ಕರಾವಳಿ

ಪುತ್ತೂರು; ವ್ಯಕ್ತಿಯೊಬ್ಬರು ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ಅಸ್ವಸ್ಥ, ಆಸ್ಪತ್ರೆ ದಾಖಲು

ಪುತ್ತೂರು: ಕೆಎಸ್ಸಾರ್ಟಿಸಿ ಬಸ್‌ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬರು ಮೆಟ್ಟಿಲಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ಘಟನೆಯೊಂದು ಮಂಗಳವಾರ ರಾತ್ರಿ ನಡೆದಿದೆ. ಬಿಳಿ ಪಂಚೆ ಧರಿಸಿದ್ದ ವ್ಯಕ್ತಿ ಕೆಎಸ್ಸಾರ್ಟಿಸಿ ವಾಣಿಜ್ಯ ಸಂಕೀರ್ಣದ ಮೆಟ್ಟಿಲಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು, ಅವರ ತಲೆಗೆ ಗಾಯವಾಗಿದೆ. ತಕ್ಷಣವೇ ಸ್ಥಳೀಯ ವ್ಯಾಪಾರಸ್ಥರು ಸೇರಿ 108 ಆ್ಯಂಬುಲೆನ್ಸ್ ನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

ಪುತ್ತೂರು; ವ್ಯಕ್ತಿಯೊಬ್ಬರು ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ಅಸ್ವಸ್ಥ, ಆಸ್ಪತ್ರೆ ದಾಖಲು Read More »

ಸುಳ್ಯ: ಅಪಘಾತ ಪ್ರಕರಣ ಆರೋಪಿ ದೋಷಮುಕ್ತ

ಸುಳ್ಯ: ತಾಲೂಕಿನ ಮಿತ್ತಮಜಲು ಎಂಬಲ್ಲಿ ನಡೆದ ಅಪಘಾತಕ್ಕೆ ಸಂಬಂಧಿಸಿದಂತೆ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯ ಆರೋಪಿಯನ್ನು ದೋಷಮುಕ್ತ ಗೊಳಿಸಿದೆ. ದಿನಾಂಕ 13/05/2020 ರಂದು ನೆಲ್ಲೂರು ಕೆಮ್ರಾಜೆ ಗ್ರಾಮದ ಚೇತನ್ ಕುಮಾರ್ ಎಂಬುವವರು ತನ್ನ ವಾಹನದಲ್ಲಿ ಸುಳ್ಯ ಕಡೆಯಿಂದ ಶಶಿಕಾಂತ್ ಎಂಬುವವನನ್ನು ಕೂರಿಸಿಕೊಂಡು ಬರುತ್ತಿದ್ದರು. ಈ ಸಂದರ್ಭ ಮಿತ್ತಮಜಲ್ ನಲ್ಲಿ ಸುಳ್ಯ ಕಡೆಗೆ ಬರುತ್ತಿದ್ದ ಪಿಕ್ ಅಪ್ ವಾಹನದ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದು ಚೇತನ್ ಕುಮಾರ್ ಎಂಬುವವರ ಬೈಕ್ ಡಿಕ್ಕಿ ಹೊಡೆದಿದೆ.ಈ ಪರಿಣಾಮ

ಸುಳ್ಯ: ಅಪಘಾತ ಪ್ರಕರಣ ಆರೋಪಿ ದೋಷಮುಕ್ತ Read More »

ಸುಳ್ಯ: ಕಿಡಿಗೇಡಿಗಳು ಕಿತ್ತೆಸೆದ‌ ಬಹಿಷ್ಕಾರ ಬ್ಯಾನರ್| ಮತ್ತೆ ಅದೇ ಜಾಗದಲ್ಲಿ ಹೊಸ ಬ್ಯಾನರ್ ಹಾಕಿದ ಗ್ರಾಮಸ್ಥರು

ಸಮಗ್ರ ನ್ಯೂಸ್: ಅರಂತೋಡು ಮರ್ಕಂಜ ಎಲಿಮಲೆ ರಸ್ತೆಯಲ್ಲಿ ವೈ.ಎಂ.ಕೆ.ಚಡಾವು ಬಳಿ ಅಡ್ತಲೆ ನಿವಾಸಿಗಳು ಅಳವಡಿಸಿದ್ದ ಚುನಾವಣಾ ಬಹಿಷ್ಕಾರದ ಬ್ಯಾನರನ್ನು ಕಿಡಿಗೇಡಿಗಳು ನದಿಗೆ ಎಸೆದಿದ್ದು, ಅದೇ ಜಾಗದಲ್ಲಿ ಗ್ರಾಮಸ್ಥರು ಮತ್ತೆ ಬ್ಯಾನರ್ ಅಳವಡಿಸಿದ್ದಾರೆ. ಈ ರಸ್ತೆಯ ಮೂಲಕ ಅಂದು ಮುಖ್ಯಮಂತ್ರಿಗಳು ರಸ್ತೆಯಲ್ಲಿ ಸುಳ್ಯಕ್ಕೆ ಬರುವವರಿದ್ದರು. ಈ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಬ್ಯಾನರ್ ತೆಗಿದಿದ್ದಾರೆಂದು ಖಂಡಿಸಿ ಅಡ್ತಲೆಯ ನಾಗರಿಕರು ಬ್ಯಾನರ್ ಕಿತ್ತೆಸೆದವರಿಗೆ ಶಿಕ್ಷೆ ನೀಡುವಂತೆ ದೈವದ ಮೊರೆ ಹೋಗಿದ್ದರು. ಆ.7 ರಂದು ಪುನಃ ರಸ್ತೆಯ ಫಲಾನುಭವಿಗಳು ವೈ.ಎಂ.ಕೆ. ಬಳಿ ಚುನಾವಣಾ ಬಹಿಷ್ಕಾರದ

ಸುಳ್ಯ: ಕಿಡಿಗೇಡಿಗಳು ಕಿತ್ತೆಸೆದ‌ ಬಹಿಷ್ಕಾರ ಬ್ಯಾನರ್| ಮತ್ತೆ ಅದೇ ಜಾಗದಲ್ಲಿ ಹೊಸ ಬ್ಯಾನರ್ ಹಾಕಿದ ಗ್ರಾಮಸ್ಥರು Read More »

ತುಳು ಭಾಷೆ ಬಗ್ಗೆ ತುಚ್ಛ ಭಾವನೆ: ಉಪ್ಪಿನಂಗಡಿ ಕಾಲೇಜು ಪ್ರಾಚಾರ್ಯರ ವಿರುದ್ಧ ವಿದ್ಯಾರ್ಥಿಗಳು ಗರಂ

ಸಮಗ್ರ ನ್ಯೂಸ್: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಶೇಖರ ಎಂ.ಬಿ. ಅವರು ತುಳು ಭಾಷೆಯ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆಂದು ಆರೋಪಿಸಿ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದ ಘಟನೆ ಆ.8ರಂದು ನಡೆದಿದೆ. ಕಳೆದ ಆ.5 ಮತ್ತು ಆ.8ರಂದು ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ವತಿಯಿಂದ ಕಾಲೇಜಿನಲ್ಲಿ ‘ತುಳುನಾಡ ಐಸಿರಿ’ ಕಾರ್ಯಕ್ರಮ ನಡೆದಿತ್ತು. ಈ ಸಂದರ್ಭ ಕಾಲೇಜಿನ ಪ್ರಾಚಾರ್ಯರಾದ ಶೇಖರ ಎಂ.ಬಿ. ಅವರು ತುಳು ಭಾಷೆಯ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆನ್ನಲಾಗಿದೆ. ಈ ಬಗ್ಗೆ

ತುಳು ಭಾಷೆ ಬಗ್ಗೆ ತುಚ್ಛ ಭಾವನೆ: ಉಪ್ಪಿನಂಗಡಿ ಕಾಲೇಜು ಪ್ರಾಚಾರ್ಯರ ವಿರುದ್ಧ ವಿದ್ಯಾರ್ಥಿಗಳು ಗರಂ Read More »

ಮಂಗಳೂರು: ಫಾಜಿಲ್ ಮನೆಗೆ ಕರ್ನಾಟಕ ರಾಜ್ಯ ವಖ್ಫ್ ಮಂಡಳಿ ಅಧ್ಯಕ್ಷರ ಭೇಟಿ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಮಂಗಳಪೇಟೆಯ ಫಾಜಿಲ್ ಮನೆಗೆ ಕರ್ನಾಟಕ ರಾಜ್ಯ ವಖ್ಫ್ ಮಂಡಳಿ ಭೇಟಿ ಅಧ್ಯಕ್ಷರು ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಕರ್ನಾಟಕ ರಾಜ್ಯ ವಖ್ಫ್ ಮಂಡಳಿ ಅಧ್ಯಕ್ಷರಾದ ಮೌಲಾನ ಎನ್.ಕೆ.ಎಂ ಶಾಫಿ ಸಹದಿ ದ.ಕ. ಜಿಲ್ಲಾ ವಖ್ಫ್ ಮಂಡಳಿ ಚೆಯರ್ಮೆನ್ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಎಸ್.ಎಸ್.ಎಫ್. ಜಿಲ್ಲಾಧ್ಯಕ್ಷರಾದ ನವಾಜ್ ಸಖಾಫಿ, ದ.ಕ. ಜಿಲ್ಲಾ ವಖ್ಫ್ ಸಮಿತಿಯ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಮೊಗರ್ಪಣೆ, ಜಿಲ್ಲಾ ವಖ್ಫ್ ಸದಸ್ಯರುಗಳಾದ ಸೈದುದ್ದೀನ್, ಸಿರಾಜುದ್ದಿನ್, ಸ್ಥಳೀಯ

ಮಂಗಳೂರು: ಫಾಜಿಲ್ ಮನೆಗೆ ಕರ್ನಾಟಕ ರಾಜ್ಯ ವಖ್ಫ್ ಮಂಡಳಿ ಅಧ್ಯಕ್ಷರ ಭೇಟಿ Read More »

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿಗಳ ಜೊತೆಗೆ ಸುಳ್ಯ ಪಿಎಫ್ಐ ಕಚೇರಿ ಮಹಜರು ನಡೆಸಿದ ಪೊಲೀಸರು

ಸಮಗ್ರ‌ ನ್ಯೂಸ್ : ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಪೊಲೀಸರು ಭಾನುವಾರ ಇಬ್ಬರನ್ನು ಬಂಧಿಸಿದ್ದರು. ಇದೀಗ ಬಂಧಿತರನ್ನು ಬಿಗಿ ಬಂದೋಬಸ್ತು ಮೂಲಕ ಪಿಎಫ್ಐ ಕಚೇರಿಗೆ ಕರೆದುಕೊಂಡು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಸುಳ್ಯ ಪೊಲೀಸರು ಮಹಜರು ಪ್ರಕ್ರಿಯೆ ನಡೆಸುತ್ತಿದ್ದು, ಬಳಿಕ ಇಬ್ಬರನ್ನೂ ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಬಂಧಿತರಾಗಿರುವ ಅಬೀದ್ ಮತ್ತು ನೌಫಾಲ್ ಅವರನ್ನು ಸುಳ್ಯದ ಪಾಪ್ಯುಲರ್ ಫ್ರಂಟ್ ಅಫ್ ಇಂಡಿಯಾ ಕಛೇರಿಯಲ್ಲಿ ಮಹಜರು

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿಗಳ ಜೊತೆಗೆ ಸುಳ್ಯ ಪಿಎಫ್ಐ ಕಚೇರಿ ಮಹಜರು ನಡೆಸಿದ ಪೊಲೀಸರು Read More »

ಕರಾವಳಿಗರೇ ಎಚ್ಚರ; ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ಮಳೆ ಮತ್ತು ಮುಂದಿನ 48 ಗಂಟೆಗಳ ಹವಾಮಾನ ವರದಿ ಪ್ರಕಾರ ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕಾಗಿದೆ . ನಿನ್ನೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ . ಅತಿ ಭಾರಿ ಮಳೆಯ ಪ್ರಮಾಣ ಉಡುಪಿ ಜಿಲ್ಲೆ ಕೊಲ್ಲೂರು , ಕೊಡಗು ಜಿಲ್ಲೆಯ ಭಾಗಮಂಡಲ ತಲಾ 16 ಸೆ . ಮಿ ಮಳೆ ದಾಖಲಾಗಿದೆ . ಭಾರಿ ಮಳೆಯ

ಕರಾವಳಿಗರೇ ಎಚ್ಚರ; ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »

ಚಿಕ್ಕಮಗಳೂರು : ಒಳಚರಂಡಿ ಕಾಮಗಾರಿ ವಿಳಂಬ

ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ಮಾಡಿ ಜೈಲಿಗೆ ಹಾಕಿ : ಬೋಜೇಗೌಡ ಚಿಕ್ಕಮಗಳೂರು : ಒಳಚರಂಡಿ ಕಾಮಗಾರಿ ವಿಳಂಬ ಹಿನ್ನೆಲೆ ಅಧಿಕಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಬೋಜೇಗೌಡರಿಂದ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ಅಮೃತ್ ಯೋಜನೆ ಹಾಗೂ ಒಳಚರಂಡಿ ಕಾಮಗಾರಿ ಮಾಡಲಾಗಿದ್ದು ಈ ಕಾಮಗಾರಿ ಕಳೆದ ನವಂಬರ್ ನಲ್ಲಿ ಮುಗಿಯಬೇಕಿತ್ತು, ಆದರೆ ಆಗಸ್ಟ್ ಬಂದರು ಕಾಮಗಾರಿ ಮುಗಿಸದ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಬೋಜೇಗೌಡ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ

ಚಿಕ್ಕಮಗಳೂರು : ಒಳಚರಂಡಿ ಕಾಮಗಾರಿ ವಿಳಂಬ Read More »

ತುಳುವಿಗೆ ಅಕಾಡೆಮಿಯೊಂದನ್ನು ಬಿಟ್ಟರೆ ಸರಕಾರ ಬೇರೆ ಏನೂ ಮಾಡಿಲ್ಲ: ತುಳು ಅಕಾಡೆಮಿ ಅಧ್ಯಕ್ಷರ ಬೇಸರ

ಮಂಗಳೂರು: ಪಂಚ ದ್ರಾವಿಡ ಭಾಷೆಯಲ್ಲಿಯೇ ತುಳುವಿಗೆ ಬಹಳ ಉನ್ನತ ಸ್ಥಾನವಿದೆ. ಕರ್ನಾಟಕದಲ್ಲಿ ತುಳು ಸಾಹಿತ್ಯ ಅಕಾಡೆಮಿಯೊಂದನ್ನು ಬಿಟ್ಟರೆ ಉಳಿದಂತೆ ಸರಕಾರ ಯಾವುದೇ ರೀತಿಯಲ್ಲಿ ನೆರವಾಗಿಲ್ಲ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ ಸಾರ್‌ ಬೇಸರ ವ್ಯಕ್ತಪಡಿಸಿದರು. ಅವರು ಭಾನುವಾರ ನಗರದ ಉರ್ವ ಸ್ಟೋರ್‌ನಲ್ಲಿರುವ ಡಾ.ಬಿಆರ್‌ ಅಂಬೇಡ್ಕರ್‌ ಭವನದಲ್ಲಿ ಜೈ ತುಳುನಾಡು ಮಂಗಳೂರು ಆಶ್ರಯದಲ್ಲಿ ತುಲುವೆರೆ ಆಟಿ ಕಾರ‍್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ದಯಾನಂದ ಜಿ ಕತ್ತಲ್‌ಸಾರ್, ಕರ್ನಾಟಕ ಸರಕಾರ ತುಳು ಅಕಾಡೆಮಿಯೊಂದನ್ನು ಕೊಟ್ಟಿದೆ.

ತುಳುವಿಗೆ ಅಕಾಡೆಮಿಯೊಂದನ್ನು ಬಿಟ್ಟರೆ ಸರಕಾರ ಬೇರೆ ಏನೂ ಮಾಡಿಲ್ಲ: ತುಳು ಅಕಾಡೆಮಿ ಅಧ್ಯಕ್ಷರ ಬೇಸರ Read More »

ಮೀನುಗಾರಿಕೆಗೆ ಈ ವರ್ಷವೂ ಆರಂಭದಲ್ಲೇ ಅಡ್ಡಿ| ಕಡಲಿಗಿಳಿಯದೆ ದಡದಲ್ಲೇ ಉಳಿದ ಬೋಟುಗಳು|ಹೋದ ದೋಣಿಗಳೂ ಬರಿಗೈಯಲ್ಲಿ ವಾಪಸ್‌

ಉಡುಪಿ: ಮಳೆ, ಗಾಳಿಯಿಂದಾಗಿ ಸಮುದ್ರ ಪ್ರಕ್ಷುಬ್ಧವಾಗಿದ್ದು, ಯಾಂತ್ರಿಕ ಮೀನುಗಾರಿಕೆ ಆರಂಭದ ದಿನದಲ್ಲೇ ಅಡಚಣೆ ಉಂಟಾಗಿದೆ. 61 ದಿನಗಳ ರಜೆಯ ಬಳಿಕ ಬಹು ನಿರೀಕ್ಷೆಯೊಂದಿಗೆ ಆ. 1ರಿಂದ ಕಡಲಿಗಿಳಿಯಬೇಕಿದ್ದ ಮೀನುಗಾರರಿಗೆ ನಿರಾಶೆಯಾಗಿದೆ. ದೋಣಿಗಳನ್ನು ಕಡಲಿಗೆ ಇಳಿಸುವುದು ವಿಳಂಬವಾಗುತ್ತಿರುವುದರಿಂದ ಮಂಜುಗಡ್ಡೆ ವ್ಯವಹಾರ, ಮೀನು ಸಾಗಾಟ ವ್ಯವಸ್ಥೆ, ಮಾರಾಟಗಾರರು ಸೇರಿದಂತೆ ಮೀನುಗಾರಿಕೆಗೆ ಅವಲಂಬಿತ ಕ್ಷೇತ್ರಗಳೆಲ್ಲವೂ ಹಿನ್ನೆಡೆ ಕಂಡಿವೆ. ಕಳೆದ ಋತುವಿನಲ್ಲಿ ಮೀನಿನ ಕ್ಷಾಮದ ಜತೆಗೆ ಚಂಡಮಾರುತದಿಂದಾಗಿ ಪದೇಪದೆ ಸಮುದ್ರ ಪ್ರಕ್ಷುಬ್ಧವಾಗಿದ್ದು ಮೀನುಗಾರರು ಸಂಕಷ್ಟ ಎದುರಿಸಿದ್ದರು. ಈ ಋತುವಿನ ಆರಂಭವೂ ಅದೇ ರೀತಿ

ಮೀನುಗಾರಿಕೆಗೆ ಈ ವರ್ಷವೂ ಆರಂಭದಲ್ಲೇ ಅಡ್ಡಿ| ಕಡಲಿಗಿಳಿಯದೆ ದಡದಲ್ಲೇ ಉಳಿದ ಬೋಟುಗಳು|ಹೋದ ದೋಣಿಗಳೂ ಬರಿಗೈಯಲ್ಲಿ ವಾಪಸ್‌ Read More »