ಕರಾವಳಿ

ಮಂಗಳೂರು: ನಿಷೇದಿತ ಪಿಎಫ್ಐ‌ ಮುಖಂಡರ ಮನೆ ಮೇಲೆ ಪೊಲೀಸರ ದಾಳಿ| ಐವರನ್ನು ವಶಕ್ಕೆ ಪಡೆದ ಖಾಕಿ ಪಡೆ

ಮಂಗಳೂರು: ಮಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ. ಇಂದು(ಅ.13) ಬೆಳಗ್ಗೆ ಪೊಲೀಸರು ಪಿಎಫ್ ಐ ಹಾಗೂ ಎಸ್ ಡಿಪಿಐ ಮುಖಂಡರ ಮೇಲೆ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದು, ಐವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಪಣಂಬೂರು, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ ಉಳ್ಳಾಲ ಸೇರಿ ಏಳೆಂಟು ಕಡೆ

ಮಂಗಳೂರು: ನಿಷೇದಿತ ಪಿಎಫ್ಐ‌ ಮುಖಂಡರ ಮನೆ ಮೇಲೆ ಪೊಲೀಸರ ದಾಳಿ| ಐವರನ್ನು ವಶಕ್ಕೆ ಪಡೆದ ಖಾಕಿ ಪಡೆ Read More »

ಮಂಗಳೂರು: ಶಾರದೋತ್ಸವ ಬ್ಯಾನರ್ ಹರಿದ ಪ್ರಕರಣ| ಗುಳಿಗನ ಕಾರಣಿಕದಿಂದ ಸಿಕ್ಕಿಬಿದ್ದರಾ ಆರೋಪಿಗಳು? ಕುತೂಹಲ ಮೂಡಿಸಿದ ಗುಳಿಗನ ಹರಕೆ!!

ಸಮಗ್ರ‌ ನ್ಯೂಸ್: ಕರಾವಳಿಯಲ್ಲಿ ಮತ್ತೆ ಕೋಮು ಸಂಘರ್ಘಕ್ಕೆ ಸಂಚು ರೂಪಿಸಲಾಗಿದ್ದು, ಶಾರದೋತ್ಸವದ ನಿಮಿತ್ತ ಹಾಕಲಾಗಿದ್ದ, ಬ್ಯಾನರ್‌ ಹರಿದು ಕೋಮುಗಲಭೆ ಸೃಷ್ಟಿಸಲು ಪ್ಲ್ಯಾನ್‌ ಮಾಡಿದ್ದಾರೆಂಬ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐದಾರು ಬ್ಯಾನರ್‌ ಹರಿದು ಸಂಘರ್ಷ ಸೃಷ್ಟಿಸಲು ಪ್ಲ್ಯಾನ್‌ ಮಾಡಿ ಅನ್ಯದರ್ಮಿಯರ ಮೇಲೆ ಅನುಮಾನ ಬರುವಂತೆ ಕೃತ್ಯ ಎಸಗಲಾಗಿತ್ತು. ಘಟನೆ ಸಂಬಂಧ ಇದೀಗ ಕುತೂಹಲಕಾರಿ ವಿಚಾರ ಬೆಳಕಿಗೆ ಬಂದಿದ್ದು, ದೈವರ ಮೊರೆಹೊಕ್ಕ ಬಳಿಕ ಕಿಡಿಕೇಡಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಇದರಿಂದ ಬೇಸತ್ತ

ಮಂಗಳೂರು: ಶಾರದೋತ್ಸವ ಬ್ಯಾನರ್ ಹರಿದ ಪ್ರಕರಣ| ಗುಳಿಗನ ಕಾರಣಿಕದಿಂದ ಸಿಕ್ಕಿಬಿದ್ದರಾ ಆರೋಪಿಗಳು? ಕುತೂಹಲ ಮೂಡಿಸಿದ ಗುಳಿಗನ ಹರಕೆ!! Read More »

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿಗೆ ಲಕ್ಷ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ವಿದ್ಯಾರ್ಥಿಗಳ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಕೋರಿ ಅರ್ಜಿ ಸಲ್ಲಿಸಿದ್ದ ಎರಡು ದಂತ ವೈದ್ಯಕೀಯ ಕಾಲೇಜುಗಳಿಗೆ ನ್ಯಾಯಾಲಯದ ಸಮಯ ವ್ಯರ್ಥ ಮಾಡಿರುವುದಕ್ಕಾಗಿ ಕರ್ನಾಟಕ ಹೈಕೋರ್ಟ್ ತಲಾ ರೂ 1 ಲಕ್ಷ ದಂಡ ವಿಧಿಸಿದೆ. “ವಿದ್ಯಾರ್ಥಿಗಳು ನಿಜವಾಗಿಯೂ ಅರ್ಹರಾಗಿದ್ದು ಸೀಟುಗಳಿಂದ ವಂಚಿತರಾಗಿದ್ದರೆ, ಅವರೇ ಸ್ವತಂತ್ರವಾಗಿ ನ್ಯಾಯಾಲಯದ ಮೊರೆ ಹೋಗಬಹುದು. ಆದರೆ, ವಿದ್ಯಾರ್ಥಿಗಳ ಪರವಾಗಿ ಕಾಲೇಜುಗಳು ರಿಟ್ ಅರ್ಜಿಗಳನ್ನು ಸಲ್ಲಿಸುವಂತಿಲ್ಲ’ ಎಂದು ನ್ಯಾಯಾಲಯ ಹೇಳಿದೆ. ಸುಳ್ಯದ ಕೆವಿಜಿ ಡೆಂಟಲ್ ಕಾಲೇಜು ಮತ್ತು ಬೆಂಗಳೂರಿನ ಶ್ರೀ ವೆಂಕಟೇಶ್ವರ ಡೆಂಟಲ್ ಕಾಲೇಜು ಆರು

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿಗೆ ಲಕ್ಷ ದಂಡ ವಿಧಿಸಿದ ಹೈಕೋರ್ಟ್ Read More »

ಮಂಗಳೂರು: ಯುವದಂಪತಿ ನೇಣು ಬಿಗಿದ‌ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಯುವದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳೂರು ನಗರದ ಕಂಕನಾಡಿ‌ ಎಂಬಲ್ಲಿ ನಡೆದಿದೆ. ಇಲ್ಲಿನ ಅಡುಮರೋಳಿ ಎಂಬಲ್ಲಿ ಘಟನೆ ನಡೆದಿದ್ದು, ಪತಿ ಮಲ್ಲಿಕಾರ್ಜುನ್ ಮತ್ತು ಪತ್ನಿ ಸೌಮ್ಯ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಗಳು. ಮೃತ ಮಲ್ಲಿಕಾರ್ಜುನ್ ಹುಬ್ಬಳ್ಳಿ ಮೂಲದವರಾಗಿದ್ದು, ಸೌಮ್ಯ ಮಂಗಳೂರಿನವರಾಗಿದ್ದಾರೆ. ಮೃತ ದಂಪತಿ ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು ಎಂದು ಹೇಳಲಾಗಿದೆ. ಕಂಕನಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ಯುವದಂಪತಿ ನೇಣು ಬಿಗಿದ‌ ಸ್ಥಿತಿಯಲ್ಲಿ ಪತ್ತೆ Read More »

ಸುಳ್ಯದಲ್ಲಿ ಪತ್ತೆಯಾಯ್ತು ಟ್ರಾವಂಕೂರ್ ಅಳಿಲು

ಸಮಗ್ರ ನ್ಯೂಸ್: ದಕ್ಷಿಣ ಭಾರತದಲ್ಲಿ ಅಪರೂಪದ ಅಳಿಲು ಪ್ರಭೇದಗಳಲ್ಲಿ ಒಂದಾದ ಟ್ರಾವಂಕೂರು ಹಾರುವ ಅಳಿಲು ಸುಳ್ಯ ತಾಲೂಕಿನಲ್ಲಿ ಪತ್ತೆಯಾಗಿದೆ. ಇವು ನಿಶಾಚರಿ ಆಗಿರುವುದರಿಂದ ಕಾಣಸಿಗುವುದು ಅಪೂರ್ವ. ಪರಿಸರ ಸಂರಕ್ಷಕ ದೀಪಕ್ ಸುಳ್ಯ ಅವರ ತೋಟದಲ್ಲಿ ಈ ಅಳಿಲು ಪತ್ತೆಯಾಗಿದೆ. ಸ್ಥಳೀಯವಾಗಿ ಇದನ್ನು ದರಗು ಪಾಂಜ, ಚಿಕ್ಕ ಪಾಂಜ ಎಂದು ಕರೆಯುತ್ತಾರೆ. ಪಶ್ಚಿಮಘಟ್ಟದಲ್ಲಿ ಕಂಡುಬರುವ ಅಳಿವಿನಂಚಿನ ಪ್ರಾಣಿ ಪ್ರಭೇದಗಳಲ್ಲಿ ಇದೂ ಒಂದು. ಪಶ್ಚಿಮಘಟ್ಟದಲ್ಲಿ ದೈತ್ಯ ಹಾರುವ ಅಳಿಲು (ಇಂಡಿಯನ್ ಜೈಂಟ್) ಮತ್ತು ಟ್ರಾವಂಕೂರು ಹಾರುವ ಅಳಿಲು ಎಂಬ ಎರಡು

ಸುಳ್ಯದಲ್ಲಿ ಪತ್ತೆಯಾಯ್ತು ಟ್ರಾವಂಕೂರ್ ಅಳಿಲು Read More »

ಕಟೀಲಿಗೂ ವ್ಯಾಪಿಸಿದ ಶೀಘ್ರದರ್ಶನ ಪಿಡುಗು| ₹100ಕ್ಕೆ ಬೇಗ ದರ್ಶನ ಭಾಗ್ಯ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಅಧಿದೇವತೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಡಳಿತ ಮಂಡಳಿ ಮಾಡಿರುವ ಮತ್ತೊಂದು ನಿಯಮ ಈಗ ವಿವಾದಕ್ಕೆ ಕಾರಣವಾಗಿದೆ. ಪ್ರತಿನಿತ್ಯ ಸಾವಿರಾರು ಭಕ್ತರು ಯಾವುದೇ ನೂಕು ನುಗ್ಗಲು ಇಲ್ಲದೇ ಸಾವಕಾಶವಾಗಿ ಪಡೆಯುತ್ತಿದ್ದ ದುರ್ಗೆಯ ದರ್ಶನಕ್ಕೆ ಈಗ ಮೊತ್ತ ವಿಧಿಸಲಾಗಿದೆ. ಕ್ಷೇತ್ರದಲ್ಲಿ ಇದೀಗ ಶೀಘ್ರ ದರ್ಶನ ವ್ಯವಸ್ಥೆಯನ್ನು ಜಾರಿ ಮಾಡಲಾಗಿದ್ದು, ಶೀಘ್ರ ದರ್ಶನ ಪಡೆಯುವ ಪ್ರತಿಯೋರ್ವ ಭಕ್ತನು ನೂರು ರೂಪಾಯಿ ಪಾವತಿಸಿ ದೇವಸ್ಥಾನದ ಒಳಗೆ ಪ್ರವೇಶ ಮಾಡಬಹುದಾಗಿದೆ. ನವರಾತ್ರಿಯ ಬಳಿಕ ಈ ಹೊಸ ನಿಯಮವನ್ನು

ಕಟೀಲಿಗೂ ವ್ಯಾಪಿಸಿದ ಶೀಘ್ರದರ್ಶನ ಪಿಡುಗು| ₹100ಕ್ಕೆ ಬೇಗ ದರ್ಶನ ಭಾಗ್ಯ!! Read More »

ಸುಳ್ಯದಲ್ಲಿ ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡ್ತಿತ್ತು| ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಗೃಹಸಚಿವ ಆರಗ ಜ್ಞಾನೇಂದ್ರ

ಸಮಗ್ರ ನ್ಯೂಸ್: ಪಿಎಫ್​​ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ, ಪಿಎಫ್​​ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ತರಬೇತಿ ನೀಡುತ್ತಿದ್ದರು. ಈ ಬಗ್ಗೆ ಕೆಲವು ಮಾಹಿತಿ ಸಿಕ್ಕಿದ್ದು, ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದರು. ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ದೇಶಾದ್ಯಂತ ಪಿಎಫ್​ಐ ಕಚೇರಿ ಹಾಗೂ ಮುಖಂಡರ ಮೇಲೆ ಎನ್​ಐಎ ಮತ್ತು ಪೊಲೀಸರು

ಸುಳ್ಯದಲ್ಲಿ ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡ್ತಿತ್ತು| ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಗೃಹಸಚಿವ ಆರಗ ಜ್ಞಾನೇಂದ್ರ Read More »

ಪಿಲಿಕುಳದಲ್ಲಿ ಇರುವೆ ಕಾಟದಿಂದ‌ ಒದ್ದಾಡಿದ ಹಾವು|ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸ್ಪಷ್ಟನೆ

ಸಮಗ್ರ ನ್ಯೂಸ್: ಪಿಲಿಕುಳ ಜೈವಿಕ ಉದ್ಯಾನದೊಳಗಿರುವ ಹಾವಿನ ಗೂಡೊಂದರಲ್ಲಿ ಇರುವೆಗಳ ಬಾಧೆಗೊಳಗಾಗಿರುವ ಉರಗದ ಆರೋಗ್ಯ ಸ್ಥಿರವಾಗಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಇರುವೆಗಳು ಹಾವನ್ನು ಕಚ್ಚುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಚಾರ ತಿಳಿದು ಕೂಡಲೇ ಪ್ರಾಧಿಕಾರದ ಆಯುಕ್ತರು ಸಂಬಂಧಪಟ್ಟ ಹಿರಿಯ ವೈಜ್ಞಾನಿಕ ಅಧಿಕಾರಿ, ಪಶುಪಾಲನಾ ವೈದ್ಯಾಧಿಕಾರಿ ಮತ್ತು ಬಯಾಲಾಜಿಸ್ಟ್ ಜೊತೆಗೂಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಇರುವೆಗಳ ಬಾಧೆಗೆ ಒಳಗಾದ ಉರಗದ ಆರೋಗ್ಯವು ಸ್ಥಿರವಾಗಿದೆ ಎಂಬುದಾಗಿ ಪಶುಪಾಲನಾ ವೈದ್ಯಾಧಿಕಾರಿಯವರು ದೃಢೀಕರಿಸಿದ್ದಾರೆ. ಪ್ರಾಧಿಕಾರ

ಪಿಲಿಕುಳದಲ್ಲಿ ಇರುವೆ ಕಾಟದಿಂದ‌ ಒದ್ದಾಡಿದ ಹಾವು|ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸ್ಪಷ್ಟನೆ Read More »

ಪಿಲಿಕುಳ: ಇರುವೆ ಕಾಟದಿಂದ‌ ಒದ್ದಾಡಿದ ಹಾವು| ಸಿಬ್ಬಂದಿ ನಿರ್ಲಕ್ಷಕ್ಕೆ‌ ಆಕ್ರೋಶ

ಸಮಗ್ರ ನ್ಯೂಸ್: ಮಂಗಳೂರು ನಗರದ‌ ಪಿಲಿಕುಳ‌ ಜೈವಿಕ ಉದ್ಯಾನವನದಲ್ಲಿ ಇರುವೆ ಕಾಟದಿಂದ ಹಾವು ಒದ್ದಾಡಿತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪಿಲಿಕುಳ‌ ಜೈವಿಕ ಉದ್ಯಾನವನದಲ್ಲಿ ಪಟ್ಟೆ ಶೀಘ್ರಗಾಮಿ ಹಾವು ಇರುವೆ ಹಿಂಡಿನ ದಾಳಿಯಿಂದ ತಪ್ಪಿಸಿಕೊಳ್ಳಲು ಪರದಾಡಿದೆ. ಇರುವೆ ದಾಳಿಯಿಂದ ಹಾವು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದು, ಉದ್ಯಾನವನಕ್ಕೆ ಭೇಟಿ ನೀಡಿದ ಪ್ರವಾಸಿಗರು ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಬಿಟ್ಟಿದ್ದಾರೆ. ಇದೀಗ ವಿಡಿಯೋ ವೈರಲ್ ಆಗಿದ್ದು ಉದ್ಯಾನವನದ ಸಿಬ್ಬಂದಿಯ ನಿರ್ಲಕ್ಷ್ಯ ದ ಬಗ್ಗೆ ಜನರ ಆಕ್ರೋಶ

ಪಿಲಿಕುಳ: ಇರುವೆ ಕಾಟದಿಂದ‌ ಒದ್ದಾಡಿದ ಹಾವು| ಸಿಬ್ಬಂದಿ ನಿರ್ಲಕ್ಷಕ್ಕೆ‌ ಆಕ್ರೋಶ Read More »

ಸುಳ್ಯ: ನೆಹರೂ, ಕಾರಂತರ ಕಾರು ಚಾಲಕರಾಗಿದ್ದ ಮೋನಪ್ಪ ಗೌಡ ಕೊರಂಬಡ್ಕ ಇನ್ನಿಲ್ಲ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಹಾಗೂ ಸಾಹಿತಿ ಶಿವರಾಮ ಕಾರಂತರ ಕಾರು ಚಾಲಕರಾಗಿದ್ದ ಶತಾಯುಷಿ ಕನಕಮಜಲು ಗ್ರಾಮದ ಮೋನಪ್ಪ ಗೌಡ ಕೊರಂಬಡ್ಕ (102) ಅವರು ವಯೋಸಹಜ ಅಸೌಖ್ಯದಿಂದಾಗಿ ಇಂದು(ಅ.6) ಮುಂಜಾನೆ ನಿಧನರಾಗಿದ್ದಾರೆ. ಭಾರತದ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರೊಂದಿಗೆ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಗುರುತಿಸಿಕೊಂಡಿದ್ದು, ನೆಹರೂ ಅವರ ಕಾರು ಚಾಲಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪುತ್ರ, ಮೂವರು ಪುತ್ರಿಯರು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸುಳ್ಯ: ನೆಹರೂ, ಕಾರಂತರ ಕಾರು ಚಾಲಕರಾಗಿದ್ದ ಮೋನಪ್ಪ ಗೌಡ ಕೊರಂಬಡ್ಕ ಇನ್ನಿಲ್ಲ Read More »