ಕರಾವಳಿ

ಮಂಗಳೂರು: ಯುವದಂಪತಿ ನೇಣು ಬಿಗಿದ‌ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಯುವದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳೂರು ನಗರದ ಕಂಕನಾಡಿ‌ ಎಂಬಲ್ಲಿ ನಡೆದಿದೆ. ಇಲ್ಲಿನ ಅಡುಮರೋಳಿ ಎಂಬಲ್ಲಿ ಘಟನೆ ನಡೆದಿದ್ದು, ಪತಿ ಮಲ್ಲಿಕಾರ್ಜುನ್ ಮತ್ತು ಪತ್ನಿ ಸೌಮ್ಯ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಗಳು. ಮೃತ ಮಲ್ಲಿಕಾರ್ಜುನ್ ಹುಬ್ಬಳ್ಳಿ ಮೂಲದವರಾಗಿದ್ದು, ಸೌಮ್ಯ ಮಂಗಳೂರಿನವರಾಗಿದ್ದಾರೆ. ಮೃತ ದಂಪತಿ ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು ಎಂದು ಹೇಳಲಾಗಿದೆ. ಕಂಕನಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ಯುವದಂಪತಿ ನೇಣು ಬಿಗಿದ‌ ಸ್ಥಿತಿಯಲ್ಲಿ ಪತ್ತೆ Read More »

ಸುಳ್ಯದಲ್ಲಿ ಪತ್ತೆಯಾಯ್ತು ಟ್ರಾವಂಕೂರ್ ಅಳಿಲು

ಸಮಗ್ರ ನ್ಯೂಸ್: ದಕ್ಷಿಣ ಭಾರತದಲ್ಲಿ ಅಪರೂಪದ ಅಳಿಲು ಪ್ರಭೇದಗಳಲ್ಲಿ ಒಂದಾದ ಟ್ರಾವಂಕೂರು ಹಾರುವ ಅಳಿಲು ಸುಳ್ಯ ತಾಲೂಕಿನಲ್ಲಿ ಪತ್ತೆಯಾಗಿದೆ. ಇವು ನಿಶಾಚರಿ ಆಗಿರುವುದರಿಂದ ಕಾಣಸಿಗುವುದು ಅಪೂರ್ವ. ಪರಿಸರ ಸಂರಕ್ಷಕ ದೀಪಕ್ ಸುಳ್ಯ ಅವರ ತೋಟದಲ್ಲಿ ಈ ಅಳಿಲು ಪತ್ತೆಯಾಗಿದೆ. ಸ್ಥಳೀಯವಾಗಿ ಇದನ್ನು ದರಗು ಪಾಂಜ, ಚಿಕ್ಕ ಪಾಂಜ ಎಂದು ಕರೆಯುತ್ತಾರೆ. ಪಶ್ಚಿಮಘಟ್ಟದಲ್ಲಿ ಕಂಡುಬರುವ ಅಳಿವಿನಂಚಿನ ಪ್ರಾಣಿ ಪ್ರಭೇದಗಳಲ್ಲಿ ಇದೂ ಒಂದು. ಪಶ್ಚಿಮಘಟ್ಟದಲ್ಲಿ ದೈತ್ಯ ಹಾರುವ ಅಳಿಲು (ಇಂಡಿಯನ್ ಜೈಂಟ್) ಮತ್ತು ಟ್ರಾವಂಕೂರು ಹಾರುವ ಅಳಿಲು ಎಂಬ ಎರಡು

ಸುಳ್ಯದಲ್ಲಿ ಪತ್ತೆಯಾಯ್ತು ಟ್ರಾವಂಕೂರ್ ಅಳಿಲು Read More »

ಕಟೀಲಿಗೂ ವ್ಯಾಪಿಸಿದ ಶೀಘ್ರದರ್ಶನ ಪಿಡುಗು| ₹100ಕ್ಕೆ ಬೇಗ ದರ್ಶನ ಭಾಗ್ಯ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಅಧಿದೇವತೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಡಳಿತ ಮಂಡಳಿ ಮಾಡಿರುವ ಮತ್ತೊಂದು ನಿಯಮ ಈಗ ವಿವಾದಕ್ಕೆ ಕಾರಣವಾಗಿದೆ. ಪ್ರತಿನಿತ್ಯ ಸಾವಿರಾರು ಭಕ್ತರು ಯಾವುದೇ ನೂಕು ನುಗ್ಗಲು ಇಲ್ಲದೇ ಸಾವಕಾಶವಾಗಿ ಪಡೆಯುತ್ತಿದ್ದ ದುರ್ಗೆಯ ದರ್ಶನಕ್ಕೆ ಈಗ ಮೊತ್ತ ವಿಧಿಸಲಾಗಿದೆ. ಕ್ಷೇತ್ರದಲ್ಲಿ ಇದೀಗ ಶೀಘ್ರ ದರ್ಶನ ವ್ಯವಸ್ಥೆಯನ್ನು ಜಾರಿ ಮಾಡಲಾಗಿದ್ದು, ಶೀಘ್ರ ದರ್ಶನ ಪಡೆಯುವ ಪ್ರತಿಯೋರ್ವ ಭಕ್ತನು ನೂರು ರೂಪಾಯಿ ಪಾವತಿಸಿ ದೇವಸ್ಥಾನದ ಒಳಗೆ ಪ್ರವೇಶ ಮಾಡಬಹುದಾಗಿದೆ. ನವರಾತ್ರಿಯ ಬಳಿಕ ಈ ಹೊಸ ನಿಯಮವನ್ನು

ಕಟೀಲಿಗೂ ವ್ಯಾಪಿಸಿದ ಶೀಘ್ರದರ್ಶನ ಪಿಡುಗು| ₹100ಕ್ಕೆ ಬೇಗ ದರ್ಶನ ಭಾಗ್ಯ!! Read More »

ಸುಳ್ಯದಲ್ಲಿ ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡ್ತಿತ್ತು| ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಗೃಹಸಚಿವ ಆರಗ ಜ್ಞಾನೇಂದ್ರ

ಸಮಗ್ರ ನ್ಯೂಸ್: ಪಿಎಫ್​​ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ, ಪಿಎಫ್​​ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ತರಬೇತಿ ನೀಡುತ್ತಿದ್ದರು. ಈ ಬಗ್ಗೆ ಕೆಲವು ಮಾಹಿತಿ ಸಿಕ್ಕಿದ್ದು, ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದರು. ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ದೇಶಾದ್ಯಂತ ಪಿಎಫ್​ಐ ಕಚೇರಿ ಹಾಗೂ ಮುಖಂಡರ ಮೇಲೆ ಎನ್​ಐಎ ಮತ್ತು ಪೊಲೀಸರು

ಸುಳ್ಯದಲ್ಲಿ ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡ್ತಿತ್ತು| ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಗೃಹಸಚಿವ ಆರಗ ಜ್ಞಾನೇಂದ್ರ Read More »

ಪಿಲಿಕುಳದಲ್ಲಿ ಇರುವೆ ಕಾಟದಿಂದ‌ ಒದ್ದಾಡಿದ ಹಾವು|ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸ್ಪಷ್ಟನೆ

ಸಮಗ್ರ ನ್ಯೂಸ್: ಪಿಲಿಕುಳ ಜೈವಿಕ ಉದ್ಯಾನದೊಳಗಿರುವ ಹಾವಿನ ಗೂಡೊಂದರಲ್ಲಿ ಇರುವೆಗಳ ಬಾಧೆಗೊಳಗಾಗಿರುವ ಉರಗದ ಆರೋಗ್ಯ ಸ್ಥಿರವಾಗಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಇರುವೆಗಳು ಹಾವನ್ನು ಕಚ್ಚುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಚಾರ ತಿಳಿದು ಕೂಡಲೇ ಪ್ರಾಧಿಕಾರದ ಆಯುಕ್ತರು ಸಂಬಂಧಪಟ್ಟ ಹಿರಿಯ ವೈಜ್ಞಾನಿಕ ಅಧಿಕಾರಿ, ಪಶುಪಾಲನಾ ವೈದ್ಯಾಧಿಕಾರಿ ಮತ್ತು ಬಯಾಲಾಜಿಸ್ಟ್ ಜೊತೆಗೂಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಇರುವೆಗಳ ಬಾಧೆಗೆ ಒಳಗಾದ ಉರಗದ ಆರೋಗ್ಯವು ಸ್ಥಿರವಾಗಿದೆ ಎಂಬುದಾಗಿ ಪಶುಪಾಲನಾ ವೈದ್ಯಾಧಿಕಾರಿಯವರು ದೃಢೀಕರಿಸಿದ್ದಾರೆ. ಪ್ರಾಧಿಕಾರ

ಪಿಲಿಕುಳದಲ್ಲಿ ಇರುವೆ ಕಾಟದಿಂದ‌ ಒದ್ದಾಡಿದ ಹಾವು|ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸ್ಪಷ್ಟನೆ Read More »

ಪಿಲಿಕುಳ: ಇರುವೆ ಕಾಟದಿಂದ‌ ಒದ್ದಾಡಿದ ಹಾವು| ಸಿಬ್ಬಂದಿ ನಿರ್ಲಕ್ಷಕ್ಕೆ‌ ಆಕ್ರೋಶ

ಸಮಗ್ರ ನ್ಯೂಸ್: ಮಂಗಳೂರು ನಗರದ‌ ಪಿಲಿಕುಳ‌ ಜೈವಿಕ ಉದ್ಯಾನವನದಲ್ಲಿ ಇರುವೆ ಕಾಟದಿಂದ ಹಾವು ಒದ್ದಾಡಿತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪಿಲಿಕುಳ‌ ಜೈವಿಕ ಉದ್ಯಾನವನದಲ್ಲಿ ಪಟ್ಟೆ ಶೀಘ್ರಗಾಮಿ ಹಾವು ಇರುವೆ ಹಿಂಡಿನ ದಾಳಿಯಿಂದ ತಪ್ಪಿಸಿಕೊಳ್ಳಲು ಪರದಾಡಿದೆ. ಇರುವೆ ದಾಳಿಯಿಂದ ಹಾವು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದು, ಉದ್ಯಾನವನಕ್ಕೆ ಭೇಟಿ ನೀಡಿದ ಪ್ರವಾಸಿಗರು ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಬಿಟ್ಟಿದ್ದಾರೆ. ಇದೀಗ ವಿಡಿಯೋ ವೈರಲ್ ಆಗಿದ್ದು ಉದ್ಯಾನವನದ ಸಿಬ್ಬಂದಿಯ ನಿರ್ಲಕ್ಷ್ಯ ದ ಬಗ್ಗೆ ಜನರ ಆಕ್ರೋಶ

ಪಿಲಿಕುಳ: ಇರುವೆ ಕಾಟದಿಂದ‌ ಒದ್ದಾಡಿದ ಹಾವು| ಸಿಬ್ಬಂದಿ ನಿರ್ಲಕ್ಷಕ್ಕೆ‌ ಆಕ್ರೋಶ Read More »

ಸುಳ್ಯ: ನೆಹರೂ, ಕಾರಂತರ ಕಾರು ಚಾಲಕರಾಗಿದ್ದ ಮೋನಪ್ಪ ಗೌಡ ಕೊರಂಬಡ್ಕ ಇನ್ನಿಲ್ಲ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಹಾಗೂ ಸಾಹಿತಿ ಶಿವರಾಮ ಕಾರಂತರ ಕಾರು ಚಾಲಕರಾಗಿದ್ದ ಶತಾಯುಷಿ ಕನಕಮಜಲು ಗ್ರಾಮದ ಮೋನಪ್ಪ ಗೌಡ ಕೊರಂಬಡ್ಕ (102) ಅವರು ವಯೋಸಹಜ ಅಸೌಖ್ಯದಿಂದಾಗಿ ಇಂದು(ಅ.6) ಮುಂಜಾನೆ ನಿಧನರಾಗಿದ್ದಾರೆ. ಭಾರತದ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರೊಂದಿಗೆ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಗುರುತಿಸಿಕೊಂಡಿದ್ದು, ನೆಹರೂ ಅವರ ಕಾರು ಚಾಲಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪುತ್ರ, ಮೂವರು ಪುತ್ರಿಯರು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸುಳ್ಯ: ನೆಹರೂ, ಕಾರಂತರ ಕಾರು ಚಾಲಕರಾಗಿದ್ದ ಮೋನಪ್ಪ ಗೌಡ ಕೊರಂಬಡ್ಕ ಇನ್ನಿಲ್ಲ Read More »

ಮಂಗಳೂರು: ನಿಷೇಧದ ಹತಾಶೆ ನಡುವೆ ಪಿಎಫ್ಐನಿಂದ ರಸ್ತೆಯಲ್ಲಿ ಎಚ್ಚರಿಕೆ ಬರಹ

ಸಮಗ್ರ ನ್ಯೂಸ್: ಬ್ಯಾನ್ ಬೆನ್ನಲ್ಲೇ ರಸ್ತೆ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆ ಮೇಲೆ ಎಚ್ಚರಿಕೆಯ ಬರಹ ಬರೆಯಲಾಗಿದೆ. ಚಡ್ಡಿಗಳೇ ಎಚ್ಚರ -ಪಿಎಫ್‍ಐ ನಾವು ಮರಳಿ ಬರುತ್ತೇವೆ ಅಂತಾ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ. ಯಾರೋ ಕಿಡಿಗೇಡಿಗಳು ತಡ ರಾತ್ರಿ ರಸ್ತೆಯಲ್ಲಿ ಈ ರೀತಿ ಬರೆದಿದ್ದಾರೆ. ಸ್ಥಳಕ್ಕೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು,ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ನಿಷೇಧದ ಹತಾಶೆ ನಡುವೆ ಪಿಎಫ್ಐನಿಂದ ರಸ್ತೆಯಲ್ಲಿ ಎಚ್ಚರಿಕೆ ಬರಹ Read More »

ಸುಳ್ಯ: ಪೊಲೀಸಪ್ಪನೊಂದಿಗೆ ವಿವಾಹಿತ ಮಹಿಳೆಯ ಪಲ್ಲಂಗದಾಟ| ಗಂಡನಿಂದ ಹಿಗ್ಗಾಮುಗ್ಗ ಗೂಸಾ

ಸಮಗ್ರ ನ್ಯೂಸ್: ಲಾಡ್ಜ್ ಒಂದರಲ್ಲಿ ವಿವಾಹಿತ ಮಹಿಳೆಯೊಬ್ಬಳು ಪೊಲೀಸ್ ಅಧಿಕಾರಿಯೊಂದಿಗೆ ಪಲ್ಲಂಗದಾಟದಲ್ಲಿ ತೊಡಗಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಅ.2ರ ತಡರಾತ್ರಿ ಬೆಳಕಿಗೆ ಬಂದಿದೆ. ಸಿಕ್ಕಿಬಿದ್ದಾಕೆ ಮುಂದಿನ ವಿಧಾನಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ, ಪ್ರತಿಷ್ಠಿತ ವ್ಯಕ್ತಿಯೊಬ್ಬರ ಮಗಳು ಎನ್ನಲಾಗಿದ್ದು, ವಿಷಯ ತಿಳಿದ ಮಹಿಳೆಯ ಗಂಡ ಬಂದು ಪೊಲೀಸ್ ಅಧಿಕಾರಿಗೆ ಹಿಗ್ಗಾ ಮುಗ್ಗ ಗೂಸಾ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸುಳ್ಯ: ಪೊಲೀಸಪ್ಪನೊಂದಿಗೆ ವಿವಾಹಿತ ಮಹಿಳೆಯ ಪಲ್ಲಂಗದಾಟ| ಗಂಡನಿಂದ ಹಿಗ್ಗಾಮುಗ್ಗ ಗೂಸಾ Read More »

ಸುಳ್ಯ: ರಸ್ತೆ ದುರಸ್ತಿ ಮಾಡಿಕೊಡುವಂತೆ ಸ್ಥಳೀಯರಿಂದ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮಿತ್ತೂರು ಉಬರಡ್ಕ ಗ್ರಾಮದ ಕಟ್ಟಕೊಡಿ ಯಾವಟೆ ಸಂಪರ್ಕ ರಸ್ತೆ ಸಂಪೂರ್ಣವಾಗಿ ಹದಕ್ಕೆಟ್ಟು ಹೋಗಿದ್ದು ಇದನ್ನು ದುರಸ್ತಿ ಮಾಡಿಕೊಡುವಂತೆ ಸ್ಥಳೀಯರಿಂದ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ ನೀಡಲಾಯಿತು. ಮಿತ್ತೂರು ಉಬರಡ್ಕ ಗ್ರಾಮದ ಕಟ್ಟಕೊಡಿ ಯಾವಟೆ ಸಂಪರ್ಕ ರಸ್ತೆ ಸಂಪೂರ್ಣವಾಗಿ ಹದಕ್ಕೆಟ್ಟು ಹೋಗಿದ್ದು ರಸ್ತೆಗೆ ಕಾಂಕ್ರಿಟ್ ಮಾಡಿಕೊಡಿಯೆಂದ್ದು ಸುಳ್ಯ ಶಾಸಕರಿಗೆ ಮತ್ತು ಸಂಬಂಧ ಪಟ್ಟ ಇಲಾಖೆಗೆ ಹಲವು ವರ್ಷಗಳಿಂದ ಮನವಿ ಮಾಡಿದ್ದರು. ಆದರೆ ಯಾವುದೇ ಪ್ರಯೋಜನವಿಲ್ಲವೆಂದು ಪರಿಶಿಷ್ಟ ಪಂಗಡದವರು ಮತ್ತು ಅಲ್ಲಿಯ ನಿವಾಸಿಗಳು ಅಂಬೇಡ್ಕರ್

ಸುಳ್ಯ: ರಸ್ತೆ ದುರಸ್ತಿ ಮಾಡಿಕೊಡುವಂತೆ ಸ್ಥಳೀಯರಿಂದ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ Read More »