ಕರಾವಳಿ

ಮಕ್ಕಳಿಗೆ‌ ಸಂಸ್ಕಾರವನ್ನು ಕಲಿಸುವ ಅವಶ್ಯಕತೆ ಇದೆ – ಕಿಶೋರ್ ಕುಮಾರ್

ಪಾಶ್ಚಾತ್ಯ ಸಂಸ್ಕ್ರತಿಗೆ ಮಾರುಹೋಗಿ‌ ಭಾರತೀಯ ಸಂಸ್ಕಾರ ಮರೆಯಾಗುತ್ತಿದೆ. ಆದ್ದರಿಂದ ಇಂದು ಸಂಸ್ಕ್ರತಿಗಳ ಉಳಿವಿಗೆ ಮಕ್ಕಳಿಗೆ ಸಂಸ್ಕಾರ ಕಲಿಸುವ ಅಗತ್ಯವಿದೆ. ಇವನ್ನು ಹಿರಿಯರನ್ನು ಗೌರವಿಸುವ, ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಹೇಳಿದರು. ಅವರು ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ, ವಾರ್ಷಿಕ ಮಹಾಸಭೆ, ಸ್ಪಂದನ ಗೆಳೆಯರ ಬಳಗ ಅಡ್ತಲೆ ಇದರ ಸಹಯೋಗದಲ್ಲಿ ಧಾರ್ಮಿಕ ಶಿಕ್ಷಣ ತರಗತಿ ಉದ್ಘಾಟನೆ ಹಾಗು […]

ಮಕ್ಕಳಿಗೆ‌ ಸಂಸ್ಕಾರವನ್ನು ಕಲಿಸುವ ಅವಶ್ಯಕತೆ ಇದೆ – ಕಿಶೋರ್ ಕುಮಾರ್ Read More »

ದಸರಾ ರಜೆ ನೀಡುವಲ್ಲಿ ಜಿಲ್ಲಾಡಳಿತಕ್ಕೆ ಕನ್ಪ್ಯೂಷನ್| ಒಂದೇ ದಿನದಲ್ಲಿ ಮತ್ತೆ ರಜೆ ಬದಲಾವಣೆ

ಸಮಗ್ರ ನ್ಯೂಸ್: ಮಂಗಳೂರು ತಾಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಸೆ. 28ರಿಂದ ಅ. 1ರ ವರೆಗೆ ಹೆಚ್ಚುವರಿಯಾಗಿ (4 ದಿನಗಳು) ನೀಡಲು ಸರಕಾರ ಶುಕ್ರವಾರ ಆದೇಶಿಸಿತ್ತು. ಆದರೆ ಜಿಲ್ಲಾಧಿಕಾರಿಗಳು ಶನಿವಾರ ಸಂಜೆ ವೇಳೆಗೆ ‌ಮತ್ತೆ ರಜೆಯನ್ನು ಪರಿಷ್ಕರಣೆ ಮಾಡಿದ್ದು, ಮತ್ತೆ ಜಿಲ್ಲೆಯಾದ್ಯಂತ ಸೆ.28ರಿಂದ ದಸರಾ ರಜೆ ಘೋಷಿಸಿ ಆದೇಶಿಸಿದ್ದಾರೆ. 2022-23ನೇ ಸಾಲಿನಲ್ಲಿ ರಾಜ್ಯದ ಎಲ್ಲ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳನ್ನು ನಿಗದಿ ಪಡಿಸಿ ಶಾಲೆಗಳಿಗೆ ದಸರಾ ರಜೆಯನ್ನು

ದಸರಾ ರಜೆ ನೀಡುವಲ್ಲಿ ಜಿಲ್ಲಾಡಳಿತಕ್ಕೆ ಕನ್ಪ್ಯೂಷನ್| ಒಂದೇ ದಿನದಲ್ಲಿ ಮತ್ತೆ ರಜೆ ಬದಲಾವಣೆ Read More »

ಬೆಳ್ತಂಗಡಿ ; ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ: ಯುವಕನೊಬ್ಬ ಸಾಲವನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ನೆರಿಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನೆರಿಯ ಗ್ರಾಮದ ಚಂದ್ರಶೇಖರ್ (24) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಗಾರೆ ಮತ್ತು ವೈರಿಂಗ್ ಕೆಲಸ ಮಾಡುತ್ತಿದ್ದ ಈತ , ಗೆಳೆಯರ ಜೊತೆಗೆ ಸೇರಿ ಶಬರಿ ಎಂಬ ಸ್ವಸಹಾಯ ಸಂಘ ರಚಿಸಿದ್ದು, ಈ ಸಂಘದ ಮೂಲಕ ಉಜಿರೆಯ ಖಾಸಗಿ ಬ್ಯಾಂಕಿನಿಂದ 4 ಲಕ್ಷ ರೂ. ಸಾಲ ಪಡೆದಿದ್ದರು. ಈ ಹಣವನ್ನು ಎಂಟು ಜನ ಹಂಚಿಕೊಂಡಿದ್ದರು. ಆದರೆ ಚಂದ್ರಶೇಖರ್ ತೆಗೆದ

ಬೆಳ್ತಂಗಡಿ ; ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆಗೆ ಶರಣು Read More »

ಕರಾವಳಿಗೆ ಕಾಲಿಟ್ಟ ಪೋಸ್ಟರ್ ಅಭಿಯಾನ| ಬೆಳ್ತಂಗಡಿ ಶಾಸಕರಿಗೆ ತಟ್ಟಿದ ‘PAY MLA’ ಬಿಸಿ|

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಪೇ ಸಿಎಂ ಪೋಸ್ಟರ್ ಅಭಿಯಾನದ ಬೆನ್ನಲ್ಲೆ ಇದೀಗ ಕರಾವಳಿಗೂ ಪೇ ಎಂಎಲ್ ಎ ಪೋಸ್ಟರ್ ಅಭಿಯಾನ ಎಂಟ್ರಿ ಕೊಟ್ಟಿದ್ದು, ಶಾಸಕರ ಫೋಟೋ ಹಾಕಿ ಕಾಂಗ್ರೆಸ್ ಕಾರ್ಯಕರ್ತರು ಕ್ಯಾಂಪೇನ್ ಶುರು ಮಾಡಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಫೋಟೋ ಹಾಕಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕ್ಯಾಂಪೇನ್ ಶುರು ಮಾಡಿದ್ದು, ಬೆಳ್ತಂಗಡಿಯ ಬಸ್ ನಿಲ್ದಾಣ, ಸಾರ್ವಜನಿಕ ಶೌಚಾಲಯ ಹಾಗೂ ಬಸ್ ಗಳಲ್ಲಿ ಪೇ ಎಂಎಲ್ ಎ ಪೋಸ್ಟರ್ ಅಂಟಿಸಿ ಅಭಿಯಾನ ಆರಂಭಿಸಿದ್ದಾರೆ. ಬೆಂಗಳೂರಿನಲ್ಲಿ

ಕರಾವಳಿಗೆ ಕಾಲಿಟ್ಟ ಪೋಸ್ಟರ್ ಅಭಿಯಾನ| ಬೆಳ್ತಂಗಡಿ ಶಾಸಕರಿಗೆ ತಟ್ಟಿದ ‘PAY MLA’ ಬಿಸಿ| Read More »

ಉಡುಪಿ: ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ| ‌ಜೀವಾವಧಿ ಶಿಕ್ಷೆಯಾದವರಿಗೆ ಜಾಮೀನು ಸಿಕ್ಕಿದ್ದು ಹೇಗೆ? ಮಾಧ್ಯಮದ ಮುಂದೆ ಗುಲಾಬಿ ಶೆಟ್ಟಿ ಅಳಲು

ಸಮಗ್ರ ನ್ಯೂಸ್: ಉದ್ಯಮಿ ಭಾಸ್ಕರ ಶೆಟ್ಟಿಯವರನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೀಡಾದ ಭಾಸ್ಕರ ಶೆಟ್ಟಿ ತಾಯಿ‌ ಗುಲಾಬಿ‌ ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಹಣ ಇದ್ದವರಿಗೆ ಒಂದು ಕಾನೂನು, ಪಾಪದವರಿಗೆ ಇನ್ನೊಂದು ಕಾನೂನಾ? ಜೀವಾವಧಿ ಶಿಕ್ಷೆ ಪ್ರಕಟ ಆದವರಿಗೆ ಜಾಮೀನು ಹೇಗೆ ಸಿಕ್ಕಿದೆ? ಎಂದು ಪ್ರಶ್ನಿಸಿದ್ದಾರೆ. ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ರಾಜೇಶ್ವರಿ ಶೆಟ್ಟಿ, ನವನೀತ್, ನಿರಂಜನ್ ಭಟ್‌ಗೆ ಜಾಮೀನು ಮಂಜೂರು ಮಾಡಿದೆ. ಜೂನ್ 8,

ಉಡುಪಿ: ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ| ‌ಜೀವಾವಧಿ ಶಿಕ್ಷೆಯಾದವರಿಗೆ ಜಾಮೀನು ಸಿಕ್ಕಿದ್ದು ಹೇಗೆ? ಮಾಧ್ಯಮದ ಮುಂದೆ ಗುಲಾಬಿ ಶೆಟ್ಟಿ ಅಳಲು Read More »

ದಸರಾ ಹಿನ್ನಲೆ; ಮಂಗಳೂರು ತಾಲೂಕಿನ ಶಾಲೆಗಳಿಗೆ ಹೆಚ್ಚುವರಿ ನಾಲ್ಕು ದಿನ ರಜೆ

ಸಮಗ್ರ ನ್ಯೂಸ್: ಮಂಗಳೂರು ತಾಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಸೆ. 28ರಿಂದ ಅ. 1ರ ವರೆಗೆ ಹೆಚ್ಚುವರಿಯಾಗಿ (4 ದಿನಗಳು) ನೀಡಲು ಸರಕಾರ ಶುಕ್ರವಾರ ಆದೇಶಿಸಿದೆ. ಆದರೆ ಇದು ದ.ಕ. ಜಿಲ್ಲೆಯ ಇತರ ತಾಲೂಕುಗಳಿಗೆ ಅನ್ವಯಿಸುವುದಿಲ್ಲ. 2022-23ನೇ ಸಾಲಿನಲ್ಲಿ ರಾಜ್ಯದ ಎಲ್ಲ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳನ್ನು ನಿಗದಿ ಪಡಿಸಿ ಶಾಲೆಗಳಿಗೆ ದಸರಾ ರಜೆಯನ್ನು ಅ. 3ರಿಂದ ಅ. 16ರ ವರೆಗೆ ನಿಗದಿಪಡಿಸಲಾಗಿತ್ತು. ಸರಕಾರ ಇದೀಗ ಮಂಗಳೂರು

ದಸರಾ ಹಿನ್ನಲೆ; ಮಂಗಳೂರು ತಾಲೂಕಿನ ಶಾಲೆಗಳಿಗೆ ಹೆಚ್ಚುವರಿ ನಾಲ್ಕು ದಿನ ರಜೆ Read More »

ಮಂಗಳೂರು: ಹಾಸ್ಟೆಲ್ ನಿಂದ‌ ಪರಾರಿಯಾದ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ

ಸಮಗ್ರ ನ್ಯೂಸ್ : ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಶುಕ್ರವಾರ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್ ನಿಂದ ಬುಧವಾರ ಮುಂಜಾನೆ ಸುಮಾರು 3.30 ಕ್ಕೆಬೆಂಗಳೂರಿನ ಇಬ್ಬರು ಹಾಗೂ ಚಿಕ್ಕಮಗಳೂರಿನ ಓರ್ವ ವಿದ್ಯಾರ್ಥಿನಿ ನಿಗೂಢವಾಗಿ ಕಾಣೆಯಾಗಿದ್ದರು. ಘಟನೆ ಸಂಬಂಧ ಕಂಕನಾಡಿಯ ನಗರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಚೆನ್ನೈನಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವಿದ್ಯಾರ್ಥಿನಿಯರನ್ನು ವಿಚಾರಣೆ ನಡೆಸಿದ ಪೊಲೀಸರು ಬಳಿಕ ಸ್ವೀಕಾರ ಕೇಂದ್ರಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಂಗಳೂರು: ಹಾಸ್ಟೆಲ್ ನಿಂದ‌ ಪರಾರಿಯಾದ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ Read More »

ಪಡಿತರಕ್ಕಾಗಿ ನ್ಯಾಯಬೆಲೆ ಅಂಗಡಿ ಬಾಗಿಲಲ್ಲಿ ಕಾದು ಸುಸ್ತಾದ ಜನ|ಸರ್ವರ್ ಸಮಸ್ಯೆಯಿಂದ ವೃದ್ದರು, ಮಹಿಳೆಯರ ಪರದಾಟ

ಸಮಗ್ರ ನ್ಯೂಸ್: ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರದಾರರು ಪರದಾಡಿದ ಘಟನೆ ಮೂಡಿಗೆರೆ ತಾಲೂಕಿನ ಸುಂಕಸಾಲೆ ಸಮೀಪದ ಅಬ್ರುಗುಡಿಗೆಯಲ್ಲಿ ನಡೆದಿದೆ. ಕಳೆದ ಕೆಲದಿನಗಳಿಂದ ಸರ್ವರ್ ಸಮಸ್ಯೆಯಿಂದ ಪಡಿತರದಾರರು ನ್ಯಾಯಬೆಲೆ ಅಂಗಡಿಯಲ್ಲಿ ಸಂಜೆಯವರೆಗೂ ಕಾದು ಹಿಂದಿರುಗುವಂತಾಗಿದೆ.ಈ ಭಾಗದಲ್ಲಿ ಬಹುತೇಕರೂ ಕೂಲಿ ಕಾರ್ಮಿಕರಾಗಿದ್ದು ಕೆಲಸಕ್ಕೆ ರಜೆ ಮಾಡಿ ನ್ಯಾಯಬೆಲೆ ಅಂಗಡಿಗೂ ಬಂದರೂ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಪಡೆಯಲು ಸಾಧ್ಯವಾಗಿಲ್ಲ. ಹಳ್ಳಿಗಾಡು ಪ್ರದೇಶದಿಂದ ಬರುವ ಮಹಿಳೆಯರು, ವೃದ್ದರು ದಿನಗಟ್ಟಲೆ ನ್ಯಾಯಬೆಲೆ ಅಂಗಡಿ ಬಾಗಿಲು ಕಾಯುವಂತಾಗಿದೆ. ಅರಮನೆ ತಲಗೂರು ಗ್ರಾಮದ ವೃದ್ದೆ ಸುಂದರಮ್ಮ‌

ಪಡಿತರಕ್ಕಾಗಿ ನ್ಯಾಯಬೆಲೆ ಅಂಗಡಿ ಬಾಗಿಲಲ್ಲಿ ಕಾದು ಸುಸ್ತಾದ ಜನ|ಸರ್ವರ್ ಸಮಸ್ಯೆಯಿಂದ ವೃದ್ದರು, ಮಹಿಳೆಯರ ಪರದಾಟ Read More »

ಸಾಧನೆಗೆ ಅಡ್ಡಿಯಾಗದ ದಿವ್ಯಾಂಗ| ದ.ಕನ್ನಡದ ಈ ಯುವಕ ಎಲ್ಲರಿಗೂ ಸ್ಪೂರ್ತಿ

ಸಮಗ್ರ ನ್ಯೂಸ್: ದ.ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮದ ಜನಾರ್ದನ ಗೌಡ ಮತ್ತು ಬೇಬಿ ದಂಪತಿಯ ಪುತ್ರ ಪ್ರದೀಪ್ ಬಿ.ಜೆ (23) ಅವರು ಎಂಡೋಸಲ್ಫಾನ್ ಸಮಸ್ಯೆಯಿಂದ ಅಂಗವೈಕಲ್ಯವನ್ನು ಮೀರಿ ಇತ್ತೀಚೆಗೆ ಶಿವಮೊಗ್ಗದ ತೀರ್ಥಹಳ್ಳಿಯ ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಿಗನಾಗಿ ನೇಮಕಗೊಂಡಿದ್ದಾರೆ. ಪ್ರತಿದಿನ ಅವರು ಮೊಣಕಾಲುಗಳ ಮೇಲೆ ನಡೆಯುತ್ತಾ ಕಚೇರಿಗೆ ಪ್ರವೇಶಿಸುತ್ತಿದ್ದಾರೆ. ಪ್ರದೀಪ್ ಅವರ ಕಾಲುಗಳು ಮೊಣಕಾಲಿನ ಕೆಳಗೆ ದುರ್ಬಲವಾಗಿವೆ. ಅವರ ಎಡಗೈಗೂ ಬಲವಿಲ್ಲ. ಆದಾಗ್ಯೂ ದೈಹಿಕ ಅಂಗವೈಕಲ್ಯ ಕಡೆಗಣಿಸಿದ ಅವರು, ಉತ್ತಮ ಶೈಕ್ಷಣಿಕ ದಾಖಲೆಯನ್ನು ಪಡೆದಿದ್ದಾರೆ. ಪ್ರಸ್ತುತ

ಸಾಧನೆಗೆ ಅಡ್ಡಿಯಾಗದ ದಿವ್ಯಾಂಗ| ದ.ಕನ್ನಡದ ಈ ಯುವಕ ಎಲ್ಲರಿಗೂ ಸ್ಪೂರ್ತಿ Read More »

ಅಂಗಿ ಬನಿಯನ್ ತೆಗೆಯುವ ನಿಯಮ ಮೂಲಭೂತ ಹಕ್ಕಿನ ಉಲ್ಲಂಘನೆ| ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದ ಪರಿಸರ ಸಂರಕ್ಷಣಾ ಒಕ್ಕೂಟ

ಸಮಗ್ರ ನ್ಯೂಸ್: ದೇವರ ದರ್ಶನಕ್ಕಾಗಿ ಅಂಗಿ ಬನಿಯನ್ ತೆಗೆದು ಪ್ರವೇಶಿಸುವುದು ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ದೂರು ಸಲ್ಲಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲ್ಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲ ಮತ್ತೆ ಸುದ್ದಿಯಲ್ಲಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಆಗಮಿಸುವ ಪುರುಷ ಭಕ್ತರು ಅಂಗಿ-ಬನಿಯನ್ ತೆಗೆದು ಬರಬೇಕು ಎಂಬ ಸದ್ಯ ಇರುವ ನಿಯಮವನ್ನು ಬದಲಿಸಲು ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟವು ಮನವಿ ಮಾಡಿದೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಜೊತೆಗೆ ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ

ಅಂಗಿ ಬನಿಯನ್ ತೆಗೆಯುವ ನಿಯಮ ಮೂಲಭೂತ ಹಕ್ಕಿನ ಉಲ್ಲಂಘನೆ| ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದ ಪರಿಸರ ಸಂರಕ್ಷಣಾ ಒಕ್ಕೂಟ Read More »