ಕರಾವಳಿ

ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಸೇರಿದ ‌ಆಂಬ್ಯುಲೆನ್ಸ್ ಗೆ ಲಾರಿ ಡಿಕ್ಕಿ

ಸಮಗ್ರ ನ್ಯೂಸ್: ಟಿಪ್ಪರ್ ಲಾರಿಯೊಂದು ಅಂಬ್ಯುಲೆನ್ಸ್ ವಾಹನಕ್ಕೆ ಡಿಕ್ಕಿಯಾದ ಘಟನೆ ಮೆಲ್ಕಾರ್ ಸಮೀಪದ ನರಹರಿ ಎಂಬಲ್ಲಿ ನ.2ರ ರಾತ್ರಿ ವೇಳೆ ಸಂಭವಿಸಿದೆ. ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಸೇರಿದ ‌ಆಂಬ್ಯುಲೆನ್ಸ್ ಇದಾಗಿದ್ದು, ರೋಗಿಯೋರ್ವರನ್ನು ಕೆ.ವಿ.ಜಿ.ಆಸ್ಪತ್ರೆಯಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಈ‌ ಘಟನೆ ನಡೆದಿದೆ. ದಿವ್ಯ ರೂಪ ಗುತ್ತಿಗೆ ಸಂಸ್ಥೆಗೆ ಸೇರಿದ ಲಾರಿ‌ ಇದಾಗಿದ್ದು, ಅಪಘಾತದಲ್ಲಿ ಚಾಲಕ ಸಹಿತ ರೋಗಿಗೆ ಯಾವುದೇ ಅಪಾಯವಾಗಿಲ್ಲ.

ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಸೇರಿದ ‌ಆಂಬ್ಯುಲೆನ್ಸ್ ಗೆ ಲಾರಿ ಡಿಕ್ಕಿ Read More »

ಭೀಮರಾವ್ ವಾಷ್ಠರ್ ಅವರಿಗೆ ಹಿರಿಯ ಜೇಸಿಗಳ ಸಂಘದಿಂದ ಸನ್ಮಾನ

ಸಮಗ್ರ ನ್ಯೂಸ್: ಸುಳ್ಯದ ಪಯಸ್ವಿನಿ ಹಿರಿಯ ಜೇಸಿಗಳ ಸಂಘದ ವತಿಯಿಂದ ಸುಳ್ಯದ ಸಾಹಿತಿ , ಜ್ಯೋತಿಷಿ ಮತ್ತು ಚಿತ್ರ ನಿರ್ದೇಶಕರಾದ ಹಿರಿಯ ಜೇಸಿ ಎಚ್ .ಭೀಮರಾವ್ ವಾಷ್ಠರ್ ಅವರಿಗೆ ನ.1 ರಂದು ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆದ ಪಯಸ್ವಿನಿ ಹಿರಿಯ ಜೇಸಿಗಳ ಮಾಸಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಾಹಿತ್ಯದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಹಿರಿಯ ಜೇಸಿಗಳ ಸಂಘದ ಅಧ್ಯಕ್ಷರಾದ ಜೇಸಿ ಪಿ ಎಸ್ ಗಂಗಾಧರ್ ಮತ್ತು ಜೇಸಿ ಎಂ ಬಿ ಸದಾಶಿವ ರವರು

ಭೀಮರಾವ್ ವಾಷ್ಠರ್ ಅವರಿಗೆ ಹಿರಿಯ ಜೇಸಿಗಳ ಸಂಘದಿಂದ ಸನ್ಮಾನ Read More »

“ಸುರತ್ಕಲ್ ಟೋಲ್ ವಿರೋಧಿ ಹೋರಾಟ ಇನ್ನಷ್ಟು ತೀವ್ರ” -ಇನಾಯತ್ ಅಲಿ

ಸುರತ್ಕಲ್: “ಸರಕಾರ ಜನರನ್ನು ಲೂಟಿ ಮಾಡಲು ನಿರ್ಮಾಣ ಮಾಡಿರುವ ಇಲ್ಲಿನ ಟೋಲ್ ಗೇಟ್ ತೆರವುಗೊಳ್ಳುವವರೆಗೆ ರಾತ್ರಿ ಹಗಲು ಧರಣಿ ಕೂರಬೇಕಾದ ಅನಿವಾರ್ಯತೆಯಿದೆ. ಟೋಲ್ ವಿರೋಧಿ ಸಮಿತಿ ಕೈಗೊಂಡಿರುವ ಹೋರಾಟಕ್ಕೆ ನನ್ನ ಪೂರ್ಣ ಬೆಂಬಲವಿದ್ದು ಮುಂದಿನ ದಿನಗಳಲ್ಲಿ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ” ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹೇಳಿದರು. ಅವರು ಟೋಲ್ ವಿರೋಧಿ ಹೋರಾಟ ಸಮಿತಿ ಕೈಗೊಂಡಿರುವ ಅಹೋರಾತ್ರಿ ಧರಣಿಯ ಆರನೇ ದಿನವಾದ ಇಂದು ಧರಣಿ ಸ್ಥಳದಲ್ಲಿ ಮಾತಾಡಿದರು.ಕೇರಳದ ಕೆಪಿಸಿಸಿ ಮುಖಂಡ ರೋಸಿ ಜಾನ್,

“ಸುರತ್ಕಲ್ ಟೋಲ್ ವಿರೋಧಿ ಹೋರಾಟ ಇನ್ನಷ್ಟು ತೀವ್ರ” -ಇನಾಯತ್ ಅಲಿ Read More »

ದ. ಕ‌ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್ ನೇಮಕ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ ಆರ್ ನೇಮಕಗೊಂಡಿದ್ದಾರೆ. ರವಿಕುಮಾರ್ ಅವರು 2012 ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದಾರೆ. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ ವರ್ಗಾಣೆಯ ಬಳಿಕ ಡಾ. ಕುಮಾರ್ ಅವರಿಗೆ ಪ್ರಭಾರ ಜಿಲ್ಲಾಧಿಕಾರಿಯಾಗಿ ಜವಾಬ್ದಾರಿ ನೀಡಲಾಗಿತ್ತು. ಇದೀಗ ಆ ಜವಾಬ್ದಾರಿಯನ್ನು ರವಿಕುಮಾರ್ ಎಂ ಆರ್ ಅವರಿಗೆ ಹಸ್ತಾಂತರಿಸಿ ಸರಕಾರ ಆದೇಶ ಹೊರಡಿಸಿದೆ.

ದ. ಕ‌ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್ ನೇಮಕ Read More »

ಜಾಲತಾಣಗಳಲ್ಲಿ ತುಳುಭಾಷೆ, ದೈವಾರಾಧನೆಯ ಅಶ್ಲೀಲ ಪೋಸ್ಟ್| ವಿಕೃತರ ವಿರುದ್ದ ಕಾನೂನು ಹೋರಾಟಕ್ಕೆ ದೈವಾರಾಧನಾ ವೇದಿಕೆ ನಿರ್ಧಾರ

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ತುಳುನಾಡು ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಕಾನೂನು ಸಮರಕ್ಕೆ ಮುಂದಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷಿಗರನ್ನು, ದೈವಾರಾಧನೆ, ತುಳು ಕಲಾವಿದರ ಕುರಿತು ಅಶ್ಲೀಲ ಪದ ಬಳಕೆ ಮಾಡಿರುವ ಕನ್ನಡಿಗ ಶಿವರಾಜ್ ಎಂಬವರ ಮೇಲೆ ಕಾನೂನು ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಪ್ರಮುಖರಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಶಾಸಕ ಕಾಮತ್ ತಕ್ಷಣವೇ ಪ್ರಕರಣ ದಾಖಲಿಸುವಂತೆ

ಜಾಲತಾಣಗಳಲ್ಲಿ ತುಳುಭಾಷೆ, ದೈವಾರಾಧನೆಯ ಅಶ್ಲೀಲ ಪೋಸ್ಟ್| ವಿಕೃತರ ವಿರುದ್ದ ಕಾನೂನು ಹೋರಾಟಕ್ಕೆ ದೈವಾರಾಧನಾ ವೇದಿಕೆ ನಿರ್ಧಾರ Read More »

ಸುಳ್ಯ:ಹರಕೆ ಹೇಳಿ ದಿನದೊಳಗೆ ನಾಪತ್ತೆಯಾದ ಬಾಲಕಿ ಪತ್ತೆ| ಮತ್ತೊಂದು ಪವಾಡಕ್ಕೆ ಸಾಕ್ಷಿಯಾದ ಕೊರಗಜ್ಜ

ಸಮಗ್ರ ನ್ಯೂಸ್: ನಾಪತ್ತೆಯಾದ ಬಾಲಕಿಯ ಪತ್ತೆಗಾಗಿ ಕೊರಗಜ್ಜನಿಗೆ ಹರಕೆ ಹೇಳಿ ದಿನ ಕಳೆಯುವುದರ ಒಳಗೆ ಬಾಲಕಿ ಪತ್ತೆಯಾದ ಘಟನೆ ದ.ಕ‌ ಜಿಲ್ಲೆಯ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಉಜಿರಡ್ಕ ಕೊರಗಜ್ಜ‌ ಸಾನಿಧ್ಯದಲ್ಲಿ ನಡೆದಿದೆ. ಅ.17ರಂದು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ಜಗನ್ನಾಥ್ ಹಾಗೂ ರೇಖಾ ದಂಪತಿಯ ಪುತ್ರಿ ಭಾರ್ಗವಿ ನಾಪತ್ತೆಯಾಗಿದ್ದಳು. ಈ ವಿಚಾರ ಅವರ ಸಂಬಂಧಿಕರಾದ ಕುಕ್ಕೆ ಸುಬ್ರಹ್ಮಣ್ಯದ ನಿತಿನ್ ಭಟ್ ರವರಿಗೆ ತಿಳಿದು ಅವರು‌ ಅ.19ರಂದು ಉಜಿರಡ್ಕದ ಕೊರಗಜ್ಜನ ಸಾನಿಧ್ಯದಲ್ಲಿ ಪ್ರಾರ್ಥಿಸಿದ್ದರು. ಈ ವೇಳೆ ಅಲ್ಲಿನ

ಸುಳ್ಯ:ಹರಕೆ ಹೇಳಿ ದಿನದೊಳಗೆ ನಾಪತ್ತೆಯಾದ ಬಾಲಕಿ ಪತ್ತೆ| ಮತ್ತೊಂದು ಪವಾಡಕ್ಕೆ ಸಾಕ್ಷಿಯಾದ ಕೊರಗಜ್ಜ Read More »

ಮಂಗಳೂರು: ಅಕ್ರಮ ಕಸಾಯಿಖಾನೆ ವಶಕ್ಕೆ ಪಡೆದ ಅಧಿಕಾರಿಗಳು|

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ಕಾನೂನಿನ ಅಡಿಯಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ-2020 ರ ಅಡಿಯಲ್ಲಿ ಈ ಅಕ್ರಮ ಕಸಾಯಿಖಾನೆ ಇದ್ದ ಮೂರು ಪ್ರದೇಶಗಳನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ವರ್ಷ ಕಾಯ್ದೆ ಜಾರಿಗೆ ಬಂದ ನಂತರ ಇದೇ ಮೊದಲ ಬಾರಿಗೆ ಇಂತಹ ಕ್ರಮ ಜರುಗಿಸಲಾಗಿದೆ. ಕಾಟಿಪಳ್ಳದಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಹಕೀಮ್ ಹಾಗೂ ಮೊಹಮ್ಮದ್ ಪರ್ವೇಜ್ ನಡೆಸುತ್ತಿದ್ದರು ಹಾಗೂ ಗಂಜಿಮಠದಲ್ಲಿ ಮನೆಯೊಂದಕ್ಕೆ ಹೊಂದಿಕೊಂಡಂತೆ ಇದ್ದ ಪ್ರದೇಶದಲ್ಲಿ

ಮಂಗಳೂರು: ಅಕ್ರಮ ಕಸಾಯಿಖಾನೆ ವಶಕ್ಕೆ ಪಡೆದ ಅಧಿಕಾರಿಗಳು| Read More »

ಸುರತ್ಕಲ್ ಟೋಲ್ ವಿರುದ್ಧ ಅಹೋರಾತ್ರಿ ಧರಣಿ!

ಸಮಗ್ರ ನ್ಯೂಸ್: ಮಂಗಳೂರು‌ ಹೊರವಲಯದ ಸುರತ್ಕಲ್ ನ ಅಕ್ರಮ ಟೋಲ್ ಗೇಟ್ ವಿರುದ್ಧ ಟೋಲ್ ವಿರೋಧಿ ಹೋರಾಟ ಸಮಿತಿ ಇಂದಿನಿಂದ ಅನಿರ್ದಿಷ್ಟ ಅವಧಿ ಅಹೋರಾತ್ರಿ ಧರಣಿ ಪ್ರತಿಭಟನೆ ಆರಂಭಿಸಿದೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಜಮಾಯಿಸಿದ ಹೋರಾಟ ಸಮಿತಿ ಮುಖಂಡರು, ಸದಸ್ಯರು ಟೋಲ್ ಮುಂಭಾಗದಲ್ಲಿ ಹಗಲು ರಾತ್ರಿ ಧರಣಿ ಕೂತಿದ್ದಾರೆ.ಈ ವೇಳೆ ಮಾತಾಡಿದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು, “ಸಂಸದ ನಳಿನ್ ಕುಮಾರ್ ಕಟೀಲ್ ಮೇಲೆ ಜಿಲ್ಲೆಯ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಏಳು ವರ್ಷಗಳಿಂದ ಟೋಲ್

ಸುರತ್ಕಲ್ ಟೋಲ್ ವಿರುದ್ಧ ಅಹೋರಾತ್ರಿ ಧರಣಿ! Read More »

ಮಂಗಳೂರು: ಲಂಗರು ಹಾಕಿದ್ದ ಬೋಟ್ ಗಳು ಬೆಂಕಿಗಾಹುತಿ

ಸಮಗ್ರ ನ್ಯೂಸ್: ಮಂಗಳೂರು ನಗರದ ಬೆಂಗ್ರೆ ಪ್ರದೇಶದಲ್ಲಿ ಲಂಗರು ಹಾಕಿದ್ದ 3ಕ್ಕೂ ಅಧಿಕ ಬೋಟ್ ಗಳು ಬೆಂಕಿಗಾಹುತಿಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಬೆಂಗರೆಯಲ್ಲಿ ಹಲವು ಬೋಟ್ ಗಳು ಲಂಗರು ಹಾಕಿರುತ್ತವೆ. ಈ ಪೈಕಿ ಒಂದು ಬೋಟ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಆ ಬೆಂಕಿ ಹತ್ತಿರಲ್ಲಿದ್ದ ಇತರ ಬೋಟ್ ಗಳಿಗೂ ಹಬ್ಬಿದ್ದು, ಇಡೀ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿರುವುದು ಕಂಡುಬಂದಿದೆ. ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ.

ಮಂಗಳೂರು: ಲಂಗರು ಹಾಕಿದ್ದ ಬೋಟ್ ಗಳು ಬೆಂಕಿಗಾಹುತಿ Read More »

ಸುರತ್ಕಲ್ ಟೋಲ್ ಗೇಟ್ ಬಳಿ ನಿಷೇದಾಜ್ಞೆ ಜಾರಿ – ಕಮಿಷನರ್ ಶಶಿಕುಮಾರ್‌ ಆದೇಶ

ಸಮಗ್ರ ನ್ಯೂಸ್: ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಟೋಲ್ ಗೇಟ್ ಸಮೀಪದ 200 ಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6ರಿಂದ ನವೆಂಬರ್ 3ರ ಸಂಜೆ 6ರವರೆಗೆ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ವಿಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಎನ್‌ಐಟಿಕೆ ಬಳಿಯ ಟೋಲ್ ಗೇಟ್ ನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸುರತ್ಕಲ್ ಹಾಗೂ ಸಮಾನ ಮನಸ್ಕ ಸಂಘಟಣೆ ವತಿಯಿಂದ ಇಂದಿನಿಂದ ಟೋಲ್ ಗೇಟ್ ಬಳಿ ಅನಿರ್ಧಿಷ್ಟಾವಧಿ

ಸುರತ್ಕಲ್ ಟೋಲ್ ಗೇಟ್ ಬಳಿ ನಿಷೇದಾಜ್ಞೆ ಜಾರಿ – ಕಮಿಷನರ್ ಶಶಿಕುಮಾರ್‌ ಆದೇಶ Read More »