ಕರಾವಳಿ

ಮಂಗಳೂರು: ಕಾಂತಾರ ಸಿನಿಮಾ ನೋಡಿ ಪ್ರೇರಿತಗೊಂಡ ಯುವತಿ|ಪಂಜುರ್ಲಿಯಂತೆ ವೇಷ ಧರಿಸಿದ ವೀಡಿಯೋ ವೈರಲ್

ಸಮಗ್ರ ನ್ಯೂಸ್: ಕಾಂತಾರ ಸಿನೇಮಾ ನೋಡಿ ಪ್ರೇರಿತಗೊಂಡ ಯುವತಿಯೊಬ್ಬಳು ಚಿತ್ರದಲ್ಲಿರುವಂತೆ ಪಂಜುರ್ಲಿಯಂತೆ ವೇಷ ಧರಿಸಿ ವೀಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡಿ ಕೆಂಗಣ್ಣಿಗೆ ಗುರಿಯಾಗಿದ್ದಾಳೆ. ಕಾಂತಾರ ಸಿನಿಮಾವನ್ನು ನೋಡಿದ ಈ ಯುವತಿ ​ ಪಂಜುರ್ಲಿಯಂತೆ ವೇಷ ಧರಿಸಿ ಕುಣಿದು ಕುಪ್ಪಳಿಸಿ ರೀಲ್ಸ್​ ಮಾಡಿದ್ದಾಳೆ. ವೃತ್ತಿಯಲ್ಲಿ ಮೇಕಪ್​ ಆರ್ಟಿಸ್ಟ್​ ಆಗಿರುವ ಶ್ವೇತಾ ರೆಡ್ಡಿ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವೀಡಿಯೊ ಹಂಚಿಕೊಂಡ ಬಳಿಕ ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಾಂತಾರ ಸಿನಿಮಾದ ವರಾಹ ರೂಪಂ ಹಾಡಿಗೆ […]

ಮಂಗಳೂರು: ಕಾಂತಾರ ಸಿನಿಮಾ ನೋಡಿ ಪ್ರೇರಿತಗೊಂಡ ಯುವತಿ|ಪಂಜುರ್ಲಿಯಂತೆ ವೇಷ ಧರಿಸಿದ ವೀಡಿಯೋ ವೈರಲ್ Read More »

ಮಂಗಳೂರು: ಅತಿಯಾದ ಸಂಶಯ| ಪತ್ನಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿದ ಪತಿ

ಸಮಗ್ರ ನ್ಯೂಸ್: ಪತ್ನಿಯ ಮೇಲೆ ಅತಿಯಾದ ಸಂಶಯದಿಂದ ವ್ಯಕ್ತಿಯೊಬ್ಬ ಪತ್ನಿಯನ್ನ ಕತ್ತು ಹಿಸುಕಿ ಕೊಂದು ನಂತರ ತಾನೂ ತೋಟದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ನಡೆದಿದೆ. ಪಿಲಾರು ನಿವಾಸಿಗಳಾದ ಶೋಭಾ ಪೂಜಾರಿ (45) ಕೊಲೆಯಾದ ಮಹಿಳೆ ಮತ್ತು ಅಕೆಯ ಪತಿ ಶಿವಾನಂದ ಪೂಜಾರಿ (55)ಆತ್ಮಹತ್ಯೆ ಮಾಡಿಕೊಂಡವರು. ಬೆಳಗ್ಗೆ ಹತ್ತು ಗಂಟೆ ವೇಳೆಗೆ ಶೋಭಾ ಅವರು ಮನೆ ಹತ್ತಿರದ ಇನ್ನೂರು ಗುತ್ತು ಕುಟುಂಬಸ್ಥರ ಮನೆಯಿಂದ ಗೊಬ್ಬರ

ಮಂಗಳೂರು: ಅತಿಯಾದ ಸಂಶಯ| ಪತ್ನಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿದ ಪತಿ Read More »

ಬೆಳ್ತಂಗಡಿ: ರಸ್ತೆ ಗುಂಡಿಗಳಲ್ಲಿ ದೀಪ ಬೆಳಗಿತು.!

ಸಮಗ್ರ ನ್ಯೂಸ್: ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ, ಜನಪ್ರತಿನಿಧಿಗಳ ಕಾರ್ಯ ವೈಖರಿಯನ್ನು ಖಂಡಿಸಿ ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೂ ಸಮಾನ ಮನಸ್ಕರ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಆಚರಣೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆಯಿತು. ಬುಧವಾರ ಸಂಜೆ ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ , ಸಿಪಿಐ(ಎಂ)

ಬೆಳ್ತಂಗಡಿ: ರಸ್ತೆ ಗುಂಡಿಗಳಲ್ಲಿ ದೀಪ ಬೆಳಗಿತು.! Read More »

ಇಂದಿನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೋಲ್ವೋ ಬಸ್ ಸಂಚಾರ

ಸಮಗ್ರ ನ್ಯೂಸ್: ಮಂಗಳೂರು ನಗರದ ಬಿಜೈ ಸರಕಾರಿ ಬಸ್ ನಿಲ್ದಾಣ ಮತ್ತು ಮಣಿಪಾಲದಿಂದ ಬಜ್ಪೆ ಕೆಂಜಾರಿನಲ್ಲಿರುವ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ಕ್ಕೆ ಅ.27ರಿಂದ ಸರಕಾರಿ ವೋಲ್ವೊ ಬಸ್ ಸಂಚಾರ ಆರಂಭಗೊಳ್ಳಲಿದೆ ಎಂದು ತಿಳಿದು ಬಂದಿದೆ. ಹಲವು ವರ್ಷಗಳಿಂದಲೇ ಮಂಗಳೂರು ವಿಮಾನ ನಿಲ್ದಾಣಕ್ಕೆ ಸರಕಾರಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಯು ಇತ್ತು. ಅದರಂತೆ ಸಂಚಾರ ಆರಂಭಿಸಿದ್ದರೂ ಕೂಡ ಆದಾಯದ ಕೊರತೆಯ ನೆಪದಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ಬೇಡಿಕೆ ಮತ್ತಷ್ಟು ತೀವ್ರಗೊಂಡ ಹಿನ್ನಲೆಯಲ್ಲಿ ಸಾರಿಗೆ ಸಚಿವ

ಇಂದಿನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೋಲ್ವೋ ಬಸ್ ಸಂಚಾರ Read More »

ಪುತ್ತೂರು: ನಡುರಸ್ತೆಯಲ್ಲಿ ರಿಕ್ಷಾ ನಿಲ್ಲಿಸಿ ಮದ್ಯಪಾನ ಮಾಡಿ ನಿದ್ರಿಸಿದ ಚಾಲಕ.!

ಸಮಗ್ರ ನ್ಯೂಸ್: ಪುತ್ತೂರು-ದರ್ಬೆ ರಸ್ತೆಯ ಕಲ್ಲಾರೆ ಎಂಬಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ ವಾಹನವನ್ನು ನಡುರಸ್ತೆಯಲ್ಲಿ ನಿಲ್ಲಿಸಿ ಮದ್ಯಪಾನ ಮಾಡಿ ಮಲಗಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಕಲ್ಲಾರೆ ಧನ್ವಂತ್ರಿ ಆಸ್ಪತ್ರೆ ಎದುರು ಆಟೋ ಚಾಲಕ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕುಡಿದು ಮಲಗಿದ್ದನ್ನು ಗಮನಿಸಿದ ಸಾರ್ವಜನಿಕರು ಪುತ್ತೂರು ಟ್ರಾಫಿಕ್ ಪೊಲೀಸರಿಗೆ ಮಾಹಿತಿ ನೀಡಿ ಅಪಾಯ ತಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದಾಗ ಆಟೋ ಚಾಲಕ ಪಾನಮತ್ತನಾಗಿದ್ದ. ಸಂಚಾರ ಪೊಲೀಸರು ಆಟೊ

ಪುತ್ತೂರು: ನಡುರಸ್ತೆಯಲ್ಲಿ ರಿಕ್ಷಾ ನಿಲ್ಲಿಸಿ ಮದ್ಯಪಾನ ಮಾಡಿ ನಿದ್ರಿಸಿದ ಚಾಲಕ.! Read More »

ಮಂಗಳೂರು: ದೀಪಾವಳಿ ಆಫರ್| ಫ್ಲಿಪ್‌ಕಾರ್ಟ್‌ನಿಂದ ವ್ಯಕ್ತಿಯೊಬ್ಬರು ಲ್ಯಾಪ್‌ಟಾಪ್ ಬದಲು ಕಲ್ಲು ಡೆಲಿವರಿ

ಸಮಗ್ರ ನ್ಯೂಸ್: ಫ್ಲಿಪ್‌ಕಾರ್ಟ್‌ನಿಂದ ವ್ಯಕ್ತಿಯೊಬ್ಬರು ಲ್ಯಾಪ್‌ಟಾಪ್ ಆರ್ಡರ್ ಮಾಡಿದ್ದು, ಇದರ ಬದಲಾಗಿ ಅವರಿಗೆ ದೊಡ್ಡ ಕಲ್ಲು ಮತ್ತು ಇ-ತ್ಯಾಜ್ಯ ಬಂದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ತಮಗೆ ಮೋಸವಾಗಿರುವ ವಿಚಾರವನ್ನು ಮಂಗಳೂರಿನ ಚಿನ್ಮಯ ರಮಣ ಟ್ವಿಟರ್‌ ನಲ್ಲಿ ಹಂಚಿಕೊಂಡಿದ್ದು, ನಾನು ಲ್ಯಾಪ್‌ಟಾಪ್‌ ಆರ್ಡರ್ ಮಾಡಿದ್ದೆ ಬದಲಾಗಿ ದೊಡ್ಡ ಕಲ್ಲು ಮತ್ತು ಇ-ತ್ಯಾಜ್ಯವನ್ನು ಸ್ವೀಕರಿಸಿದೆ! ಫ್ಲಿಪ್‌ಕಾರ್ಟ್‌ನಲ್ಲಿ ದೀಪಾವಳಿ ಮಾರಾಟದ ಸಮಯದಲ್ಲಿ!” ಎಂದು ಬರೆದಿದ್ದಾರೆ. ಇನ್ನು ಬಾಕ್ಸ್ ತೆರೆಯುವ ವಿಡಿಯೋವನ್ನು ಕೂಡ ಅವರು ಪೋಸ್ಟ್ ಮಾಡಿದ್ದು, ಉತ್ಪನ್ನವು ತೆರೆದ ಬಾಕ್ಸ್ ವಿತರಣಾ

ಮಂಗಳೂರು: ದೀಪಾವಳಿ ಆಫರ್| ಫ್ಲಿಪ್‌ಕಾರ್ಟ್‌ನಿಂದ ವ್ಯಕ್ತಿಯೊಬ್ಬರು ಲ್ಯಾಪ್‌ಟಾಪ್ ಬದಲು ಕಲ್ಲು ಡೆಲಿವರಿ Read More »

ಮಂಗಳೂರು: ಹೆಸರು‌ಬೇಳೆ, ಐಸ್ ಕ್ರೀಂ ತಿಂದು‌ ಫುಡ್ ಪಾಯ್ಸನ್| ನಾಲ್ವರು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಹೆಸರುಬೇಳೆ ಮತ್ತು ಐಸ್ ಕ್ರೀಂ ಸೇವಿಸಿ ಫುಡ್​ ಪಾಯ್ಸನ್ ಗೊಳಗಾದ ನಾಲ್ವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಪ್ಪು ಬಪ್ಪಾಲ್‌ನ ನಿವಾಸಿಗಳಾದ ಅರವಿಂದ ರಾವ್ (52), ಪತ್ನಿ ಪ್ರಭಾವತಿ (45) ಮತ್ತು ಮಕ್ಕಳಾದ ಸೌರಭ್ (20) ಪ್ರತೀಕ್ (18) ಅನಾರೋಗ್ಯ ಹೊಂದಿದ್ದಾರೆ. ಫುಡ್​ ಪಾಯಿಸನ್​ ಆಗಿ ಅಸ್ವಸ್ಥಗೊಂಡವರುಇವರು ನಿನ್ನೆ ರಾತ್ರಿ ಮಲಗುವ ಮೊದಲು ಹೆಸರುಬೇಳೆ ಮತ್ತು ಐಸ್ ಕ್ರೀಂ ತಿಂದಿದ್ದರು. ಆ ಬಳಿಕ ವಾಂತಿ ಶುರುವಾಗಿದೆ. ಇಂದು ಬೆಳಿಗ್ಗೆ ಮನೆ ಬಾಗಿಲನ್ನು ತೆರೆಯದಿರುವುದನ್ನು ಗಮನಿಸಿದ ಸಂಬಂಧಿಕರು

ಮಂಗಳೂರು: ಹೆಸರು‌ಬೇಳೆ, ಐಸ್ ಕ್ರೀಂ ತಿಂದು‌ ಫುಡ್ ಪಾಯ್ಸನ್| ನಾಲ್ವರು ಆಸ್ಪತ್ರೆಗೆ ದಾಖಲು Read More »

ಮಂಗಳೂರು: ಕುಡಿದ ಅಮಲಿನಲ್ಲಿ ರಂಗೋಲಿ ಮೆಟ್ಟಿ ವಿರೂಪಗೊಳಿಸಿದ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ಅಪಾರ್ಟ್‌ಮೆಂಟ್‌ವೊಂದರಲ್ಲಿ ಕುಡಿದ ಅಮಲಿನಲ್ಲಿದ್ದ ವಿದ್ಯಾರ್ಥಿಗಳು ರಂಗೋಲಿಯನ್ನು ವಿರೂಪಗೊಳಿಸಿದ ಘಟನೆ ನಗರದ ಬಿಜೈನಲ್ಲಿ ನಡೆದಿದೆ. ದೀಪಾವಳಿ ಹಬ್ಬಕ್ಕೆ ಶುಭಾಶಯ ಕೋರಿ ಅಪಾರ್ಟ್‌ಮೆಂಟ್ ನಿವಾಸಿಗಳು ರಂಗೋಲಿ ಹಾಕಿದ್ದರು. ಆದರೆ ಕೇರಳ ಮೂಲದವರೆನ್ನಲಾದ ಕೆಲವು ವಿದ್ಯಾರ್ಥಿಗಳು ಈ ರಂಗೋಲಿಯನ್ನು ಮೆಟ್ಟಿ ಅದನ್ನು ವಿರೂಪಗೊಳಿಸಿ ದುರ್ವರ್ತನೆ ತೋರಿದ್ದಾರೆ. ಕೈಯಲ್ಲಿ ಮದ್ಯದ ಬಾಟಲಿ ಹಿಡಿದುಕೊಂಡು ಒಬ್ಬ ವಿದ್ಯಾರ್ಥಿ ರಂಗೋಲಿ ಬಳಿ ನಿಂತಿದ್ದು, ಇನ್ನೊಬ್ಬ ರಂಗೋಲಿಯನ್ನು ಮೆಟ್ಟುತ್ತಿದ್ದಾನೆ. ಅಪಾರ್ಟ್‌ಮೆಂಟ್ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ

ಮಂಗಳೂರು: ಕುಡಿದ ಅಮಲಿನಲ್ಲಿ ರಂಗೋಲಿ ಮೆಟ್ಟಿ ವಿರೂಪಗೊಳಿಸಿದ ವಿದ್ಯಾರ್ಥಿಗಳು Read More »

ಶಿರಾಡಿ ಘಾಟ್ ರಸ್ತೆ ಅವ್ಯವಸ್ಥೆ| ಸಿಎಂ ಬೊಮ್ಮಾಯಿಗೆ ಸವಿವರ ಪತ್ರ ಬರೆದ ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆ| ಖಾವಂದರ ಪತ್ರದ ಒಕ್ಕಣೆ ಏನ್ಗೊತ್ತಾ?

ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಟ್ಟಗಳ ರಸ್ತೆಯಲ್ಲಿ ಸುಗಮ ಸಾರಿಗೆ ವ್ಯವಸ್ಥೆಗೆ ಶಾಶ್ವತ ಪರಿಹಾರ ಕಲ್ಪಸುವ ಕುರಿತಂತೆ ಸಿಎಂ ಬೊಮ್ಮಾಯಿಗೆ ರಾಜ್ಯ ಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಶಿರಾಡಿ ಘಾಟ್ ಕುರಿತಂತೆ ಸವಿವರವಾದ ಪತ್ರ ಬರೆದು ಸಮಸ್ಯೆಯನ್ನು ಮುಂದಿಟ್ಟಿದ್ದಾರೆ. ಪೂಜ್ಯ ಖಾವಂದರ ಪತ್ರದಲ್ಲೇನಿದೆ? ಓದಿ… “ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ನಮಗೆ ಈ ದಿನ ದಕ್ಷಿಣಕನ್ನಡ ಟ್ರಕ್ ಮಾಲೀಕರ ಅಸೋಸಿಯೇಶನ್(ರಿ)ನಿಂದ ಒಂದು

ಶಿರಾಡಿ ಘಾಟ್ ರಸ್ತೆ ಅವ್ಯವಸ್ಥೆ| ಸಿಎಂ ಬೊಮ್ಮಾಯಿಗೆ ಸವಿವರ ಪತ್ರ ಬರೆದ ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆ| ಖಾವಂದರ ಪತ್ರದ ಒಕ್ಕಣೆ ಏನ್ಗೊತ್ತಾ? Read More »

ಮಂಗಳೂರು: ವಾಕಿಂಗ್ ವೇಳೆ ಲಾರಿ ಢಿಕ್ಕಿಯಾಗಿ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ , ಮುಂಜಾನೆ ಲಾರಿಯೊಂದು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ. ಅ.೨೬ ರ ಮುಂಜಾನೆ ಅಶೋಕನಗರದ ನಿವಾಸಿ ಎನ್ನಲಾದ ಸುಮಾರು 40-45 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ತನ್ನ ಆ್ಯಕ್ಟಿವಾ ದ್ವಿಚಕ್ರ ವಾಹನವನ್ನು ಕೊಟ್ಟಾರ ಚೌಕಿಯಲ್ಲಿ ರಸ್ತೆ ಪಕ್ಕ ನಿಲ್ಲಿಸಿ ವಾಕಿಂಗ್ ನಿರತರಾಗಿದ್ದರು. ಈ ವೇಳೆ ಹರ್ಯಾಣದ ನೋಂದಣಿ ಹೊಂದಿದ ಲಾರಿ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ. ಇದರಿಂದ ಪಾದಚಾರಿ ವ್ಯಕ್ತಿಯು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಮಂಗಳೂರು: ವಾಕಿಂಗ್ ವೇಳೆ ಲಾರಿ ಢಿಕ್ಕಿಯಾಗಿ ವ್ಯಕ್ತಿ ಸಾವು Read More »