ಕರಾವಳಿ

ಎಸ್ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಮನೆ ಮೇಲೆ NIA ದಾಳಿ

ಸಮಗ್ರ ನ್ಯೂಸ್: ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು‌ ಹತ್ಯೆಗೆ ಸಂಬಂಧಿಸಿದಂತೆ ಕರಾವಳಿಯಲ್ಲಿ ರಾಷ್ಟ್ರೀಯ ತನಿಖಾ ದಳ ತನ್ನ ಕಾರ್ಯವೈಖರಿಯನ್ನು ಚುರುಕುಗೊಳಿಸಿದ್ದು, ಗುರುವಾರ ಮುಂಜಾನೆ ಎಸ್ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಮನೆ ಮೇಲೆ ದಾಳಿ ನಡೆಸಿದೆ. ಪೊಲೀಸ್ ತನಿಖಾ ವರದಿ ಹೊರಬಿದ್ದ ಮೇಲೂ ಪ್ರವೀಣ್ ನೆಟ್ಟಾರು ಪ್ರಕರಣವನ್ನು ರಾಜ್ಯ ಸರಕಾರ NIA ಗೆ ವಹಿಸಿದೆ‌. ದ.ಕ ಜಿಲ್ಲೆಯಲ್ಲಿ NIA ತನಿಖೆ ಮುಂದುವರಿದಿದ್ದು ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ NIA ಸಪ್ಟೆಂಬರ್ 7 ರಂದು SDPI ಹಾಗೂ PFI

ಎಸ್ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಮನೆ ಮೇಲೆ NIA ದಾಳಿ Read More »

ಪುತ್ತೂರು: ಪ್ರಯಾಣಿಕನನ್ನು ಒದ್ದು ಕೆಳತಳ್ಳಿದ ಕೆಎಸ್ಆರ್ ಟಿಸಿ ಕಂಡಕ್ಟರ್| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಕ.ರಾ.ರ. ಸಾರಿಗೆ ಬಸ್ ನಿರ್ವಾಹಕನೊಬ್ಬ ಪ್ರಯಾಣಿಕನಿಗೆ ಕಾಲಿನಿಂದ ಒದ್ದು ಕೆಳಕ್ಕೆ ದೂಡಿ ಅಮಾನವೀಯತೆ ಮೆರೆದ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನಡೆದಿದೆ. ಈ ಕುರಿತು ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಕೆಎ 21 ಎಫ್ 0002 ನಂಬರ್‌ನ ಬಸ್ ನಿರ್ವಾಹಕ ಪ್ರಯಾಣಿಕನೊಬ್ಬನನ್ನು ಕಾಲಿನಿಂದ ತುಳಿದು ಹೊರಹಾಕಿದ್ದು ಗಾಯಗೊಂಡ ಅವನನ್ನು ರಸ್ತೆಯಲ್ಲೇ ಬಿಟ್ಟು ಹೋಗಿದ್ದಾರೆ.ಹೊರ ಎಸೆಯಲ್ಪಟ್ಟ ಪ್ರಯಾಣಿಕ ಮೇಲ್ನೋಟಕ್ಕೆ ಪಾನಮತ್ತನಂತೆ ಕಂಡು ಬರುತ್ತಿದ್ದು ಈಶ್ವರಮಂಗಲ ಪೇಟೆಯ ಜಂಕ್ಷನ್ ಬಳಿ

ಪುತ್ತೂರು: ಪ್ರಯಾಣಿಕನನ್ನು ಒದ್ದು ಕೆಳತಳ್ಳಿದ ಕೆಎಸ್ಆರ್ ಟಿಸಿ ಕಂಡಕ್ಟರ್| ವಿಡಿಯೋ ವೈರಲ್ Read More »

ಮಂಗಳೂರು; ಶಾಲಾ ಬಸ್ ಚಾಲಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಕೇಸ್ ದಾಖಲು

ಮಂಗಳೂರು: 5ನೇ ತರಗತಿ ವಿದ್ಯಾರ್ಥಿನಿಗೆ , ಶಾಲಾ ಬಸ್‌ ಚಾಲಕ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ , 5 ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ, ದಂಡ ಕಟ್ಟಲು ತಪ್ಪಿದಲ್ಲಿ ಮತ್ತೆ ಮೂರು ತಿಂಗಳು ಸೆರೆಮನೆ ಹಾಗೂ ಮತ್ತೊಂದು ಕಾಯ್ದೆಯಡಿ ಒಂದು ವರ್ಷ ಜೈಲು ಶಿಕ್ಷೆ ಹಾಗೂ 1,000 ರೂ. ದಂಡ, ತಪ್ಪಿದಲ್ಲಿ ಮೂರು ತಿಂಗಳ ಜೈಲು ಶಿಕ್ಷೆಯನ್ನು ಮಂಗಳೂರಿನ ದ.ಕ. ಜಿಲ್ಲಾ ಫಾಸ್ಟ್‌ ಟ್ರಾಕ್‌ ನ್ಯಾಯಾಲಯ ಪ್ರಕಟಿಸಿ ಮಂಗಳವಾರ ಆದೇಶ ನೀಡಿದೆ. ಆರೋಪಿಯಾಗಿದ್ದ

ಮಂಗಳೂರು; ಶಾಲಾ ಬಸ್ ಚಾಲಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಕೇಸ್ ದಾಖಲು Read More »

ಇಂದು ಯಾವ ರಾಜ್ಯಗಳಲ್ಲಿ ಮಳೆ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಇಂದು ಕರ್ನಾಟಕ, ಗೋವಾ, ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಸಿಕ್ಕಿಂ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡುಗಳಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಬಿಹಾರ ಮತ್ತು ಮಧ್ಯಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಲಡಾಖ್, ಜಮ್ಮು

ಇಂದು ಯಾವ ರಾಜ್ಯಗಳಲ್ಲಿ ಮಳೆ? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಕೆಪಿಟಿ ಕಾಲೇಜಿನ ವಿದ್ಯಾರ್ಥಿ ನಾಪತ್ತೆ

ಬೆಳ್ತಂಗಡಿ : ಮಂಗಳೂರಿನ ಕೆಪಿಟಿ ಕಾಲೇಜಿನ ವಿದ್ಯಾರ್ಥಿ ಮನೆಯಿಂದ ಮಂಗಳೂರಿನ ಕೆ.ಪಿ.ಟಿ ಕಾಲೇಜಿಗೆ ಹೋಗಿ ನಾಪತ್ತೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ-2 ನೇರೊಳ್ ಪಲ್ಕೆ ಮನೆ ನಿವಾಸಿ ಮುರಳಿಧರ್ ಎಂಬವರ ಪುತ್ರ, 21 ವರ್ಷದ ಕೌಶಿಕ್ ಕೆ. ನಾಪತ್ತೆಯಾದವನು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತನ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಧರ್ಮಸ್ಥಳ ಪೊಲೀಸರಿಗೆ ಅಥವಾ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ಕೋರಿ

ಕೆಪಿಟಿ ಕಾಲೇಜಿನ ವಿದ್ಯಾರ್ಥಿ ನಾಪತ್ತೆ Read More »

ಮಹಿಳೆಯರ ಸರ ಸುಲಿಗೆ ಪ್ರಕರಣ; ಮೂವರು ಆರೋಪಿಗಳ ಬಂಧನ

ಮಂಗಳೂರು : ನಗರದ ವಿವಿಧ ಕಡೆ ಮಹಿಳೆಯರ ಸರ ಸುಲಿಗೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕುಲಶೇಖರ ಸಮೀಪದ ಶಕ್ತಿನಗರ ನಿವಾಸಿ ಜಗದೀಶ್ ಶೆಟ್ಟಿ (39), ಉರ್ವಸ್ಟೋರ್ ನಿವಾಸಿ ಸುಜಿತ್ ಶೆಟ್ಟಿ (40), ಪುತ್ತೂರು ಪದವಿನಂಗಡಿ ನಿವಾಸಿ ಸುರೇಶ್ ರೈ (39) ಎಂದು ಗುರುತಿಸಲಾಗಿದೆ‌. ಆರೋಪಿಗಳಿಂದ ಸುಲಿಗೆ ಮಾಡಿದ್ದ 90 ಗ್ರಾಂ ತೂಕದ ಚಿನ್ನಾಭರಣ, 2 ಸ್ಕೂಟರ್ ಮತ್ತು 3 ಮೊಬೈಲ್ ಫೋನ್ ಸಹಿತ ಒಟ್ಟು 5 ಲಕ್ಷ

ಮಹಿಳೆಯರ ಸರ ಸುಲಿಗೆ ಪ್ರಕರಣ; ಮೂವರು ಆರೋಪಿಗಳ ಬಂಧನ Read More »

ಕ್ರಿಕೆಟ್ ಅಂಗಳಕ್ಕೆ‌ ಗುಡ್ ಬೈ ಹೇಳಿದ ಸುರೇಶ್ ರೈನಾ

ಸಮಗ್ರ ನ್ಯೂಸ್: ಎಲ್ಲಾ ಮಾದರಿಯ ಕ್ರಿಕೆಟ್​​ ಫಾರ್ಮ್ಯಾಟ್​ಗಳಿಗೆ ಟೀಂ ಇಂಡಿಯಾ ಆಟಗಾರ‌ಸುರೇಶ್ ರೈನಾ ಗುಡ್​ಬೈ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ನಿವೃತ್ತಿ ಬಗ್ಗೆ ಘೋಷಣೆ ಮಾಡಿದ್ದು, ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಾನು ವಿದಾಯ ಹೇಳುತ್ತಿದ್ದೇನೆ. ದೇಶ ಮತ್ತು ನನ್ನ ರಾಜ್ಯ ಉತ್ತರ ಪ್ರದೇಶವನ್ನ ಪ್ರತಿನಿಧಿಸುವುದು ಒಂದು ಸಂಪೂರ್ಣ ಗೌರವವಾಗಿದೆ. ನನ್ನ ಕ್ರಿಕೆಟ್ ಬದುಕಿನಲ್ಲಿ ಸಹಕಾರ ನೀಡಿದ ಬಿಸಿಸಿಐ, ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್, ಚೆನ್ನೈ ಐಪಿಎಲ್, ರಾಜೀವ್ ಶುಕ್ಲಾ, ನನ್ನ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಕ್ರಿಕೆಟ್ ಅಂಗಳಕ್ಕೆ‌ ಗುಡ್ ಬೈ ಹೇಳಿದ ಸುರೇಶ್ ರೈನಾ Read More »

ಸುಳ್ಯ: ರಸ್ತೆ ದುರಸ್ತಿ‌ಗೊಳಿಸಲು ಮನವಿ ಸಲ್ಲಿಸಿದ ನೆಕ್ಕರೆ ನಿವಾಸಿಗಳು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ನೆಕ್ಕರೆ ಗಿರಿಜನ ಕಾಲೋನಿಗೆ ಸಂಪರ್ಕಿಸುವ ರಸ್ತೆ ದುರಸ್ಥಿಗೊಳಿಸುವ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಗೆ ನೆಕ್ಕರೆ ನಿವಾಸಿಗಳು ಮನವಿ ಸಲ್ಲಿಸಿದರು. ಅರಂತೋಡು-ಎಲಿಮಲೆ ರಸ್ತೆಯಲ್ಲಿ ನೆಕ್ಕರೆ ಎಂಬ ಊರಿಗೆ ಹಾದು ಹೋಗುವ ರಸ್ತೆಯಾಗಿದ್ದು ಇಲ್ಲಿ ಸುಮಾರು ಆರು ಗಿರಿಜನ ಕುಟುಂಬಗಳು ವಾಸಮಾಡುತ್ತಿವೆ. ಆದರೆ ಈ ಊರಿಗೆ ಸುಮಾರು _10 ಕಿ.ಮೀ ದೂರ ಕಾಡಿನ ಮಧ್ಯದಲ್ಲಿ ಸಂಚರಿಸಬೇಕು. ಕೆಲವು ಕಡೆಗಳಲ್ಲಿ ಮಾತ್ರ ಕಾಂಕ್ರೀಟಿಕರಣ, ಉಳಿದ ಕಡೆಗಳಲ್ಲಿ ಹೊಂಡ ಗುಂಡಿಗಳು ಇವೆ. ಹಾಗಾಗಿ 10

ಸುಳ್ಯ: ರಸ್ತೆ ದುರಸ್ತಿ‌ಗೊಳಿಸಲು ಮನವಿ ಸಲ್ಲಿಸಿದ ನೆಕ್ಕರೆ ನಿವಾಸಿಗಳು Read More »

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ಯಿಂದ 32 ಕಡೆ ದಾಳಿ, ಚುರುಕುಗೊಂಡ ತನಿಖೆ

ಸಮಗ್ರ ನ್ಯೂಸ್: ಜುಲೈ 26ರ ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರು(34ವ) ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದ ಬೆನ್ನತ್ತಿ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ. ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು ಮತ್ತು ಸುಳ್ಯದ 32 ಕಡೆ ಮನೆ, ಕಟ್ಟಡಗಳಿಗೆ ಮಿಂಚಿನ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ. ಎನ್.ಐ.ಎ.ಅಧಿಕಾರಿಗಳಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡಿದ್ದಾರೆ. ಸೆ.6ರ ಮುಂಜಾನೆ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ಯಿಂದ 32 ಕಡೆ ದಾಳಿ, ಚುರುಕುಗೊಂಡ ತನಿಖೆ Read More »

ಮಂಗಳೂರು: ಸಾಕು ನಾಯಿಗೆ ಸೀಮಂತ| ಸೀಮಂತದ ಪೋಟೊ, ವೀಡಿಯೋ ವ್ಯೆರಲ್

ಸಮಗ್ರ ನ್ಯೂಸ್: ಮಹಿಳೆಯರಿಗೆ ಸೀಮಂತ ಮಾಡುವುದು ಸಾಮಾನ್ಯ, ಆದರೆ ಇಲ್ಲೊಬ್ಬರು ಸಾಕು ನಾಯಿಗೆ ಸೀಮಂತದ ಮಾಡಿದ್ದು, ಸೀಮಂತದ ಪೋಟೊ, ವೀಡಿಯೋ ವ್ಯೆರಲ್ ಆಗಿವೆ. ಮಂಗಳೂರಿನ ಗುರುಪುರ ಕ್ಯೆಕಂಬದ ಮಂಜುಳ ಹಾಗೂ ಭಾಸ್ಕರ್ ಎಂಬುವವರ ಪುತ್ರಿ ಸುಶ್ಮಿತಾ ಸಾಲ್ಯಾನ್ ಎಂಬುವವರಿಗೆ ಸಾಕುಪ್ರಾಣಿ ಎಂದರೆ ತುಂಬಾ ಪ್ರೀತಿ, ತಮ್ಮ ಮನೆಯಲ್ಲಿ ಸಾಕಿದ್ದ, ಒಂದುವರೆ ವರುಷದ ಶಾಡೊ ಎಂಬ ಗರ್ಭಿನಿ ನಾಯಿಗೆ ಹಸಿರು ಬಳೆ, ಹಸಿರು ಸೀರೆ, ಕುಂಕುಮ ಅರಸಿನ ಹಚ್ಚಿ, ಆರತಿ ಬೆಳಗಿ ಸೀಮಂತ ಮಾಡಿದ್ದಾರೆ. ಶ್ವಾನಕ್ಕೆ ಅಚ್ಚುಮೆಚ್ಚಿನ ಹಣ್ಣು-ಹಂಪಲು,ಐಸ್

ಮಂಗಳೂರು: ಸಾಕು ನಾಯಿಗೆ ಸೀಮಂತ| ಸೀಮಂತದ ಪೋಟೊ, ವೀಡಿಯೋ ವ್ಯೆರಲ್ Read More »