ಕರಾವಳಿ

ಪಡಿತರಕ್ಕಾಗಿ ನ್ಯಾಯಬೆಲೆ ಅಂಗಡಿ ಬಾಗಿಲಲ್ಲಿ ಕಾದು ಸುಸ್ತಾದ ಜನ|ಸರ್ವರ್ ಸಮಸ್ಯೆಯಿಂದ ವೃದ್ದರು, ಮಹಿಳೆಯರ ಪರದಾಟ

ಸಮಗ್ರ ನ್ಯೂಸ್: ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರದಾರರು ಪರದಾಡಿದ ಘಟನೆ ಮೂಡಿಗೆರೆ ತಾಲೂಕಿನ ಸುಂಕಸಾಲೆ ಸಮೀಪದ ಅಬ್ರುಗುಡಿಗೆಯಲ್ಲಿ ನಡೆದಿದೆ. ಕಳೆದ ಕೆಲದಿನಗಳಿಂದ ಸರ್ವರ್ ಸಮಸ್ಯೆಯಿಂದ ಪಡಿತರದಾರರು ನ್ಯಾಯಬೆಲೆ ಅಂಗಡಿಯಲ್ಲಿ ಸಂಜೆಯವರೆಗೂ ಕಾದು ಹಿಂದಿರುಗುವಂತಾಗಿದೆ.ಈ ಭಾಗದಲ್ಲಿ ಬಹುತೇಕರೂ ಕೂಲಿ ಕಾರ್ಮಿಕರಾಗಿದ್ದು ಕೆಲಸಕ್ಕೆ ರಜೆ ಮಾಡಿ ನ್ಯಾಯಬೆಲೆ ಅಂಗಡಿಗೂ ಬಂದರೂ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಪಡೆಯಲು ಸಾಧ್ಯವಾಗಿಲ್ಲ. ಹಳ್ಳಿಗಾಡು ಪ್ರದೇಶದಿಂದ ಬರುವ ಮಹಿಳೆಯರು, ವೃದ್ದರು ದಿನಗಟ್ಟಲೆ ನ್ಯಾಯಬೆಲೆ ಅಂಗಡಿ ಬಾಗಿಲು ಕಾಯುವಂತಾಗಿದೆ. ಅರಮನೆ ತಲಗೂರು ಗ್ರಾಮದ ವೃದ್ದೆ ಸುಂದರಮ್ಮ‌

ಪಡಿತರಕ್ಕಾಗಿ ನ್ಯಾಯಬೆಲೆ ಅಂಗಡಿ ಬಾಗಿಲಲ್ಲಿ ಕಾದು ಸುಸ್ತಾದ ಜನ|ಸರ್ವರ್ ಸಮಸ್ಯೆಯಿಂದ ವೃದ್ದರು, ಮಹಿಳೆಯರ ಪರದಾಟ Read More »

ಸಾಧನೆಗೆ ಅಡ್ಡಿಯಾಗದ ದಿವ್ಯಾಂಗ| ದ.ಕನ್ನಡದ ಈ ಯುವಕ ಎಲ್ಲರಿಗೂ ಸ್ಪೂರ್ತಿ

ಸಮಗ್ರ ನ್ಯೂಸ್: ದ.ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮದ ಜನಾರ್ದನ ಗೌಡ ಮತ್ತು ಬೇಬಿ ದಂಪತಿಯ ಪುತ್ರ ಪ್ರದೀಪ್ ಬಿ.ಜೆ (23) ಅವರು ಎಂಡೋಸಲ್ಫಾನ್ ಸಮಸ್ಯೆಯಿಂದ ಅಂಗವೈಕಲ್ಯವನ್ನು ಮೀರಿ ಇತ್ತೀಚೆಗೆ ಶಿವಮೊಗ್ಗದ ತೀರ್ಥಹಳ್ಳಿಯ ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಿಗನಾಗಿ ನೇಮಕಗೊಂಡಿದ್ದಾರೆ. ಪ್ರತಿದಿನ ಅವರು ಮೊಣಕಾಲುಗಳ ಮೇಲೆ ನಡೆಯುತ್ತಾ ಕಚೇರಿಗೆ ಪ್ರವೇಶಿಸುತ್ತಿದ್ದಾರೆ. ಪ್ರದೀಪ್ ಅವರ ಕಾಲುಗಳು ಮೊಣಕಾಲಿನ ಕೆಳಗೆ ದುರ್ಬಲವಾಗಿವೆ. ಅವರ ಎಡಗೈಗೂ ಬಲವಿಲ್ಲ. ಆದಾಗ್ಯೂ ದೈಹಿಕ ಅಂಗವೈಕಲ್ಯ ಕಡೆಗಣಿಸಿದ ಅವರು, ಉತ್ತಮ ಶೈಕ್ಷಣಿಕ ದಾಖಲೆಯನ್ನು ಪಡೆದಿದ್ದಾರೆ. ಪ್ರಸ್ತುತ

ಸಾಧನೆಗೆ ಅಡ್ಡಿಯಾಗದ ದಿವ್ಯಾಂಗ| ದ.ಕನ್ನಡದ ಈ ಯುವಕ ಎಲ್ಲರಿಗೂ ಸ್ಪೂರ್ತಿ Read More »

ಅಂಗಿ ಬನಿಯನ್ ತೆಗೆಯುವ ನಿಯಮ ಮೂಲಭೂತ ಹಕ್ಕಿನ ಉಲ್ಲಂಘನೆ| ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದ ಪರಿಸರ ಸಂರಕ್ಷಣಾ ಒಕ್ಕೂಟ

ಸಮಗ್ರ ನ್ಯೂಸ್: ದೇವರ ದರ್ಶನಕ್ಕಾಗಿ ಅಂಗಿ ಬನಿಯನ್ ತೆಗೆದು ಪ್ರವೇಶಿಸುವುದು ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ದೂರು ಸಲ್ಲಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲ್ಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲ ಮತ್ತೆ ಸುದ್ದಿಯಲ್ಲಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಆಗಮಿಸುವ ಪುರುಷ ಭಕ್ತರು ಅಂಗಿ-ಬನಿಯನ್ ತೆಗೆದು ಬರಬೇಕು ಎಂಬ ಸದ್ಯ ಇರುವ ನಿಯಮವನ್ನು ಬದಲಿಸಲು ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟವು ಮನವಿ ಮಾಡಿದೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಜೊತೆಗೆ ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ

ಅಂಗಿ ಬನಿಯನ್ ತೆಗೆಯುವ ನಿಯಮ ಮೂಲಭೂತ ಹಕ್ಕಿನ ಉಲ್ಲಂಘನೆ| ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದ ಪರಿಸರ ಸಂರಕ್ಷಣಾ ಒಕ್ಕೂಟ Read More »

NIA ದಾಳಿ ಖಂಡಿಸಿ ಪಿಎಫ್ಐ, ಎಸ್ಡಿಪಿಐ ನಿಂದ ಕೇರಳ ಬಂದ್| ಬಸ್ ಗಳಿಗೆ ಕಲ್ಲೇಟು, ಅಲ್ಲಲ್ಲಿ ಪ್ರತಿಭಟನೆ

ಸಮಗ್ರ ನ್ಯೂಸ್: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮೇಲೆ ಎನ್‌ಐಎ ದಾಳಿ ಬೆನ್ನಲ್ಲೇ ಕೇರಳ ಬಂದ್‌ಗೆ ಪಿಎಫ್‌ಐ ಕರೆ ನೀಡಿದೆ. ಪಿಎಫ್‌ಐ ಕಾರ್ಯಕರ್ತರು ಆಲುವಾದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಕಲ್ಲು ತೂರಾಟ ಮಾಡಲಾಗಿದ್ದು, ಬಸ್ಸಿನ ಕನ್ನಡಿಗಳು ಒಡೆದು ಹಾನಿ ಮಾಡಿದ್ದಾರೆ. ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆಂದು ಆರೋಪಿಸಿ 15 ರಾಜ್ಯಗಳಲ್ಲಿ ಪಿಎಫ್‌ಐ ಮುಖಂಡರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಎನ್‌ಐಎ ನೇತೃತ್ವದ ಬಹು ಏಜೆನ್ಸಿ ತನಿಖಾ ತಂಡಗಳು ನಡೆಸಿದ ದಾಳಿಗಳು, 106 ನಾಯಕರು ಮತ್ತು

NIA ದಾಳಿ ಖಂಡಿಸಿ ಪಿಎಫ್ಐ, ಎಸ್ಡಿಪಿಐ ನಿಂದ ಕೇರಳ ಬಂದ್| ಬಸ್ ಗಳಿಗೆ ಕಲ್ಲೇಟು, ಅಲ್ಲಲ್ಲಿ ಪ್ರತಿಭಟನೆ Read More »

ಕೊಕ್ಕಡ: ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್ ಮ್ಯಾನ್ ಮೇಲೆ ಮಾರಣಾಂತಿಕ ಹಲ್ಲೆ

ಬೆಳ್ತಂಗಡಿ: ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆ ಕರೆಂಟ್ ಕಟ್ ಮಾಡಿದ್ದಕ್ಕೆ ಲೈನ್ ಮ್ಯಾನ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜಂಕ್ಷನ್ ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಹಲ್ಲೆ ನಡೆಸಿದಾತನನ್ನು ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ರಿಜೀಶ್ (38) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೆಸ್ಕಾಂ ಪವರ್ ಮ್ಯಾನ್ ದುಂಡಪ್ಪ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ದಿ. ಕಾಂತು ಪೂಜಾರಿ ಎಂಬುವವರ ಮನೆಯ ಕರೆಂಟ್ ಬಿಲ್

ಕೊಕ್ಕಡ: ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್ ಮ್ಯಾನ್ ಮೇಲೆ ಮಾರಣಾಂತಿಕ ಹಲ್ಲೆ Read More »

ಕುಕ್ಕೆ: ಸರ್ಪಸಂಸ್ಕಾರ ಸೇವಾ ದರ ಪರಿಷ್ಕರಣೆ| ಭಕ್ತಾದಿಗಳಿಗೆ ತಟ್ಟಿದ ದರ ಏರಿಕೆ‌ ಬಿಸಿ

ಸಮಗ್ರ ನ್ಯೂಸ್: ಪ್ರಸಿದ್ದ ನಾಗಾರಾಧನಾ ಪುಣ್ಯತಾಣ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಅಧೀನದ ಪುರಾಣ ಪ್ರಸಿದ್ಧ ಪುಣ್ಯ ಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ಸೇವಾ ದರವನ್ನು ಪರಿಷ್ಕರಿಸಲಾಗಿದೆ. ಇನ್ನು ಮುಂದೆ ನಡೆಸಲ್ಪಡುವ ‌ಸೇವೆಗಳಿಗೆ 4200 ರೂ ಪರಿಷ್ಕೃತ ದರವನ್ನು ನಿಗದಿಪಡಿಸಲಾಗಿದ್ದು, ಭಕ್ತಾದಿಗಳಿಗೆ ದರ ಏರಿಕೆ‌ ಬಿಸಿ ತಟ್ಟಿದೆ. ಕರ್ನಾಟಕ ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ಶ್ರೀ ದೇವಳದಲ್ಲಿ ಸರ್ಪದೋಷ ನಿವಾರಣೆಗಾಗಿನಡೆಸುವ ಸರ್ಪಸಂಸ್ಕಾರ ಸೇವೆಯ ಸೇವಾ

ಕುಕ್ಕೆ: ಸರ್ಪಸಂಸ್ಕಾರ ಸೇವಾ ದರ ಪರಿಷ್ಕರಣೆ| ಭಕ್ತಾದಿಗಳಿಗೆ ತಟ್ಟಿದ ದರ ಏರಿಕೆ‌ ಬಿಸಿ Read More »

ಮಂಗಳೂರು: ಎಸ್‍ಡಿಪಿಐ ಕಚೇರಿಯ ಬಾಗಿಲು ಧ್ವಂಸ ಮಾಡಿ ನುಗ್ಗಿದ ಎನ್‍ಐಎ ಅಧಿಕಾರಿಗಳು

ಸಮಗ್ರ ನ್ಯೂಸ್: ಎನ್‍ಐಎ ಅಧಿಕಾರಿಗಳು ಸೆ.22 ಎಸ್‍ಡಿಪಿಐ ಕಚೇರಿಯ ಬಾಗಿಲು ಧ್ವಂಸ ಮಾಡಿ ಕಚೇರಿಯ ಒಳಗೆ ನುಗ್ಗಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಎನ್‍ಐಎ ಅಧಿಕಾರಿಗಳು ಎಸ್‍ಡಿಪಿಐ ಕಚೇರಿಯ ಬೀಗವನ್ನು ಬ್ಲೇಡ್‍ನಿಂದ ಕಟ್ ಮಾಡಿ ಕಚೇರಿಯ ಶಟರ್ ಒಪನ್ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅಧಿಕಾರಿಗಳು ಒಳಭಾಗದ ಡೋರ್‌ನ ಗಾಜನ್ನು ಪುಡಿ ಮಾಡಿದ್ದಾರೆ. ಮಂಗಳೂರಿನ ಕಚೇರಿಯೊಳಗೆ ನುಗ್ಗಿದ ಎನ್‍ಐಎ ಅಧಿಕಾರಿಗಳು ಅಲ್ಲಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಕಂಪ್ಯೂಟರ್ ಸಿಪಿಯುನ ಹಾರ್ಡ್‍ಡಿಸ್ಕ್‌ನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ

ಮಂಗಳೂರು: ಎಸ್‍ಡಿಪಿಐ ಕಚೇರಿಯ ಬಾಗಿಲು ಧ್ವಂಸ ಮಾಡಿ ನುಗ್ಗಿದ ಎನ್‍ಐಎ ಅಧಿಕಾರಿಗಳು Read More »

ಮಂಗಳೂರು: ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ರಾತ್ರೋರಾತ್ರಿ ‌ಪರಾರಿ

ಸಮಗ್ರ ನ್ಯೂಸ್: ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೇಲ್ ನಿಂದ ಮೂವರು ವಿಧ್ಯಾರ್ಥಿನಿಯರು ರಾತ್ರೋರಾತ್ರಿ ಪರಾರಿಯಾದ ಘಟನೆ ನಡೆದಿದೆ. ಮಂಗಳೂರಿನ ಮೇರಿ ಹಿಲ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರ ಹಾಸ್ಟೆಲ್​ನಲ್ಲಿದ್ದ ಮೂವರು ಹಾಸ್ಟೇಲ್ ನ ಕಿಟಕಿ ಮುರಿದು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ನಿವಾಸಿಗಳಾಗಿದ್ದು, ಮತ್ತೋರ್ವ ವಿದ್ಯಾರ್ಥಿನಿ ಚಿತ್ರದುರ್ಗ ಮೂಲದವಳೆಂದು ಗೊತ್ತಾಗಿದೆ. ವಿದ್ಯಾರ್ಥಿನಿಯರು ಪಿಯುಸಿ ಓದುತ್ತಿದ್ದಾರೆ. “ನಾವು ಹೋಗುತ್ತಿದ್ದೇವೆ, ಕ್ಷಮಿಸಿ” ಎಂದು ಚೀಟಿ ಬರೆದಿಟ್ಟು ಮುಂಜಾನೆ 3 ಗಂಟೆಯ ವೇಳೆಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ. ಕಂಕನಾಡಿ

ಮಂಗಳೂರು: ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ರಾತ್ರೋರಾತ್ರಿ ‌ಪರಾರಿ Read More »

ಬಂಟ್ವಾಳ; ನಿನ್ನೆ ಬಸ್ ನಲ್ಲಿ ಮಹಿಳೆಯ ಬ್ಯಾಗ್ ನಿಂದ ಪರ್ಸ್ ಕದ್ದ ಕಳ್ಳಿ ಅಜ್ಜಿ , ಇಂದು ಪೋಲಿಸ್ ವಶ

ಬಂಟ್ವಾಳ: ಮಂಗಳವಾರ ಬೆಳಿಗ್ಗೆ ಮಹೇಶ್ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗಿನಿಂದ ಪರ್ಸ್ ಎಗರಿಸಿದ್ದ ಕಳ್ಳಿ ಅಜ್ಜಿಯನ್ನು ಪತ್ತೆ ಹಚ್ಚಲಾಗಿದ್ದು, ಸದ್ಯಕ್ಕೆ ಕಂಕನಾಡಿ ಪೊಲೀಸರ ವಶದಲ್ಲಿದ್ದಾಳೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಯೋಜನಾಧಿಕಾರಿಯೊಬ್ಬರ ಪರ್ಸ್ ಅನ್ನು ಮಹಿಳೆಯೊಬ್ಬರು ಕಳವು ಮಾಡಿರುವ ದೃಶ್ಯ ಸಿಸಿ ಕಳವು ಪ್ರಕರಣಕ್ಕೆ ಕ್ಯಾಮರದಲ್ಲಿ ಸೆರೆಯಾಗಿದೆ. ಕಳವು ಸಂಬಂಧಿಸಿ ಯೋಜನಾಧಿಕಾರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ನಡುವೆ ಬಸ್‌ನಲ್ಲಿ ವೃದ್ಧ ಮಹಿಳೆಯೊಬ್ಬರು ಅವರ ಪರ್ಸ್ ಅನ್ನು

ಬಂಟ್ವಾಳ; ನಿನ್ನೆ ಬಸ್ ನಲ್ಲಿ ಮಹಿಳೆಯ ಬ್ಯಾಗ್ ನಿಂದ ಪರ್ಸ್ ಕದ್ದ ಕಳ್ಳಿ ಅಜ್ಜಿ , ಇಂದು ಪೋಲಿಸ್ ವಶ Read More »

ಸುಳ್ಯ: ಜಾಲ್ಸೂರಿನಲ್ಲಿದೆ ಬಂಟ್ವಾಳದ ಶುದ್ಧ ಕುಡಿಯುವ ನೀರಿನ ಘಟಕ!

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲಾಗಿದ್ದು, ಘಟಕ ತಟಸ್ಥವಾಗಿದ್ದು, ಸಾರ್ವಜನಿಕವಾಗಿ ಉಪಯೋಗ ಇಲ್ಲದಂತಾಗಿದೆ. ಕೆಲ ವರ್ಷಗಳಿಂದ ಸಾರ್ವಜನಿಕರಿಗಾಗಿಯೇಶುದ್ಧ ನೀರಿನ ಘಟಕ ನಿರ್ಮಿಸಲಾಗಿತ್ತು. ಆದರೆ ಉದ್ಘಾಟನೆ ನಡೆದ ಬಳಿಕ ಕೆಲವೇ ಕೆಲವು ದಿನ ಮಾತ್ರ ಇದರ ಸದುಪಯೋಗವನ್ನು ಜನರು ಪಡೆದಿದ್ದರು ಅಷ್ಟೆ. ಆನಂತರ ಅದು ಕೆಟ್ಟು ಹೋಗಿದ್ದು ಅದನ್ನು ಸರಿಪಡಿಸುವ ಕಡೆ ಯಾರು ಕೂಡ ತಲೆ ಹಾಕಲಿಲ್ಲ. ತಾಲೂಕಿನ ಹಲವೆಡೆ‌ ಇಂಥಹ ಘಟಕಗಳು ನಿರ್ಮಾಣವಾಗಿದ್ದು, ಬಹುತೇಕ ಘಟಕಗಳು ಸರ್ಕಾರಿ

ಸುಳ್ಯ: ಜಾಲ್ಸೂರಿನಲ್ಲಿದೆ ಬಂಟ್ವಾಳದ ಶುದ್ಧ ಕುಡಿಯುವ ನೀರಿನ ಘಟಕ! Read More »