ಕರಾವಳಿ

ಉಪ್ಪಿನಂಗಡಿ: ಬಸ್ ನಿಲ್ಲಿಸಿಲ್ಲವೆಂದು‌ ಬಸ್ ಗೆ ಕಲ್ಲೆಸೆದ ಕುಡುಕ ಮಹಾಶಯ!!

ಸಮಗ್ರ ನ್ಯೂಸ್: ಕೆಎಸ್‌ಆರ್‌ಟಿಸಿ ಚಾಲಕ ಬಸ್ಸನ್ನು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನ ಗಾಜಿಗೆ ಕಲ್ಲೆಸೆದು ಪುಡಿಗಟ್ಟಿದ ಘಟನೆ ಸೋಮವಾರದಂದು ಸಂಜೆ ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕನೋರ್ವ ಮದ್ಯದ ಅಮಲಿನಲ್ಲಿದ್ದು ಬಸ್ ನಿಲ್ಲಿಸಲು ಸೂಚಿಸಿದ್ದಾನೆ. ಆದರೆ, ಬಸ್ ನಿಲ್ಲಿಸದೇ ಮುಂದೆ ಸಾಗಿದ್ದು, ತದನಂತರ ಬಸ್‌ನಿಂದ ಕೆಳಗಿಳಿದ ಕೂಡಲೇ ಬಸ್‌ನ ಗಾಜುಗೆ ಕಲ್ಲು ಎಸೆದು ಹಾನಿ ಮಾಡಿದ್ದಾನೆ ಎನ್ನಲಾಗಿದೆ.

ಉಪ್ಪಿನಂಗಡಿ: ಬಸ್ ನಿಲ್ಲಿಸಿಲ್ಲವೆಂದು‌ ಬಸ್ ಗೆ ಕಲ್ಲೆಸೆದ ಕುಡುಕ ಮಹಾಶಯ!! Read More »

ಬಂಟ್ವಾಳ: ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅ.24 ರಂದು ಮಂಚಿಯಲ್ಲಿ ನಡೆದಿದೆ. ಮಂಚಿ ಗ್ರಾಮದ ಮಣ್ಣಗುಳಿ ನಿವಾಸಿ ರತಿ ಕುಲಾಲ್ ಅವರ ಮಗಳು ಭವ್ಯಾ (20) ಮೃತಪಟ್ಟ ವಿದ್ಯಾರ್ಥಿನಿ. ಇವರು ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕೆಲ ದಿನಗಳಿಂದ ತಲೆನೋವು ಎಂದು ಸ್ಥಳೀಯ ಖಾಸಗಿ ವೈದ್ಯರ ಬಳಿ ಪರೀಕ್ಷೆ ಮಾಡಿ ಮದ್ದು ಪಡೆಯುತ್ತಿದ್ದಳು. ಆದರೆ ಆದಿತ್ಯವಾರ ರಾತ್ರಿ ಸುಮಾರು 7 ಗಂಟೆ ವೇಳೆ ತಲೆ ನೋವು

ಬಂಟ್ವಾಳ: ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು Read More »

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ| ಬಾವಿಗೆ ಹಾರಲು ಯತ್ನಿಸಿದ ಬಾಲಕಿ

ಸಮಗ್ರ ನ್ಯೂಸ್: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅಪ್ರಾಪ್ತ ಯುವತಿಗೂ ಕಳೆಂಜ ಗ್ರಾಮದ ಯುವಕನಿಗೂ ಕಳೆದ ಕೆಲವು ತಿಂಗಳುಗಳಿಂದ ಇನ್ ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಬಳಿಕ ಆಕೆಯ ದೂರವಾಣಿ ನಂಬರ್ ಪಡೆದು ಆಕೆಯೊಂದಿಗೆ ಚಾಟ್ ಮಾಡುತ್ತಿದ್ದ ಪರಿಚಯ ಪ್ರೀತಿಯಾಗಿ, ಆಕೆಯನ್ನು ಮದುವೆಯಾಗುತ್ತೇನೆಂದು ನಂಬಿಸಿ ಎರಡು ಬಾರಿ ಲೈಂಗಿಕವಾಗಿಯೂ ಬಳಸಿಕೊಂಡಿದ್ದ ಎಂದು ಆರೋಪಿಸಲಾಗಿದೆ. ಇವರಿಬ್ಬರ ದೂರವಾಣಿ ಚಾಟ್ ಆಕೆಯ ಸಂಬಂಧಿಕರಿಗೆ

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ| ಬಾವಿಗೆ ಹಾರಲು ಯತ್ನಿಸಿದ ಬಾಲಕಿ Read More »

ಕಾನೂನು ಕ್ರಮಕ್ಕೆ ಸೂಚಿಸಿದ ಸಚಿವ ಎಸ್.ಅಂಗಾರ| ಆರೋಪಿಗಳ ಪರ ವಾದಕ್ಕೆ ಖಂಡನೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದಲ್ಲಿ ಬೆಡ್‌ಶೀಟ್‌ ಮಾರಾಟದ ನೆಪದಲ್ಲಿ ಬಂದ ಇಬ್ಬರು ಯುವಕರು ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದರೆ ಕೆಲವು ಕಾಂಗ್ರೆಸ್‌ ನಾಯಕರು ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳ ಪರವಾಗಿ ವಾದಿಸುತ್ತಿರುವುದು ಖಂಡನೀಯ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ತಿಳಿಸಿದ್ದಾರೆ. ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ. ಕೆಲವು ಕಾಂಗ್ರೆಸ್‌ ನಾಯಕರು

ಕಾನೂನು ಕ್ರಮಕ್ಕೆ ಸೂಚಿಸಿದ ಸಚಿವ ಎಸ್.ಅಂಗಾರ| ಆರೋಪಿಗಳ ಪರ ವಾದಕ್ಕೆ ಖಂಡನೆ Read More »

ಮಂಗಳೂರು: ಕ್ಯಾನ್ಸರ್ ರೋಗಿಗಳಿಗೆ ಪುಟ್ಟ ಕಂದಮ್ಮನ ಕೂದಲು ದಾನ ನೀಡಿದ ಪೋಷಕರು

ಸಮಗ್ರ ನ್ಯೂಸ್: ಎರಡು ವರ್ಷ ನಾಲ್ಕು ತಿಂಗಳು ವಯಸ್ಸಿನ ಮಗುವಿನ ಕೂದಲನ್ನು ಪೋಷಕರು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾದ ಘಟನೆ ಮಂಗಳೂರು ಜಿಲ್ಲೆಯಲ್ಲಿ ನಡೆದಿದೆ. ನಗರದ ಮರೋಳಿಯ ಸುಮಲತಾ ಮತ್ತು ಭರತ್ ಕುಲಾಲ್ ಎಂಬುವರ ಪುತ್ರಿ ಆದ್ಯ ಕುಲಾಲ್ ಎಂಬ ಮಗುವಿನ ಕೂದಲನ್ನು ದಾನ ಮಾಡಲಾಗಿದೆ. ಕ್ಯಾನ್ಸರ್ ರೋಗಿಗಳಿಗೆ ವಿಗ್ ಮಾಡಲು ತನ್ನ ಕೂದಲನ್ನು ದಾನ ಮಾಡಿರುವ ಈ ಮಗು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಕುರಿತಾದ ಸುದ್ದಿಯನ್ನು ಮಂಗಳೂರು ದಕ್ಷಿಣ ಶಾಸಕ

ಮಂಗಳೂರು: ಕ್ಯಾನ್ಸರ್ ರೋಗಿಗಳಿಗೆ ಪುಟ್ಟ ಕಂದಮ್ಮನ ಕೂದಲು ದಾನ ನೀಡಿದ ಪೋಷಕರು Read More »

ಬಂಟ್ವಾಳ: ಹೃದಯಾಘಾತಕ್ಕೆ ಒಳಗಾದ ವ್ಯಕ್ತಿಯನ್ನು ರಕ್ಷಿಸಿದ ಉಪನ್ಯಾಸಕಿ

ಸಮಗ್ರ ನ್ಯೂಸ್: ಬೆಂಗಳೂರಿಗೆ ಹೊರಟಿದ್ದ ಉಪನ್ಯಾಸಕಿಯೊಬ್ಬರು ತಾವು ತೆರಳಬೇಕಿದ್ದ ರೈಲನ್ನು ಬಿಟ್ಟು ಅದೇ ರೈಲಿನಲ್ಲಿ ತೆರಳಲು ಬಂದು ಅಸ್ವಸ್ಥಗೊಂಡು ಬಿದ್ದ ಪ್ರಯಾಣಿಕರೊಬ್ಬರ ಪ್ರಾಣ ಉಳಿಸಿದ ಘಟನೆ ಬಂಟ್ವಾಳ ನಿಲ್ದಾಣದಲ್ಲಿ ನಡೆದಿದೆ. ಅವರಿಬ್ಬರು ಕಾಕತಾಳೀಯವಾಗಿ ಮತ್ತೆ ಆಸ್ಪತ್ರೆಯಲ್ಲಿ ಮುಖಾಮುಖೀಯಾಗಿ ವೈದ್ಯರಿಂದ ಪ್ರಶಂಸಾ ಪತ್ರ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನೆಲ್ಯಾಡಿಯಲ್ಲಿರುವ ಮಂಗಳೂರು ವಿ.ವಿ. ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ಬಿ.ಸಿ.ರೋಡು ನಿವಾಸಿ ಹೇಮಾವತಿ ಅವರು ಸೆ. 28ರ ರಾತ್ರಿ ಬಂಟ್ವಾಳದಿಂದ ಬೆಂಗಳೂರಿನಲ್ಲಿರುವ ಮಗಳ ಮನೆಗೆ ತೆರಳಲು ರೈಲಿಗಾಗಿ ಕಾಯುತ್ತಿದ್ದರು. ರೈಲು ಆಗಮಿಸುವಷ್ಟರಲ್ಲಿ

ಬಂಟ್ವಾಳ: ಹೃದಯಾಘಾತಕ್ಕೆ ಒಳಗಾದ ವ್ಯಕ್ತಿಯನ್ನು ರಕ್ಷಿಸಿದ ಉಪನ್ಯಾಸಕಿ Read More »

ಇನ್ಮುಂದೆ ಮನೆ ಬಾಗಿಲಿಗೇ ಬರಲಿದೆ ಬಂಗುಡೆ, ಬೂತಾಯಿ!! | ಏನಿದು ಸ್ಟೋರಿ ಗೊತ್ತಾ? ಇಲ್ಲಿದೆ ಮಾಹಿತಿ…

ಸಮಗ್ರ ನ್ಯೂಸ್: ದೇಶದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸಾರ್ವಜನಿಕ ಸಹಭಾಗಿತ್ವ ಯೋಜನೆಯಡಿ ಜನಸಾಮಾನ್ಯರ ಮನೆ ಬಾಗಿಲಿಗೆ ತಾಜಾ ಮೀನು ತಲುಪಿಸುವ ಯೋಜನೆಯನ್ನು ಮೀನುಗಾರಿಕಾ ಇಲಾಖೆ ಹಮ್ಮಿಕೊಂಡಿದೆ. ಸೀಗರ್ ಸೀಫುಡ್ ಲಾಜಿಸ್ಟಿಕ್ಸ್ ಸಂಸ್ಥೆಯು (Sheegr Seafood and Logistics Pvt.ltd ) ಈ ಯೋಜನೆಯ ಉಸ್ತುವಾರಿ ಹೊತ್ತುಕೊಂಡಿದೆ. ತಾಜಾ ಮೀನಿನ ಜೊತೆಗೆ ಮೀನಿನ ಉತ್ಪನ್ನಗಳನ್ನೂ ಶೀಘ್ರವಾಗಿ ಮನೆ ಬಾಗಿಲಿಗಿಗೆ ತಲುಪಿಸುವ ಯೋಜನೆ ಹಮ್ಮಿಕೊಂಡಿದೆ. ಮಂಗಳೂರು ಮತ್ತು ಮಲ್ಪೆ ಮೀನುಗಾರಿಕಾ ಬಂದರುಗಳಿಂದ ತಾಜಾ ಮೀನನ್ನು ವಿಮಾನದ ಮೂಲಕ ಬೆಂಗಳೂರಿಗೆ ತಲುಪಿಸಿ,

ಇನ್ಮುಂದೆ ಮನೆ ಬಾಗಿಲಿಗೇ ಬರಲಿದೆ ಬಂಗುಡೆ, ಬೂತಾಯಿ!! | ಏನಿದು ಸ್ಟೋರಿ ಗೊತ್ತಾ? ಇಲ್ಲಿದೆ ಮಾಹಿತಿ… Read More »

ಮಂಗಳೂರು ವಿವಿ ನ್ಯೂನತೆ ಸರಿಪಡಿಸುವಂತೆ ಎಬಿವಿಪಿ ಪ್ರತಿಭಟನೆ

ಸಮಗ್ರ ನ್ಯೂಸ್: ಮಂಗಳೂರು ವಿ.ವಿ ಯಿಂದ ಹಲವಾರು ಸಮಸ್ಯೆಗಳನ್ನು ವಿದ್ಯಾರ್ಥಿಗಳು ಎದುರಿಸುತ್ತಿದ್ದು,ಬಗೆಹರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶುಕ್ರವಾರ ಕ್ಲಾಕ್ ಟವರ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. UUCMS ತಂತ್ರಾಂಶದ ಲೋಪದೋಶದಿಂದ NEP ಯ ಪ್ರಥಮ ವರ್ಷದ ಪದವಿ ಮುಗಿಸಿರುವ ವಿದ್ಯಾರ್ಥಿಗಳ ಮೌಲ್ಯಮಾಪನವನ್ನು ಮಾಡಿ, ಫಲಿತಾಂಶವನ್ನು ನೀಡದೆ ವಿದ್ಯಾರ್ಥಿಗಳು ಗೊಂದಲದಲ್ಲಿ ಶಿಕ್ಷಣವನ್ನು ಮುಂದುವರಿಸುವಂತೆ ಆಗಿದೆ . ವಿದ್ಯಾರ್ಥಿಗೆ ದೊರೆಯುವ ಎಲ್ಲಾ ಸೌಲಭ್ಯಗಳಿಂದ ವಿದ್ಯಾರ್ಥಿಗಳು ವಂಚಿತರಾಗುವಂತೆ ಹಾಗೂ ಬೇರೆ ಕಾಲೇಜಿಗೆ ವರ್ಗಾವಣೆಯನ್ನು ವಿದ್ಯಾರ್ಥಿ ಪಡೆಯದ ರೀತಿ

ಮಂಗಳೂರು ವಿವಿ ನ್ಯೂನತೆ ಸರಿಪಡಿಸುವಂತೆ ಎಬಿವಿಪಿ ಪ್ರತಿಭಟನೆ Read More »

ಕಡಬ: ಕಂಬಳಿ ಮಾರಲು ಬಂದವರಿಂದ ಒಂಟಿ ಮಹಿಳೆಯ ಅತ್ಯಾಚಾರಕ್ಕೆ ಯತ್ನ| ಕಿರುಚಾಟಕ್ಕೆ ಪರಾರಿಯಾದವರ‌ ಕಾರು ಅಪಘಾತ

ಸಮಗ್ರ ನ್ಯೂಸ್: ಕಂಬಳಿ ಮಾರುವ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿದ ಘಟನೆ ಕಡಬದ ಕಾಣಿಯೂರು ಸಮೀಪದ ದೋಳ್ಪಾಡಿ ಎಂಬಲ್ಲಿ ನಡೆದಿದೆ. ಮಹಿಳೆ ಕಿರುಚಾಡಿಕೊಂಡಾಗ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಳಲಿಯ ಅಡ್ಡೂರು ನಿವಾಸಿಗಳಾದ ರಫೀಕ್ ಹಾಗೂ ರಮಿಯಾಸುದ್ದಿನ್ ಅಪಘಾತದಲ್ಲಿ ಗಾಯಗೊಂಡವರು. ಇವರ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಮಹಿಳೆ ದೂರು ನೀಡಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ: ಕಂಬಳಿ ಮಾರಲು ಬಂದವರಿಂದ ಒಂಟಿ ಮಹಿಳೆಯ ಅತ್ಯಾಚಾರಕ್ಕೆ ಯತ್ನ| ಕಿರುಚಾಟಕ್ಕೆ ಪರಾರಿಯಾದವರ‌ ಕಾರು ಅಪಘಾತ Read More »

ಸುಳ್ಯ: ರಾತ್ರೋರಾತ್ರಿ ತಲೆ ಎತ್ತಿದ ವೈನ್ ಶಾಪ್| ಗ್ರಾಮೀಣ ಜನರಿಗೆ ಫುಲ್ ಶಾಕ್

ಸಮಗ್ರ ನ್ಯೂಸ್: ಹೋರಾಟಗಾರರು ನಮ್ಮೂರಲ್ಲಿ ಮದ್ಯದ ಅಂಗಡಿ ಬೇಡ ಎಂದು ಹೋರಾಟ, ಪ್ರತಿಭಟನೆ ಮಾಡುತ್ತಿರುವಾಗಲೇ ಪಕ್ಕದ‌ ಊರಲ್ಲಿ ರಾತ್ರೋರಾತ್ರಿ ವೈನ್ ಶಾಪ್ ಒಂದು ತಲೆ‌ ಎತ್ತಿದ್ದು‌‌ ಗ್ರಾಮಸ್ಥರು ಫುಲ್ ಶಾಕ್ ಅನುಭವಿಸಿದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನಲ್ಲಿ ನಡೆದಿದೆ. ಕಳೆದೆರಡು ವಾರಗಳ ಹಿಂದೆ ಕೊಲ್ಲಮೊಗ್ರುವಿಗೆ 6 ಕಿ.ಮೀ ದೂರವಿರುವ ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯುವ ಬಗ್ಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಿದ್ದರು. ಗ್ರಾಮದ ಸಮಾನ ಮನಸ್ಕ ಜನರು ಒಟ್ಟಾಗಿ ಮದ್ಯದಂಗಡಿ ವಿರುದ್ದ ಮುಗಿಬಿದ್ದಿದ್ದರು.

ಸುಳ್ಯ: ರಾತ್ರೋರಾತ್ರಿ ತಲೆ ಎತ್ತಿದ ವೈನ್ ಶಾಪ್| ಗ್ರಾಮೀಣ ಜನರಿಗೆ ಫುಲ್ ಶಾಕ್ Read More »