ಕರಾವಳಿ

ಚಲಿಸುತ್ತಿದ್ದ ಬಸ್ ಗೆ ತಲೆಯಿಂದ ಡಿಚ್ಚಿ ಹೊಡೆದ ಬ್ರೆಜಿಲ್ ಫುಟ್ಬಾಲ್ ತಾರೆ ನೇಮಾರ್ ಅವರ ಅಭಿಮಾನಿ

ಕೇರಳ: ಚಲಿಸುತ್ತಿದ್ದ ಬಸ್ಸಿನ ಮುಂಭಾಗದ ಗಾಜುಗೆ ಯುವಕನೊಬ್ಬ ಹಾರಿ ತಲೆಯಿಂದ ಗಾಜು ಒಡೆದು ಹಾಕಿರುವ ವಿಲಕ್ಷಣ ಘಟನೆ ಮಲಪ್ಪುರಂ ಜಿಲ್ಲೆಯ ಪೆರಿಂತಲ್ ಮನ್ನಾದಲ್ಲಿ ಜುಬಿಲಿ ಜಂಕ್ಷನ್‌ನಲ್ಲಿ ನಡೆದಿದೆ. ಖಾಸಗಿ ಬಸ್​ ಮಂಕಡಾ ಕಡೆಗೆ ತೆರಳುತ್ತಿತ್ತು, ಈ ವೇಳೆ ಬಸ್​ ಎದುರಿಗೆ ಓಡಿ ಬಂದು, ಮೇಲಕ್ಕೆ ಜಿಗಿದು ತಲೆಯಿಂದ ಡಿಕ್ಕಿ ಹೊಡೆದು ವಿಂಡ್​ಶೀಲ್ಡ್​ ಗಾಜನ್ನು ಪುಡಿ ಪುಡಿ ಮಾಡಿದ್ದಾನೆ. ಬಸ್​ ಗುದ್ದಿದ ರಭಸಕ್ಕೆ ಯುವಕನು ಕೂಡ ಕೊಂಚ ದೂರ ಹಾರಿ ಬಿದ್ದಿದ್ದಾನೆ. ಕೆಲ ಸೆಕೆಂಡ್​ಗಳ ಕಾಲ ನೆಲದ ಮೇಲೆಯೇ […]

ಚಲಿಸುತ್ತಿದ್ದ ಬಸ್ ಗೆ ತಲೆಯಿಂದ ಡಿಚ್ಚಿ ಹೊಡೆದ ಬ್ರೆಜಿಲ್ ಫುಟ್ಬಾಲ್ ತಾರೆ ನೇಮಾರ್ ಅವರ ಅಭಿಮಾನಿ Read More »

ಪುತ್ತೂರು: 8ನೇ ತರಗತಿಯ ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಅನಾರೋಗ್ಯದಿಂದಾಗಿ ನಿಧನರಾಗಿರುವ ಘಟನೆ ನ.10ರಂದು ನಡೆದಿದೆ. ಮೃತರನ್ನು ಕೃತಿ ಕೆ.ಎ (13) ಎಂದು ಗುರುತಿಸಲಾಗಿದೆ. ಬನ್ನೂರಿನ ಸೇಡಿಯಾಪು ಕಂಜೂರು ನಿವಾಸಿಗಳಾದ ಆನಂದ ಕುಲಾಲ್‌ ಮತ್ತು ಪದ್ಮಾವತಿ ದಂಪತಿ ಪುತಿ ಕೃತಿ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇನ್ನು ವಿದ್ಯಾರ್ಥಿನಿಯ ಆತ್ಮಕ್ಕೆ ಶಾಂತಿ ಕೋರಿ ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಗೆ ರಜೆ ಕೊಡಲಾಗಿದೆ.

ಪುತ್ತೂರು: 8ನೇ ತರಗತಿಯ ವಿದ್ಯಾರ್ಥಿನಿ ಮೃತ್ಯು Read More »

ಮಂಗಳೂರಲ್ಲಿ ನೈತಿಕ ಪೊಲೀಸ್ ಗಿರಿ! ಶಾಲಾ ವಿದ್ಯಾರ್ಥಿಗೆ ಥಳಿಸಿದ ಬುರ್ಖಾಧಾರಿ ಮಹಿಳೆ ಮತ್ತು ಯುವಕ!!

ಸಮಗ್ರ ನ್ಯೂಸ್: ಅಪ್ರಾಪ್ತ ಶಾಲಾ ಬಾಲಕನ ಮೇಲೆ ಬಸ್ ನಿಲ್ದಾಣದಲ್ಲಿ ನೂರಾರು ಮಂದಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಬುರ್ಖಾಧಾರಿ ಮಹಿಳೆ ಹಾಗೂ ಯುವಕನೋರ್ವ ಮನಬಂದಂತೆ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದು ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಮಾಡುತ್ತಿರುವುದೇಕೆ ಎನ್ನುವುದು ಬಯಲಾಗಿಲ್ಲ. ಪೊಲೀಸ್ ಇಲಾಖೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸದಿದ್ದಲ್ಲಿ ನೈತಿಕ ಪೊಲೀಸ್ ಗಿರಿ ನಿಯಂತ್ರಿಸುವುದು ಕಷ್ಟ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಗಳೂರು

ಮಂಗಳೂರಲ್ಲಿ ನೈತಿಕ ಪೊಲೀಸ್ ಗಿರಿ! ಶಾಲಾ ವಿದ್ಯಾರ್ಥಿಗೆ ಥಳಿಸಿದ ಬುರ್ಖಾಧಾರಿ ಮಹಿಳೆ ಮತ್ತು ಯುವಕ!! Read More »

ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ| ವಿವಿಧ ಕಾರ್ಯಕ್ರಮಗಳ ಅನಾವರಣ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯಲ್ಲಿನ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಕರ್ನಾಟಕದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿಯವರ ಭೇಟಿಯ ಸಂಪೂರ್ಣ ಕಾರ್ಯಕ್ರಮಗಳ ಪಟ್ಟಿ ಕೂಡ ಸಿದ್ಧಗೊಂಡಿದೆ. ನವೆಂಬರ್ 11ರಂದು ಬೆಳಿಗ್ಗೆ 10

ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ| ವಿವಿಧ ಕಾರ್ಯಕ್ರಮಗಳ ಅನಾವರಣ Read More »

ಬಂಟ್ವಾಳ: ಉದ್ಯೋಗ ಸಂದರ್ಶನಕ್ಕೆಂದು ತೆರಳಿದ ಯುವತಿ ನಾಪತ್ತೆ

ಸಮಗ್ರ ನ್ಯೂಸ್: ಉದ್ಯೋಗ ಸಂದರ್ಶನಕ್ಕೆಂದು ತೆರಳಿದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಇಡಿದು ಗ್ರಾಮದ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಕಂಬಳಬೆಟ್ಟು ನಿವಾಸಿ ದಿವಂಗತ ಆನಂದ ಅವರ ಪುತ್ರಿ ಸುಶ್ಮಿತಾ (21) ನಾಪತ್ತೆಯಾದ ಯುವತಿ. ನ. 8 ಮಂಗಳವಾರ ಬೆಳಿಗ್ಗೆ ಮನೆಯಿಂದ ಹೋದವಳು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಕೆಲಸಕ್ಕೆ ಇಂಟರ್‌ವ್ಯೂ ಲೆಟರ್ ಬಂದಿದ್ದು, ಹಾಗಾಗಿ ನಾನು ಹೋಗಿ ಬರುತ್ತೇನೆ ಎಂದು ಮನೆಯವರಲ್ಲಿ ಹೇಳಿ ತೆರಳಿದ್ದು, ನಂತರ ಮನೆಗೆ ಮರಳಿ ಬಾರದೇ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಆಕೆಯ ಹೆತ್ತವರು

ಬಂಟ್ವಾಳ: ಉದ್ಯೋಗ ಸಂದರ್ಶನಕ್ಕೆಂದು ತೆರಳಿದ ಯುವತಿ ನಾಪತ್ತೆ Read More »

‘ಕಾಂತಾರ’ ಬಳಿಕ ಗಡಿದಾಟಲಿದ್ದಾನೆ ‘ಶಿವದೂತೆ ಗುಳಿಗೆ’ | ತುಳು ರಂಗಭೂಮಿಯ ಕ್ರಾಂತಿ ಕನ್ನಡ, ಹಿಂದಿಯಲ್ಲಿ ಪ್ರದರ್ಶನಕ್ಕೆ ಸಜ್ಜು!

ಸಮಗ್ರ ನ್ಯೂಸ್: ತುಳುನಾಡಿನ ದೈವಗಳಾದ ಪಂಜುರ್ಲಿ, ಗುಳಿಗನ ಕಥೆಯಾಧಾರಿತ “ಕಾಂತಾರ’ ಸಿನೆಮಾ ದೇಶ-ವಿದೇಶದಲ್ಲಿ ಮೋಡಿ ಮಾಡುತ್ತಿರುವ ಮಧ್ಯೆಯೇ, ಕರಾವಳಿಯಾದ್ಯಂತ ತುಳು ರಂಗಭೂಮಿಯಲ್ಲಿ ಹೊಸ ಕ್ರಾಂತಿ ಬರೆದ “ಶಿವದೂತೆ ಗುಳಿಗೆ’ ತುಳು ನಾಟಕ ಇದೀಗ ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಪ್ರದರ್ಶನಕ್ಕೆ ಅಣಿಯಾಗಿದೆ! “ಕಾಂತಾರ’ ಸಿನೆಮಾದಲ್ಲಿ 20 ನಿಮಿಷ ತುಳುನಾಡಿನ ಕಾರಣಿಕ ಶಕ್ತಿ ಗುಳಿಗನ ಪ್ರದರ್ಶನವಿದ್ದರೆ, ಶಿವದೂತೆ ಗುಳಿಗೆ ನಾಟಕವು ಪೂರ್ಣ ಗುಳಿಗನ ಕಥೆಯಾಧಾರಿತವಾಗಿದೆ. ವಿಶೇಷವೆಂದರೆ, ಕಾಂತಾರದಲ್ಲಿ “ಗುರುವ’ನಾಗಿ ಮಿಂಚಿರುವ ಕಿರುತೆರೆ ನಟ ಸ್ವರಾಜ್‌ ಶೆಟ್ಟಿ ಅವರೇ ಶಿವದೂತೆ

‘ಕಾಂತಾರ’ ಬಳಿಕ ಗಡಿದಾಟಲಿದ್ದಾನೆ ‘ಶಿವದೂತೆ ಗುಳಿಗೆ’ | ತುಳು ರಂಗಭೂಮಿಯ ಕ್ರಾಂತಿ ಕನ್ನಡ, ಹಿಂದಿಯಲ್ಲಿ ಪ್ರದರ್ಶನಕ್ಕೆ ಸಜ್ಜು! Read More »

ಸುಳ್ಯ: ಸೇತುವೆ, ರಸ್ತೆ ಸಂಪರ್ಕ ಸರಿ ಮಾಡುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಸಿಎಂ ಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದಲ್ಲಿ ಸೇತುವೆ ಹಾಗೂ ರಸ್ತೆ ಸಂಪರ್ಕ ಸರಿ ಮಾಡುವಂತೆ ಮುಖ್ಯಮಂತ್ರಿಯವರಿಗೆ ಹಾಗೂ ಅಧಿಕಾರಿಗಳಿಗೆ ಮನವಿ ನೀಡಲಾಯಿತು. ಉಬರಡ್ಕದ ಅಮೈ ಪಾಲಡ್ಕ ಎಂಬಲ್ಲಿ ಹೊಸ ಸೇತುವೆ, ಯಾವಟೆ ಕಟ್ಟಕೋಡಿ ಅಚ್ಚು ಪಲ್ಲ ಸಂಪರ್ಕ ರಸ್ತೆಗೆ ಕಾಂಕ್ರೀಟಿಕರಣ, ಮಂಜಿಕಾನ ಬದನೆಕಜೆ ಸಂಪರ್ಕ ರಸ್ತೆಗೆ ಕಾಂಕ್ರೀಟಿಕರಣ ಮತ್ತು ಅದೇ ರಸ್ತೆಯಲ್ಲಿ ನದಿಗೆ ಸೇತುವೆ, ಇವೆಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರು ಇರುವಂತಹ ಜಾಗ ಆದ ಕಾರಣ ಆದಷ್ಟು ಬೇಗ ಸೇತುವೆ ಮತ್ತು ಕಾಂಕ್ರೀಟಿಕರಣ

ಸುಳ್ಯ: ಸೇತುವೆ, ರಸ್ತೆ ಸಂಪರ್ಕ ಸರಿ ಮಾಡುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಸಿಎಂ ಗೆ ಮನವಿ Read More »

ಸುಳ್ಯ: ಸೇತುವೆ, ರಸ್ತೆ ಸಂಪರ್ಕ ಸರಿ ಮಾಡುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಸಿಎಂ ಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದಲ್ಲಿ ಸೇತುವೆ ಹಾಗೂ ರಸ್ತೆ ಸಂಪರ್ಕ ಸರಿ ಮಾಡುವಂತೆ ಮುಖ್ಯಮಂತ್ರಿಯವರಿಗೆ ಹಾಗೂ ಅಧಿಕಾರಿಗಳಿಗೆ ಮನವಿ ನೀಡಲಾಯಿತು. ಉಬರಡ್ಕದ ಅಮೈ ಪಾಲಡ್ಕ ಎಂಬಲ್ಲಿ ಹೊಸ ಸೇತುವೆ, ಯಾವಟೆ ಕಟ್ಟಕೋಡಿ ಅಚ್ಚು ಪಲ್ಲ ಸಂಪರ್ಕ ರಸ್ತೆಗೆ ಕಾಂಕ್ರೀಟಿಕರಣ, ಮಂಜಿಕಾನ ಬದನೆಕಜೆ ಸಂಪರ್ಕ ರಸ್ತೆಗೆ ಕಾಂಕ್ರೀಟಿಕರಣ ಮತ್ತು ಅದೇ ರಸ್ತೆಯಲ್ಲಿ ನದಿಗೆ ಸೇತುವೆ, ಇವೆಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರು ಇರುವಂತಹ ಜಾಗ ಆದ ಕಾರಣ ಆದಷ್ಟು ಬೇಗ ಸೇತುವೆ ಮತ್ತು ಕಾಂಕ್ರೀಟಿಕರಣ

ಸುಳ್ಯ: ಸೇತುವೆ, ರಸ್ತೆ ಸಂಪರ್ಕ ಸರಿ ಮಾಡುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಸಿಎಂ ಗೆ ಮನವಿ Read More »

ಮಂಗಳೂರು: ಮಳಲಿ ಮಸೀದಿ ವಿವಾದ| ಆಡಳಿತ ಮಂಡಳಿಯ ಅರ್ಜಿ ವಜಾಗೊಳಿಸಿದ ಕೋರ್ಟ್

ಸಮಗ್ರ ನ್ಯೂಸ್: ಮಂಗಳೂರಿನ ಮಳಲಿಪೇಟೆ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಇಂದು ವಜಾ ಗೊಳಿಸಿದೆ. ಮಳಲಿ ಮಸೀದಿ ಪ್ರಕರಣದಲ್ಲಿ ಮಸೀದಿಯು ವಕ್ಫ್ ಆಸ್ತಿಯಾಗಿರುವ ಕಾರಣ‌ ಈ ಪ್ರಕರಣದ ವಿಚಾರಣೆಗೆ ವಕ್ಫ್ ಸಂಬಂಧಿತ ಕೋರ್ಟ್ ಗಳು ಇರುವುದರಿಂದ ಈ ಪ್ರಕರಣವನ್ನು ವಿಚಾರಣೆ‌ ನಡೆಸಲು ಸಿವಿಲ್ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ. ಹಾಗಾಗಿ ಮಸೀದಿ ವಿರುದ್ಧ ದಾಖಲಾಗಿರುವ ಅರ್ಜಿಯನ್ನು ವಜಾ ಗೊಳಿಸುವಂತೆ ಮಳಲಿಪೇಟೆ ಮಸೀದಿಯ ಆಡಳಿತ ಮಂಡಳಿ ಸಲ್ಲಿಸಿದ್ದ

ಮಂಗಳೂರು: ಮಳಲಿ ಮಸೀದಿ ವಿವಾದ| ಆಡಳಿತ ಮಂಡಳಿಯ ಅರ್ಜಿ ವಜಾಗೊಳಿಸಿದ ಕೋರ್ಟ್ Read More »

ವಿಟ್ಲ: ಪೆಟ್ರೋಲ್ ಸುರಿದು ಯುವಕನ ಕೊಲೆ|ಪೋಲೀಸರ ವಿಚಾರಣೆಯರಲ್ಲಿ ನಿಜಾಂಶ ಬಯಲು

ಸಮಗ್ರ ನ್ಯೂಸ್: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ನಿಜಾಂಶ ಬಯಲಾಗಿದೆ. ಬಂಧಿತ ಆರೋಪಿಯನ್ನು ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಎನ್ನಲಾಗಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಅದ್ರಾಮ, ಸಮಾದ್ ಎಂಬಾತನನ್ನು ಪೆಟ್ರೋಲ್ ಹಚ್ಚಿ ಕೊಲೆ ಮಾಡಿದ್ದ. ಏನಿದು ಪ್ರಕರಣ..!ಆದಿತ್ಯವಾರ ರಾತ್ರಿ ಯುವಕನೋರ್ವನನ್ನು ಕಿಡ್ನಾಪ್ ಮಾಡಿ ಬಳಿಕ ಕೊಲೆ ಮಾಡಲಾಗಿದೆ ಎಂಬ ಸುದ್ದಿ ಸೋಮವಾರ ಬೆಳಿಗ್ಗೆಯಿಂದ ಹರಡಿತ್ತು. ಇದು ವದಂತಿಯೋ ಅಥವಾ ಸತ್ಯ ವಿಚಾರವೋ ಎಂದು

ವಿಟ್ಲ: ಪೆಟ್ರೋಲ್ ಸುರಿದು ಯುವಕನ ಕೊಲೆ|ಪೋಲೀಸರ ವಿಚಾರಣೆಯರಲ್ಲಿ ನಿಜಾಂಶ ಬಯಲು Read More »