ಕರಾವಳಿ

ಕುಂದಾಪುರ: ವಿದ್ಯುತ್ ತಂತಿ ತಗುಲಿ ನಾಲ್ಕು ಹಸುಗಳು ಮೃತ್ಯು

ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ಕುಂದಾಪುರ: ಗದ್ದೆಯಲ್ಲಿ ಮೇಯುತ್ತಿದ್ದ ನಾಲ್ಕು ಹಸುಗಳು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಘಟನೆ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರಿನಲ್ಲಿ ನಡೆದಿದೆ. ಪಶು ವೈದ್ಯಾಧಿಕಾರಿಗಳು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ತಂತಿಗಳು ತೀರಾ ಹಳೆಯದಾಗಿದ್ದು, ಇದರಿಂದ ಹಸುಗಳು ಸಾವನ್ನಪ್ಪಿರಬಹುದು ಎಂದು ಗ್ರಾಮಸ್ಥರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಂದಾಪುರ: ವಿದ್ಯುತ್ ತಂತಿ ತಗುಲಿ ನಾಲ್ಕು ಹಸುಗಳು ಮೃತ್ಯು Read More »

ಕಾಸರಗೋಡು: ಭಾರೀ ಮಳೆಗೆ ನೋಡ ನೋಡುತ್ತಿದ್ದಂತೆಯೇ ಕುಸಿದು ಬಿದ್ದ ಕಟ್ಟಡ

ಸಮಗ್ರ ನ್ಯೂಸ್: ಭಾರೀ ಮಳೆಗೆ ಕಟ್ಟಡವೊಂದು ಕುಸಿದು ಬಿದ್ದ ಘಟನೆ ಭಾನುವಾರ ಬೆಳಿಗ್ಗೆ ವರ್ಕಾಡಿ ಸಮೀಪದ ಸುಂಕದಕಟ್ಟೆಯಲ್ಲಿ ನಡೆದಿದೆ. ಕಟ್ಟಡದಲ್ಲಿ ವಸತಿ ಕೊಠಡಿ, ವಾಣಿಜ್ಯ ಮಳಿಗೆ ಮಾಲ್ ಗಳಿದ್ದವು. ರಸ್ತೆ ಬದಿ ಇಳಿಜಾರು ಸ್ಥಳದಲ್ಲಿ ವರ್ಷಗಳ ಹಿಂದೆ ನಿರ್ಮಿಸಿದ್ದ ಈ ಕಟ್ಟಡ ಮಳೆಯ ತೀವ್ರತೆಗೆ ಜನರು ನೋಡು ನೋಡುತ್ತಿದ್ದಂತೆಯೇ ನೆಲಕಚ್ಚಿದೆ. ಇನ್ನು ಕೆಲ ದಿನಗಳ ಹಿಂದೆ ಈ ಕಟ್ಟಡ ದಲ್ಲಿ ಬಿರುಕು ಕಂಡು ಬಂದಿದ್ದು, ಇದರಿಂದ ಈ ಕಟ್ಟಡದಲ್ಲಿದ್ದವರು ಸ್ಥಳಾಂತರಗೊಂಡಿದ್ದರು. ಮೊದಲೇ ಮುಂಜಾಗ್ರತಾ ಕ್ರಮ ತೆಗೆದುಕೊಂಡ ಪರಿಣಾಮ

ಕಾಸರಗೋಡು: ಭಾರೀ ಮಳೆಗೆ ನೋಡ ನೋಡುತ್ತಿದ್ದಂತೆಯೇ ಕುಸಿದು ಬಿದ್ದ ಕಟ್ಟಡ Read More »

ಅಪರಾದ ಕೃತ್ಯಗಳ ತನಿಖೆ ವೇಳೆ ಕೈಕೊಡುತ್ತಿರುವ ಸಿಸಿ ಕ್ಯಾಮರಾಗಳು| ಗುಣಮಟ್ಟ ನಿರ್ವಹಣೆಯೇ ಸವಾಲು

ಸಮಗ್ರ ನ್ಯೂಸ್ : ಅಪರಾಧ ಕೃತ್ಯ ಗಳನ್ನು ಪತ್ತೆಹಚ್ಚಿ ಪ್ರಕರಣ ಭೇದಿಸಲು ನೆರವಾಗ ಬೇಕಾದ ಸಿಸಿ ಕೆಮರಾಗಳು ತನಿಖೆ ವೇಳೆ ಪೊಲೀಸರಿಗೆ ಕೈ ಕೊಡುತ್ತಿವೆ. ಇದಕ್ಕೆ ಕಾರಣ ಕಡಿಮೆ ಗುಣಮಟ್ಟದ ಕೆಮರಾಗಳು ಮತ್ತು ನಿರ್ವಹಣೆಯಲ್ಲಿ ನಿರ್ಲಕ್ಷ್ಯ. ಸಾರ್ವಜನಿಕ ಸ್ಥಳ, ವಾಣಿಜ್ಯ ಕಟ್ಟಡಗಳಲ್ಲಿ ಅಳವಡಿಸಿರುವ ಕೆಮರಾಗಳ ಪೈಕಿ ಹೆಚ್ಚಿನವುಗಳಲ್ಲಿ ದೃಶ್ಯಗಳು ಸೆರೆಯಾಗುತ್ತಿಲ್ಲ. ಸೆರೆಯಾಗಿದ್ದರೂ ಅಸ್ಪಷ್ಟವಾಗಿರುತ್ತದೆ. ಹಾಗಾಗಿ ಪೊಲೀಸರು “ಕರ್ನಾಟಕ ಸಾರ್ವಜನಿಕ ಸುರಕ್ಷೆಯ (ಕ್ರಮಗಳ) ಜಾರಿ ಅಧಿನಿಯಮ 2017’ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿದ್ದು, ಅಲ್ಲಿ ಸೂಚಿಸಿರುವ ಮಾದರಿಯಲ್ಲೇ ಸಿಸಿ ಕೆಮರಾ

ಅಪರಾದ ಕೃತ್ಯಗಳ ತನಿಖೆ ವೇಳೆ ಕೈಕೊಡುತ್ತಿರುವ ಸಿಸಿ ಕ್ಯಾಮರಾಗಳು| ಗುಣಮಟ್ಟ ನಿರ್ವಹಣೆಯೇ ಸವಾಲು Read More »

ದ.ಕ ಜಿಲ್ಲೆಯಲ್ಲಿ‌ ನಿರ್ಬಂಧಗಳಿಗೆ ಮುಕ್ತಿ; ಆ.14ರವರೆಗೆ 144 ಸೆಕ್ಷನ್ ಮುಂದುವರಿಕೆ – ಜಿಲ್ಲಾಧಿಕಾರಿ ಆದೇಶ

ಸಮಗ್ರ‌ ನ್ಯೂಸ್: ದ.ಕ ಜಿಲ್ಲೆಯಲ್ಲಿ ಅಪರಾಧ ಕೃತ್ಯ ನಡೆದ ಹಿನ್ನೆಲೆಯಲ್ಲಿ ಹೇರಲಾಗಿದ್ದ ಕೆಲವೊಂದು ನಿರ್ಬಂಧಗಳನ್ನು ‌ಸಡಿಲಿಸಿ ದ.ಕ‌. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ‌ ಇದುವರೆಗೆ ರಾತ್ರಿ 9 ಗಂಟೆಗೆ ಅಂಗಡಿ‌ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಆದರೆ ಆ.8ರಿಂದ ರಾತ್ರಿ 9 ಗಂಟೆಯ ನಂತರವು ಅಂಗಡಿಗಳನ್ನು ಓಪನ್ ಇಡಬಹುದು. ಬಾರ್, ವೈನ್ ಶಾಪ್ ಎಂದಿನಂತೆ ಕಾರ್ಯಾಚರಿಸಲು ಅವಕಾಶ ನೀಡಲಾಗಿದೆ. ಜನರ ಓಡಾಟಕ್ಕೂ ಕೂಡ ಯಾವುದೇ ನಿರ್ಬಂಧವಿರುವುದಿಲ್ಲ. ಆಗಸ್ಟ್ 14 ರವರೆಗೆ 144 ಸೆಕ್ಷನ್ ಜಾರಿಯಲ್ಲಿರುತ್ತೆ ಎಂದು ದ.ಕ‌ ಜಿಲ್ಲಾಧಿಕಾರಿ

ದ.ಕ ಜಿಲ್ಲೆಯಲ್ಲಿ‌ ನಿರ್ಬಂಧಗಳಿಗೆ ಮುಕ್ತಿ; ಆ.14ರವರೆಗೆ 144 ಸೆಕ್ಷನ್ ಮುಂದುವರಿಕೆ – ಜಿಲ್ಲಾಧಿಕಾರಿ ಆದೇಶ Read More »

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ; 10 ಜನರು ಬಚಾವ್

ಸಮಗ್ರ ನ್ಯೂಸ್: ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ಹೊರಟಿದ್ದ ಬೋಟ್ ವೊಂದು ಮುಳುಗಿದ್ದು, 10 ಜನರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಮಂಗಳೂರು ಬಂದರಿನಿಂದ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ಹೊರಟಿದ್ದ ಜೈಶ್ರೀರಾಮ್ ಹೆಸರಿನ ಬೋಟ್ ಅಲೆಗಳ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಮಂಗಳೂರು ಬಂದರಿನಿಂದ 30 ನಾಟಿಕಲ್ ದೂರದಲ್ಲಿ ಆಳ ಸಮುದ್ರದಲ್ಲಿ ಬೋಟ್ ಮುಳುಗಿದೆ. ಈ ವೇಳೆ 10 ಜನರು ಈಜಿ ಮತ್ತೊಂದು ಬೋಟ್ ಗೆ ಹೋಗಿದ್ದಾರೆ.

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ; 10 ಜನರು ಬಚಾವ್ Read More »

ಬಂಟ್ವಾಳ; ಚರಂಡಿ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ : ಚರಂಡಿಯ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವಿಟ್ಲ ಪೇಟೆಯಲ್ಲಿ ರವಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಚಂದಳಿಕೆ ನಿವಾಸಿ ಪಕ್ರು ಎಂದು ಗುರುತಿಸಲಾಗಿದೆ. ಅವರ ಮೃತದೇಹ ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ಬಳಿ ವಿಟ್ಲ- ಕಾಸರಗೋಡು ಮುಖ್ಯ ರಸ್ತೆಯಲ್ಲಿನ ತೆರೆದ ಸ್ಥಿತಿಯಲ್ಲಿದ್ದ ಚರಂಡಿಗೆ ಕವುಚಿ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮದ್ಯಪಾನದ ಅಮಲಿನಲ್ಲಿ ನಿಯಂತ್ರಣ ಕಳೆದುಕೊಂಡ ಪಕ್ರು ಸ್ಲ್ಯಾಬ್ ತೆರೆದ ಸ್ಥಿತಿಯಲ್ಲಿದ್ದ ಚರಂಡಿಗೆ ಆಕಸ್ಮಿಕವಾಗಿ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಚರಂಡಿಯಲ್ಲಿ ಮಳೆ ನೀರು ತುಂಬಿದ್ದು, ಕವುಚಿ

ಬಂಟ್ವಾಳ; ಚರಂಡಿ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಮಂಗಳೂರು: ಹೊಂಡ ತಪ್ಪಿಸಲು ಹೋಗಿ ಡಿವೈಡರ್‌‌ಗೆ ಸ್ಕೂಟರ್ ಢಿಕ್ಕಿ-ಯುವಕ ಸಾವು

ಮಂಗಳೂರು: ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಡಿವೈಡರ್‌‌ಗೆ ಸ್ಕೂಟರ್ ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ನಡೆದಿದೆ. ಕೊಂಚಾಡಿ ನಿವಾಸಿ ಆತೀಶ್ (20) ಮೃತಪಟ್ಟವರು. ಆತೀಶ್ ನಂತೂರು ಜಂಕ್ಷನ್ ಕಡೆಯಿಂದ ಬಿಕರ್ನಕಟ್ಟೆ ಕೈಕಂಬ ಕಡೆಗೆ ಹಾದು ಹೋಗಿರುವ ರಸ್ತೆಯಲ್ಲಿ ಸಂಜೆ 6.45ರ ಸುಮಾರಿಗೆ ಸಂಚರಿಸುತ್ತಿದ್ದರು. ಮಳೆ ಜೋರಾಗಿ ಸುರಿಯುತ್ತಿದ್ದುದರಿಂದ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್‌ಗಿಂತ ಮೊದಲು ಡಿವೈಡರ್‍ ಪಕ್ಕದಲ್ಲಿದ್ದ ಹೊಂಡವನ್ನು ಅವರು ಗಮನಿಸಲಿಲ್ಲ. ಹೊಂಡದ ಸನಿಹಕ್ಕೆ ಬರುವಾಗ ಹೊಂಡ

ಮಂಗಳೂರು: ಹೊಂಡ ತಪ್ಪಿಸಲು ಹೋಗಿ ಡಿವೈಡರ್‌‌ಗೆ ಸ್ಕೂಟರ್ ಢಿಕ್ಕಿ-ಯುವಕ ಸಾವು Read More »

ಮಂಗಳೂರು: ಖಾಸಗಿ ಬಸ್ ನಲ್ಲಿ ಜೀವ ಕೈಯಲ್ಲಿ ಹಿಡಿದು ಸಾಗುವ ವಿದ್ಯಾರ್ಥಿನಿಯರು| ‘ಹಿಡಿತ ತಪ್ಪಿದರೆ ಜೀವಕ್ಕೆ ಕಂಟಕ’ – ಅಪಾಯಕಾರಿ ಪ್ರಯಾಣದ ವಿಡಿಯೋ ವೈರಲ್

ಸಮಗ್ರ ನ್ಯೂಸ್: ತುಂಬಿ ತುಳುಕುವ ಖಾಸಗಿ ಬಸ್ ನ ಪುಟ್ ಬೋರ್ಡಿನಲ್ಲಿ ವಿದ್ಯಾರ್ಥಿನಿಯರು ನೇತಾಡಿಕೊಂಡು ಅಪಾಯಕಾರಿ ಪ್ರಯಾಣಿಸುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ಎಲ್ಲರಿಗೂ ಉದ್ಯೋಗ, ಶಾಲಾ ಕಾಲೇಜಿಗೆ ಹೋಗುವ ಧಾವಂತ, ಆದರೆ ಇರೋ ಬೆರಳೆಣಿಕೆ ಬಸ್ಸಿನಲ್ಲಿ ಜೀವ ಪಣಕ್ಕಿಟ್ಟು ಪ್ರಯಾಣಿಸುವ ಅನಿವಾರ್ಯತೆ. ಪ್ರಯಾಣಿಕರು ತುಂಬಿ ತುಳುಕುತ್ತಿದ್ದರೂ, ಎಚ್ಚರಿಕೆ ವಹಿಸಬೇಕಾಗಿದ್ದ ಬಸ್ ನಿರ್ವಾಹಕನೇ ವಿದ್ಯಾರ್ಥಿನಿಯರನ್ನು ತುಂಬಿ ಪುಟ್ ಬೋರ್ಡಿನಲ್ಲಿ ನೇತಾಡಿಸಿಕೊಂಡು ಹೋಗುತ್ತಿರುವ ದೃಶ್ಯ ವಿಡಿಯೋ ತುಣುಕಿನಲ್ಲಿದೆ. ಬಸ್ಸಿನ ಕೊರತೆಯಿಂದ ವಿದ್ಯಾರ್ಥಿಗಳ ಪರದಾಟ ಒಂದೆಡೆಯಾದರೆ , ಜೀವದ ಜೊತೆ

ಮಂಗಳೂರು: ಖಾಸಗಿ ಬಸ್ ನಲ್ಲಿ ಜೀವ ಕೈಯಲ್ಲಿ ಹಿಡಿದು ಸಾಗುವ ವಿದ್ಯಾರ್ಥಿನಿಯರು| ‘ಹಿಡಿತ ತಪ್ಪಿದರೆ ಜೀವಕ್ಕೆ ಕಂಟಕ’ – ಅಪಾಯಕಾರಿ ಪ್ರಯಾಣದ ವಿಡಿಯೋ ವೈರಲ್ Read More »

ದ.ಕ ಜಿಲ್ಲೆಯಲ್ಲಿ ಆ.8ರವರೆಗೆ ನಿರ್ಬಂಧಗಳು ಜಾರಿ

ಸಮಗ್ರ ನ್ಯೂಸ್: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ಆಗಸ್ಟ್ 05 ರಿಂದ 8ರವರೆಗೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ವಿವರ ಇಂತಿದೆ:ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಇತರ ತುರ್ತು ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಅಂಗಡಿಗಳು,

ದ.ಕ ಜಿಲ್ಲೆಯಲ್ಲಿ ಆ.8ರವರೆಗೆ ನಿರ್ಬಂಧಗಳು ಜಾರಿ Read More »

ಪುತ್ತೂರು; ಮಹಡಿಯಿಂದ ಬಿದ್ದು 9ನೇ ತರಗತಿ ವಿದ್ಯಾರ್ಥಿ ಮೃತ್ಯು

ಪುತ್ತೂರು: ನಗರದ ಬೊಳುವಾರು ವಸತಿ ಸಮುಚ್ಚಾಯವೊಂದರ ಬಿ ಬ್ಲಾಕ್ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡು ವಿದ್ಯಾರ್ಥಿ  ಮೃತಪಟ್ಟ ಘಟನೆಯೊಂದು ನಡೆದಿದೆ. ಬೊಳುವಾರು ದುರ್ಗಾಪರಮೇಶ್ವರಿ ಮಲರಾಯ ಸಪರಿವಾರ ಕ್ಷೇತ್ರದ ವಿಶ್ವಸ್ಥ ಮಂಡಳಿ ಅಧ್ಯಕ್ಷ, ಸ್ಥಳೀಯ ನಿವಾಸಿ ಮನೋಹರ ರೈ ಅವರ ಪುತ್ರ, ಸುದಾನ ವಸತಿಯುತ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಶಾನ್ ರೈ (15) ಮೃತ ಬಾಲಕ. ಸುಶಾನ್ ರೈ ಶಾಲೆಯಿಂದ ಮನೆಗೆ ಹೋಗದೆ ಬೊಳುವಾರು ವಸತಿ ಸಮುಚ್ಚಾಯಕ್ಕೆ ತೆರಳಿದ್ದ. ಸಮುಚ್ಚಾಯದ ಕೆಳಗೆ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಆತ

ಪುತ್ತೂರು; ಮಹಡಿಯಿಂದ ಬಿದ್ದು 9ನೇ ತರಗತಿ ವಿದ್ಯಾರ್ಥಿ ಮೃತ್ಯು Read More »