ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ಚಂದ್ರಗ್ರಹಣ ಹಿನ್ನೆಲೆ| ನ.8ರಂದು ದೇವಳದಲ್ಲಿ ಸೇವೆಗಳಿಗೆ ಬ್ರೇಕ್

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂದ್ರಗ್ರಹಣದ ದಿನವಾದ ನ. 8ರಂದು ಸೇವೆಗಳನ್ನು ರದ್ದುಗೊಳಿಸಿ ದೇವಸ್ಥಾನದ ಆಡಳಿತ ಪ್ರಕಟಣೆ ಹೊರಡಿಸಿದೆ. ನ.8ರಂದು ದೇವಸ್ಥಾನದಲ್ಲಿ ಭೋಜನ ಪ್ರಸಾದ ವಿತರಣೆ ಕೂಡ ಇರುವುದಿಲ್ಲ. ಬೆಳಗ್ಗೆ 9ರಿಂದ 11.30ರ ತನಕ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬಳಿಕ ಗ್ರಹಣ ಸ್ಪರ್ಶ ಸಮಯವಾದ ಮಧ್ಯಾಹ್ನ 2.39ರಿಂದ ಗ್ರಹಣ ಮೋಕ್ಷ ಸಮಯವಾದ 6.19ರ ತನಕ ದರ್ಶನ ರದ್ದುಗೊಳಿಸಲಾಗಿದ್ದು, ಆ ನಂತರ ರಾತ್ರಿ 7.30ರಿಂದ 9ರ ತನಕ ಶ್ರೀ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ […]

ಕುಕ್ಕೆ ಸುಬ್ರಹ್ಮಣ್ಯ: ಚಂದ್ರಗ್ರಹಣ ಹಿನ್ನೆಲೆ| ನ.8ರಂದು ದೇವಳದಲ್ಲಿ ಸೇವೆಗಳಿಗೆ ಬ್ರೇಕ್ Read More »

ಕಟೀಲು‌ ಯಕ್ಷಗಾನ ಸೇವೆ ಕಾಲಮಿತಿ ರದ್ದುಗೊಳಿಸಲು ಭಕ್ತಾಧಿಗಳ‌ ಆಗ್ರಹ| ದೇವಳಕ್ಕೆ ಪಾದಯಾತ್ರೆ ನಡೆಸಲು ನಿರ್ಧಾರ

ಸಮಗ್ರ ನ್ಯೂಸ್: ಯಕ್ಷಗಾನದ ಪಾರಂಪರಿಕ ಮೇಳವೆಂದೇ ಖ್ಯಾತವಾಗಿರುವ ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಬಯಲಾಟ ಪ್ರದರ್ಶನವನ್ನು ಕಾಲಮಿತಿಗೆ ಒಳಪಡಿಸಿರುವ ಆಡಳಿತ ಮಂಡಳಿಯ ನಿರ್ಧಾರಕ್ಕೆ ಭಕ್ತಾದಿಗಳ ವಲಯದಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಯಕ್ಷಗಾನ ಪರಂಪರೆಯಂತೆ ಬೆಳಗ್ಗಿನವರೆಗೆ ನಡೆಯಬೇಕೆಂದು ಆಗ್ರಹಿಸಿ ಶ್ರೀ ಕಟೀಲು ಯಕ್ಷ ಸೇವಾ ಸಮನ್ವಯ ಸಮಿತಿಯ ಸದಸ್ಯರು ನ.6ರಂದು ಬಜಪೆ ಶ್ರೀ ಶಾರದಾ ಶಕ್ತಿ ಮಂಟಪದಿಂದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ವರೆಗೆ `ಕಟೀಲಮ್ಮನೆಡೆಗೆ ಭಕ್ತರ ನಡೆ’ ಪಾದಯಾತ್ರೆಯನ್ನು ನಡೆಸಲು ನಿರ್ಧರಿಸಿದ್ದಾರೆ. ದೇವಸ್ಥಾನದ ಮೇಳದವರು ಹಿಂದಿನಿಂದಲೂ ನಡೆಸಿಕೊಂಡು

ಕಟೀಲು‌ ಯಕ್ಷಗಾನ ಸೇವೆ ಕಾಲಮಿತಿ ರದ್ದುಗೊಳಿಸಲು ಭಕ್ತಾಧಿಗಳ‌ ಆಗ್ರಹ| ದೇವಳಕ್ಕೆ ಪಾದಯಾತ್ರೆ ನಡೆಸಲು ನಿರ್ಧಾರ Read More »

ಕೊರಗಜ್ಜನ ಆದಿತಳದ ಬುಡದಲ್ಲಿ ಜೆಸಿಬಿ ಘರ್ಜನೆ| ಕುಸಿಯುವ ಭೀತಿಯಲ್ಲಿ ದೇರಳಕಟ್ಟೆ ಸಾನಿಧ್ಯ!!

ಸಮಗ್ರ ನ್ಯೂಸ್: ಕುತ್ತಾರು ಏಳು ತಳಗಳಲ್ಲಿ ಒಂದಾಗಿರುವ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಎದುರುಗಡೆ ಇರುವ ಕೊರಗಜ್ಜನ ಆದಿತಳದ ಬುಡವನ್ನು ಜೆಸಿಬಿ ಮೂಲಕ ಅಗೆಯುವ ಕಾರ್ಯ ಆರಂಭಗೊಂಡಿದ್ದು, ಸಮಸ್ತ ದೈವಭಕ್ತರು ಆತಂಕಕ್ಕೆ ಒಳಗಾಗುವ ಸ್ಥಿತಿ ನಿರ್ಮಾಣವಾಗಿದೆ. ಫಿಝಾ ಗ್ರೂಪ್ ಸಂಸ್ಥೆ ಹಲವು ಎಕ್ರೆ ಜಾಗವನ್ನು ದೇರಳಕಟ್ಟೆ ಭಾಗದಲ್ಲಿ ಖರೀದಿಸಿದ್ದು, ಇದನ್ನು ಸಮತಟ್ಟುಗೊಳಿಸುವ ಕಾರ್ಯ ಹಲವು ತಿಂಗಳುಗಳಿಂದ ನಡೆಯುತ್ತಿದೆ. ಈ ನಡುವೆ ಕಾನೂನಿನ ತೊಡಕು ಉಂಟಾದ ಹಿನ್ನೆಲೆಯಲ್ಲಿ ಒಂದೊಮ್ಮ ಕಾಮಗಾರಿ ಸ್ಥಗಿತಗೊಂಡಿತ್ತು. ಕೊರಗಜ್ಜನ ಆದಿತಳದ ಜಾಗವನ್ನು ಬಿಟ್ಟು ಉಳಿದ

ಕೊರಗಜ್ಜನ ಆದಿತಳದ ಬುಡದಲ್ಲಿ ಜೆಸಿಬಿ ಘರ್ಜನೆ| ಕುಸಿಯುವ ಭೀತಿಯಲ್ಲಿ ದೇರಳಕಟ್ಟೆ ಸಾನಿಧ್ಯ!! Read More »

ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಕೆ : ರಾಹುಲ್ ವಿರುದ್ಧ ಎಫ್ಐಆರ್‌

ಸಮಗ್ರ ನ್ಯೂಸ್: ರಾಷ್ಟ್ರೀಯ ಕಾಂಗ್ರಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ‘ಕೆಜಿಎಫ್’ ಸಿನಿಮಾದ ಹಾಡೊಂದರ ಮ್ಯೂಸಿಕ್ ಬಳಸಿರುವ ಆರೋಪ ಕೇಳಿ ಬಂದಿದ್ದು, ಕಾಪಿ ರೈಟ್ಸ್ ಉಲ್ಲಂಘನೆಗಾಗಿ ಕಾಂಗ್ರೆಸ್ ಪಕ್ಷದ ಮೇಲೆ ಎಮ್.ಆರ್.ಟಿ ಸಂಸ್ಥೆಯು ಕಾನೂನು ಸಮರಕ್ಕೆ ಮುಂದಾಗಿದೆ. ತಮ್ಮ ಸಂಸ್ಥೆಯ ಅನುಮತಿ ಇಲ್ಲದೇ, ಕೆಜಿಎಫ್ ಸಿನಿಮಾದ ಸಂಗೀತವನ್ನು ಬಳಸಿಕೊಂಡಿದ್ದಕ್ಕಾಗಿ ಸಂಸ್ಥೆಯು ದೂರು ದಾಖಲಿಸಿದೆ. MRT ಸಂಸ್ಥೆಗೆ ಸೇರಿದ ಹಾಡುಗಳನ್ನು ಬಳಸಿದ ಆರೋಪ ಹೊತ್ತಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು, ಸಂಸ್ಥೆಯ ಅನುಮತಿ ಇಲ್ಲದೇ ಹಾಡುಗಳನ್ನು ಯಾತ್ರೆಯಲ್ಲಿ

ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಕೆ : ರಾಹುಲ್ ವಿರುದ್ಧ ಎಫ್ಐಆರ್‌ Read More »

ಸುಳ್ಯ: ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ|ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಸಬಾ ಗ್ರಾಮದ ಕುದ್ಪಾಜೆ ಎಂಬಲ್ಲಿ ಸುಮಾರು ಹದಿನೈದು ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ ಇದ್ದು ಈ ಬಗ್ಗೆ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ ಸಲ್ಲಿಸಲಾಯಿತು. ಕುದ್ಪಾಜೆಯಲ್ಲಿ ಸುಮಾರು ಹದಿನೈದು ದಲಿತ ಕುಟುಂಬಗಳು ವಾಸವಾಗಿದ್ದು ಪಂಚಾಯತ್ ನಿಂದ ಕುಡಿಯುವ ನೀರಿನ ಯೋಜನೆಗೆ ತಾರಾನಾಥ ಎಂಬವರ ಗೇಟಿನ ಹತ್ತಿರ ಕೊಳವೆಬಾವಿ ತೆಗೆಯಲು ಗುರುತು ಮಾಡಿದ್ದಾರು. ಆದರೆ ಸ್ಥಳೀಯ ರಾಜಕೀಯ ವ್ಯಕ್ತಿಗಳು ತಾರಾನಾಥ ಎಂಬವರ ಗೇಟಿನ ಹತ್ತಿರ ಕೊಳವೆಬಾವಿ ತೆಗೆಯಬಾರದು ಎಂದು ಹೇಳುತ್ತಿದ್ದಾರೆ. ತಾರಾನಾಥ

ಸುಳ್ಯ: ದಲಿತ ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ|ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ Read More »

ಸುಳ್ಯ: ವಿಕಲಚೇತನ ಹೆಸರಿನಲ್ಲಿ ಬಂದಿರುವ ಅನುದಾನ ದುರುಪಯೋಗ|ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಬೆದ್ರಪಣೆಗೆ ವಿಕಲಚೇತನ ಹೆಸರಿನಲ್ಲಿ ಬಂದಿರುವ ಅನುದಾನ ದುರುಪಯೋಗ,ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಮನವಿ. ಅರಂತೋಡು ಗ್ರಾಮದ ಬೆದ್ರಪಣೆ ವಿಕಲಚೇತನ ನಿವಾಸಿಯಾದ ಹೊನ್ನಪ್ಪ .ಬಿ.ಬಿನ್ ಸುಬ್ಬಯ್ಯ ಗೌಡ ಎಂಬವರಿಗೆ ಅರಂತೋಡು ಗ್ರಾಮ ಪಂಚಾಯತ್ ಕ್ರಿಯ ಯೋಜನೆ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಬಂದಿರುವ ಕಾಂಕ್ರೀಟ್ರಿಕರಣವನ್ನು ಸುಬ್ಬಯ್ಯ ಗೌಡರ ಮನೆಯಿಂದ ಒಂದುವರೆ ಕಿಲೋಮೀಟರ್ ದೂರದಲ್ಲಿರುವಂತ ಮೇಲಡ್ತಲೆ ವೆಂಕಪ್ಪ ಗೌಡರ ಮನೆಯ ಬಳಿ ಕಾಂಕ್ರೀಟ್ರಿಕರಣ ಮಾಡಿದ್ದಾರೆ. ವಿಕಲಚೇತನದವರಿಗೆ ಸರಕಾರದಿಂದ ಬರುವಂತ ಸವಲತ್ತುಗಳನ್ನು ಈ ರೀತಿಯಾಗಿ

ಸುಳ್ಯ: ವಿಕಲಚೇತನ ಹೆಸರಿನಲ್ಲಿ ಬಂದಿರುವ ಅನುದಾನ ದುರುಪಯೋಗ|ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಮನವಿ Read More »

ಪಂಜುರ್ಲಿಯ ವೇಷ ಧರಿಸಿ ರೀಲ್ಸ್ ಮಾಡಿದ್ದ ಪ್ರಕರಣ| ಧರ್ಮಸ್ಥಳದಲ್ಲಿ ಕ್ಷಮಾಪಣೆ ಕೇಳಿದ ಶ್ವೇತಾರೆಡ್ಡಿ

ಸಮಗ್ರ ನ್ಯೂಸ್: ‘ಕಾಂತಾರ’ ಚಲನ ಚಿತ್ರದಲ್ಲಿರುವ ದೈವದ ಪಾತ್ರದಂತೆ ಮುಖವರ್ಣಿಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹೈದರಾಬಾದ್‌ ಮೂಲದ ಶ್ವೇತಾ ರೆಡ್ಡಿ ಅವರು ಧರ್ಮಸ್ಥಳಕ್ಕೆ ಬಂದು ತಪ್ಪು ಕಾಣಿಕೆ ಸಲ್ಲಿಸಿ, ಡಾ| ಡಿ.ವೀರೇಂದ್ರ ಹೆಗ್ಗಡೆಯವರಲ್ಲಿ ಕ್ಷಮಾಪಣೆ ಕೇಳಿ ಆಶೀರ್ವಾದ ಪಡೆದ ಘಟನೆ ನ. 3ರಂದು ನಡೆದಿದೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶ್ವೇತಾ, ಇದನ್ನು ತಿಳಿದು ಮಾಡಿರಲಿಲ್ಲ, ಯಕ್ಷಗಾನ ಪಾತ್ರ ಮತ್ತು ಇದು ಒಂದೇ ಎಂದುಕೊಂಡಿದ್ದೆ. ಟೀಕೆಗಳು ಬಂದ ಬಳಿಕ ಬೇರೆ ಬೇರೆ ಎಂದು

ಪಂಜುರ್ಲಿಯ ವೇಷ ಧರಿಸಿ ರೀಲ್ಸ್ ಮಾಡಿದ್ದ ಪ್ರಕರಣ| ಧರ್ಮಸ್ಥಳದಲ್ಲಿ ಕ್ಷಮಾಪಣೆ ಕೇಳಿದ ಶ್ವೇತಾರೆಡ್ಡಿ Read More »

ಪುತ್ತೂರು: ಮುತ್ತಪ್ಪ ರೈ ಸಹೋದರನ ವಿರುದ್ದ ಸ್ಪೋಟಕ ದಾಸ್ತಾನು ಪ್ರಕರಣ ದಾಖಲು

ಸಮಗ್ರನ್ಯೂಸ್: ಪುತ್ತೂರಿನ ಪಟಾಕಿ ಗೊಡೌನ್ ಗೆ ನಲ್ಲಿ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲಕ ಪುತ್ತೂರು ಅಶ್ವಿನಿ ಬಾರ್ & ರೆಸ್ಟೋರೆಂಟ್ ಪಾಲುದಾರ ಕರುಣಾಕರ ರೈ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪೊಲೀಸರು ಸೆಕ್ಷನ್ 9B ಅಡಿ ಸೊಮೋಟೋ ಪ್ರಕರಣ ದಾಖಲಿಸಿದ್ದಾರೆ. ಸೆಕ್ಷನ್ 9ಬಿ ಅಡಿ ಕರುಣಾಕರ್ ರೈ ವಿರುದ್ಧ ಸ್ಫೋಟಕ ದಾಸ್ತಾನು ಗಂಭೀರ ಪ್ರಕರಣ ದಾಖಲಿಸಿಕೊಂಡಿರುವ ಪುತ್ತೂರು ಪೊಲೀಸರು ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಪುತ್ತೂರು ದರ್ಬೆಯ ಅಶ್ವಿನಿ ಹೊಟೆಲ್ ಮಾಲಕರಾದ ಕರುಣಾಕರ ರೈ ಮಾಲಿಕತ್ವದ ದರ್ಬೆಯ ಆರಾಧ್ಯ

ಪುತ್ತೂರು: ಮುತ್ತಪ್ಪ ರೈ ಸಹೋದರನ ವಿರುದ್ದ ಸ್ಪೋಟಕ ದಾಸ್ತಾನು ಪ್ರಕರಣ ದಾಖಲು Read More »

ಪುತ್ತೂರು: ‘ರೈಟ್ ಪೋಯಿ’ ಎಂದ ವಿದ್ಯಾರ್ಥಿ|ನಿರ್ವಾಹಕನನ್ನು ಬಿಟ್ಟು ಬಸ್ ಚಲಾಯಿಸಿಕೊಂಡು ಹೋದ ಚಾಲಕ

ಸಮಗ್ರ ನ್ಯೂಸ್: ನಿರ್ವಾಹಕನನ್ನು ನಿಲ್ದಾಣದಲ್ಲಿಯೇ ಬಿಟ್ಟು ಚಾಲಕ ಬಸ್ ಚಲಾಯಿಸಿಕೊಂಡು ಹೋದ ಘಟನೆ ಪುತ್ತೂರಿನಲ್ಲಿ ನ.3ರಂದು ನಡೆದಿದೆ. ಪುತ್ತೂರುನಿಂದ ಮಂಗಳೂರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸಿನ ಚಾಲಕ ನಿರ್ವಾಹಕನನ್ನು ಪುತ್ತೂರು ಬಸ್ ನಿಲ್ದಾಣದಲ್ಲಿ ಬಿಟ್ಟು ಬಂದಿದ್ದರು. ನಿಲ್ದಾಣದಿಂದ ಬಸ್ ಹೊರಡುವ ವೇಳೆ ವಿದ್ಯಾರ್ಥಿಯೋರ್ವ ‘ರೈಟ್ ಪೋಯಿ’ ಎಂದು ಹೇಳಿದ್ದ.‌ ನಿರ್ವಾಹಕನೇ ‘ರೈಟ್ ಪೋಯಿ’ ಎಂದು ಹೇಳಿದ್ದಾಗಿ ಭಾವಿಸಿದ ಚಾಲಕ ಬಸ್ ಚಲಾಯಿಸಿದ್ದಾರೆ. ಪುತ್ತೂರು ನಿಲ್ದಾಣದಿಂದ ಹೊರಟ ಬಸ್ ಎಂ.ಟಿ.ರಸ್ತೆಯಾಗಿ ತಾಲೂಕು ಕಛೇರಿ ರಸ್ತೆ ದಾಟಿ ಮುಖ್ಯ ರಸ್ತೆಗೆ ಪ್ರವೇಶಿಸುತ್ತಿದ್ದಂತೆಯೇ

ಪುತ್ತೂರು: ‘ರೈಟ್ ಪೋಯಿ’ ಎಂದ ವಿದ್ಯಾರ್ಥಿ|ನಿರ್ವಾಹಕನನ್ನು ಬಿಟ್ಟು ಬಸ್ ಚಲಾಯಿಸಿಕೊಂಡು ಹೋದ ಚಾಲಕ Read More »

ಕಿನ್ನಿಗೋಳಿ: ಅತಿವೇಗದ ಕಾರ್ ಡಿಕ್ಕಿ, ಮಹಿಳೆ ಗಂಭೀರ

ಸಮಗ್ರ ನ್ಯೂಸ್: ಪಾದಚಾರಿ ಮಹಿಳೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಆಕೆ ಗಂಭೀರ ಗಾಯಗೊಂಡ ಘಟನೆ ಕಿನ್ನಿಗೋಳಿಯ ಮುಖ್ಯರಸ್ತೆಯಲ್ಲಿ ಸಂಭವಿಸಿದೆ. ಗಾಯಾಳುವನ್ನು ಕೆಮ್ರಾಲ್ ಮನೋಲಿ ಬಲ್ಲೆ ನಿವಾಸಿ ಜಯಂತಿ ಶೆಟ್ಟಿ ಎಂದು ಗುರುತಿಸಲಾಗಿದೆ. ಜಯಂತಿ ಅವರು ಕಿನ್ನಿಗೋಳಿ ಚರ್ಚ್ ಕಡೆಯಿಂದ ತರಕಾರಿ ಹಿಡಿದುಕೊಂಡು ನಡೆದುಕೊಂಡು ಬರುತ್ತಿದ್ದ ಸಂದರ್ಭ ಕಿನ್ನಿಗೋಳಿ ಕಡೆಯಿಂದ ಮೂರುಕಾವೇರಿ ಕಡೆಗೆ ಸಂಚರಿಸುತ್ತಿದ್ದ ಬ್ರೀಜಾ ಕಾರು ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ದೂರಕ್ಕೆ ಹಾರಿದ್ದು ಗಂಭೀರ ಗಾಯಗೊಂಡಿದ್ದಾರೆ.

ಕಿನ್ನಿಗೋಳಿ: ಅತಿವೇಗದ ಕಾರ್ ಡಿಕ್ಕಿ, ಮಹಿಳೆ ಗಂಭೀರ Read More »