ಡೈರಿ ರಿಚ್ ಐಸ್ ಕ್ರೀಂ ಮಾಲೀಕರ ಸೊಸೆ ಸುಳ್ಯದ ಐಶ್ವರ್ಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಮರುಜೀವ| ನೂತನ ಪ್ರಾಸಿಕ್ಯೂಟರ್ ನೇಮಿಸಿದ ರಾಜ್ಯ ಸರ್ಕಾರ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕನಕಮಜಲು ಮೂಲದ ಮಹಿಳೆ ಐಶ್ವರ್ಯ ಬೆಂಗಳೂರಿನಲ್ಲಿ ಅನುಮಾನಾಸ್ಪದವಾಗಿ ಸಾವಿಗೆ ಶರಣಾಗಿದ್ದ ಪ್ರಕರಣಕ್ಕೆ ಮರುಜೀವ ನೀಡಲಾಗಿದ್ದು ನೂತನ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಪರ ಹೈಕೋರ್ಟ್ಗೆ ಹಿರಿಯ ವಕೀಲ ಶ್ಯಾಮ್ ಸುಂದರ್ ಅವರನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ರಾಜ್ಯ ಸರ್ಕಾರ ನೇಮಿಸಿದೆ. 2023ರ ಅಕ್ಟೋಬರ್ 26ರಂದು ಸುಳ್ಯ ಮೂಲದ ಐಶ್ವರ್ಯ ಗೋವಿಂದರಾಜ ನಗರದ ತಮ್ಮ ತಂದೆಯ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. […]










