ಕರಾವಳಿ

ಮಂಗಳೂರು: ಟ್ಯಾಂಕರ್ ಹರಿದು ಸ್ಕೂಟಿ ಸವಾರ ದುರ್ಮರಣ

ಸಮಗ್ರ ನ್ಯೂಸ್: ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸಾವಿಗೀಡಾದ ಘಟನೆ ಇಂದು ಬೆಳಿಗ್ಗೆ ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ. ಮೃತಪಟ್ಟ ಸವಾರ ಅಡ್ಯಾರ್ ಕಣ್ಣೂರು ನಿವಾಸಿ ಎಂದು ಹೇಳಲಾಗುತ್ತಿದೆ. ನಂತೂರು ಪದವು ರಸ್ತೆಯಾಗಿ ಹೋಗುತ್ತಿದ್ದ ದ್ವಿಚಕ್ರ ವಾಹನವು ಸವಾರನ ನಿಯಂತ್ರಣ ತಪ್ಪಿ ಉರುಳಿದ್ದು, ಹಿಂದಿನಿಂದ ಚಲಿಸುತ್ತಿದ್ದ ಟ್ಯಾಂಕರ್ ಸವಾರನ ಮೇಲೆ ಹರಿಯಿತು ಎನ್ನಲಾಗಿದೆ. ಇದರಿಂದ ಸವಾರ ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ. ಸಂಚಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು: ಟ್ಯಾಂಕರ್ ಹರಿದು ಸ್ಕೂಟಿ ಸವಾರ ದುರ್ಮರಣ Read More »

ಕಡಬ: ನಿಫಾ ಪೀಡಿತನ ಆರೈಕೆ ಮಾಡಿದ್ದ ಯುವಕನಿಗೆ ಅಂಟಿದ ಸೋಂಕು| ಮಹಾಮಾರಿ ಎಫೆಕ್ಟ್ ನಿಂದ ಕೋಮಾಗೆ ಜಾರಿದ ನರ್ಸ್

ಸಮಗ್ರ ನ್ಯೂಸ್: ನಿಫಾ ವೈರಸ್ ಬಾಧಿಸಿದ್ದ ರೋಗಿಗೆ ಆರೈಕೆ ನೀಡಿದ್ದ ಕಡಬದ ನರ್ಸ್ ಓರ್ವರು ನಿಫಾ ವೈರಸ್ ಗೆ ತುತ್ತಾಗಿ ಕಳೆದ ಎಂಟು ತಿಂಗಳಿನಿಂದ ಕೋಮಾದಲ್ಲಿ ದಿನ ದೂಡುತ್ತಿರುವ ಹೃದಯ ವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳ ಸಮೀಪದ ತುಂಬ್ಯ ನಿವಾಸಿ ತೋಮಸ್ ಟಿ.ಸಿ. ಎಂಬವರ ಪುತ್ರ ಟಿಟ್ಟೋ ತೋಮಸ್(24) ಇದೀಗ ಜೀವನ್ಮರಣ ಸ್ಥಿತಿಯಲ್ಲಿ ದಿನದೂಡುತ್ತಿರುವ ಯುವಕ. ಬಿಎಸ್ಸಿ ನರ್ಸಿಂಗ್ ಪದವೀಧರನಾಗಿರುವ ಟಿಟ್ಟೋ ತೋಮಸ್ ಕೇರಳದ ಕ್ಯಾಲಿಕಟ್ ನಲ್ಲಿರುವ ಇಕ್ರಾ

ಕಡಬ: ನಿಫಾ ಪೀಡಿತನ ಆರೈಕೆ ಮಾಡಿದ್ದ ಯುವಕನಿಗೆ ಅಂಟಿದ ಸೋಂಕು| ಮಹಾಮಾರಿ ಎಫೆಕ್ಟ್ ನಿಂದ ಕೋಮಾಗೆ ಜಾರಿದ ನರ್ಸ್ Read More »

ಮೂಡುಬಿದಿರೆ: ಗೀಸರ್ ನಿಂದ ಗ್ಯಾಸ್ ಸೋರಿಕೆ| ಬಾತ್ ರೂಂ ಒಳಗೆ ಯುವಕ ದಾರುಣ ಸಾವು

ಸಮಗ್ರ ನ್ಯೂಸ್: ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ರವಿವಾರ ರಾತ್ರಿ ಮೂಡಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ಸಂಭವಿಸಿದೆ. ಕೋಟೆಬಾಗಿಲಿನ ಫ್ಲ್ಯಾಟ್ ಒಂದರಲ್ಲಿ ವಾಸವಾಗಿರುವ ದಿ. ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಮೃತಪಟ್ಟ ಯುವಕ. ಶಾರಿಕ್ ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದರು. ತುಂಬಾ ಹೊತ್ತಾದರೂ ಶಾರಿಕ್ ಹೊರಬಾರದ ಕಾರಣ ಅವರ ಬಾತ್ ರೂಮ್ ಬಾಗಿಲು ಒಡೆದು ನೋಡಿದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ.

ಮೂಡುಬಿದಿರೆ: ಗೀಸರ್ ನಿಂದ ಗ್ಯಾಸ್ ಸೋರಿಕೆ| ಬಾತ್ ರೂಂ ಒಳಗೆ ಯುವಕ ದಾರುಣ ಸಾವು Read More »

ವಿಟ್ಲ : ಅನಾರೋಗ್ಯದಿಂದ ಬಾಲಕಿ ಸಾವು

ಸಮಗ್ರ ನ್ಯೂಸ್: ಅನಾರೋಗ್ಯದಿಂದ 14 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಇಲ್ಲಿನ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಗ್ಲೀನಾ ಡಿಸೋಜಾ(14) ಮೃತ ಬಾಲಕಿ. ಪರ್ತಿಪ್ಪಾಡಿ ನಿವಾಸಿಯಾಗಿರುವ ಈಕೆ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಗ್ಲೀನಾ ಬಳಲುತ್ತಿದ್ದರು ಎನ್ನಲಾಗಿದೆ.ಮೃತಳು ತಂದೆ, ತಾಯಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾಳೆ.

ವಿಟ್ಲ : ಅನಾರೋಗ್ಯದಿಂದ ಬಾಲಕಿ ಸಾವು Read More »

ಬಂಟ್ವಾಳ: ಸಂಬಂಧಿ ಯುವತಿಯ ಗರ್ಭವತಿ ಮಾಡಿದಾತ ಅರೆಸ್ಟ್

ಸಮಗ್ರ ನ್ಯೂಸ್: ಸಂಬಂಧಿ ಯುವತಿಯನ್ನು ಅತ್ಯಾಚಾರ ಮಾಡಿ ಗರ್ಭವತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿವಾಹಿತನಾಗಿರುವ ಅಮ್ಟಾಡಿ ನಿವಾಸಿ ಗುರುಪ್ರಸಾದ್‌ ಬಂಧಿತ ಆರೋಪಿಯಾಗಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಘಟನೆಯ ಕುರಿತು ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಒಂದು ವರ್ಷದಲ್ಲಿ 2 ಬಾರಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಘಟನೆಯ ಕುರಿತು ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಬಂಟ್ವಾಳ: ಸಂಬಂಧಿ ಯುವತಿಯ ಗರ್ಭವತಿ ಮಾಡಿದಾತ ಅರೆಸ್ಟ್ Read More »

ಉಪ್ಪಿನಂಗಡಿ: ತುಂಬಿ ಹರಿಯುತ್ತಿದ್ದ ನೇತ್ರಾವತಿಯಲ್ಲಿ ಕೊಚ್ಚಿ ಬಂದ ದನ| ಗೋವನ್ನು ರಕ್ಷಣೆ ಮಾಡಿದ ವಿಕೋಪ ತಂಡ

ಸಮಗ್ರ ನ್ಯೂಸ್: ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದ ಸಿಬ್ಬಂದಿಗಳು ಹಾಗೂ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆತಂದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ರಭಸದಿಂದ ಹರಿಯುತ್ತಿದ್ದ ಈ ನದಿಯು ಮಧ್ಯದಲ್ಲಿ ದನವೊಂದು ತೇಲಿಕೊಂಡು ಹೋಗುತ್ತಿರುವುದನ್ನು ಗಮನಿಸಿದ ಹಳೆಗೇಟು ಸಮೀಪದ ದಡ್ಡು ಎಂಬಲ್ಲಿರುವ ಟಯರ್ ಅಂಗಡಿಯ ಮಾಲಕ ಚಂದಪ್ಪ ಅವರು ಕೂಡಲೇ ಪ್ರವಾಹ ರಕ್ಷಣಾ ತಂಡಕ್ಕೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ತಂಡ ತಮ್ಮಲ್ಲಿರುವ ರಬ್ಬರ್ ದೋಣಿಯ

ಉಪ್ಪಿನಂಗಡಿ: ತುಂಬಿ ಹರಿಯುತ್ತಿದ್ದ ನೇತ್ರಾವತಿಯಲ್ಲಿ ಕೊಚ್ಚಿ ಬಂದ ದನ| ಗೋವನ್ನು ರಕ್ಷಣೆ ಮಾಡಿದ ವಿಕೋಪ ತಂಡ Read More »

ಉಜಿರೆ: ಬೊಲೆರೋ – ಬೈಕ್ ನಡುವೆ ಭೀಕರ ಅಪಘಾತ| ಗಾಯಾಳು ಬಾಲಕಿ ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಉಜಿರೆಯಿಂದ ಮುಂಡಾಜೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಸೀಟು ಕಾಡು ಎಂಬಲ್ಲಿ ಬೊಲೆರೋ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದು, ಬಾಲಕಿಯ ತಂದೆ ಗಂಭೀರ ಗಾಯಗೊಂಡ ಘಟನೆ ಜು.27ರಂದು ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಮಂಜ ಗ್ರಾಮದ ಕುಡೆಂಚಿ ನಿವಾಸಿ ಗುರುಪ್ರಸಾದ್ ಗೋಖಲೆಯವರು ಮಗಳಾದ ಅನರ್ಘ್ಯ(13)ಳನ್ನು ಕೂರಿಸಿಕೊಂಡು ಮುಂಡಾಜೆ ಕಡೆ ಹೋಗುತ್ತಿದ್ದಾಗ ಕುಡಿದ ಮತ್ತಿನಲ್ಲಿ ಬೊಲೆರೋ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕನು ತನ್ನ ವಾಹನದಲ್ಲಿ

ಉಜಿರೆ: ಬೊಲೆರೋ – ಬೈಕ್ ನಡುವೆ ಭೀಕರ ಅಪಘಾತ| ಗಾಯಾಳು ಬಾಲಕಿ ಚಿಕಿತ್ಸೆ ಫಲಿಸದೇ ಸಾವು Read More »

ಮಂಗಳೂರು: ವಿದ್ಯಾರ್ಥಿಗಳಿಗೆ ಹೆಂಡದ ಆಫರ್ ನೀಡಿದ್ದ ಪಬ್ ಮೇಲೆ ಎಫ್ಐಆರ್

ಸಮಗ್ರ ನ್ಯೂಸ್: ಕಳೆದ ಹಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ ದೇರೆಬೈಲ್‌ನಲ್ಲಿರುವ ಹೋಟೆಲ್ ಲಾಲ್‌ಬಾಗ್ ಇನ್ (ಲಿಕ್ವಿಡ್ ಲಾಂಜ್ ಬಾರ್) ನಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಪಾನ ಮಾಡಲು ಉತ್ತೇಜಿಸುವ ಪೋಸ್ಟರ್ ಹರಿದಾಡುತ್ತಿರುವ ಹಿನ್ನೆಲೆ ಎಚ್ಚೆತ್ತ ಅಬಕಾರಿ ಇಲಾಖೆ ಬಾರ್ ಮಾಲೀಕರ ವಿರುದ್ಧ FIR ದಾಖಲಿಸಿದೆ. ಈ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದರಿಂದ ವಿಧ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರು ರೊಚ್ಚಿಗೆದ್ದಿದ್ದರು. ಈ ಬಗ್ಗೆ ಎಚ್ಚೆತ್ತ ಪೋಲಿಸ್ ಇಲಾಖೆಯ ಸೂಚನೆಯ ಮೇರೆಗೆ ಹಾಗೂ ಅಬಕಾರಿ ಇಲಾಖೆ ಕರ್ನಾಟಕ ಅಬಕಾರಿ

ಮಂಗಳೂರು: ವಿದ್ಯಾರ್ಥಿಗಳಿಗೆ ಹೆಂಡದ ಆಫರ್ ನೀಡಿದ್ದ ಪಬ್ ಮೇಲೆ ಎಫ್ಐಆರ್ Read More »

ಮಂಗಳೂರು: ಉಳ್ಳಾಲ NSUI ಅಧ್ಯಕ್ಷರಾಗಿ ಶಾಹುಲ್‌ ಮಂಚಿಲ

ಸಮಗ್ರ ನ್ಯೂಸ್: ಮಂಗಳೂರಿನ ಉಳ್ಳಾಲ ವಿಧಾನಸಭಾ ಕ್ಷೇತ್ರದ ಎನ್‌ಎಸ್‌ಯುಐ ಅಧ್ಯಕ್ಷರಾಗಿ ಶಾಹಿಲ್ ಮಂಚಿಲ ನೇಮಕಗೊಂಡಿದ್ದಾರೆ. ಎನ್‌ಎಸ್ ಯುಐ ಉಸ್ತುವಾರಿಗಳಾದ ಜಾಕಿರ್ ಹುಸೇನ್ ರವರು ಶಾಹುಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಮಂಗಳೂರು: ಉಳ್ಳಾಲ NSUI ಅಧ್ಯಕ್ಷರಾಗಿ ಶಾಹುಲ್‌ ಮಂಚಿಲ Read More »

ಸುಬ್ರಹ್ಮಣ್ಯ ರೋಡ್- ಸಕಲೇಶಪುರ ನಡುವಿನ ಎಡಕುಮೇರಿ ಬಳಿ ಗುಡ್ಡ‌ಕುಸಿತ| ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ಸಮಗ್ರ ನ್ಯೂಸ್: ರೈಲು ಹಳಿಯ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಸಮೀಪದ ಎಡಕುಮೇರಿ- ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ಮಣ್ಣು ಕುಸಿದಿದೆ. ನಿರಂತರ ಮಳೆಯಿಂದಾಗಿ ಹಳಿಯ ಕೆಳಭಾಗದಲ್ಲಿ ಮಣ್ಣು ಕುಸಿತ ಉಂಟಾದ ಪರಿಣಾಮ ಮಂಗಳೂರು-ಬೆಂಗಳೂರು ನಡುವಿನ ರೈಲು ಶುಕ್ರವಾರ ಸಂಜೆ ಸ್ವಲ್ಪ ಹೊತ್ತು ಸ್ಥಗಿತಗೊಂಡಿತು. ನಂತರ ಬದಲಿ ಮಾರ್ಗದ ಮೂಲಕ ಸಾಗಿದವು. ಸಂಜೆ 5.30ಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಹೊರಟಿದ್ದ ವಿಜಯಪುರ ಎಕ್ಸ್‌ಪ್ರೆಸ್ ಈ ಘಟನೆಯಿಂದಾಗಿ ವಾಪಸಾಯಿತು. ನಂತರ ಕಾರವಾರ, ಮಡಗಾಂವ್‌ ಜಂಕ್ಷನ್‌, ಕುಳೆಮ್‌, ಕ್ಯಾಸಲ್‌ರಾಕ್‌,

ಸುಬ್ರಹ್ಮಣ್ಯ ರೋಡ್- ಸಕಲೇಶಪುರ ನಡುವಿನ ಎಡಕುಮೇರಿ ಬಳಿ ಗುಡ್ಡ‌ಕುಸಿತ| ರೈಲು ಸಂಚಾರ ತಾತ್ಕಾಲಿಕ ಸ್ಥಗಿತ Read More »