ಕರಾವಳಿ

ಸುಳ್ಯದ ಆಡಳಿತಕ್ಕೆ ಭ್ರಮೆಯೋ? ಸುಳ್ಯಕ್ಕೆ ‌ಭ್ರಮೆಯೋ? ಕೀಬೋರ್ಡ್ ವಾರಿಯರ್ ಜೊತೆ ನ.ಪಂ ಅಧ್ಯಕ್ಷರ ಟಾಕ್ ವಾರ್!

ಸಮಗ್ರ ನ್ಯೂಸ್: ಜಾಲತಾಣಗಳಲ್ಲಿ ಸಮಸ್ಯೆ ಮುಂದಿಟ್ಟ ಆರ್.ಜೆ ತ್ರಿಶೂಲ್ ಗೆ ಕೀಬೋರ್ಡ್ ವಾರಿಯರ್ ಎಂದು ಕಮೆಂಟ್ ಹಾಕಿದ ಸುಳ್ಯ ನ.ಪಂ‌ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಮತ್ತೆ ಟ್ರೋಲಿಗೆ ಒಳಗಾಗಿದ್ದಾರೆ. ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಮತ್ತು ತ್ರಿಶೂಲ್ ನಡುವೆ ಮತ್ತೊಂದು ಟಾಕ್ ವಾರ್ ನಡೆದಿದ್ದು ಈ ಆಡಿಯೋ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಚರ್ಚೆ ಹುಟ್ಟು ಹಾಕಿದೆ. ಸುಳ್ಯ ನಗರದ ಹೃದಯ ಭಾಗದಲ್ಲಿ ಇರುವಂತಹ ಗುಂಡಿ ರಸ್ತೆಗಳ ಕುರಿತಂತೆ ಈ ಫೋನ್ ಸಂಭಾಷಣೆ ನಡೆದಿದ್ದು, ಮಾತಿನ ನಡುವೆ ವಿನಯಕುಮಾರ್ […]

ಸುಳ್ಯದ ಆಡಳಿತಕ್ಕೆ ಭ್ರಮೆಯೋ? ಸುಳ್ಯಕ್ಕೆ ‌ಭ್ರಮೆಯೋ? ಕೀಬೋರ್ಡ್ ವಾರಿಯರ್ ಜೊತೆ ನ.ಪಂ ಅಧ್ಯಕ್ಷರ ಟಾಕ್ ವಾರ್! Read More »

ಸುಳ್ಯ: ಮತ್ತೆ ಕಂಪಿಸಿದ ಭೂಮಿ

ಸಮಗ್ರ ನ್ಯೂಸ್: ಕಳೆದ ಕೆಲ ದಿನಗಳಿಂದ ತಣ್ಣಗಾಗಿದ್ದ ಸುಳ್ಯದ ‌ಕೆಲಭಾಗಗಳಲ್ಲಿ ಇಂದು(ಆ.14) ಸಂಜೆ ಮತ್ತೆ ಭೂಮಿ ಕಂಪಿಸಿದೆ. ತಾಲೂಕಿನ ಕಲ್ಮಕಾರು, ಕೊಲ್ಲಮೊಗ್ರು ಗ್ರಾಮಗಳಲ್ಲಿ ಸಂಜೆ 6ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಗುತ್ತಿಗಾರು, ದೇವಚಳ್ಳ, ಮಡಪ್ಪಾಡಿ, ಮರ್ಕಂಜ ಭಾಗಗಳಲ್ಲಿ ಗುಡುಗಿನಂತಹ ಶಬ್ದ ಕೇಳಿಬಂದಿದೆ. ಕಲ್ಮಕಾರಿನ ಗುಳಿಕ್ಕಾನ ಭಾಗದಲ್ಲಿ ಭಾರೀ ಶಬ್ಧ ಕೇಳಿಬಂದಿದ್ದು, ನೆರೆ, ಜಲಪ್ರವಾಹದಿಂದ ಕಂಗೆಟ್ಟ ಈ ಭಾಗದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಸುಳ್ಯ: ಮತ್ತೆ ಕಂಪಿಸಿದ ಭೂಮಿ Read More »

ಕುದ್ರೋಳಿ ಕ್ಷೇತ್ರದ ಆವರಣದಲ್ಲಿ ದಾಖಲೆ ಬರೆದ ತ್ರಿವರ್ಣ ಧ್ವಜದ ಚಿತ್ರಾಕೃತಿ

ಮಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಪ್ರಯುಕ್ತ ಮಂಗಳೂರಿನ ಇತಿಹಾಸ ಪ್ರಸಿದ್ಧ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆವರಣದಲ್ಲಿ ಪುಷ್ಪ ಹಾಗೂ ಧಾನ್ಯಗಳನ್ನು ಬಳಸಿ ರಚಿಸಿದ ತ್ರಿವರ್ಣ ಧ್ವಜದ ಚಿತ್ರಾಕೃತಿ ಎಲ್ಲರ ಗಮನಸೆಳೆಯುತ್ತಿದ್ದು, ಬರೋಬ್ಬರಿ 900 ಕೆ.ಜಿ‌ ಧಾನ್ಯಗಳನ್ನು ಬಳಸಿ ಇದನ್ನು ರಚಿಸಿರುವುದು ಮತ್ತೊಂದು ದಾಖಲೆ. ಕಲಾವಿದ ಹಾಗೂ ಛಾಯಾಗ್ರಾಹಕ ಪುನಿಕ್ ಶೆಟ್ಟಿ ಅವರ ನೇತೃತ್ವದಲ್ಲಿ ಗುರುಬೆಳದಿಂಗಳು ಸಮಿತಿಯ ಮೂವತ್ತು ಸದಸ್ಯರು ಸೇರಿ 38 ಫೀಟ್ ವೃತ್ತದಲ್ಲಿ ಈ ವಿಶಿಷ್ಟ ರಚನೆಯನ್ನು ನಿರ್ಮಿಸಿದ್ದಾರೆ. 300ಕೆಜಿ ಸಾಗು , 300ಕೆಜಿ ಹೆಸರುಕಾಳು,

ಕುದ್ರೋಳಿ ಕ್ಷೇತ್ರದ ಆವರಣದಲ್ಲಿ ದಾಖಲೆ ಬರೆದ ತ್ರಿವರ್ಣ ಧ್ವಜದ ಚಿತ್ರಾಕೃತಿ Read More »

ಸುಳ್ಯ: ಕನಕಮಜಲಿನಿಂದ ಜಾಲ್ಸೂರಿನ ತನಕ ಬೃಹತ್ ಪಂಜಿನ ಮೆರವಣಿಗೆ

ಸಮಗ್ರ ನ್ಯೂಸ್: ಜಾಲ್ಸೂರು ವಲಯ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆಯು ಕನಕಮಜಲಿನಿಂದ ಜಾಲ್ಸೂರಿನ ತನಕ ಆ.13ರಂದು ಸಂಜೆ ಜರುಗಿತು. ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಿಂದ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳ ನೇತೃತ್ವದಲ್ಲಿ ಹೊರಟ ಬೃಹತ್ ಪಂಜಿನ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಜಾಲ್ಸೂರಿನವರೆಗೆ ಸಾಗಿ ಬಂದಿತು. ಬಳಿಕ ಜಾಲ್ಸೂರಿನ ಶ್ರೀನಿವಾಸ್ ಕಾಂಪ್ಲೆಕ್ಸ್ ವಠಾರದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಜಾಲ್ಸೂರು ವಲಯದ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ

ಸುಳ್ಯ: ಕನಕಮಜಲಿನಿಂದ ಜಾಲ್ಸೂರಿನ ತನಕ ಬೃಹತ್ ಪಂಜಿನ ಮೆರವಣಿಗೆ Read More »

ಎಬಿವಿಪಿ ಮಂಗಳೂರು ವತಿಯಿಂದ ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಬೃಹತ್ ತಿರಂಗ ಯಾತ್ರೆ

ಸಮಗ್ರ ನ್ಯೂಸ್: ಸ್ವತಂತ್ರ ಭಾರತದ ಹೋರಾಟಕ್ಕಾಗಿ ಮೊದಲ ಸ್ವಾತಂತ್ರ ಧ್ವಜವನ್ನು ಹಾರಿಸಿ, ಸ್ವತಂತ್ರವನ್ನ ಘೋಷಿಸಿಕೊಂಡ ಸ್ಥಳ ಬಾವುಟಗುಡ್ಡ ಆ ಸ್ಥಳವನ್ನು ನಾವೆಲ್ಲರೂ ಸ್ಮರಿಸಿಕೊಳ್ಳಬೇಕು ಎಂದು ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಮಣೆಕಂಠ ಕಳಸಾ ಮಾತನಾಡಿದರು. ಅವರು ಮಂಜೆಶ್ವರ ಗೋವಿಂದ ಪೈ ವೃತ್ತದಿಂದ ಬಾವುಟ ಗುಡ್ಡದವರೆಗೆ ಎಬಿವಿಪಿ ವತಿಯಿಂದ ನಡೆದ ಬೃಹತ್ ತಿರಂಗ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ತಿರಂಗವನ್ನು ಹಿಡಿದು, ಭಾರತ್ ಮಾತಾ ಕಿ ಜೈ ವಂದೇ ಮಾತರಂ ಘೋಷಣೆಗಳನ್ನು ಕೂಗುತ್ತಾ ತಿರಂಗ ಯಾತ್ರೆಯಲ್ಲಿ ಭಾಗವಹಿಸಿದ್ದರು.

ಎಬಿವಿಪಿ ಮಂಗಳೂರು ವತಿಯಿಂದ ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಬೃಹತ್ ತಿರಂಗ ಯಾತ್ರೆ Read More »

ಎಬಿವಿಪಿಯಿಂದ ಸುಬ್ರಹ್ಮಣ್ಯದಲ್ಲಿ “ಯುವಾಂಕುರ” ಅಂತರ್ ಕಾಲೇಜು ಸ್ಪರ್ಧೆ

ಸಮಗ್ರ ನ್ಯೂಸ್: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ ಆಯೋಜಿಸಿದ “ಯುವಾಂಕುರ” ರಾಷ್ಟ್ರಧಾರೆಯೋಳಿಂದು ಅಮೃತ ವರ್ಷದ ಹರ್ಷ ಎಂಬ ಸುಳ್ಯ ಹಾಗೂ ಕಡಬ ತಾಲೂಕು ಮಟ್ಟದ ಅಂತರ್ ಕಾಲೇಜು ಸ್ಪರ್ಧೆಯ ಉದ್ಘಾಟನಾ ಸಮಾರಂಭವನ್ನು ಬಾಲ ಭಟ್ ಹಿರಿಯ ಸ್ವಯಂಸೇವಕರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇವರು ನೆರವೇರಿಸಿದರು. ವೇದಿಕೆಯಲ್ಲಿ ABVP ವಿಭಾಗ ಸಂಚಲಕ್ ಆಗಿರುವ ಹರ್ಷಿತ್ ಹಾಗೂ ಸುಬ್ರಹ್ಮಣ್ಯ ನಗರ ಕಾರ್ಯದರ್ಶಿ ಸೃಜನ್ ರೈ ಉಪಸ್ಥಿತಿ ಇದ್ದರು. ಕಾರ್ಯಕ್ರಮದಲ್ಲಿ ಕುಣಿತ ಭಜನೆ, ದೇಶಭಕ್ತಿ ಗೀತೆ,

ಎಬಿವಿಪಿಯಿಂದ ಸುಬ್ರಹ್ಮಣ್ಯದಲ್ಲಿ “ಯುವಾಂಕುರ” ಅಂತರ್ ಕಾಲೇಜು ಸ್ಪರ್ಧೆ Read More »

ಸುಳ್ಯ: ಜಾಲತಾಣಗಳಲ್ಲಿ ಸಾಮಾಜಿಕ ಕಳಕಳಿ ತೆರೆದಿಟ್ಟ ಯುವಕ| ಉರಿ ತಡೆದುಕೊಳ್ಳಲಾಗದೆ ‘ಕೀಬೋರ್ಡ್ ವಾರಿಯರ್’ ಎಂದ ನ.ಪಂ ಅಧ್ಯಕ್ಷ|

ಸಮಗ್ರ ನ್ಯೂಸ್: ಸುಳ್ಯ ನಗರದಲ್ಲಿ ಹಲವಾರು ಸಮಸ್ಯೆಗಳ ಜೊತೆಗೆ ಜನ ಬದುಕುತ್ತಿದ್ದಾರೆ. ಮನವಿ ಕೊಟ್ಟರೂ ಆಮೆ ನಡಿಗೆಯ ಅಭಿವೃದ್ಧಿ ಮಾಡುತ್ತಿರುವ ಸ್ಥಳೀಯ ನ.ಪಂ‌ ಆಡಳಿತ ಜನರ ಸಮಸ್ಯೆಗಳನ್ನು ಆಲಿಸುವತ್ತ ಚಿಂತಿಸುತ್ತಿಲ್ಲ ಎಂಬುದು ನಗರವಾಸಿಗಳ ಆರೋಪ. ಆದರೆ ಕೆಲವೊಮ್ಮೆ ಇದರಿಂದ ಜನ ರೋಸಿ ಹೋದಾಗ ಜಾಲತಾಣಗಳಲ್ಲಿ ಸಮಸ್ಯೆಗಳ ಕುರಿತಂತೆ ಮಾತನಾಡುತ್ತಾರೆ. ಆದರೆ ನ.ಪಂ‌ ಮಾತ್ರ ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ಜನರನ್ನೇ ಅಪರಾದಿಗಳನ್ನಾಗಿ ಮಾಡುತ್ತಿದೆ. ಇದೀಗ ಮತ್ತೊಬ್ಬ ಯುವಕ ಸುಳ್ಯ ನ.ಪಂ‌ ಆಡಳಿತದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. https://m.facebook.com/story.php?story_fbid=640038614142407&id=100044088233880&sfnsn=wiwspmo

ಸುಳ್ಯ: ಜಾಲತಾಣಗಳಲ್ಲಿ ಸಾಮಾಜಿಕ ಕಳಕಳಿ ತೆರೆದಿಟ್ಟ ಯುವಕ| ಉರಿ ತಡೆದುಕೊಳ್ಳಲಾಗದೆ ‘ಕೀಬೋರ್ಡ್ ವಾರಿಯರ್’ ಎಂದ ನ.ಪಂ ಅಧ್ಯಕ್ಷ| Read More »

ಮಂಗಳೂರು: ಟ್ರಾಫಿಕ್ ಪೊಲೀಸ್ ಜೊತೆ ಕಿರಿಕ್ ಮಾಡಿದ ಸಿಟಿಬಸ್ ಸಿಬ್ಬಂದಿ| ಓರ್ವ ಚಾಲಕ ಪೊಲೀಸ್ ವಶ

ಸಮಗ್ರ ನ್ಯೂಸ್: ಮಂಗಳೂರು ನಗರ ಹೊರವಲಯದ ತಲಪಾಡಿಯಲ್ಲಿ ಸಿಟಿ ಬಸ್‌ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಸಂಚಾರ ರದ್ದುಗೊಳಿಸಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಓರ್ವ ಚಾಲಕನನ್ನು ಪೊಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ದಕ್ಷಿಣ ಸಂಚಾರಿ ಪೊಲೀಸ್‌ ಠಾಣೆಯ ಎಎಸ್‌ಐ ಆಲ್ಬಟ್೯ ಲಸ್ರಾದೋ ನೇತೃತ್ವದಲ್ಲಿ ಇಂದು ಬೆಳಗ್ಗೆ ತಲಪಾಡಿ ಚೆಕ್‌ಪೋಸ್ಟ್‌ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಓವರ್‌ ಸ್ಪೀಡ್‌ನಲ್ಲಿ ತೆರಳುತ್ತಿದೆ ಎಂದು ಖಾಸಗಿ ಬಸ್‌ನ ಫೋಟೋ ತೆಗೆದು

ಮಂಗಳೂರು: ಟ್ರಾಫಿಕ್ ಪೊಲೀಸ್ ಜೊತೆ ಕಿರಿಕ್ ಮಾಡಿದ ಸಿಟಿಬಸ್ ಸಿಬ್ಬಂದಿ| ಓರ್ವ ಚಾಲಕ ಪೊಲೀಸ್ ವಶ Read More »

ಸುಳ್ಯ: ಅಪಾಯದ ಪರಿಸ್ಥಿತಿಯಲ್ಲಿನ ಮನೆಗಳಿಗೆ ಪರ್ಯಾಯ ವ್ಯವಸ್ಥೆಗೆ ಡಿಸಿ ಚಿಂತನೆ

ಸಮಗ್ರ ನ್ಯೂಸ್: ಪ್ರಾಕೃತಿಕ ವಿಕೋಪಗಳಿಂದ ಹಾನಿಗೊಳಗಾಗಿರುವ ಸುಳ್ಯ ತಾಲೂಕಿನ ಕೆಲವು ಮನೆಗಳಿಗೆ ಪರ್ಯಾಯ ಜಾಗದ ವ್ಯವಸ್ಥೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಂದಾಗಿದ್ದಾರೆ. ‘ತಾಲೂಕಿನ ಕಲ್ಮಕಾರಿನಲ್ಲಿ ಭೂಕುಸಿತದಿಂದ ಅಪಾಯ ಎದುರಿಸುತ್ತಿರುವ ಎಂಟು ಕುಟುಂಬಗಳನ್ನು ಮುಂದಿನ ಮುಂಗಾರಿನ ಒಳಗೆ ಸ್ಥಳಾಂತರಿಸಲಾಗುವುದು. ಈ ಕುಟುಂಬಗಳಿಗೆ ಪರ್ಯಾಯ ಜಮೀನು ನೀಡಲಿದ್ದೇವೆ. ಜಮೀನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಡಿಸಿ, ‘ಬೆಳ್ತಂಗಡಿ ತಾಲ್ಲೂಕಿನ ಮಿತ್ತಬಾಗಿಲು ಗಣೇಶನಗರದಲ್ಲೂ ಕೆಲವು ಮನೆಗಳು ಭೂಕುಸಿತದ

ಸುಳ್ಯ: ಅಪಾಯದ ಪರಿಸ್ಥಿತಿಯಲ್ಲಿನ ಮನೆಗಳಿಗೆ ಪರ್ಯಾಯ ವ್ಯವಸ್ಥೆಗೆ ಡಿಸಿ ಚಿಂತನೆ Read More »

ಧರ್ಮಸ್ಥಳ: ಜನಜಾಗೃತಿ ವೇದಿಕೆಯಿಂದ ಹಂಚಿದ ಧ್ವಜ ವಿರೂಪ!?

ಸಮಗ್ರ ನ್ಯೂಸ್: ಅಖಿಲ ಭಾರತ‌ ಜನಜಾಗೃತಿ ವೇದಿಕೆಯಿಂದ ಧರ್ಮಸ್ಥಳದಲ್ಲಿ ನಡೆದ ನವಜೀವನ ಸದಸ್ಯರ ಶತದಿನೋತ್ಸವ ಕಾರ್ಯಕ್ರಮದಲ್ಲಿ ಹಂಚಲ್ಪಟ್ಟ ತ್ರಿವರ್ಣ ಧ್ವಜಗಳು ವಿರೂಪಗೊಂಡಿವೆ ಎಂಬ ಸುದ್ದಿಯೊಂದು ವೈರಲ್ ಆಗುತ್ತಿದೆ. ಇಂದು ಧರ್ಮಾಧಿಕಾರಿ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಯೋಜನೆ‌ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು. ಈ ವೇಳೆ ನವಜೀವನ ಸದಸ್ಯರು ಮತ್ತು ಧ.ಗ್ರಾ.ಯೋಜನೆಯ ಸದಸ್ಯರಿಗೆ ನೀಡಲಾದ ಧ್ವಜಗಳಲ್ಲಿ ರಾಷ್ಟ್ರಧ್ವಜವನ್ನು ವಿರೂಪಗೊಳಿಸಲಾಗಿದೆ ಎಂದು ಹೇಳಲಾಗಿದೆ. ಇದಕ್ಕೆ ಪೂರಕವಾಗಿ ಕೆಲವು ಧ್ವಜಗಳಲ್ಲಿ ಅಶೋಕ

ಧರ್ಮಸ್ಥಳ: ಜನಜಾಗೃತಿ ವೇದಿಕೆಯಿಂದ ಹಂಚಿದ ಧ್ವಜ ವಿರೂಪ!? Read More »