ಕರಾವಳಿ

ಪುತ್ತೂರು: ಪುಳುವಾರು ಗ್ರಾಮ ದೈವಸ್ಥಾನ ಮತ್ತು ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಬಳಗದ ಜಂಟಿ ಆಶ್ರಯದಲ್ಲಿ ಆ.25 ರಂದು ಕೇಸರ್ಡ್ ಒಂಜಿ ದಿನ| ಆಮಂತ್ರಣ ಬಿಡುಗಡೆ

ಸಮಗ್ರ ನ್ಯೂಸ್: ಪುತ್ತೂರಿನ ಚಿಕ್ಕ ಮುಡ್ನೂರು ಗ್ರಾಮ ಪುಳುವಾರು ಗ್ರಾಮ ದೈವಸ್ಥಾನ ಮತ್ತು ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಬಳಗದ ಜಂಟಿ ಆಶ್ರಯದಲ್ಲಿ ಆ.25 ರಂದು ನಡೆಯಲಿರುವ ಕೇಸರ್ಡ್ ಒಂಜಿ ದಿನ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು (ಆ.18) ನಡೆಯಿತು.

ಪುತ್ತೂರು: ಪುಳುವಾರು ಗ್ರಾಮ ದೈವಸ್ಥಾನ ಮತ್ತು ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಬಳಗದ ಜಂಟಿ ಆಶ್ರಯದಲ್ಲಿ ಆ.25 ರಂದು ಕೇಸರ್ಡ್ ಒಂಜಿ ದಿನ| ಆಮಂತ್ರಣ ಬಿಡುಗಡೆ Read More »

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡಿರುವುದು ಖಂಡನೀಯ – ಸುಳ್ಯ ಮಹಿಳಾ ಕಾಂಗ್ರೆಸ್

ಸಮಗ್ರ ನ್ಯೂಸ್: ರಾಜ್ಯದ ಅಭಿವೃದ್ದಿಯ ಹರಿಕಾರ, ಗ್ಯಾರೆಂಟಿಗಳ ಸರದಾರ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆಇಲ್ಲದೆ ಈ ನಾಡಿನ 2 ನೇ ಬಾರಿಯ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆ ನಡೆಸಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಮತ್ತು ಕೇಂದ್ರ ಸರಕಾರವು ರಾಜ್ಯಭವನವನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಹೊರಟಿರುವುದನ್ನು ಸುಳ್ಯ ತಾಲೂಕು ಮಹಿಳಾ ಕಾಂಗ್ರೆಸ್ ಘಟಕ ಖಂಡಿಸುತ್ತದೆ ಎಂದು ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಗೀತಾ ಕೋಲ್ಚಾರ್ ರವರು ಖಂಡಿಸಿದ್ದಾರೆ

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡಿರುವುದು ಖಂಡನೀಯ – ಸುಳ್ಯ ಮಹಿಳಾ ಕಾಂಗ್ರೆಸ್ Read More »

‘ನನ್ನ ಮೇಲೆ ಪ್ರಶ್ನೆ ಮಾಡಿದರೆ ದೇವರಿಗೆ ಇಡುತ್ತೇನೆ’ ಎಂದ ಶಾಸಕ ಹರೀಶ್ ಪೂಂಜಾ| ಗ್ರಾಮಸ್ಥರನ್ನೇ ಅವಾಚ್ಯವಾಗಿ ನಿಂದಿಸಿದ ವಿಡಿಯೋ ವೈರಲ್!!

ಸಮಗ್ರ ನ್ಯೂಸ್: ತನ್ನದೇ ಕ್ಷೇತ್ರದ ಜನರಿಗೆ ಶಾಸಕ ಹರೀಶ್ ಪೂಂಜಾ ಅವಾಚ್ಯ ಶಬ್ದಗಳಿಂದ ಬೈದು, ಬಳಿಕ ಪ್ರಶ್ನೆ ಮಾಡಿದರೆ ದೇವರ ಮೇಲೆ ಇಡುತ್ತೇನೆ ಎಂದು ದೇವರ ಹೆಸರಿನಲ್ಲಿ ಹೆದರಿಸಿದ ಘಟನೆ ನಡೆದಿದ್ದು, ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚಿಗೆ ಸುರಿದ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನ ಸವಾಣಾಲು ಗ್ರಾಮದ ಪಿಲಿಕಲ ರಸ್ತೆ ಬಿರುಕು ಬಿಟ್ಟು ವಾಹನ ಸಂಚಾರ ಹಾಗೂ ಜನರ ಓಡಾಟಕ್ಕೆ ಅಡಚಣೆ ಉಂಟಾಗಿತ್ತು. ಇಲ್ಲಿಗೆ ಭೇಟಿ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು

‘ನನ್ನ ಮೇಲೆ ಪ್ರಶ್ನೆ ಮಾಡಿದರೆ ದೇವರಿಗೆ ಇಡುತ್ತೇನೆ’ ಎಂದ ಶಾಸಕ ಹರೀಶ್ ಪೂಂಜಾ| ಗ್ರಾಮಸ್ಥರನ್ನೇ ಅವಾಚ್ಯವಾಗಿ ನಿಂದಿಸಿದ ವಿಡಿಯೋ ವೈರಲ್!! Read More »

ಕಡಬ: ಆ.21 ರಂದು ಲೋಕಾಯುಕ್ತ ಸಾರ್ವಜನಿಕ ಸಂಪರ್ಕ ಸಭೆ

ಸಮಗ್ರ ನ್ಯೂಸ್: ಕರ್ನಾಟಕ ಲೋಕಾಯುಕ್ತ ಮಂಗಳೂರು ಇವರಿಂದ ಸಾರ್ವಜನಿಕ ಜನ ಸಂಪರ್ಕ ಸಭೆಯು ಆ. 21 ರಂದು ಬೆಳಗ್ಗೆ 11 ರಿಂದ ಕಡಬ ತಾಲೂಕು ಕಚೇರಿಯಲ್ಲಿ ನಡೆಯಲಿದೆ. ಕಡಬ ತಾಲೂಕಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಅಹವಾಲುಗಳು ಇದ್ದಲ್ಲಿ ಅಧಿಕಾರಿಗಳಿಗೆ ಮನವಿ, ದೂರು ಸಲ್ಲಿಸಬಹುದಾಗಿದೆ.

ಕಡಬ: ಆ.21 ರಂದು ಲೋಕಾಯುಕ್ತ ಸಾರ್ವಜನಿಕ ಸಂಪರ್ಕ ಸಭೆ Read More »

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿಸಿದ ರಾಜ್ಯಪಾಲರ ವಿರುದ್ಧ ಭುಗಿಲೆದ್ದ ಪ್ರತಿಭಟನೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನಲೆಯಲ್ಲಿ ರಾಜ್ಯಪಾಲರ ಕ್ರಮ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಕಾಂಗ್ರೆಸ್ ನಾಯಕರು, ಹಿಂದುಳಿದ ವರ್ಗಗಳ ವೇದಿಕೆ, ಕುರುಬರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಹೋರಾಟ ಆರಂಭಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ, ರಾಜ್ಯ ಹಿಂದುಳಿದ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿಸಿದ ರಾಜ್ಯಪಾಲರ ವಿರುದ್ಧ ಭುಗಿಲೆದ್ದ ಪ್ರತಿಭಟನೆ Read More »

ಮಂಗಳೂರು: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಪ್ರತಿಭಟನೆ| ಶಾಂತಿಯುತ ಹೋರಾಟದಲ್ಲಿ ಹಲವು ಮಂದಿ ಭಾಗಿ

ಸಮಗ್ರ ನ್ಯೂಸ್: ಕೋಲ್ಕತ್ತಾದ ಆರ್.ಜಿ. ಕಾರ್ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ನಗರದ ಭಾರತೀಯ ವೈದ್ಯಕೀಯ ಸಂಘ, ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ನಗರ ಐಎಂಎ ಭವನದಿಂದ ಜಿಲ್ಲಾಧಿಕಾರಿ ಕಚೇರಿಗೆ ಶಾಂತಿಯತ ಮೆರವಣಿಗೆ ನಡೆಯಿತು. ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ ಸಹಿತ, ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಭಾಗವಹಿಸಿದ್ದರು. 24 ಗಂಟೆಗಳ ಕಾಲ ನಡೆಯುವ ಮುಷ್ಕರದ ವೇಳೆ ಹೊರರೋಗಿ ವಿಭಾಗ,

ಮಂಗಳೂರು: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಪ್ರತಿಭಟನೆ| ಶಾಂತಿಯುತ ಹೋರಾಟದಲ್ಲಿ ಹಲವು ಮಂದಿ ಭಾಗಿ Read More »

ಮಂಗಳೂರು: ಹೊಸ ಅಡಿಕೆ ದರದಲ್ಲಿ ಏರಿಕೆ

ಸಮಗ್ರ ನ್ಯೂಸ್: ಹೊಸ ಅಡಿಕೆ (ಚಾಲಿ) ದರದಲ್ಲಿ ಏರಿಕೆಯಾಗಿದ್ದು, ಇಲ್ಲಿನ ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿಗೆ ₹400 ಧಾರಣೆ ದೊರೆತಿದೆ. ಜೂನ್-ಜುಲೈ ತಿಂಗಳಿನಲ್ಲಿ ಕೆ.ಜಿಗೆ ₹375ರಿಂದ ₹385ರ ಆಸುಪಾಸಿನಲ್ಲಿದ್ದ ದರವು ಆಗಸ್ಟ್ ಮೊದಲ ವಾರದಲ್ಲಿ ತುಸು ಏರಿಕೆಯಾಗಿತ್ತು. ಅಡಿಕೆ ವಹಿವಾಟು ನಡೆಸುವ ಕ್ಯಾಂಪ್ಕೊದಲ್ಲಿ ಶುಕ್ರವಾರ ಗರಿಷ್ಠ ದರ ₹390 ಇದ್ದರೆ, ಸುಳ್ಯ ತಾಲ್ಲೂಕು ಬೆಳ್ಳಾರೆಯ ಮುಕ್ತ ಮಾರುಕಟ್ಟೆಯಲ್ಲಿ ಕೆ.ಜಿ.ಗೆ ₹400 ದರ ದಾಖಲಾಯಿತು. ಮಾರ್ಚ್‌ ಎರಡನೇ ವಾರದಲ್ಲಿ ಹೊಸ ಅಡಿಕೆ ಧಾರಣೆ ಕೆ.ಜಿ.ಗೆ ₹352 ಇದ್ದರೆ, ಏಪ್ರಿಲ್

ಮಂಗಳೂರು: ಹೊಸ ಅಡಿಕೆ ದರದಲ್ಲಿ ಏರಿಕೆ Read More »

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ| ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರ

ಸಮಗ್ರ ನ್ಯೂಸ್: ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು (ಆ.16) ಮುಂಜಾನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರ ಹೆಸರು ವಿಳಾಸದ ಮಾಹಿತಿ ‌ಲಭ್ಯವಾಗಿಲ್ಲ. ಗಾಯಗೊಂಡ ಎಲ್ಲರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಯುವಕರು ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿ ಕಂಡ ತಾಂತ್ರಿಕ ದೋಷಗಳಿಂದ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ| ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರ Read More »

ಸವಣೂರು:ಎಸ್.ಡಿ.ಪಿ.ಐ ಸವಣೂರು ಗ್ರಾಮ ಸಮಿತಿ ವತಿಯಿಂದ 78ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ

ಸಮಗ್ರ ನ್ಯೂಸ್: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸವಣೂರು ಗ್ರಾಮ ಸಮಿತಿ ವತಿಯಿಂದ 78ನೇ ಸ್ವಾತಂತ್ರೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಎಸ್.ಡಿ.ಪಿ.ಐ ಸವಣೂರು ಗ್ರಾಮ ಸಮಿತಿ ಅಧ್ಯಕ್ಷ ಇಕ್ಬಾಲ್ ಕೆನರಾ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮತ್ತು ಸವಣೂರು ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ರಝಾಕ್ ಕೆನರಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಬೆಳ್ಳಾರೆ ಬ್ಲಾಕ್ ಅಧ್ಯಕ್ಷರು ಸವಣೂರು ಗ್ರಾಮ ಪಂಚಾಯತ್ ಸದಸ್ಯ ರಫೀಕ್. ಎಂ ಎ ಸಂದೇಶ ಭಾಷಣ ಮಾಡಿದರು.

ಸವಣೂರು:ಎಸ್.ಡಿ.ಪಿ.ಐ ಸವಣೂರು ಗ್ರಾಮ ಸಮಿತಿ ವತಿಯಿಂದ 78ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ Read More »

‘ಮಿಸ್ಟರ್ ಟೀನ್ ಸೂಪರ್ ಗ್ಲೋಬ್’ ಪ್ರಶಸ್ತಿ ಪಡೆದ ಮಂಗಳೂರು ಮೂಲದ ಪೋರ

ಸಮಗ್ರ ನ್ಯೂಸ್: ಮಂಗಳೂರು ಮೂಲದ 13ರ ಹರೆಯದ ಬಾಲಕ ಥೈಲ್ಯಾಂಡಿನಲ್ಲಿ ನಡೆದ ಮಿಸ್ಟರ್‌ ಟೀನ್‌ ಸೂಪರ್‌ ಗ್ಲೋಬ್‌ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಲಿಡಿವಿನ್‌ ಡಿ’ಕೋಸ್ಟಾ ಮತ್ತು ವಿನ್ಸೆಂಟ್‌ ಡಿ’ಕೋಸ್ಟಾ ಅವರ ಪುತ್ರ ಬಜಪೆ ಸೈಂಟ್‌ ಜೋಸೆಫ್ ಹೈಸ್ಕೂಲ್‌ನ ವಿದ್ಯಾರ್ಥಿ ವರುಣ್‌ ಡಿ’ಕೋಸ್ಟಾ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತರಬೇತುದಾರ ವಿಜೇ ಡಿಕ್ಸನ್‌ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಈ ಸ್ಪರ್ಧೆಯು ಫ್ಯಾಶನ್‌, ಮಾಡೆಲಿಂಗ್‌ ಹಾಗೂ ಪ್ರತಿಭಾ ಪ್ರದರ್ಶನವನ್ನು ಒಳಗೊಂಡಿರುತ್ತದೆ. ಆ. 7ರಿಂದ 10ರ ವರೆಗೆ ಥೈಲ್ಯಾಂಡ್‌ನ‌ಲ್ಲಿ

‘ಮಿಸ್ಟರ್ ಟೀನ್ ಸೂಪರ್ ಗ್ಲೋಬ್’ ಪ್ರಶಸ್ತಿ ಪಡೆದ ಮಂಗಳೂರು ಮೂಲದ ಪೋರ Read More »