ್ ಏರಿಕೆಯಾಗಿ ಸೇತುವೆ ನಿರ್ಮಾಣ ಕಾಮಗಾರಿನಿರತ ಲಾರಿಯೊಂದಿ ಹೊಳೆ ಮಧ್ಯದಲ್ಲಿ ಬಾಕಿಯಾದ ಘಟನೆ ಪಾಣೆಮಂಗಳೂರಿನ ನೇತ್ರಾವತಿ ನದಿಯಲ್ಲಿ ಮಂಗಳವಾರ ನಡೆದಿದೆ. ಮಳೆಯ ಹಿನ್ನಲೆಯಲ್ಲಿ ಸೇತುವೆಯ ಬಾಕಿಯುಳಿದ ಪಿಲ್ಲರ್‌ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಿ ಇದೀಗ ಮತ್ತೆ ಕಾಮಗಾರಿ ಆರಂಭಿಸಲಾಗಿತ್ತು. ಹೀಗಾಗಿ ಮಂಗಳವಾರ ನದಿಗೆ ಮಣ್ಣು ಹಾಕಿ ಲಾರಿ ನದಿಯಿಂದ ಹಿಂತಿರುಗುತ್ತಿದ್ದ ವೇಳೆ ಏಕಾಏಕಿ ನದಿ ನೀರು ಹೆಚ್ಚಳವಾಗಿದೆ. ಅಲ್ಲದೆ ಒಂದು ಭಾಗದ ಮಣ್ಣು ಕೂಡಾ ಕೊಚ್ಚಿ ಹೋಗಿದೆ. ಇದರಿಂದ ದಡಕ್ಕೆ ಬರಲಾಗದೆ

ಬಂಟ್ವಾಳ:ದಿಢೀರ್ ಏರಿಕೆಯಾದ ನೀರಿನ ಹರಿವು|ಹೊಳೆ ಮಧ್ಯದಲ್ಲಿ ಬಾಕಿಯಾದ ಲಾರಿ Read More »

ಮಹರಾಷ್ಟ್ರದಲ್ಲಿ ಅಪಘಾತ| ಸುರತ್ಕಲ್‌‌ನ ಯುವಕ ಮೃತ್ಯು

ಸಮಗ್ರ ನ್ಯೂಸ್: ಮಂಗಳೂರಿನಿಂದ ಮುಂಬೈಗೆ ಹೋಗುತ್ತಿದ್ದ ಮೀನಿನ ಲಾರಿಯೊಂದು ಮಹರಾಷ್ಟ್ರದ ಖಂಡಾಲಾ ಘಾಟ್ ಬಳಿ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಲಾರಿ ಚಾಲಕ ಸುರತ್ಕಲ್‌‌ನ ಕೃಷ್ಣಾಪುರದ ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಕೃಷ್ಣಾಪುರ ನಿವಾಸಿ ಅಲ್ತಾಫ್ ಹುಸೇನ್ ಅವರ ಪುತ್ರ ಅಜ್ಮಲ್ (23) ಮೃತಪಟ್ಟ ಲಾರಿ ಚಾಲಕ. ಕುಂದಾಪುರ ಮೂಲದ ಲಾರಿಯಲ್ಲಿ ನಿನ್ನೆ ರಾತ್ರಿ ಅಜ್ಮಲ್ ಚಾಲಕನಾಗಿ ಮುಂಬೈಗೆ ತೆರಳಿದ್ದು, ಇಂದು ಖಂಡಾಲಾ ಘಾಟ್ ನಲ್ಲಿ ಲಾರಿ ಉರುಳಿಬಿದ್ದಿದೆ. ಚಾಲಕ ಅಜ್ಮಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ

ಮಹರಾಷ್ಟ್ರದಲ್ಲಿ ಅಪಘಾತ| ಸುರತ್ಕಲ್‌‌ನ ಯುವಕ ಮೃತ್ಯು Read More »

ಕರಾವಳಿಯ ದೈವಸ್ಥಾನಗಳಿಗೆ ಭೇಟಿ ನೀಡಿದ ಸಪ್ತಮಿ ಗೌಡ

ಸಮಗ್ರ ನ್ಯೂಸ್: ಕಾಂತಾರ ಚಿತ್ರ 50ನೇ ದಿನ ಪೂರೈಸಿದ ದಾಖಲೆ ಬರೆಯುತ್ತಿರುವ ಬೆನ್ನಲ್ಲೇ ಕಾಂತಾರದ ನಟಿ ಲೀಲಾ ಇದೀಗ ಕರಾವಳಿಯ ದೈವಸ್ಥಾನಗಳಿಗೆ ಭೇಟಿ ನೀಡಿದರು. ಮಂಗಳೂರಿನ ಕಲ್ಲಾಪು ಬಳಿಯ ಬುರ್ದುಗೋಳಿಯ ಗುಳಿಗ ದೈವಸ್ಥಾನ, ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳ ಹಾಗೂ ಈ ಭಾಗದ ಕೆಲವು ದೈವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಕುಟುಂಬ ಸದಸ್ಯರು, ಸಿನಿಮಾದ ಸಹನಟರು ಹಾಗೂ ಸ್ನೇಹಿತರೊಂದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬುರ್ದುಗೋಳಿ ಆದಿಸ್ಥಳ ಕ್ಷೇತ್ರದ ಸಮಿತಿ ಅಧ್ಯಕ್ಷರಾದ ವಿಶ್ವನಾಥ್ ನಾಯ್ಕ್ ಅವರು

ಕರಾವಳಿಯ ದೈವಸ್ಥಾನಗಳಿಗೆ ಭೇಟಿ ನೀಡಿದ ಸಪ್ತಮಿ ಗೌಡ Read More »