ಕರಾವಳಿ

ಬೆಳ್ತಂಗಡಿ: ರೇಖ್ಯ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಗುಡ್ಡ ಕುಸಿತದಿಂದ ಹಾನಿ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಇದೀಗ ಗುಡ್ಡ ಕುಸಿತದ ಪ್ರಕರಣಗಳು ಹೆಚ್ಚಾಗ ತೊಡಗಿದೆ. ಭಾರಿ ಮಳೆಗೆ ಗುಡ್ಡ ಕುಸಿದು ದೇವಸ್ಥಾನಕ್ಕೆ ಹಾನಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದಿದೆ. ಭಾರೀ ಮಳೆಯಾಗುತ್ತಿರುವ ಕಾರಣ ದೇವಸ್ಥಾನದ ಸುತ್ತಿ ಇರುವ ಗುಡ್ಡ ಏಕಾಏಕಿ ದೇವಸ್ಥಾನದ ಮೇಲೆ ಬಿದ್ದಿದೆ. ದೇವಸ್ಥಾನದ ಗರ್ಭಗುಡಿ ಮತ್ತು‌ ಸುತ್ತು ಪೌಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ನೀರಿನ ಜೊತೆಗೆ ದೇವಸ್ಥಾನದ ಒಳಗಡೆ ಮಣ್ಣು ನುಗ್ಗಿದ್ದು. ಮಳೆ ಜಾಸ್ತಿಯಾದರೆ ಮತ್ತಷ್ಟು ಗುಡ್ಡ […]

ಬೆಳ್ತಂಗಡಿ: ರೇಖ್ಯ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಗುಡ್ಡ ಕುಸಿತದಿಂದ ಹಾನಿ Read More »

ಶಿರಾಡಿ ಘಾಟ್ ನಲ್ಲಿ ‌ಮತ್ತೆ ಗುಡ್ಡ‌ ಕುಸಿತ| ತೆರವಾಗಿದ್ದ ರಸ್ತೆ ಸಂಚಾರ ನಿಮಿಷಗಳಲ್ಲೇ ಬಂದ್

ಸಮಗ್ರ ನ್ಯೂಸ್: ಶಿರಾಡಿಘಾಟ್‌ನಲ್ಲಿ ಗುಡ್ಡ ಕುಸಿತವಾಗಿದೆ. ಕೆಲವೇ ನಿಮಿಷಗಳ ಹಿಂದೆ ತೆರವಾಗಿದ್ದ ರಸ್ತೆ ಮತ್ತೆ ಬಂದ್ ಆಗಿದೆ. ಶಿರಾಡಿಘಾಟ್‌ನ ದೊಡ್ಡ ತಪ್ಪಲು ಬಳಿ ಆ.1ರ ಗುರುವಾರ ಮತ್ತೆ ಭೂಕುಸಿತವಾಗಿದ್ದು, ದೊಡ್ಡ ಸದ್ದಿನೊಂದಿಗೆ ಮಣ್ಣು ಕುಸಿದಿದೆ. ಕಳೆದ ಮೂರು ದಿನಗಳಲ್ಲಿ ಪದೇ ಪದೇ ಭೂಮಿ ಕುಸಿಯುತಿದ್ದು, ಶಿರಾಡಿ ಘಾಟ್‌ನಲ್ಲಿ ಆತಂಕ ಹೆಚ್ಚಿದೆ. ಶಿರಾಡಿ ಘಾಟ್‌ ಕಡೆ ಪ್ರಯಾಣಿಸುವವರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಶಿರಾಡಿ ಘಾಟಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಜು.31ರ ಬುಧವಾರ ಸಂಜೆ ವೇಳೆಗೆ ಭೂ ಕುಸಿತವಾಗಿ 2

ಶಿರಾಡಿ ಘಾಟ್ ನಲ್ಲಿ ‌ಮತ್ತೆ ಗುಡ್ಡ‌ ಕುಸಿತ| ತೆರವಾಗಿದ್ದ ರಸ್ತೆ ಸಂಚಾರ ನಿಮಿಷಗಳಲ್ಲೇ ಬಂದ್ Read More »

ನಿಲ್ಲದ ಕುಂಭದ್ರೋಣ‌ ಮಳೆ| ದ.ಕ ಜಿಲ್ಲೆಯಲ್ಲಿ ಆ.02ರಂದು ಪಿಯುಸಿವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರೀ ಮಳೆ ಮುಂದುವರೆದಿರುವ‌ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆ. ೨ರಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯಿಂದ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಆಗಸ್ಟ್ 2ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

ನಿಲ್ಲದ ಕುಂಭದ್ರೋಣ‌ ಮಳೆ| ದ.ಕ ಜಿಲ್ಲೆಯಲ್ಲಿ ಆ.02ರಂದು ಪಿಯುಸಿವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಕರ್ನಾಟಕದ 29 ತಾಲೂಕುಗಳಲ್ಲಿ ಭೂಕುಸಿತದ ಭೀತಿ| ಸುಳ್ಯ, ಪುತ್ತೂರು ಸೇರಿದಂತೆ ಕರಾವಳಿ, ಮಲೆನಾಡಿನ ಹಲವು ತಾಲೂಕುಗಳು ಡೇಂಜರ್ ಝೋನ್!!

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಮತ್ತು ಜನತೆ ಈಗಲೇ ಎಚ್ಚೆತ್ತುಕೊಂಡು ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ದರೆ ಮಲೆನಾಡು ಮತ್ತು ಕರಾವಳಿ ಭಾಗದ 29 ತಾಲೂಕಿನ ಹಲವು ಕಡೆಗಳಲ್ಲಿ ಕೇರಳದ ವಯನಾಡಿನ ರೀತಿಯಲ್ಲೇ ಭೂಕುಸಿತ ಸಂಭವಿಸುವ ಅಪಾಯವಿದೆ! ಮಳೆಗಾಲದ ಸಂದರ್ಭದಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಉಂಟಾಗುವ ಭೂಕುಸಿತಕ್ಕೆ ಕಾರಣ ಹಾಗೂ ಅದನ್ನು ತಡೆಯುವ ಸಲುವಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು 2022ರಲ್ಲಿ ಭೂಕುಸಿತ ನಿರ್ವಹಣೆಗಾಗಿ ಕ್ರಿಯಾಯೋಜನೆ ರೂಪಿಸಿತ್ತು. ಆ ಕ್ರಿಯಾಯೋಜನೆಗೆ ತಕ್ಕಂತೆ ಸರ್ಕಾರ ಈವರೆಗೆ ಸಮರ್ಪಕ ಕ್ರಮ ಕೈಗೊಂಡಿಲ್ಲ. ಹೀಗಾಗಿ

ಕರ್ನಾಟಕದ 29 ತಾಲೂಕುಗಳಲ್ಲಿ ಭೂಕುಸಿತದ ಭೀತಿ| ಸುಳ್ಯ, ಪುತ್ತೂರು ಸೇರಿದಂತೆ ಕರಾವಳಿ, ಮಲೆನಾಡಿನ ಹಲವು ತಾಲೂಕುಗಳು ಡೇಂಜರ್ ಝೋನ್!! Read More »

ಮಂಗಳೂರು ವಿವಿ ಸಂಧ್ಯಾ ಕಾಲೇಜು ಸ್ಥಗಿತಗೊಳಿಸದಂತೆ NSUI ಮನವಿ

ಸಮಗ್ರ ನ್ಯೂಸ್: ಎನ್.ಎಸ್.ಯು.ಐ ಮಂಗಳೂರು ವಿಧಾನಸಭಾ ಕ್ಷೇತ್ರದ ವತಿಂದ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳನ್ನು ಭೇಟಿ ಮಾಡಿ ಸಂಜೆ ಕಾಲೇಜು ಸ್ಥಗಿತಗೊಳಿಸಿರುವ ಕುರಿತು ಮಾತನಾಡಿ, ಅದನ್ನು ಸ್ಥಗಿತಗೊಳಿಸದಂತೆ ಮನವಿ ಮಾಡಿದರು. ಕಾಲೇಜು ನಿಲ್ಲಿಸಿದರೆ ಪ್ರದೇಶದ ವಿದ್ಯಾಭ್ಯಾಸ ಮಾಡಲಿಚ್ಛಿಸುವ ಅನೇಕ ಬಡ ವಿದ್ಯಾರ್ಥಿಗಳು ಸಂಕಷ್ಟಕ್ಕೊಳಗಾಗುವ ಸಾಧ್ಯತೆಯಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ NSUI ಮಂಗಳೂರು ವಿಧಾನಸಭಾ ಕ್ಷೇತ್ರರ ಅಧ್ಯಕ್ಷರಾದ ಶಾಹಿಲ್ ಮಂಚಿಲ ಅವರ ನೇತೃತ್ವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪಿ.ಎಲ್ ಧರ್ಮ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ NSUI ಮಂಗಳೂರು

ಮಂಗಳೂರು ವಿವಿ ಸಂಧ್ಯಾ ಕಾಲೇಜು ಸ್ಥಗಿತಗೊಳಿಸದಂತೆ NSUI ಮನವಿ Read More »

ಉಪ್ಪಿನಂಗಡಿ: 5 ವರ್ಷಗಳ ಬಳಿಕ ನೇತ್ರಾವತಿ-ಕುಮಾರಧಾರ ನದಿಗಳ ಸಂಗಮ

ಸಮಗ್ರ ನ್ಯೂಸ್: ಸತತ ಮಳೆಯಿಂದಾಗಿ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳೆರಡು ಉಕ್ಕಿ ಹರಿದು ಮಂಗಳವಾರ ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಮುಂಭಾಗದಲ್ಲಿ ನದಿಗಳೆರಡು ಸಂಗಮಿಸಿ ಬಾಗಿನ ಸಮರ್ಪಣ, ಗಂಗಾ ಪೂಜಾ ಹಾಗೂ ಪವಿತ್ರ ಸಂಗಮ ತೀರ್ಥ ಸ್ನಾನ ಜರಗಿತು. 2019ರ ಬಳಿಕ ಇದೇ ಮೊದಲ ಬಾರಿ ಇಲ್ಲಿ ಸಂಗಮ ನೆರವೇರಿದೆ. ಮಂಗಳವಾರ ಮಧ್ಯಾಹ್ನದಿಂದ ಅಪಾಯದ ಮಟ್ಟವನ್ನು ಮೀರಿ ಹರಿದ ನೇತ್ರಾವತಿ ದೇವಾಲಯದ ಮಹಾಕಾಳಿ ಅಮ್ಮನವರ ಗುಡಿಯನ್ನು ಆವರಿಸಿ ಹರಿಯತೊಡಗಿತು. ಆ ಬಳಿಕ ಸಹಸ್ರಲಿಂಗೇಶ್ವರ ದೇವಾಲಯದ ಮುಂಭಾಗಕ್ಕೆ ವಿಸ್ತರಿಸಿ

ಉಪ್ಪಿನಂಗಡಿ: 5 ವರ್ಷಗಳ ಬಳಿಕ ನೇತ್ರಾವತಿ-ಕುಮಾರಧಾರ ನದಿಗಳ ಸಂಗಮ Read More »

ಉಜಿರೆ: ಎಸ್.ಡಿ‌.ಎಂ ಆಸ್ಪತ್ರೆಯ ಪಾರ್ಕಿಂಗ್ ಏರಿಯಾ ಕುಸಿತ| ಹಲವು ವಾಹನಗಳು ಜಖಂ

ಸಮಗ್ರ ನ್ಯೂಸ್: ಮಹಾಮಳೆಗೆ ಕ್ಷಣಕ್ಕೊಂದು ದುರಂತ ನಡೆಯುತ್ತಿದ್ದು ಉಜಿರೆಯ ಎಸ್.ಡಿ.ಎಂ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ತಡೆಗೋಡೆ ಕುಸಿತವಾಗಿ ಹಲವು ವಾಹನಗಳು ಜಖಂ ಆಗಿದೆ. ಭಾರಿ ಮಳೆ ಸುರಿಯುತ್ತಿರುವುದರಿಂದ ತಡೆಗೋಡೆ ಕುಸಿತವಾಗಿದೆ. ಅಂದಾಜು 25ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಆಸ್ಪತ್ರೆ ಪಾರ್ಕಿಂಗ್ ನಲ್ಲಿ ನಿಲ್ಲಿಸಲಾಗಿತ್ತು.ತಡೆಗೋಡೆ ದ್ವಿಚಕ್ರ ವಾಹನಗಳ ಮೇಲೆ ಕುಸಿದು ಬಿದ್ದಿದ್ದು, ತಡೆಗೋಡೆ ಅಡಿ ನಿಲ್ಲಿಸಲಾಗಿದ್ದ ಎಲ್ಲಾ ವಾಹನಗಳು ಜಖಂ ಆಗಿದೆ.

ಉಜಿರೆ: ಎಸ್.ಡಿ‌.ಎಂ ಆಸ್ಪತ್ರೆಯ ಪಾರ್ಕಿಂಗ್ ಏರಿಯಾ ಕುಸಿತ| ಹಲವು ವಾಹನಗಳು ಜಖಂ Read More »

ಉಪ್ಪಿನಂಗಡಿ: ಅಪಾಯದ ಮಟ್ಟ ಮೀರಿ‌ ಹರಿಯುತ್ತಿರುವ ನೇತ್ರಾವತಿ| ಕುಮಾರಧಾರ – ನೇತ್ರಾವತಿ ಸಂಗಮ ಪುಣ್ಯಸ್ನಾನಕ್ಕೆ ಕ್ಷಣಗಣನೆ| ಇತ್ತ‌ ರಾ.ಹೆದ್ದಾರಿಯತ್ತ ಆವರಿಸಿದ ನೆರೆನೀರು

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ನೇತ್ರಾವತಿ, ಕುಮಾರಧಾರ ನದಿ ಉಕ್ಕಿ ಹರಿಯುತ್ತಿದೆ. ನೇತ್ರಾವತಿ ಮತ್ತು ಕುಮಾರದಾರ ನದಿಗಳ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಸದ್ಯ 29.09 ಮೀಟರ್ ನಷ್ಟು ನದಿ ನೀರಿನ ಹರಿವು ಇದ್ದು ಅಪಾಯದ ಮಟ್ಟ 31.05 ಆಗಿದೆ. ಪಂಜಳ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಗೆ ನೀರು ನುಗ್ಗಿದ್ದು ಹೆದ್ದಾರಿಯ ಒಂದು ಬದಿಯಲ್ಲಿ ಮಾತ್ರ ವಾಹನಗಳು ಸಂಚರಿಸುತ್ತಿದೆ. ಮತ್ತೊಮ್ಮೆ ಪ್ರವಾಹದ ಭೀತಿ ಎದುರಾಗಿದ್ದು, ಸ್ಥಳೀಯ ಜನರಲ್ಲಿ

ಉಪ್ಪಿನಂಗಡಿ: ಅಪಾಯದ ಮಟ್ಟ ಮೀರಿ‌ ಹರಿಯುತ್ತಿರುವ ನೇತ್ರಾವತಿ| ಕುಮಾರಧಾರ – ನೇತ್ರಾವತಿ ಸಂಗಮ ಪುಣ್ಯಸ್ನಾನಕ್ಕೆ ಕ್ಷಣಗಣನೆ| ಇತ್ತ‌ ರಾ.ಹೆದ್ದಾರಿಯತ್ತ ಆವರಿಸಿದ ನೆರೆನೀರು Read More »

ಬೆಳ್ಳಾರೆ:ಭಾರೀ ಮಳೆಗೆ ಉಕ್ಕಿ ಹರಿದ ಗೌರಿ ಹೊಳೆ| ಪೆರುವಾಜೆ ಜಲದುರ್ಗಾ ದೇವಸ್ಥಾನ ಜಲಾವೃತ

ಸಮಗ್ರ ನ್ಯೂಸ್: ಮಲೆನಾಡು‌ ಹಾಗೂ ಕರಾವಳಿಯಲ್ಲಿ ಭಾರಿ ಮಳೆ‌ ಸುರಿಯುತ್ತಿದ್ದು ಬೆಳ್ಳಾರೆ ಸಮೀಪದ ಪೆರುವಾಜೆಯಲ್ಲಿ ಗೌರಿಹೊಳೆ‌ ಉಕ್ಕಿ ಹರಿದಿದೆ. ಪರಿಣಾಮವಾಗಿ ಪೆರುವಾಜೆಯ ಜಲದುರ್ಗಾ ದೇವಿ ಸನ್ನಿದಾನ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳು ನೆರೆ ನೀರಿನಿಂದ ಆವೃತವಾಗಿವೆ.

ಬೆಳ್ಳಾರೆ:ಭಾರೀ ಮಳೆಗೆ ಉಕ್ಕಿ ಹರಿದ ಗೌರಿ ಹೊಳೆ| ಪೆರುವಾಜೆ ಜಲದುರ್ಗಾ ದೇವಸ್ಥಾನ ಜಲಾವೃತ Read More »

ಪುತ್ತೂರು ಸಮೀಪದ ಶೇಖಮಲೆ ಬಳಿ ಗುಡ್ಡ ಕುಸಿತ| ಮಾಣಿ -ಮೈಸೂರು ರಾ.ಹೆದ್ದಾರಿ ಸಂಚಾರ ಬಂದ್

ಸಮಗ್ರ ನ್ಯೂಸ್: ಮಾಣಿ-ಮೈಸೂರು ಹೆದ್ದಾರಿಯ ಪುತ್ತೂರು – ಸುಳ್ಯ ರಸ್ತೆಯ ಶೇಖಮಲೆ ಎಂಬಲ್ಲಿ ಬಳಿ ಗುಡ್ಡ ಕುಸಿತ ಸಂಭವಿಸಿದೆ. ಪರಿಣಾಮವಾಗಿಬಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ ಈಗಾಗಲೇ 4 ವಿದ್ಯುತ್‌ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು 2 ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಸಂಬಂಧಪಟ್ಟವರ ಕಾರ್ಯಾಚರಣೆಗೆ ಪ್ರಯಾಣಿಕರು ಕಾಯುತ್ತಿದ್ದಾರೆ. ಸದ್ಯ ಪುತ್ತೂರು ಸುಳ್ಯ ರಸ್ತೆ ಸಂಚಾರ ಬಂದ್‌ ಆಗಿದೆ ಎಂದು ತಿಳಿದುಬಂದಿದೆ.

ಪುತ್ತೂರು ಸಮೀಪದ ಶೇಖಮಲೆ ಬಳಿ ಗುಡ್ಡ ಕುಸಿತ| ಮಾಣಿ -ಮೈಸೂರು ರಾ.ಹೆದ್ದಾರಿ ಸಂಚಾರ ಬಂದ್ Read More »