ಕರಾವಳಿ

ಪುತ್ತೂರಲ್ಲಿ ಹೀಗೂ ಉಂಟು! ಪೊದೆಯೊಳಗೆ ಅಡಗಿ ಕುಳಿತ ಬಸ್ ನಿಲ್ದಾಣ

ಸಮಗ್ರ ನ್ಯೂಸ್: ಇಲ್ಲಿ ಪೊದೆಯೊಳಗೆ ಬಸ್ ತಂಗುದಾಣವೊಂದು ಅಡಗಿ‌ ಕುಳಿತಿದೆ. ಇದು ಕಂಡು ಬಂದಿರುವುದು ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪೆರಿಗೇರಿ, ಕನ್ನಾಯ ಎಂಬಲ್ಲಿ. ಹೌದು, ಇಲ್ಲಿಯ ಪ್ರಯಾಣಿಕರು ಬಸ್ ತಂಗುದಾಣ ಇದ್ದರೂ ಕೂಡ ರಸ್ತೆ ಬದಿ ನಿಲ್ಲುವಂತಾಗಿದೆ. ಇದಕ್ಕೆ ಕಾರಣ ಅಲ್ಲಿಯ ಬಸ್ ನಿಲ್ದಾಣ ಇರುವುದು ಪೊದೆಯೊಳಗೆ. ಈ ಬಗ್ಗೆ ಇಲ್ಲಿ ಯಾರು ಹೇಳೊರಿಲ್ಲ! ಕೇಳೊರಿಲ್ಲ! ಇದರಿಂದ ಪ್ರತಿದಿನ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಪ್ರಯಾಣಿಕರು ರಸ್ತೆ ಬದಿ ನಿಲ್ಲುವಂತಾಗಿದೆ. ಮಧ್ಯಾಹ್ನದ ಬಿಸಿಲಿಗೆ ಬಸ್ ಗಾಗಿ ಕಾದು […]

ಪುತ್ತೂರಲ್ಲಿ ಹೀಗೂ ಉಂಟು! ಪೊದೆಯೊಳಗೆ ಅಡಗಿ ಕುಳಿತ ಬಸ್ ನಿಲ್ದಾಣ Read More »

ಮುದ್ದು ಮೂಡುಬೆಳ್ಳೆಗೆ ರಂಗಚಾವಡಿ ಪ್ರಶಸ್ತಿಯ ಗರಿ

ಸಮಗ್ರ ನ್ಯೂಸ್: ಈ ಬಾರಿಯ ಪ್ರತಿಷ್ಠಿತ ರಂಗ ಚಾವಡಿ 2022 ಪ್ರಶಸ್ತಿಗೆ ಸಾಹಿತಿ ಜಾನಪದ ವಿದ್ವಾಂಸರಾದ ಮುದ್ದು ಮೂಡುಬೆಳ್ಳೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ನ. 20 ರಂದು ಭಾನುವಾರ ಸಂಜೆ 4.30ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಮುದ್ದು ಮೂಡುಬೆಳ್ಳೆ ಅವರು ಬಹುಮುಖ ಪ್ರತಿಭಾವಂತರು ಹಾಗೂ ಬೇರೆ ಬೇರೆ ರಂಗಗಳಲ್ಲಿ ಸೇವೆ ಸಲ್ಲಿಸಿ ಗಮನ ಸೆಳೆದವರು ಹಾಗೂ ಸೆಳೆಯುತ್ತಿರುವವರು. ಸುಮಾರು 16ರ ಪ್ರಾಯದಿಂದಲೇ ಕೆಲಸ ಮತ್ತು ಶಿಕ್ಷಣ – ಜೊತೆಗೆ ನಡೆದು ಬಂತು. ತುಳು ನಾಡು,

ಮುದ್ದು ಮೂಡುಬೆಳ್ಳೆಗೆ ರಂಗಚಾವಡಿ ಪ್ರಶಸ್ತಿಯ ಗರಿ Read More »

ಕುಂದಾಪುರ: ಸಿಎಂ ಸಮಾವೇಶದಲ್ಲಿ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಆದೇಶಿಸಿದ್ದ ಬಿ.ಇ.ಒ. ಅಮಾನತು

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಭಾಗವಹಿಸಿದ ಸಮಾವೇಶದಲ್ಲಿ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಆದೇಶಿಸಿದ್ದ ಬಿ.ಇ.ಒ. ಅವರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ನವೆಂಬರ್ 7ರಂದು ಬೈಂದೂರು ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ನಡೆದ ಮುಖ್ಯಮಂತ್ರಿಗಳ ಸಮಾವೇಶಕ್ಕೆ ಬೈಂದೂರು ವಲಯದ ಎಲ್ಲಾ ಶಿಕ್ಷಕರು ಭಾಗವಹಿಸುವಂತೆ ಮತ್ತು ಶಾಲಾ ಪೋಷಕರನ್ನು ಕರೆತರುವಂತೆ ಆದೇಶಿಸಿದ ಬೈಂದೂರು ಬಿ.ಇ.ಓ. ಮಂಜುನಾಥ್ ತಿಳಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ

ಕುಂದಾಪುರ: ಸಿಎಂ ಸಮಾವೇಶದಲ್ಲಿ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಆದೇಶಿಸಿದ್ದ ಬಿ.ಇ.ಒ. ಅಮಾನತು Read More »

ಪುತ್ತೂರು: ವಸತಿ ಶಾಲೆಯಿಂದ ಕಾಣೆಯಾದ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆ

ಸಮಗ್ರ ನ್ಯೂಸ್: ಪುತ್ತೂರಿನ ವಸತಿ ಶಾಲೆಯೊಂದರಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮೈಸೂರಿನ ತಿಪ್ಪೇಶ(15 ವರ್ಷ) ಮತ್ತು ಅಭಿಷೇಕ್‌(15 ವರ್ಷ) ನವಂಬರ್ 7ರಂದು ಪುತ್ತೂರಿನ ವಸತಿ ಶಾಲೆಯೊಂದರಿಂದ ನಾಪತ್ತೆಯಾಗಿದ್ದರು. ಕಾಣೆಯಾದ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,. ಈ ಪ್ರಕರಣದಲ್ಲಿ ಕಾಣೆಯಾದ ಮಕ್ಕಳ ಪತ್ತೆಯ ಬಗ್ಗೆ ಪೊಲೀಸ್‌ ಅಧೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರ ನಿರ್ದೆಶನದಲ್ಲಿ, ಪೊಲೀಸ್‌ ಉಪಾಧೀಕ್ಷಕರು, ಪುತ್ತೂರು ಉಪವಿಭಾಗರವರ ಮಾರ್ಗದರ್ಶನದಲ್ಲಿ ದ.ಕ ಮಹಿಳಾ

ಪುತ್ತೂರು: ವಸತಿ ಶಾಲೆಯಿಂದ ಕಾಣೆಯಾದ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆ Read More »

ಮಂಗಳೂರು: ಪ್ರತಿಭಾ ಕುಳಾಯಿ ಕುರಿತು ಜಾಲತಾಣಗಳಲ್ಲಿ ಅವಹೇಳನ| ಪತ್ರಕರ್ತ ಶ್ಯಾಮಸುದರ್ಶನ್ ಗೆ ನಿರೀಕ್ಷಣಾ ಜಾಮೀನು

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಸಂಯೋಜಕಿ ಪ್ರತಿಭಾ ಕುಳಾಯಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ್ದ ಪ್ರಕರಣದ ಆರೋಪಿಯಾಗಿರುವ ಪುತ್ತೂರಿನ ಖಾಸಗಿ ನ್ಯೂಸ್ ಚಾನೆಲ್ ನ ಸಂಪಾದಕ ಶ್ಯಾಮಸುದರ್ಶನ್ ಭಟ್ ಹೊಸಮೂಲೆ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ನ.9ರಂದು ಆದೇಶಿಸಿದೆ. ಶ್ಯಾಮಸುದರ್ಶನ ಭಟ್ ಹೊಸಮೂಲೆ ಅವರು ನಿರೀಕ್ಷಣಾ ಜಾಮೀನು ಕೋರಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಅ.25ರಂದು ಅರ್ಜಿ

ಮಂಗಳೂರು: ಪ್ರತಿಭಾ ಕುಳಾಯಿ ಕುರಿತು ಜಾಲತಾಣಗಳಲ್ಲಿ ಅವಹೇಳನ| ಪತ್ರಕರ್ತ ಶ್ಯಾಮಸುದರ್ಶನ್ ಗೆ ನಿರೀಕ್ಷಣಾ ಜಾಮೀನು Read More »

ಜ.1ರಿಂದ ಕರಾವಳಿ ಜಿಲ್ಲೆಗಳಿಗೆ ಪಡಿತರದಲ್ಲಿ ಕುಚ್ಚಿಲಕ್ಕಿ ವಿತರಣೆಗೆ ಗ್ರೀನ್ ಸಿಗ್ನಲ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ವರ್ಷದ ಜ. 1ರಿಂದ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಕರಾವಳಿ ಜಿಲ್ಲೆಗಳ ಜನರು ಪಡಿತರ ಮೂಲಕ ಕುಚಲಕ್ಕಿಯನ್ನು ನೀಡುವಂತೆ ಬಹಳ ಹಿಂದಿನಿಂದಲೂ ಬೇಡಿಕೆ ಇಟ್ಟಿದ್ದರು. ಇದನ್ನು ಗಮನಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರವಾಳಿ ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಣೆಗೆ ಸಹಮತಿ ವ್ಯಕ್ತಪಡಿಸಿದ್ದಾರೆ

ಜ.1ರಿಂದ ಕರಾವಳಿ ಜಿಲ್ಲೆಗಳಿಗೆ ಪಡಿತರದಲ್ಲಿ ಕುಚ್ಚಿಲಕ್ಕಿ ವಿತರಣೆಗೆ ಗ್ರೀನ್ ಸಿಗ್ನಲ್ Read More »

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಹೆಬ್ಬಾವು ಪ್ರತ್ಯಕ್ಷ | ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ

ಕೊಟ್ಟಿಗೆಹಾರ: ಕಳೆದ ಒಂದು ವಾರದ ಹಿಂದೆ ಚಾರ್ಮಾಡಿ ಘಾಟ್ ನಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವೊಂದು ಮತ್ತೆ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ನೀಡಿದೆ. ಯಾವುದೋ ಪ್ರಾಣಿಯೊಂದನ್ನು ನುಂಗಿ ರಸ್ತೆಯ ಒಂದು ಬದಿಯಲ್ಲಿದ್ದ ಹೆಬ್ಬಾವಿನ ವೀಡಿಯೋ ವನ್ನು ಈ ಭಾಗವಾಗಿ ಪ್ರಯಾಣಿಸುತ್ತಿದ್ದ ಪ್ರವಾಸಿಗರಾದ ಅರೆನೂರು ಸುಪ್ರೀತ್ ಎಂಬುವವರು ಸೆರೆ ಹಿಡಿದಿದ್ದಾರೆ. ವಾರದ ಹಿಂದೆಯಷ್ಟೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ಮತ್ತೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಹೆಬ್ಬಾವು ಪ್ರತ್ಯಕ್ಷ | ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ Read More »

ಕಡಬ: ಅಟೋ ರಿಕ್ಷಾ- ಪಿಕಪ್ ನಡುವೆ ಅಪಘಾತ| 4 ವರ್ಷದ ಕಂದಮ್ಮನ ಬಲಿ ಪಡೆದ‌ ಜವರಾಯ

ಸಮಗ್ರ ನ್ಯೂಸ್: ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ 4ವರ್ಷದ ಬಾಲಕ ಮೃತಪಟ್ಟ ಘಟನೆ ಕಡಬ ತಾಲೂಕಿನ ಕಡಬ – ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಕಡಬದಿಂದ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ನವೀನ್ ಎಂಬವರ ಪುತ್ರ ಹಾರ್ದಿಕ್ (4) ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ

ಕಡಬ: ಅಟೋ ರಿಕ್ಷಾ- ಪಿಕಪ್ ನಡುವೆ ಅಪಘಾತ| 4 ವರ್ಷದ ಕಂದಮ್ಮನ ಬಲಿ ಪಡೆದ‌ ಜವರಾಯ Read More »

ಉಡುಪಿ: 100 ರೂಪಾಯಿ ಚಡ್ಡಿಗಾಗಿ ಸಮುದ್ರಕ್ಕೆ ಹಾರಿದ ಯುವಕ|ಬೋಟಿನಿಂದ ರಕ್ಷಣೆ

ಸಮಗ್ರ ನ್ಯೂಸ್: ನೀರಿಗೆ ಬಿದ್ದ ಚಡ್ಡಿಯನ್ನು ತೆಗೆಯಲು ಇಳಿದ ಯುವಕನೊಬ್ಬ ಮೇಲಕ್ಕೆ ಬಾರಲಾಗದೇ ನಗೆಪಾಟಲೀಗೀಡಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ನೀರಿಗೆ ಇಳಿದ ಯುವಕನನ್ನು ಬೋಟಿನಲ್ಲಿದ್ದ ಯುವಕರು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಮೇಲ್ಭಾಗದಲ್ಲಿದ್ದವರು ಎಂತಾ ಕರ್ಮ ಮಾರಾಯ…ಚಡ್ಡಿ ತೆಗೆಯಲು ಯಾರಾದರು ನೀರಿಗೆ ಹಾರ್ತಾರಾ…ಅದು ನೂರು ರೂಪಾಯಿಗೆ ಸಿಗುತ್ತದೆ….ಎಂದು ಹೇಳುವುದು ಕೂಡಾ ವಿಡಿಯೋದಲ್ಲಿ ಕೇಳುತ್ತಿದೆ. ಕರಾವಳಿಯ ಮೀನುಗಾರಿಕಾ ಬಂದರೊಂದರಲ್ಲಿ ನಡೆದ ಪ್ರಸಂಗ ಇದು. ಮೀನುಗಾರಿಕೆ ದೋಣಿಯ ಕಾರ್ಮಿಕರೊಬ್ಬರ ಅಂಡರ್ ವೇರ್ ನೀರಿಗೆ ಬಿದ್ದಿದ್ದು, ಅದನ್ನು

ಉಡುಪಿ: 100 ರೂಪಾಯಿ ಚಡ್ಡಿಗಾಗಿ ಸಮುದ್ರಕ್ಕೆ ಹಾರಿದ ಯುವಕ|ಬೋಟಿನಿಂದ ರಕ್ಷಣೆ Read More »

ಪುತ್ತೂರು: ಇಬ್ಬರು ವಿದ್ಯಾರ್ಥಿಗಳು ನಾಪತ್ತೆ

ಸಮಗ್ರ ನ್ಯೂಸ್: ಪುತ್ತೂರಿನ ವಸತಿ ಶಾಲೆಯೊಂದರಿಂದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಇಬ್ಬರೂ 10ನೇ ತರಗತಿಯಲ್ಲಿ ಓದುತ್ತಿದ್ದ ಮೈಸೂರಿನವರಾದ ತಿಪ್ಪೇಶ್ ಮತ್ತು ಅಭೀಷೆಕ್ ನವೆಂಬರ್ 7ರ ಸಂಜೆಯಿಂದ ನಾಪತ್ತೆಯಾಗಿದ್ದಾರೆ. ಶಾಲೆ ಮುಗಿಸಿದ ಇಬ್ಬರೂ ಮತ್ತೆ ತಮ್ಮ ಹಾಸ್ಟೆಲ್‌ಗೆ ಬಾರದೆ ನಾಪತ್ತೆಯಾಗಿದ್ದು, ಈ ಬಗ್ಗೆ ಶಾಲಾ ಆಡಳಿತ ಸಮಿತಿ ಪೊಲೀಸರಿಗೆ ದೂರು ನೀಡಿದೆ.

ಪುತ್ತೂರು: ಇಬ್ಬರು ವಿದ್ಯಾರ್ಥಿಗಳು ನಾಪತ್ತೆ Read More »