ಕರಾವಳಿ

ಮಂಗಳೂರು: ಗೆಳೆಯನ ಪ್ರಾಣ ಕಸಿದ ಹೆದ್ದಾರಿ ಗುಂಡಿ| ಮಿತ್ರನ ಸಾವಿಗೆ ನ್ಯಾಯ ಕೊಡಿಸಲು ಏಕಾಂಗಿ ಹೋರಾಟ

ಸಮಗ್ರ ನ್ಯೂಸ್: ನಗರದೊಳಗಿನ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಗಳ ದುರಸ್ತಿ ಮಾಡುವಂತೆ ಹಾಗೂ ಸಮರ್ಪಕ ರಸ್ತೆಗೆ ಆಗ್ರಹಿಸಿ ಯುವಕನೋರ್ವ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಮಂಗಳೂರಿನ ಲಿಖಿತ್ ಎಂಬ ಯುವಕ ಈ ಏಕಾಂಗಿ ಹೋರಾಟ ನಡೆಸಿದ್ದು, ಇತ್ತೀಚೆಗೆ ನಂತೂರಿನಲ್ಲಿ ರಸ್ತೆಗುಂಡಿಗೆ ಬಿದ್ದು ಮೃತಪಟ್ಟ ಗೆಳೆಯ ಆತಿಷ್‌ನ ನ್ಯಾಯಕ್ಕಾಗಿ ಆಗ್ರಹಿಸಿ ಈ ವಿನೂತನ ಶೈಲಿಯ ಪ್ರತಿಭಟನೆ ನಡೆಸಿದ್ದಾನೆ. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಲಿಖಿತ್, ಮಿತ್ರ ಆತಿಷ್ ನಂತೂರ್‌ನಲ್ಲಿ ರಸ್ತೆಯಲ್ಲಿದ್ದ […]

ಮಂಗಳೂರು: ಗೆಳೆಯನ ಪ್ರಾಣ ಕಸಿದ ಹೆದ್ದಾರಿ ಗುಂಡಿ| ಮಿತ್ರನ ಸಾವಿಗೆ ನ್ಯಾಯ ಕೊಡಿಸಲು ಏಕಾಂಗಿ ಹೋರಾಟ Read More »

ದಕ್ಷಿಣ ಕನ್ನಡ: ಹವಾಮಾನ ವರದಿ ಹಾಗೂ ಮುನ್ಸೂಚನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆಯು ಈ ಹಿಂದೆ ಘೋಷಿಸಿದ್ದ ಯೆಲ್ಲೋ ಅಲರ್ಟ್ ಶುಕ್ರವಾರ ಆರೆಂಜ್‌ಗೆ ಬದಲಾಗಿದೆ. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರದಲ್ಲಿ ಗಾಳಿ ಬಲವಾಗಿ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ನೀಡಲಾಗಿರುವ ಎಚ್ಚರಿಕೆಯನ್ನು ಮುಂದುವರಿಸಲಾಗಿದೆ. ಗುರುವಾರ ಮಳೆ ಕಡಿಮೆಯಾಗಿದ್ದರೂ ಬಲವಾಗಿ ಬೀಸುವ ಗಾಳಿಯಿಂದಾಗಿ ಸಮುದ್ರದ ಪ್ರಕ್ಷುಬ್ಧತೆ ಮುಂದುವರಿಸಿದೆ.  ದ.ಕ.ಜಿಲ್ಲೆಯಲ್ಲಿ ಗುರುವಾರ ಸಾಧಾರಣ ಮಳೆಯೊಂದಿಗೆ ಬಿಸಿಲ ವಾತಾವರಣವಿತ್ತು.

ದಕ್ಷಿಣ ಕನ್ನಡ: ಹವಾಮಾನ ವರದಿ ಹಾಗೂ ಮುನ್ಸೂಚನೆ Read More »

ನೆಲ್ಯಾಡಿ: ಬಸ್ ನಲ್ಲಿ ಸಿಕ್ಕಿಬಿದ್ದ ಅನ್ಯಮತೀಯ ನವಜೋಡಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಅನ್ಯ ಜೋಡಿಯೊಂದನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು(ಆ.12) ಮುಂಜಾನೆ ಬೆಳಕಿಗೆ ಬಂದಿದೆ. ಗದಗ ಜಿಲ್ಲೆಯ ನರಗುಂದ ಮೂಲದ ರಫೀಕ್ (21) ಸಂಕದಲ್ ಎಂಬಾತ ಗದಗ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು ಖಾಸಗಿ ಲಾಡ್ಜ್ ಬುಕ್ಕಿಂಗ್ ಗಾಗಿ ಬಂದಿರುತ್ತಾರೆ. ನವ ವಿವಾಹಿತ ಭಿನ್ನಕೋಮಿನ ಜೋಡಿ ಎಂದು ತಿಳಿದ ಕೂಡಲೆ ಲಾಡ್ಜ್ ಸಿಬ್ಬಂದಿ, ರೂಮ್ ನೀಡಲು ನಿರಾಕರಿಸಿದ್ದಾರೆ. ಆಗ ಅವರು ತಕ್ಷಣ ಅಲ್ಲಿಂದ ಮರಳಿ

ನೆಲ್ಯಾಡಿ: ಬಸ್ ನಲ್ಲಿ ಸಿಕ್ಕಿಬಿದ್ದ ಅನ್ಯಮತೀಯ ನವಜೋಡಿ ಪೊಲೀಸ್ ವಶಕ್ಕೆ Read More »

ದೋಣಿಗಲ್ ನಲ್ಲಿ ಮತ್ತೆ ಭೂಕುಸಿತ| ಪರಿಹಾರಕ್ಕೆ ಆಗ್ರಹಿಸಿ ಸ್ಥಳೀಯರಿಂದ ರಾ.ಹೆದ್ದಾರಿ ತಡೆದು ಪ್ರತಿಭಟನೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿಯ ಗುತ್ತಿಗೆದಾರರ ನಿರ್ಲಕ್ಷ್ಯದ ಪರಿಣಾಮ ಭೂಕುಸಿತ ಉಂಟಾಗಿ 50ಕ್ಕೂ ಹೆಚ್ಚು ಎಕರೆ ಕಾಫಿ ತೋಟ ಹಾಗೂ ಗದ್ದೆಗೆ ಹಾನಿಯಾಗಿದ್ದು ಕೂಡಲೆ ಪರಿಹಾರ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಂತ್ರಸ್ತರು ಕೆಲಕಾಲ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 75 ದೋಣಿಗಲ್ ಸಮೀಪ ಭೂಕುಸಿತ ಉಂಟಾಗಿ ಸುಮಾರು 15 ಮಂದಿಯ ಕಾಫಿ ತೋಟ ಹಾಗೂ ಗದ್ದೆಗಳಿಗೆ ತೀವ್ರ ಹಾನಿಯಾಗಿದೆ. ಆದರೆ ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ

ದೋಣಿಗಲ್ ನಲ್ಲಿ ಮತ್ತೆ ಭೂಕುಸಿತ| ಪರಿಹಾರಕ್ಕೆ ಆಗ್ರಹಿಸಿ ಸ್ಥಳೀಯರಿಂದ ರಾ.ಹೆದ್ದಾರಿ ತಡೆದು ಪ್ರತಿಭಟನೆ Read More »

“ಪೋಲೀಸ್ ಇಲಾಖೆಗೆ ಧನ್ಯವಾದ,ಆರೋಪಿಗಳ ಪರವಾಗಿ ಯಾವ ವಕೀಲನೂ ವಕಾಲತು ನಡೆಸಬಾರದು”- ಪ್ರವೀಣ್ ತಾಯಿ ಮನವಿ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಪ್ರಮುಖ ಆರೋಪಿಗಳ ಬಂಧನವಾಗಿದೆ. ಈ ಬಗ್ಗೆ ಪ್ರವೀಣ್ ನೆಟ್ಟಾರು ಕುಟುಂಬಸ್ಥರು ಪೋಲೀಸ್ ಇಲಾಖೆಗೆ ಧನ್ಯವಾದ ಹೇಳಿದ್ದಾರೆ. ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಮತ್ತು ಯಾವ ವಕೀಲನೂ ಆರೋಪಿಗಳಿಗೆ ವಕಾಲತು ನಡೆಸಬಾರದು ಎಂದು ಪ್ರವೀಣ್ ತಾಯಿ ರತ್ನಾವತಿ ವಕೀಲರಿಗೆ ಮನವಿ ಮಾಡಿದ್ದಾರೆ.

“ಪೋಲೀಸ್ ಇಲಾಖೆಗೆ ಧನ್ಯವಾದ,ಆರೋಪಿಗಳ ಪರವಾಗಿ ಯಾವ ವಕೀಲನೂ ವಕಾಲತು ನಡೆಸಬಾರದು”- ಪ್ರವೀಣ್ ತಾಯಿ ಮನವಿ Read More »

ಕೊರೊನಾ ಹೆಚ್ಚಳ ಹಿನ್ನಲೆ| ರಾಜ್ಯದಲ್ಲಿ ಮಾಸ್ಕ್ ಧಾರಣೆ ಕಡ್ಡಾಯ – ಸಚಿವ ಡಾ. ಸುಧಾಕರ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿವೆ. ಈ ಹಿನ್ನಲೆಯಲ್ಲಿಯೇ ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಿದೆ. ಇಂದು ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ರಾಜ್ಯದಲ್ಲಿ ಮಾಸ್ಕ್ ಎಲ್ಲರೂ ಧರಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು. ಕೊರೋನಾ ಹೆಚ್ಚಳ ಕಾರಣದಿಂದಾಗಿ 60 ವರ್ಷ ಮೇಲ್ಪಟ್ಟವರು ತಪ್ಪದೇ ಶೀಘ್ರವೇ 3ನೇ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆಯಬೇಕು. ಇಂದಿನ ಸಭೆಯಲ್ಲಿ

ಕೊರೊನಾ ಹೆಚ್ಚಳ ಹಿನ್ನಲೆ| ರಾಜ್ಯದಲ್ಲಿ ಮಾಸ್ಕ್ ಧಾರಣೆ ಕಡ್ಡಾಯ – ಸಚಿವ ಡಾ. ಸುಧಾಕರ್ Read More »

ಮದೆನಾಡು ಗುಡ್ಡಬಿರುಕು ಹಿನ್ನಲೆ ಮಂಗಳೂರು-ಮಡಿಕೇರಿ ರಾ.ಹೆ‌ ರಾತ್ರಿ ಸಂಚಾರಕ್ಕೆ ನಿರ್ಬಂಧ

ಸಮಗ್ರ ನ್ಯೂಸ್: ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಗ್ರಾಮದ ಗುಡ್ಡ ಪ್ರದೇಶದಲ್ಲಿ ಭಾರೀ ಬಿರುಕುಗಳು ಕಾಣಿಸಿಕೊಂಡಿದ್ದು, ಮಣ್ಣು ಕುಸಿಯುವ ಸಾಧ್ಯತೆ ‌ಕಾರಣ ರಾತ್ರಿ‌ ಸಂಚಾರ‌ ನಿರ್ಬಂಧಿಸಲಾಗಿದೆ ಕಳೆದ ಒಂದು ತಿಂಗಳಿಗೂ ಹೆಚ್ಚಿನ ಅವಧಿಯಿಂದ ನಿರಂತರ ಮಳೆ‌ ಹಾಗೂ‌ ಭಾರೀ ಗಾಳಿಯಿಂದಾಗಿ ಮಡಿಕೇರಿ ಸಮೀಪದ ಮದೆನಾಡು ಗ್ರಾಮದ ಕರ್ತೋಜಿ ಎಂಬಲ್ಲಿ, ರಸ್ತೆ ಪಕ್ಕದ ಗುಡ್ಡದಲ್ಲಿ ಭಾರೀ ಬಿರುಕು ಮೂಡಿದೆ. ಅಲ್ಪಸ್ವಲ್ಪ ಕುಸಿತವೂ ಸಂಭವಿಸಿದೆ. ಇದೀಗ ಯಾವುದೇ ಕ್ಷಣದಲ್ಲೂ ಮಣ್ಣು ಕುಸಿತವಾಗಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇರುವ

ಮದೆನಾಡು ಗುಡ್ಡಬಿರುಕು ಹಿನ್ನಲೆ ಮಂಗಳೂರು-ಮಡಿಕೇರಿ ರಾ.ಹೆ‌ ರಾತ್ರಿ ಸಂಚಾರಕ್ಕೆ ನಿರ್ಬಂಧ Read More »

ಸುಳ್ಯದಲ್ಲೂ ಬಲಿಗಾಗಿ ಕಾಯುತ್ತಿವೆ ಅಪಾಯಕಾರಿ ಕಾಲು ಸಂಕಗಳು!!ಶಾಸಕರೇ ಇನ್ನಾದರೂ ಗಮನಿಸಿ…

ಸಮಗ್ರ ನ್ಯೂಸ್: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ ವಿದ್ಯಾರ್ಥಿನಿ ನೀರುಪಾಲಾದ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ಸಂಭವಿಸಿದೆ. ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ 7ವರ್ಷ ನೀರು ಪಾಲಾಗಿರುವ ವಿದ್ಯಾರ್ಥಿ. ಸ.ಹಿ.ಪ್ರಾ ಶಾಲೆ ಚಪ್ಪರಿಕೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ ಸನ್ನಿಧಿ ಸೋಮವಾರ ಸಂಜೆ ಶಾಲೆಬಿಟ್ಟು ಮನೆಗೆ ಬರುವಾಗ ಬೀಜಮಕ್ಕಿ ಎಂಬಲ್ಲಿ ಕಾಲು ಸಂಕವಿದ್ದು ಈ ಕಾಲು ಸಂಕ ದಾಟುವಾಗ ಮಗು ಆಯತಪ್ಪಿ ಹಳ್ಳಕ್ಕೆ ಬಿದ್ದಿದ್ದಾಳೆ

ಸುಳ್ಯದಲ್ಲೂ ಬಲಿಗಾಗಿ ಕಾಯುತ್ತಿವೆ ಅಪಾಯಕಾರಿ ಕಾಲು ಸಂಕಗಳು!!ಶಾಸಕರೇ ಇನ್ನಾದರೂ ಗಮನಿಸಿ… Read More »

ಭಾರತ ಮಾತೆ ಕೈಯಲ್ಲಿ ಭಗವಾಧ್ವಜ| ಮಂಗಳೂರು ವಿವಿ ಕಾಲೇಜಿನಲ್ಲಿ ‌ಮತ್ತೆ ವಿವಾದ!

ಸಮಗ್ರ ನ್ಯೂಸ್: ಕಾಲೇಜು ಕ್ಯಾಂಪಸ್‌ನಲ್ಲಿ ‘ಭಾರತ್ ಮಾತಾ ಪೂಜನಾ’ ಕಾರ್ಯಕ್ರಮ ನಡೆಸಲು ಮುಂದಾದ ಮಂಗಳೂರು ವಿವಿ ಕಾಲೇಜು ವಿದ್ಯಾರ್ಥಿ ಸಂಘದ ‌ನಡೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಕಾರ್ಯಕ್ರಮದ ವಿರುದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ‌.ಕ ಜಿಲ್ಲಾಧಿಕಾರಿಗೆ ದೂರು ನೀಡಿದ್ದು, ಕಾರ್ಯಕ್ರಮ ರದ್ದು ಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರರಿಗೆ ಮನವಿ ಮಾಡಿದೆ. ಭಾರತ ಮಾತೆ ಕೇಸರಿ ಧ್ವಜ ಹಿಡಿದ ಫೋಟೋ ಬಳಸಿದ್ದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿರುವ ಕ್ಯಾಂಪಸ್ ಫ್ರಂಟ್, ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ

ಭಾರತ ಮಾತೆ ಕೈಯಲ್ಲಿ ಭಗವಾಧ್ವಜ| ಮಂಗಳೂರು ವಿವಿ ಕಾಲೇಜಿನಲ್ಲಿ ‌ಮತ್ತೆ ವಿವಾದ! Read More »

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಭೂ ಕುಸಿತ| ಆತಂಕದಲ್ಲಿ ಸ್ಥಳೀಯರು

ಸಮಗ್ರ ನ್ಯೂಸ್:‌ಕೊಡಗು ಜಿಲ್ಲೆಯಲ್ಲಿ ಭೂಕುಸಿತಗಳು ಮುಂದುವರೆದಿದ್ದು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಪುಷ್ಪಗಿರಿ ಬೆಟ್ಟದ ತಪ್ಪಲಿನಲ್ಲಿರುವ ಹರಪಲ್ಲಿ ಗ್ರಾಮದಲ್ಲಿ ಭಾರಿ ಭೂಕುಸಿತ ಉಂಟಾಗಿದೆ. ಕಿ.ಮೀ ಗಟ್ಟಲೇ ಬೆಟ್ಟ ಕುಸಿದಿದ್ದು ಸ್ಥಳೀಯರಲ್ಲಿ ಭಾರೀ ಆತಂಕ ಮನೆ ಮಾಡಿದೆ. ಹೆಚ್.ಎ.ಸೋಮಯ್ಯ ಅವರ ಮನೆ ಬಳಿ‌ ಭೂಮಿ ಕುಸಿದು ಹೋಗಿದೆ. ಮನೆಯಿಂದ 20 ಅಡಿ ದೂರದಲ್ಲಿ ಕುಸಿತ ಉಂಟಾಗಿದ್ದು, ಇದರಿಂದಾಗಿ ಸೋಮಯ್ಯ ಅವರ ಮನೆಅಪಾಯದಲ್ಲಿ ಇದೆ. ನಿನ್ನೆ ಸುರಿದ ಮಳೆಯಿಂದ ಉಂಟಾದ ಭೂಕುಸಿತಗೊಂಡಿದೆ. ಸ್ಥಳಕ್ಕೆ ಅಧಿಕಾರಿಗಳ ಭೇಟಿ ಪರಿಶೀಲನೆ ಮಾಡಿದ್ದಾರೆ. ಬೆಟ್ಟದ ಮೇಲ್ಭಾಗದಲ್ಲೂ

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಭೂ ಕುಸಿತ| ಆತಂಕದಲ್ಲಿ ಸ್ಥಳೀಯರು Read More »