ಕರಾವಳಿ

ಸುರತ್ಕಲ್ ಟೋಲ್ ವಿರುದ್ಧ ಅಹೋರಾತ್ರಿ ಧರಣಿ!

ಸಮಗ್ರ ನ್ಯೂಸ್: ಮಂಗಳೂರು‌ ಹೊರವಲಯದ ಸುರತ್ಕಲ್ ನ ಅಕ್ರಮ ಟೋಲ್ ಗೇಟ್ ವಿರುದ್ಧ ಟೋಲ್ ವಿರೋಧಿ ಹೋರಾಟ ಸಮಿತಿ ಇಂದಿನಿಂದ ಅನಿರ್ದಿಷ್ಟ ಅವಧಿ ಅಹೋರಾತ್ರಿ ಧರಣಿ ಪ್ರತಿಭಟನೆ ಆರಂಭಿಸಿದೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಜಮಾಯಿಸಿದ ಹೋರಾಟ ಸಮಿತಿ ಮುಖಂಡರು, ಸದಸ್ಯರು ಟೋಲ್ ಮುಂಭಾಗದಲ್ಲಿ ಹಗಲು ರಾತ್ರಿ ಧರಣಿ ಕೂತಿದ್ದಾರೆ.ಈ ವೇಳೆ ಮಾತಾಡಿದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು, “ಸಂಸದ ನಳಿನ್ ಕುಮಾರ್ ಕಟೀಲ್ ಮೇಲೆ ಜಿಲ್ಲೆಯ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಏಳು ವರ್ಷಗಳಿಂದ ಟೋಲ್

ಸುರತ್ಕಲ್ ಟೋಲ್ ವಿರುದ್ಧ ಅಹೋರಾತ್ರಿ ಧರಣಿ! Read More »

ಮಂಗಳೂರು: ಲಂಗರು ಹಾಕಿದ್ದ ಬೋಟ್ ಗಳು ಬೆಂಕಿಗಾಹುತಿ

ಸಮಗ್ರ ನ್ಯೂಸ್: ಮಂಗಳೂರು ನಗರದ ಬೆಂಗ್ರೆ ಪ್ರದೇಶದಲ್ಲಿ ಲಂಗರು ಹಾಕಿದ್ದ 3ಕ್ಕೂ ಅಧಿಕ ಬೋಟ್ ಗಳು ಬೆಂಕಿಗಾಹುತಿಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಬೆಂಗರೆಯಲ್ಲಿ ಹಲವು ಬೋಟ್ ಗಳು ಲಂಗರು ಹಾಕಿರುತ್ತವೆ. ಈ ಪೈಕಿ ಒಂದು ಬೋಟ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಆ ಬೆಂಕಿ ಹತ್ತಿರಲ್ಲಿದ್ದ ಇತರ ಬೋಟ್ ಗಳಿಗೂ ಹಬ್ಬಿದ್ದು, ಇಡೀ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿರುವುದು ಕಂಡುಬಂದಿದೆ. ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ.

ಮಂಗಳೂರು: ಲಂಗರು ಹಾಕಿದ್ದ ಬೋಟ್ ಗಳು ಬೆಂಕಿಗಾಹುತಿ Read More »

ಸುರತ್ಕಲ್ ಟೋಲ್ ಗೇಟ್ ಬಳಿ ನಿಷೇದಾಜ್ಞೆ ಜಾರಿ – ಕಮಿಷನರ್ ಶಶಿಕುಮಾರ್‌ ಆದೇಶ

ಸಮಗ್ರ ನ್ಯೂಸ್: ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಟೋಲ್ ಗೇಟ್ ಸಮೀಪದ 200 ಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6ರಿಂದ ನವೆಂಬರ್ 3ರ ಸಂಜೆ 6ರವರೆಗೆ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ವಿಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಎನ್‌ಐಟಿಕೆ ಬಳಿಯ ಟೋಲ್ ಗೇಟ್ ನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸುರತ್ಕಲ್ ಹಾಗೂ ಸಮಾನ ಮನಸ್ಕ ಸಂಘಟಣೆ ವತಿಯಿಂದ ಇಂದಿನಿಂದ ಟೋಲ್ ಗೇಟ್ ಬಳಿ ಅನಿರ್ಧಿಷ್ಟಾವಧಿ

ಸುರತ್ಕಲ್ ಟೋಲ್ ಗೇಟ್ ಬಳಿ ನಿಷೇದಾಜ್ಞೆ ಜಾರಿ – ಕಮಿಷನರ್ ಶಶಿಕುಮಾರ್‌ ಆದೇಶ Read More »

ಮಂಗಳೂರು: ಕಾಂತಾರ ಸಿನಿಮಾ ನೋಡಿ ಪ್ರೇರಿತಗೊಂಡ ಯುವತಿ|ಪಂಜುರ್ಲಿಯಂತೆ ವೇಷ ಧರಿಸಿದ ವೀಡಿಯೋ ವೈರಲ್

ಸಮಗ್ರ ನ್ಯೂಸ್: ಕಾಂತಾರ ಸಿನೇಮಾ ನೋಡಿ ಪ್ರೇರಿತಗೊಂಡ ಯುವತಿಯೊಬ್ಬಳು ಚಿತ್ರದಲ್ಲಿರುವಂತೆ ಪಂಜುರ್ಲಿಯಂತೆ ವೇಷ ಧರಿಸಿ ವೀಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡಿ ಕೆಂಗಣ್ಣಿಗೆ ಗುರಿಯಾಗಿದ್ದಾಳೆ. ಕಾಂತಾರ ಸಿನಿಮಾವನ್ನು ನೋಡಿದ ಈ ಯುವತಿ ​ ಪಂಜುರ್ಲಿಯಂತೆ ವೇಷ ಧರಿಸಿ ಕುಣಿದು ಕುಪ್ಪಳಿಸಿ ರೀಲ್ಸ್​ ಮಾಡಿದ್ದಾಳೆ. ವೃತ್ತಿಯಲ್ಲಿ ಮೇಕಪ್​ ಆರ್ಟಿಸ್ಟ್​ ಆಗಿರುವ ಶ್ವೇತಾ ರೆಡ್ಡಿ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವೀಡಿಯೊ ಹಂಚಿಕೊಂಡ ಬಳಿಕ ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಾಂತಾರ ಸಿನಿಮಾದ ವರಾಹ ರೂಪಂ ಹಾಡಿಗೆ

ಮಂಗಳೂರು: ಕಾಂತಾರ ಸಿನಿಮಾ ನೋಡಿ ಪ್ರೇರಿತಗೊಂಡ ಯುವತಿ|ಪಂಜುರ್ಲಿಯಂತೆ ವೇಷ ಧರಿಸಿದ ವೀಡಿಯೋ ವೈರಲ್ Read More »

ಮಂಗಳೂರು: ಅತಿಯಾದ ಸಂಶಯ| ಪತ್ನಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿದ ಪತಿ

ಸಮಗ್ರ ನ್ಯೂಸ್: ಪತ್ನಿಯ ಮೇಲೆ ಅತಿಯಾದ ಸಂಶಯದಿಂದ ವ್ಯಕ್ತಿಯೊಬ್ಬ ಪತ್ನಿಯನ್ನ ಕತ್ತು ಹಿಸುಕಿ ಕೊಂದು ನಂತರ ತಾನೂ ತೋಟದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ನಡೆದಿದೆ. ಪಿಲಾರು ನಿವಾಸಿಗಳಾದ ಶೋಭಾ ಪೂಜಾರಿ (45) ಕೊಲೆಯಾದ ಮಹಿಳೆ ಮತ್ತು ಅಕೆಯ ಪತಿ ಶಿವಾನಂದ ಪೂಜಾರಿ (55)ಆತ್ಮಹತ್ಯೆ ಮಾಡಿಕೊಂಡವರು. ಬೆಳಗ್ಗೆ ಹತ್ತು ಗಂಟೆ ವೇಳೆಗೆ ಶೋಭಾ ಅವರು ಮನೆ ಹತ್ತಿರದ ಇನ್ನೂರು ಗುತ್ತು ಕುಟುಂಬಸ್ಥರ ಮನೆಯಿಂದ ಗೊಬ್ಬರ

ಮಂಗಳೂರು: ಅತಿಯಾದ ಸಂಶಯ| ಪತ್ನಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿದ ಪತಿ Read More »

ಬೆಳ್ತಂಗಡಿ: ರಸ್ತೆ ಗುಂಡಿಗಳಲ್ಲಿ ದೀಪ ಬೆಳಗಿತು.!

ಸಮಗ್ರ ನ್ಯೂಸ್: ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ, ಜನಪ್ರತಿನಿಧಿಗಳ ಕಾರ್ಯ ವೈಖರಿಯನ್ನು ಖಂಡಿಸಿ ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೂ ಸಮಾನ ಮನಸ್ಕರ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಆಚರಣೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆಯಿತು. ಬುಧವಾರ ಸಂಜೆ ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ , ಸಿಪಿಐ(ಎಂ)

ಬೆಳ್ತಂಗಡಿ: ರಸ್ತೆ ಗುಂಡಿಗಳಲ್ಲಿ ದೀಪ ಬೆಳಗಿತು.! Read More »

ಇಂದಿನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೋಲ್ವೋ ಬಸ್ ಸಂಚಾರ

ಸಮಗ್ರ ನ್ಯೂಸ್: ಮಂಗಳೂರು ನಗರದ ಬಿಜೈ ಸರಕಾರಿ ಬಸ್ ನಿಲ್ದಾಣ ಮತ್ತು ಮಣಿಪಾಲದಿಂದ ಬಜ್ಪೆ ಕೆಂಜಾರಿನಲ್ಲಿರುವ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ಕ್ಕೆ ಅ.27ರಿಂದ ಸರಕಾರಿ ವೋಲ್ವೊ ಬಸ್ ಸಂಚಾರ ಆರಂಭಗೊಳ್ಳಲಿದೆ ಎಂದು ತಿಳಿದು ಬಂದಿದೆ. ಹಲವು ವರ್ಷಗಳಿಂದಲೇ ಮಂಗಳೂರು ವಿಮಾನ ನಿಲ್ದಾಣಕ್ಕೆ ಸರಕಾರಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಯು ಇತ್ತು. ಅದರಂತೆ ಸಂಚಾರ ಆರಂಭಿಸಿದ್ದರೂ ಕೂಡ ಆದಾಯದ ಕೊರತೆಯ ನೆಪದಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ಬೇಡಿಕೆ ಮತ್ತಷ್ಟು ತೀವ್ರಗೊಂಡ ಹಿನ್ನಲೆಯಲ್ಲಿ ಸಾರಿಗೆ ಸಚಿವ

ಇಂದಿನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೋಲ್ವೋ ಬಸ್ ಸಂಚಾರ Read More »

ಪುತ್ತೂರು: ನಡುರಸ್ತೆಯಲ್ಲಿ ರಿಕ್ಷಾ ನಿಲ್ಲಿಸಿ ಮದ್ಯಪಾನ ಮಾಡಿ ನಿದ್ರಿಸಿದ ಚಾಲಕ.!

ಸಮಗ್ರ ನ್ಯೂಸ್: ಪುತ್ತೂರು-ದರ್ಬೆ ರಸ್ತೆಯ ಕಲ್ಲಾರೆ ಎಂಬಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ ವಾಹನವನ್ನು ನಡುರಸ್ತೆಯಲ್ಲಿ ನಿಲ್ಲಿಸಿ ಮದ್ಯಪಾನ ಮಾಡಿ ಮಲಗಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಕಲ್ಲಾರೆ ಧನ್ವಂತ್ರಿ ಆಸ್ಪತ್ರೆ ಎದುರು ಆಟೋ ಚಾಲಕ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕುಡಿದು ಮಲಗಿದ್ದನ್ನು ಗಮನಿಸಿದ ಸಾರ್ವಜನಿಕರು ಪುತ್ತೂರು ಟ್ರಾಫಿಕ್ ಪೊಲೀಸರಿಗೆ ಮಾಹಿತಿ ನೀಡಿ ಅಪಾಯ ತಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದಾಗ ಆಟೋ ಚಾಲಕ ಪಾನಮತ್ತನಾಗಿದ್ದ. ಸಂಚಾರ ಪೊಲೀಸರು ಆಟೊ

ಪುತ್ತೂರು: ನಡುರಸ್ತೆಯಲ್ಲಿ ರಿಕ್ಷಾ ನಿಲ್ಲಿಸಿ ಮದ್ಯಪಾನ ಮಾಡಿ ನಿದ್ರಿಸಿದ ಚಾಲಕ.! Read More »

ಮಂಗಳೂರು: ದೀಪಾವಳಿ ಆಫರ್| ಫ್ಲಿಪ್‌ಕಾರ್ಟ್‌ನಿಂದ ವ್ಯಕ್ತಿಯೊಬ್ಬರು ಲ್ಯಾಪ್‌ಟಾಪ್ ಬದಲು ಕಲ್ಲು ಡೆಲಿವರಿ

ಸಮಗ್ರ ನ್ಯೂಸ್: ಫ್ಲಿಪ್‌ಕಾರ್ಟ್‌ನಿಂದ ವ್ಯಕ್ತಿಯೊಬ್ಬರು ಲ್ಯಾಪ್‌ಟಾಪ್ ಆರ್ಡರ್ ಮಾಡಿದ್ದು, ಇದರ ಬದಲಾಗಿ ಅವರಿಗೆ ದೊಡ್ಡ ಕಲ್ಲು ಮತ್ತು ಇ-ತ್ಯಾಜ್ಯ ಬಂದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ತಮಗೆ ಮೋಸವಾಗಿರುವ ವಿಚಾರವನ್ನು ಮಂಗಳೂರಿನ ಚಿನ್ಮಯ ರಮಣ ಟ್ವಿಟರ್‌ ನಲ್ಲಿ ಹಂಚಿಕೊಂಡಿದ್ದು, ನಾನು ಲ್ಯಾಪ್‌ಟಾಪ್‌ ಆರ್ಡರ್ ಮಾಡಿದ್ದೆ ಬದಲಾಗಿ ದೊಡ್ಡ ಕಲ್ಲು ಮತ್ತು ಇ-ತ್ಯಾಜ್ಯವನ್ನು ಸ್ವೀಕರಿಸಿದೆ! ಫ್ಲಿಪ್‌ಕಾರ್ಟ್‌ನಲ್ಲಿ ದೀಪಾವಳಿ ಮಾರಾಟದ ಸಮಯದಲ್ಲಿ!” ಎಂದು ಬರೆದಿದ್ದಾರೆ. ಇನ್ನು ಬಾಕ್ಸ್ ತೆರೆಯುವ ವಿಡಿಯೋವನ್ನು ಕೂಡ ಅವರು ಪೋಸ್ಟ್ ಮಾಡಿದ್ದು, ಉತ್ಪನ್ನವು ತೆರೆದ ಬಾಕ್ಸ್ ವಿತರಣಾ

ಮಂಗಳೂರು: ದೀಪಾವಳಿ ಆಫರ್| ಫ್ಲಿಪ್‌ಕಾರ್ಟ್‌ನಿಂದ ವ್ಯಕ್ತಿಯೊಬ್ಬರು ಲ್ಯಾಪ್‌ಟಾಪ್ ಬದಲು ಕಲ್ಲು ಡೆಲಿವರಿ Read More »

ಮಂಗಳೂರು: ಹೆಸರು‌ಬೇಳೆ, ಐಸ್ ಕ್ರೀಂ ತಿಂದು‌ ಫುಡ್ ಪಾಯ್ಸನ್| ನಾಲ್ವರು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಹೆಸರುಬೇಳೆ ಮತ್ತು ಐಸ್ ಕ್ರೀಂ ಸೇವಿಸಿ ಫುಡ್​ ಪಾಯ್ಸನ್ ಗೊಳಗಾದ ನಾಲ್ವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಪ್ಪು ಬಪ್ಪಾಲ್‌ನ ನಿವಾಸಿಗಳಾದ ಅರವಿಂದ ರಾವ್ (52), ಪತ್ನಿ ಪ್ರಭಾವತಿ (45) ಮತ್ತು ಮಕ್ಕಳಾದ ಸೌರಭ್ (20) ಪ್ರತೀಕ್ (18) ಅನಾರೋಗ್ಯ ಹೊಂದಿದ್ದಾರೆ. ಫುಡ್​ ಪಾಯಿಸನ್​ ಆಗಿ ಅಸ್ವಸ್ಥಗೊಂಡವರುಇವರು ನಿನ್ನೆ ರಾತ್ರಿ ಮಲಗುವ ಮೊದಲು ಹೆಸರುಬೇಳೆ ಮತ್ತು ಐಸ್ ಕ್ರೀಂ ತಿಂದಿದ್ದರು. ಆ ಬಳಿಕ ವಾಂತಿ ಶುರುವಾಗಿದೆ. ಇಂದು ಬೆಳಿಗ್ಗೆ ಮನೆ ಬಾಗಿಲನ್ನು ತೆರೆಯದಿರುವುದನ್ನು ಗಮನಿಸಿದ ಸಂಬಂಧಿಕರು

ಮಂಗಳೂರು: ಹೆಸರು‌ಬೇಳೆ, ಐಸ್ ಕ್ರೀಂ ತಿಂದು‌ ಫುಡ್ ಪಾಯ್ಸನ್| ನಾಲ್ವರು ಆಸ್ಪತ್ರೆಗೆ ದಾಖಲು Read More »