ಕರಾವಳಿ

ಬಿಜೆಪಿ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಎಸ್ ಡಿಪಿಐ ಕಾರ್ಯಕರ್ತ ಜಾಮೀನು ಮೇರೆಗೆ ಬಿಡುಗಡೆ

ಸುಳ್ಯ: ಬಿಜೆಪಿ ಕಾರ್ಯಕರ್ತ ನಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬಂಧಿತನಾಗಿದ್ದ ಎಸ್ ಡಿಪಿಐ ಕಾರ್ಯಕರ್ತ ಸಫ್ರೀದ್ ಎಂಬಾತನನ್ನು ಜಾಮೀನಿನ ಮೇಲೆ ಹೊರಬಂದಿದ್ದಾನೆ. ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ಶಫೀಕ್ ಬೆಳ್ಳಾರೆಯ ಸಹೋದರ ಸಫ್ರೀದ್ ಎಂಬಾತ ಪ್ರಶಾಂತ್ ಎಂಬವರಿಗೆ, ಜೀವ ಬೆದರಿಕೆ ಒಡ್ಡಿರುವುದಾಗಿ ಶನಿವಾರ ಪೊಲೀಸ್ ದೂರು ನೀಡಲಾಗಿತ್ತು. ಪೊಲೀಸರು ಬಜ್ಪೆಯಲ್ಲಿ ಆರೋಪಿ ಸಫ್ರೀದ್ ನನ್ನು ಬಂಧಿಸಿದ್ದರು. ರವಿವಾರ ಆತನನ್ನು ಶರತ್ತು ಬದ್ದ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು ಎಂದು […]

ಬಿಜೆಪಿ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಎಸ್ ಡಿಪಿಐ ಕಾರ್ಯಕರ್ತ ಜಾಮೀನು ಮೇರೆಗೆ ಬಿಡುಗಡೆ Read More »

ಪ್ರವೀಣ್ ನೆಟ್ಟಾರು ಕನಸಿನ ಮನೆಯನ್ನು ನನಸಾಗಿಸಲು ನಳೀನ್ ಕುಮಾರ್ ಕಟೀಲ್ ಅವರು ಪ್ರವೀಣ್ ಕುಟುಂಬಸ್ಥರ ಜೊತೆ ಮಾತುಕತೆ

ಸಮಗ್ರ ನ್ಯೂಸ್ : ದುಷ್ಕರ್ಮಿಗಳ ದಾಳಿಗೆ ಹತ್ಯೆಗೊಳಗಾದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆಯನ್ನು ನನಸು ಮಾಡುವ ನಿಟ್ಟಿನಲ್ಲಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರವೀಣ್ ನೆಟ್ಟಾರು ಅವರ ಕುಟುಂಬಸ್ಥರ ಜೊತೆ ಕುಂಜಾಡಿಯಲ್ಲಿ ಮಾತುಕತೆ ನಡೆಸಿದರು. ಮೊನ್ನೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡುವ ಆಜ್ಞೆ ಮಾಡಿದ್ದರು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷರು ಪ್ರವೀಣ್ ಅವರ ಸ್ವಗೃಹ

ಪ್ರವೀಣ್ ನೆಟ್ಟಾರು ಕನಸಿನ ಮನೆಯನ್ನು ನನಸಾಗಿಸಲು ನಳೀನ್ ಕುಮಾರ್ ಕಟೀಲ್ ಅವರು ಪ್ರವೀಣ್ ಕುಟುಂಬಸ್ಥರ ಜೊತೆ ಮಾತುಕತೆ Read More »

ಭಾರಿ ಇಳಿಕೆ ಕಂಡಿದ್ದ ಟೊಮೆಟೊ ದರ ಮತ್ತೆ ಏರಿಕೆ

ಮಂಗಳೂರು: ಕೆಲವು ದಿನಗಳಿಂದ ಭಾರಿ ಇಳಿಕೆ ಕಂಡಿದ್ದ ಟೊಮೆಟೊ ದರ ಮತ್ತೆ ಏರಿಕೆಯಾಗಿದೆ. ಕೆಜಿಗೆ 10 ರೂಪಾಯಿ ಇದ್ದ ಟೊಮೆಟೊ 20 ರೂಪಾಯಿವರೆಗೆ ಏರಿಕೆ ಕಂಡು ಈಗ ಪುತ್ತೂರಿನಲ್ಲಿ 45 ರೂ.ಗೆ ಮಾರಾಟವಾಗುತ್ತಿದೆ. ಕೆಲವು ತಿಂಗಳ ಹಿಂದೆ ಟೊಮೆಟೊ ದರ 10 ರೂ.ಇದ್ದು, ನಂತರ 20 ರೂ. ಗೆ ಬಂದು ನಿಂತಿತ್ತು. ಕೆಲವೇ ದಿನಗಳ ನಂತರ ಮತ್ತೆ ಏರಿಕೆ ಕಾಣುತ್ತಿರುವ ಟೊಮೆಟೊ ದರ ಕೆಜಿಗೆ 45 ರೂ.ಗೆ ಮಾರಾಟವಾಗುತ್ತಿದೆ. ಅದಕ್ಕಿಂತ ಹಿಂದೆ ಕೆಜಿಗೆ 100 ರೂ.ವರೆಗೆ ಏರಿಕೆಯಾಗಿತ್ತು. ಈಗ

ಭಾರಿ ಇಳಿಕೆ ಕಂಡಿದ್ದ ಟೊಮೆಟೊ ದರ ಮತ್ತೆ ಏರಿಕೆ Read More »

ಪ್ರವೀಣ್ ಹತ್ಯೆ ಪ್ರಕರಣ ; ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರಂದು ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸೋದರನಿಂದ ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ಬೆದರಿಕೆ ಹಾಕಿದವನ ಬಂಧನಕ್ಕೆ ಆಗ್ರಹಿಸಿ ಬೆಳ್ಳಾರೆ ಠಾಣೆ ಎದುರು‌ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫಿಕ್ ಸೋದರ ಸಫ್ರಿದ್‌ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಫೋನ್

ಪ್ರವೀಣ್ ಹತ್ಯೆ ಪ್ರಕರಣ ; ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ Read More »

ಪ್ರವೀಣ್ ಕೊಲೆ ಆರೋಪಿಯ ಸಹೋದರನಿಂದ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ!? ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ!!

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ತಲೆದೊರುವಂತಹ ಘಟನೆಯೊಂದು ಜರುಗಿದೆ . ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ ಘಟನೆ ಸೆ

ಪ್ರವೀಣ್ ಕೊಲೆ ಆರೋಪಿಯ ಸಹೋದರನಿಂದ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ!? ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ!! Read More »

ಪ.ಪಂಗಡದ ಜಾಗದ ಅಕ್ರಮ‌ ಪರಭಾರೆ ಸರಿಪಡಿಸಲು ಅಂಬೇಡ್ಕರ್ ರಕ್ಷಣಾ ವೇದಿಕೆ ಮನವಿ

ಸಮಗ್ರ ನ್ಯೂಸ್: ಪರಿಶಿಷ್ಟ ಪಂಗಡಕ್ಕೆ ಸೇರಿದ ಜಾಗವನ್ನು ಮೇಲ್ವರ್ಗದವರು ಅಕ್ರಮವಾಗಿ ತಮ್ಮ ಹೆಸರಿಗೆ ರೆಕಾರ್ಡ್ ಮಾಡಿಕೊಂಡ ಹಿನ್ನಲೆ ಅದನ್ನು ಸರಿಪಡಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಮನವಿ ಸಲ್ಲಿಸಲಾಯಿತು. ದೂರಿನಲ್ಲಿ ಏನಿದೆ?ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ತಲ್ಲೂರು ಪರಿಶಿಷ್ಟ ಪಂಗಡದ ನಾರು ನಾಯ್ಕ ಬಿನ್ ಮಾಲಿಂಗ ನಾಯ್ಕ ಎಂಬವರ ಜಾಗದ ಸರ್ವೆ ನಂಬರ್ 109/2 ರಲ್ಲಿ4.65 ಎಕ್ರೆ ಜಾಗ ಈ ಜಾಗ ಡಿಸಿ ಡಿಆರ್ 1960 ರಲ್ಲಿ ನಾರು ನಾಯ್ಕ ಎಂಬವರಿಗೆ ಮಂಜುರಾಗಿರುತ್ತದೆ. ಈ ಜಾಗವನ್ನು ಭಾಸ್ಕರ ಬಿನ್

ಪ.ಪಂಗಡದ ಜಾಗದ ಅಕ್ರಮ‌ ಪರಭಾರೆ ಸರಿಪಡಿಸಲು ಅಂಬೇಡ್ಕರ್ ರಕ್ಷಣಾ ವೇದಿಕೆ ಮನವಿ Read More »

ಮಂಗಳೂರು: ಶತಾಯುಷಿ ಡ್ರೈವರ್ ಮೈಕಲ್ ಡಿಸೋಜ ಇನ್ನಿಲ್ಲ

ಸಮಗ್ರ ನ್ಯೂಸ್: ವಯಸ್ಸು ನೂರಾದರು ಅತ್ಯಂತ ಸಲೀಸಾಗಿ ಚಾಲನೆ ಮಾಡುತ್ತಿದ್ದ, ಮಂಗಳೂರಿನ ನಿವೃತ್ತ ಸೈನಿಕ, ಶತಾಯುಷಿ ಮೈಕಲ್ ಡಿಸೋಜ (108) ನಿಧನರಾಗಿದ್ದಾರೆ. ಮಕ್ಕಳಿಲ್ಲದ ಅವರು ಪರ್ಕಳದ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಮದ್ರಾಸ್‌ ಸರ್ಕಾರದಲ್ಲಿ ಮೆಕ್ಯಾನಿಕಲ್ ಕಮ್ ಡ್ರೈವರ್ ಆಗಿ ಸೇನೆಯಲ್ಲಿ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಸೈನ್ಯದಲ್ಲಿ 10 ವರ್ಷ ಸೇವೆಯ ನಂತರ ಲೋಕೋಪಯೋಗಿ ಇಲಾಖೆಗೆ ಸೇರಿ ಉಡುಪಿ ರಥಬೀದಿಯ ಕಾಂಕ್ರೀಟ್ ರಸ್ತೆ, ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಮಂಗಳೂರಿನ ಕೂಳೂರು ಸೇತುವೆ, ಮಲ್ಪೆ ಕಲ್ಮಾಡಿ ಸೇತುವೆ,

ಮಂಗಳೂರು: ಶತಾಯುಷಿ ಡ್ರೈವರ್ ಮೈಕಲ್ ಡಿಸೋಜ ಇನ್ನಿಲ್ಲ Read More »

ಸುಳ್ಯ: ಡಿ.ಸಿ ಮನ್ನಾ ಜಾಗ ಅತಿಕ್ರಮಣ ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ದ ಕ್ರಮವಹಿಸಿ – ಅಂಬೇಡ್ಕರ್ ರಕ್ಷಣಾ ವೇದಿಕೆ

ಸಮಗ್ರ ನ್ಯೂಸ್: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ ಡಿ.ಸಿ ಮನ್ನಾ ಜಮೀನನ್ನು ಅತಿಕ್ರಮಣ ಮಾಡಿದವರ ವಿರುದ್ಧ ಕ್ರಮವಹಿಸಿ ಆ ಜಾಗವನ್ನು ಸರಿಪಡಿಸುವಂತೆ ಮತ್ತು‌ ಜಾಗವನ್ನು ಅರ್ಹರಿಗೆ ಒದಗಿಸಲು ಸುಳ್ಯ ತಹಶೀಲ್ದಾರರಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಮನವಿ ಸಲ್ಲಿಸಲಾಯಿತು. ಬ್ರಿಟಿಷ್ ಸರ್ಕಾರ 1932 ರಿಂದ 1939 ರ ಅವಧಿಯಲ್ಲಿ ದಲಿತ ಸಮುದಾಯಕ್ಕೆ ಮೀಸಲಿಟ್ಟ ಡಿಸಿ ಮನ್ನಾ ಜಮೀನು ಇಂದಿಗೂ ಹಂಚಿಕೆಯಾಗದಿರುವುದು ದುರಂತ. ಹಾಗೆ ಸುಳ್ಯ ತಾಲೂಕಿನ 31 ಗ್ರಾಮದಲ್ಲಿ 676.38 ಎಕರೆ 326.82 ಎಕರೆ ಜಮೀನು

ಸುಳ್ಯ: ಡಿ.ಸಿ ಮನ್ನಾ ಜಾಗ ಅತಿಕ್ರಮಣ ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ದ ಕ್ರಮವಹಿಸಿ – ಅಂಬೇಡ್ಕರ್ ರಕ್ಷಣಾ ವೇದಿಕೆ Read More »

ಮಳೆಗೆ ನಲುಗಿದ ಬೆಂಗಳೂರು| ಮ್ಯಾಪ್ ಗೂ ಗೊತ್ತಾಗ್ತಿಲ್ಲ ನಿಖರ ದಾರಿ| ಗೂಗಲ್ ಫುಲ್ ಆಫ್ ಕನ್ಪ್ಯೂಸ್!!

ಸಮಗ್ರ ನ್ಯೂಸ್: ಮಹಾಮಳೆಗೆ ಬೆಂಗಳೂರಿನ ರಸ್ತೆಗಳು ಕೆರೆಯಂತಾಗಿವೆ. ಇದರಿಂದಾಗಿ ಅಗತ್ಯ ಸಂದರ್ಭಗಳಲ್ಲಿ ವಾಹನ ಸವಾರರಿಗೆ ದಾರಿ ತೋರಿಸಬೇಕಾದ ಗೂಗಲ್ ಮ್ಯಾಪ್ ಈಗ ಸವಾರರ ದಿಕ್ಕು ತಪ್ಪಿಸುತ್ತಿದೆ. ಬೆಂಗಳೂರಿನ ನಿವಾಸಿಯೊಬ್ಬರು ಜೆ ಪಿ ನಗರದಿಂದ ಹೊಸೂರಿನವರೆಗಿನ ಮಾರ್ಗಕ್ಕಾಗಿ ಗೂಗಲ್‌ ಮ್ಯಾಪ್‌ನಲ್ಲಿ ದಾರಿಯನ್ನು ಸರ್ಚ್‌ ಮಾಡಿದ್ದಾರೆ. ಆದರೆ, ಬೆಂಗಳೂರು ನಗರದ ರಸ್ತೆಗಳು ಜಲಾವೃತಗೊಂಡಿರುವ ಕಾರಣ ಕೆಲ ಮಾರ್ಗಗಳನ್ನು ಗೂಗಲ್ ಮ್ಯಾಪ್ ತೋರಿಸುತ್ತಿಲ್ಲ. ಭಾರೀ ಮಳೆಯಿಂದಾಗಿ ಬೆಂಗಳೂರಿನ ಸ್ಥಿತಿ ಸಿಕ್ಕಾಪಟ್ಟೆ ಹದಗೆಟ್ಟಿದೆ. ಯಾವ ರಸ್ತೆ ಜಲಾವೃತವಾಗಿದೆ, ಯಾವ ರಸ್ತೆಯಲ್ಲಿ ಸಂಚರಿಸಿದರೆ ಮುಂದಕ್ಕೆ

ಮಳೆಗೆ ನಲುಗಿದ ಬೆಂಗಳೂರು| ಮ್ಯಾಪ್ ಗೂ ಗೊತ್ತಾಗ್ತಿಲ್ಲ ನಿಖರ ದಾರಿ| ಗೂಗಲ್ ಫುಲ್ ಆಫ್ ಕನ್ಪ್ಯೂಸ್!! Read More »

ದ.ಕ ಜಿಲ್ಲೆಯಲ್ಲಿ ಮರಳುಗಾರಿಕೆ ನಿಷೇಧ| ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಸಿಆರ್‌ಝೆಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇಧಿಸಿ ಹಸಿರು ಪೀಠ ಆದೇಶವಿದೆ. ಇದೇ ಆಧಾರ ಮೇಲೆ ದ.ಕ. ಜಿಲ್ಲೆಯಲ್ಲೂ ಸಿಆರ್‌ಝೆಡ್‌ನಲ್ಲೂ ಮರಳುಗಾರಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದರು. ಇದೀಗ ತಡೆ ನೀಡುವಂತೆ ಮರಳುಗಾರರು ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದು, ಹೈಕೋರ್ಟ್‌ ಜಿಲ್ಲಾಧಿಕಾರಿ ಆದೇಶಕ್ಕೆ ತಡೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನಿಷೇಧ ಮಾಡುವಂತೆ ಮೇ 22 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ. ರಾಜೇಂದ್ರ ಆದೇಶ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೂಡಲೇ ನದಿ

ದ.ಕ ಜಿಲ್ಲೆಯಲ್ಲಿ ಮರಳುಗಾರಿಕೆ ನಿಷೇಧ| ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ Read More »