ಕರಾವಳಿ

ಇಂದು ಯಾವ ರಾಜ್ಯಗಳಲ್ಲಿ ಮಳೆ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಇಂದು ಕರ್ನಾಟಕ, ಗೋವಾ, ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಸಿಕ್ಕಿಂ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡುಗಳಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಬಿಹಾರ ಮತ್ತು ಮಧ್ಯಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಲಡಾಖ್, ಜಮ್ಮು […]

ಇಂದು ಯಾವ ರಾಜ್ಯಗಳಲ್ಲಿ ಮಳೆ? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಕೆಪಿಟಿ ಕಾಲೇಜಿನ ವಿದ್ಯಾರ್ಥಿ ನಾಪತ್ತೆ

ಬೆಳ್ತಂಗಡಿ : ಮಂಗಳೂರಿನ ಕೆಪಿಟಿ ಕಾಲೇಜಿನ ವಿದ್ಯಾರ್ಥಿ ಮನೆಯಿಂದ ಮಂಗಳೂರಿನ ಕೆ.ಪಿ.ಟಿ ಕಾಲೇಜಿಗೆ ಹೋಗಿ ನಾಪತ್ತೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ-2 ನೇರೊಳ್ ಪಲ್ಕೆ ಮನೆ ನಿವಾಸಿ ಮುರಳಿಧರ್ ಎಂಬವರ ಪುತ್ರ, 21 ವರ್ಷದ ಕೌಶಿಕ್ ಕೆ. ನಾಪತ್ತೆಯಾದವನು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತನ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಧರ್ಮಸ್ಥಳ ಪೊಲೀಸರಿಗೆ ಅಥವಾ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ಕೋರಿ

ಕೆಪಿಟಿ ಕಾಲೇಜಿನ ವಿದ್ಯಾರ್ಥಿ ನಾಪತ್ತೆ Read More »

ಮಹಿಳೆಯರ ಸರ ಸುಲಿಗೆ ಪ್ರಕರಣ; ಮೂವರು ಆರೋಪಿಗಳ ಬಂಧನ

ಮಂಗಳೂರು : ನಗರದ ವಿವಿಧ ಕಡೆ ಮಹಿಳೆಯರ ಸರ ಸುಲಿಗೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕುಲಶೇಖರ ಸಮೀಪದ ಶಕ್ತಿನಗರ ನಿವಾಸಿ ಜಗದೀಶ್ ಶೆಟ್ಟಿ (39), ಉರ್ವಸ್ಟೋರ್ ನಿವಾಸಿ ಸುಜಿತ್ ಶೆಟ್ಟಿ (40), ಪುತ್ತೂರು ಪದವಿನಂಗಡಿ ನಿವಾಸಿ ಸುರೇಶ್ ರೈ (39) ಎಂದು ಗುರುತಿಸಲಾಗಿದೆ‌. ಆರೋಪಿಗಳಿಂದ ಸುಲಿಗೆ ಮಾಡಿದ್ದ 90 ಗ್ರಾಂ ತೂಕದ ಚಿನ್ನಾಭರಣ, 2 ಸ್ಕೂಟರ್ ಮತ್ತು 3 ಮೊಬೈಲ್ ಫೋನ್ ಸಹಿತ ಒಟ್ಟು 5 ಲಕ್ಷ

ಮಹಿಳೆಯರ ಸರ ಸುಲಿಗೆ ಪ್ರಕರಣ; ಮೂವರು ಆರೋಪಿಗಳ ಬಂಧನ Read More »

ಕ್ರಿಕೆಟ್ ಅಂಗಳಕ್ಕೆ‌ ಗುಡ್ ಬೈ ಹೇಳಿದ ಸುರೇಶ್ ರೈನಾ

ಸಮಗ್ರ ನ್ಯೂಸ್: ಎಲ್ಲಾ ಮಾದರಿಯ ಕ್ರಿಕೆಟ್​​ ಫಾರ್ಮ್ಯಾಟ್​ಗಳಿಗೆ ಟೀಂ ಇಂಡಿಯಾ ಆಟಗಾರ‌ಸುರೇಶ್ ರೈನಾ ಗುಡ್​ಬೈ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ನಿವೃತ್ತಿ ಬಗ್ಗೆ ಘೋಷಣೆ ಮಾಡಿದ್ದು, ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಾನು ವಿದಾಯ ಹೇಳುತ್ತಿದ್ದೇನೆ. ದೇಶ ಮತ್ತು ನನ್ನ ರಾಜ್ಯ ಉತ್ತರ ಪ್ರದೇಶವನ್ನ ಪ್ರತಿನಿಧಿಸುವುದು ಒಂದು ಸಂಪೂರ್ಣ ಗೌರವವಾಗಿದೆ. ನನ್ನ ಕ್ರಿಕೆಟ್ ಬದುಕಿನಲ್ಲಿ ಸಹಕಾರ ನೀಡಿದ ಬಿಸಿಸಿಐ, ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್, ಚೆನ್ನೈ ಐಪಿಎಲ್, ರಾಜೀವ್ ಶುಕ್ಲಾ, ನನ್ನ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಕ್ರಿಕೆಟ್ ಅಂಗಳಕ್ಕೆ‌ ಗುಡ್ ಬೈ ಹೇಳಿದ ಸುರೇಶ್ ರೈನಾ Read More »

ಸುಳ್ಯ: ರಸ್ತೆ ದುರಸ್ತಿ‌ಗೊಳಿಸಲು ಮನವಿ ಸಲ್ಲಿಸಿದ ನೆಕ್ಕರೆ ನಿವಾಸಿಗಳು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ನೆಕ್ಕರೆ ಗಿರಿಜನ ಕಾಲೋನಿಗೆ ಸಂಪರ್ಕಿಸುವ ರಸ್ತೆ ದುರಸ್ಥಿಗೊಳಿಸುವ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಗೆ ನೆಕ್ಕರೆ ನಿವಾಸಿಗಳು ಮನವಿ ಸಲ್ಲಿಸಿದರು. ಅರಂತೋಡು-ಎಲಿಮಲೆ ರಸ್ತೆಯಲ್ಲಿ ನೆಕ್ಕರೆ ಎಂಬ ಊರಿಗೆ ಹಾದು ಹೋಗುವ ರಸ್ತೆಯಾಗಿದ್ದು ಇಲ್ಲಿ ಸುಮಾರು ಆರು ಗಿರಿಜನ ಕುಟುಂಬಗಳು ವಾಸಮಾಡುತ್ತಿವೆ. ಆದರೆ ಈ ಊರಿಗೆ ಸುಮಾರು _10 ಕಿ.ಮೀ ದೂರ ಕಾಡಿನ ಮಧ್ಯದಲ್ಲಿ ಸಂಚರಿಸಬೇಕು. ಕೆಲವು ಕಡೆಗಳಲ್ಲಿ ಮಾತ್ರ ಕಾಂಕ್ರೀಟಿಕರಣ, ಉಳಿದ ಕಡೆಗಳಲ್ಲಿ ಹೊಂಡ ಗುಂಡಿಗಳು ಇವೆ. ಹಾಗಾಗಿ 10

ಸುಳ್ಯ: ರಸ್ತೆ ದುರಸ್ತಿ‌ಗೊಳಿಸಲು ಮನವಿ ಸಲ್ಲಿಸಿದ ನೆಕ್ಕರೆ ನಿವಾಸಿಗಳು Read More »

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ಯಿಂದ 32 ಕಡೆ ದಾಳಿ, ಚುರುಕುಗೊಂಡ ತನಿಖೆ

ಸಮಗ್ರ ನ್ಯೂಸ್: ಜುಲೈ 26ರ ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರು(34ವ) ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದ ಬೆನ್ನತ್ತಿ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ. ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು ಮತ್ತು ಸುಳ್ಯದ 32 ಕಡೆ ಮನೆ, ಕಟ್ಟಡಗಳಿಗೆ ಮಿಂಚಿನ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ. ಎನ್.ಐ.ಎ.ಅಧಿಕಾರಿಗಳಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡಿದ್ದಾರೆ. ಸೆ.6ರ ಮುಂಜಾನೆ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ಯಿಂದ 32 ಕಡೆ ದಾಳಿ, ಚುರುಕುಗೊಂಡ ತನಿಖೆ Read More »

ಮಂಗಳೂರು: ಸಾಕು ನಾಯಿಗೆ ಸೀಮಂತ| ಸೀಮಂತದ ಪೋಟೊ, ವೀಡಿಯೋ ವ್ಯೆರಲ್

ಸಮಗ್ರ ನ್ಯೂಸ್: ಮಹಿಳೆಯರಿಗೆ ಸೀಮಂತ ಮಾಡುವುದು ಸಾಮಾನ್ಯ, ಆದರೆ ಇಲ್ಲೊಬ್ಬರು ಸಾಕು ನಾಯಿಗೆ ಸೀಮಂತದ ಮಾಡಿದ್ದು, ಸೀಮಂತದ ಪೋಟೊ, ವೀಡಿಯೋ ವ್ಯೆರಲ್ ಆಗಿವೆ. ಮಂಗಳೂರಿನ ಗುರುಪುರ ಕ್ಯೆಕಂಬದ ಮಂಜುಳ ಹಾಗೂ ಭಾಸ್ಕರ್ ಎಂಬುವವರ ಪುತ್ರಿ ಸುಶ್ಮಿತಾ ಸಾಲ್ಯಾನ್ ಎಂಬುವವರಿಗೆ ಸಾಕುಪ್ರಾಣಿ ಎಂದರೆ ತುಂಬಾ ಪ್ರೀತಿ, ತಮ್ಮ ಮನೆಯಲ್ಲಿ ಸಾಕಿದ್ದ, ಒಂದುವರೆ ವರುಷದ ಶಾಡೊ ಎಂಬ ಗರ್ಭಿನಿ ನಾಯಿಗೆ ಹಸಿರು ಬಳೆ, ಹಸಿರು ಸೀರೆ, ಕುಂಕುಮ ಅರಸಿನ ಹಚ್ಚಿ, ಆರತಿ ಬೆಳಗಿ ಸೀಮಂತ ಮಾಡಿದ್ದಾರೆ. ಶ್ವಾನಕ್ಕೆ ಅಚ್ಚುಮೆಚ್ಚಿನ ಹಣ್ಣು-ಹಂಪಲು,ಐಸ್

ಮಂಗಳೂರು: ಸಾಕು ನಾಯಿಗೆ ಸೀಮಂತ| ಸೀಮಂತದ ಪೋಟೊ, ವೀಡಿಯೋ ವ್ಯೆರಲ್ Read More »

ಬಂಟ್ವಾಳ; ತಡರಾತ್ರಿ ಮನೆಗೆ ನುಗ್ಗಿ ನಾಯಿಯನ್ನು ಹೊತ್ತೋಯ್ದ ಚಿರತೆ

ಸಮಗ್ರ ನ್ಯೂಸ್: ಮಧ್ಯರಾತ್ರಿ ಚಿರತೆಯೊಂದು ಮನೆಗೆ ನುಗ್ಗಿ ನಾಯಿಯನ್ನು ಬೇಟೆಯಾಡಿ ಹೊತ್ತುಕೊಂಡು ಹೋಗಿರುವ ಘಟನೆಯೊಂದು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದಲ್ಲಿ ನಡೆದಿದೆ. ಕಲ್ಮಲೆ ನಿವಾಸಿ ನಾರಾಯಣ ರೈ ಎಂಬವರ ಮನೆಗೆ ಚಿರತೆ ನುಗ್ಗಿ, ಮನೆಯಲ್ಲಿ ಸಾಕಿದ್ದ ನಾಯಿಯನ್ನು ಬೇಟೆಯಾಡಿದೆ. ಇದೆ ವೇಳೆ ಅಲ್ಲೆ ಇದ್ದ ಮೊತ್ತೊಂದು ನಾಯಿ ರಕ್ಷಣೆಗೆ ನುಗ್ಗಿದ್ದ, ಈ ಚಿರತೆ ನಾಯಿಯನ್ನು ಗಾಯಗೊಳಿಸಿದೆ. ಈ ವೇಳೆ ನಾಯಿಗಳು ಬೊಗಳುತ್ತಿದ್ದಂತೆ ಮನೆಮಂದಿ ಎದ್ದು ಹೊರ ಬಂದು ಕಿರುಚಾಡಿದ್ದಾರೆ. ಗಾಬರಿಗೊಂಡ ಚಿರತೆ ನಾಯಿಯನ್ನು ಹೊತ್ತುಕೊಂಡು ಹೋಗಿದೆ. ಗ್ರಾಮದ ಸುತ್ತ

ಬಂಟ್ವಾಳ; ತಡರಾತ್ರಿ ಮನೆಗೆ ನುಗ್ಗಿ ನಾಯಿಯನ್ನು ಹೊತ್ತೋಯ್ದ ಚಿರತೆ Read More »

ಮಂಗಳೂರು: ಪಾಲಿಕೆಯ ಹಲವು ಸೇವೆ ಆ್ಯಪ್‌ನಲ್ಲಿ ಲಭ್ಯ!/“ಒನ್‌ ಟಚ್‌ ಮಂಗಳೂರು’ ಆ್ಯಪ್‌ನಲ್ಲಿರುವ ಮಾಹಿತಿ ತಿಳಿದುಕೊಳ್ಳಿ

ಸಮಗ್ರ ನ್ಯೂಸ್: ಮಂಗಳೂರು ಪಾಲಿಕೆ ಈಗಾಗಲೇ ಡಿಜಿಟಲ್‌ನತ್ತ ಮುಖ ಮಾಡಿದ್ದು, ಕೆಲವು ಸೇವೆಗಳನ್ನು ಈಗಾಗಲೇ ಆನ್‌ಲೈನ್‌ ವ್ಯವಸ್ಥೆಯಲ್ಲಿ ಅಳವಡಿಸಿಕೊಂಡಿದೆ. ಇದೀಗ ಆ್ಯಪ್‌ ಮುಖೇನವೂ ವಿವಿಧ ಸೇವೆಗಳನ್ನು ಪರಿಚಯಿಸಲು ಮಹಾನಗರ ಪಾಲಿಕೆ ಮುಂದಾಗಿದೆ. ಸ್ಮಾರ್ಟ್‌ಸಿಟಿಯಿಂದ ಈಗಾಗಲೇ “ಒನ್‌ ಟಚ್‌ ಮಂಗಳೂರು’ ಎಂಬ ಪ್ರತ್ಯೇಕ ಆ್ಯಪ್‌ ರೂಪುಗೊಂಡಿದ್ದು, ಅದರಲ್ಲಿ ಮುಂದಿನ ಕೆಲವು ದಿನಗಳಲ್ಲಿ ಜನನ-ಮರಣ ಪ್ರಮಾಣಪತ್ರ, ಪಾಲಿಕೆ ವ್ಯಾಪ್ತಿ ಜಾಹೀರಾತು ಪರವಾನಿಗೆ, ಆಸ್ತಿ ತೆರಿಗೆ ಹಣ ಪಾವತಿ, ಉದ್ದಿಮೆ ಪರವಾನಿಗೆ ನವೀಕರಣ ಸಹಿತ ವಿವಿಧ ಸೇವೆಗಳನ್ನು ಆ್ಯಪ್‌ನಲ್ಲಿ ತರಲು ಯೋಜನೆ

ಮಂಗಳೂರು: ಪಾಲಿಕೆಯ ಹಲವು ಸೇವೆ ಆ್ಯಪ್‌ನಲ್ಲಿ ಲಭ್ಯ!/“ಒನ್‌ ಟಚ್‌ ಮಂಗಳೂರು’ ಆ್ಯಪ್‌ನಲ್ಲಿರುವ ಮಾಹಿತಿ ತಿಳಿದುಕೊಳ್ಳಿ Read More »

ಸುಳ್ಯ: ಡಿ.ವಿ.ಎಸ್ ಸಿಎಂ ಆಗಿದ್ದಾಗ‌ ಪ್ರಸ್ತಾಪ ಮಾಡಿದ್ದ ಟೈರ್ ಉತ್ಪಾದನಾ ಕಾರ್ಖಾನೆ‌ಗೆ ದಶಕದ ಸಂಭ್ರಮ| ಹತ್ತು ವರ್ಷಗಳಲ್ಲಿ ಈ ಕಡತ ಯಾರಿಗೂ ಕಂಡಿಲ್ಲವೇ?

ಸಮಗ್ರ ನ್ಯೂಸ್: ಸುಮಾರು‌ 500 ಕೋಟಿ ರೂ.ಗಳಲ್ಲಿ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ಸ್ಥಾಪಿಸಲು ಉದ್ದೇಶಿಸಿ‌ದ್ದ ರಬ್ಬರ್ ಟಯರ್ ತಯಾರಿಕಾ‌ ಕಾರ್ಖಾನೆಯ ಪ್ರಸ್ತಾವನೆಗೆ ಬರೋಬ್ಬರಿ ಒಂದು ದಶಕದ ಸಂಭ್ರಮ! ಸುಳ್ಯದ‌ ಮಣ್ಣಿನ ಮಗ ಡಿ.ವಿ ಸದಾನಂದ ಗೌಡರು 2012ರಲ್ಲಿ ಮುಖ್ಯಮಂತ್ರಿಯಾಗಿ ತನ್ನ ತವರೂರಿಗೆ ಭೇಟಿ ನೀಡಿದ್ದ ವೇಳೆ ನೀಡಿದ ಹೇಳಿಕೆ ಕೇವಲ ಹೇಳಿಕೆಯಾಗಿಯೇ ಉಳಿದಿದೆ. ಅಂದು ಸದಾನಂದ ಗೌಡರು ನೀಡಿದ್ದ ಹೇಳಿಕೆ ಸುಳ್ಯ ತಾಲೂಕಿನ ಯುವಜನತೆಗೆ ಬಾರೀ ನಿರೀಕ್ಷೆ ಹುಟ್ಟು ಹಾಕಿತ್ತು. ಹಲವು ಮಂದಿಗೆ ಉದ್ಯೋಗ

ಸುಳ್ಯ: ಡಿ.ವಿ.ಎಸ್ ಸಿಎಂ ಆಗಿದ್ದಾಗ‌ ಪ್ರಸ್ತಾಪ ಮಾಡಿದ್ದ ಟೈರ್ ಉತ್ಪಾದನಾ ಕಾರ್ಖಾನೆ‌ಗೆ ದಶಕದ ಸಂಭ್ರಮ| ಹತ್ತು ವರ್ಷಗಳಲ್ಲಿ ಈ ಕಡತ ಯಾರಿಗೂ ಕಂಡಿಲ್ಲವೇ? Read More »