ಕರಾವಳಿ

ನೆರೆ ನೀರಿನಲ್ಲಿ ಕೊಚ್ಚಿ ಹೋಗಿ ಮರಳಿ ಮನೆ ಸೇರಿದ ಮುದ್ದಾದ ನಾಯಿ ಮರಿಗಳು

ಕೊಲ್ಲಮೊಗ್ರ : ಕರಾವಳಿಯಲ್ಲಿ ಸುರಿದ ಭಾರೀ ಮಳೆಗೆ ನೂರಾರು ಮನೆಗಳು ಜಲಾವೃತವಾಗಿದ್ದು, ಕೃಷಿ ಭೂಮಿಗಳು ಭೂಕುಸಿತಕ್ಕೆ ಸಂಪೂರ್ಣ ಹಾನಿಯಾಗಿವೆ. ಮಳೆ ಪ್ರವಾಹಕ್ಕೆ ಜನ ಜಾನುವಾರುಗಳು ಕೊಚ್ಚಿ ಹೋಗಿದೆ. ಅಗಸ್ಟ್ 1 ರಂದು ಕೊಲ್ಲಮೊಗ್ರದ ಇಡೀ ಗ್ರಾಮ ಜಲಾವೃತಗೊಂಡಿದ್ದು, ಈ ವೇಳೆ ನೆರೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಎರಡು ಮುದ್ದಾದ ನಾಯಿ ಮರಿಗಳು ಮತ್ತೆ ಮನೆ ಸೇರಿವೆ. ದೋಲನಮನೆ ಲಲಿತಾ ಎಂಬವರ ಮನೆ ಪ್ರವಾಹದಿಂದಾಗಿ ಕೊಚ್ಚಿ ಹೋಗಿತ್ತು, ಈ ಸಂದರ್ಭ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ನೀರುಪಾಲಾಗಿದ್ದವು, ಅಲ್ಲದೆ ಮನೆ […]

ನೆರೆ ನೀರಿನಲ್ಲಿ ಕೊಚ್ಚಿ ಹೋಗಿ ಮರಳಿ ಮನೆ ಸೇರಿದ ಮುದ್ದಾದ ನಾಯಿ ಮರಿಗಳು Read More »

ಮಂಗಳೂರು:ಎಡಿಜಿಪಿ ಆದೇಶ ವಾಪಾಸ್ ಪಡೆದ ಕಮಿಷನರ್

ಸಮಗ್ರ ನ್ಯೂಸ್: ಬೈಕ್​ನಲ್ಲಿ ಹಿಂಬದಿ ಸವಾರರಿಗೆ ನಿರ್ಭಂಧ ಹೇರಿ ಹೊರಡಿಸಿದ್ದ ಆದೇಶವನ್ನು ಮಂಗಳೂರು ಪೊಲೀಸರು ಹಿಂಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಸಂಜೆ ಆರರ ಮೇಲೆ ದ್ವಿಚಕ್ರ ವಾಹನದಲ್ಲಿ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರು ಹೊರತು ಪಡಿಸಿ ಪುರುಷ ಹಿಂಬದಿ ಸವಾರರಿಗೆ ಅವಕಾಶ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದರು. ಈ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್​ ಆದೇಶವನ್ನು ಹಿಂಪಡೆದಿದ್ದಾರೆ.

ಮಂಗಳೂರು:ಎಡಿಜಿಪಿ ಆದೇಶ ವಾಪಾಸ್ ಪಡೆದ ಕಮಿಷನರ್ Read More »

ಮಂಗಳೂರು: ದ.ಕ ಜಿಲ್ಲೆಯಲ್ಲಿ ವ್ಯಾಪಾರ ‌ನಿರ್ಬಂಧ‌ಕೊಂಚ ಸಡಿಲಿಕೆ| ಆ.5ರಿಂದ ರಾತ್ರಿ 9 ಗಂಟೆವರೆಗೆ ವಹಿವಾಟು ನಡೆಸಲು ಅನುಮತಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಹೇರಲಾಗಿದ್ದ ನಿರ್ಬಂಧ ಕ್ರಮಗಳನ್ನು ಆ. 5 ರಿಂದ ಮುಂದಿನ ಮೂರು ದಿನಗಳ ಕಾಲ ಕೊಂಚ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶಿಸಿದ್ದಾರೆ. ನಾಳೆಯಿಂದ ಅಂಗಡಿ ಮುಂಗಟ್ಟುಗಳನ್ನು ರಾತ್ರಿ 9 ರವರೆಗೆ ತೆರೆಯಲು ಅವಕಾಶ ನೀಡಲಾಗಿದ್ದು, ಮದ್ಯದಂಗಡಿಗಳನ್ನು ನಾಳೆಯಿಂದ ಸಂಜೆ 6 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. 144 ಸೆಕ್ಷನ್ ಅಡಿಯಲ್ಲಿ ವಿಧಿಸಲಾದ ನಿಷೇಧಾಜ್ಞೆ ಹಾಗೂ ಇತರ ನಿರ್ಬಂಧಗಳು ಮೊದಲಿನಂತೆಯೇ ಮುಂದುವರಿಯಲಿದೆ.

ಮಂಗಳೂರು: ದ.ಕ ಜಿಲ್ಲೆಯಲ್ಲಿ ವ್ಯಾಪಾರ ‌ನಿರ್ಬಂಧ‌ಕೊಂಚ ಸಡಿಲಿಕೆ| ಆ.5ರಿಂದ ರಾತ್ರಿ 9 ಗಂಟೆವರೆಗೆ ವಹಿವಾಟು ನಡೆಸಲು ಅನುಮತಿ Read More »

ಮಂಗಳೂರು: ನಾಳೆಯಿಂದ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಿಗಿಲ್ಲ ಅವಕಾಶ- ಎಡಿಜಿಪಿ

ಸಮಗ್ರ ನ್ಯೂಸ್: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ. ಹದಿನೆಂಟು ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಈ ನಿಯಮದಿಂದ ರಿಯಾಯಿತಿ ನೀಡಲಾಗಿದೆ. ಕೇವಲ ಪುರುಷ ಹಿಂಬದಿ ಸವಾರರಿಗೆ ಮಾತ್ರ ಈ ನಿಯಮ ಅನ್ವಯಿಸಲಿದೆ. ಮುಂದಿನ ಒಂದು ವಾರದ ಮಟ್ಟಿಗೆ ಜಿಲ್ಲೆಯಲ್ಲಿ ಈ ನಿಯಮವನ್ನು ಪಾಲನೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಕೆಲವು ಬಾರಿ ಹಿಂಬದಿ

ಮಂಗಳೂರು: ನಾಳೆಯಿಂದ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಿಗಿಲ್ಲ ಅವಕಾಶ- ಎಡಿಜಿಪಿ Read More »

ಸುಳ್ಯ: ಭಾರೀ ಮಳೆಗೆ ಕೊಚ್ಚಿ ಹೋದ ಬೆದ್ರು ಪಣೆಯ ಸೇತುವೆ

ಸುಳ್ಯ : ಆ.3ರ ಸಂಜೆ ಸುರಿದ ಬಾರೀ ಮಳೆಗೆ ಅರಂತೋಡು ಗ್ರಾಮದ ಬೆದ್ರು ಪಣೆಯಲ್ಲಿನ ಸೇತುವೆಯ ಒಂದು ಬದಿಯ ತಡೆಗೋಡೆ ಮತ್ತು ಮಣ್ಣು ನೀರಿನಲ್ಲಿ ಕೊಚ್ಚಿ ಹೋಗಿ ಸಂಪರ್ಕ ಕಡಿತಗೊಂಡ ಘಟನೆ ನಡೆದಿದೆ. ಇದರಿಂದಾಗಿ ಹೊಳೆಯ ಇನ್ನೊಂದು ಬದಿಯ ಹಲವಾರು ಮನೆಗಳ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಹೊಳೆ ದಾಟಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದರು. ಸಮಸ್ಯೆ ಬೆಳಕಿಗೆ ಬಂದ ಕೂಡಲೇ ಅಡ್ತಲೆಯ ನಾಗರಿಕ ಹಿತರಕ್ಷಣಾ ವೇದಿಕೆಯ ಸದಸ್ಯರು ಕೂಡಲೇ ಸ್ಥಳಕ್ಕೆ ತೆರಳಿ ಸ್ಥಳೀಯರ ನೆರವಿನೊಂದಿಗೆ ಅಡಿಕೆ ಮರದ ಪಾಲ

ಸುಳ್ಯ: ಭಾರೀ ಮಳೆಗೆ ಕೊಚ್ಚಿ ಹೋದ ಬೆದ್ರು ಪಣೆಯ ಸೇತುವೆ Read More »

ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್| ಆ.4 ಮತ್ತು 5ಕ್ಕೆ ಭಾರೀ ಮಳೆ ಸಂಭವ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆ ಬಿರುಸು ಪಡೆದಿದ್ದು, ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಇಂದು ಮತ್ತು ನಾಳೆ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಶಿವಮೊಗ್ಗ, ಹಾಸನ, ತುಮಕೂರು, ಹಾವೇರಿ, ಬೆಳಗಾವಿ,

ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್| ಆ.4 ಮತ್ತು 5ಕ್ಕೆ ಭಾರೀ ಮಳೆ ಸಂಭವ Read More »

ಭಾರೀ ಮಳೆ ಹಿನ್ನಲೆ; ಸುಳ್ಯ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ಆ.4 ರಂದು ರಜೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ‌ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆ.4ರಂದು ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ‌ ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನಲೆ; ಸುಳ್ಯ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ಆ.4 ರಂದು ರಜೆ Read More »

ಕುಕ್ಕೆ ಸುಬ್ರಹ್ಮಣ್ಯ: ಮಳೆಹಾನಿ ಪ್ರದೇಶಕ್ಕೆ ಉಸ್ತುವಾರಿ ಸಚಿವ ಸುನಿಲ್‌ಕುಮಾರ್ ಭೇಟಿ| ಪರಿಹಾರದ ಭರವಸೆ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗುಡ್ಡ ಜರಿದು ಮಣ್ಣಿನಡಿ ಸಿಲುಕಿ ಮೃತಪಟ್ಟ ಮಕ್ಕಳ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ರವರು ಭೇಟಿ ನೀಡಿದರು. ಈ ವೇಳೆ ಕುಟುಂಬಸ್ಥರೊಂದಿಗೆ ಮಾತನಾಡಿದ ಅವರು ಮನೆಗಾಗಿ ಈಗಾಗಲೇ 95 ಸಾವಿರ ನೀಡಿದ್ದೇವೆ. ಇನ್ನು ಮನೆ ಕಟ್ಟುವುದಿದ್ದಲ್ಲಿ ಮತ್ತೆ 4 ಲಕ್ಷ ಕೊಡಲಾಗುವುದು, ಅಂಗಡಿಗಳಿಗೆ ನೀರು ನುಗ್ಗಿ ಹಾನಿ ಯಾಗಿದ್ದರೆ ಹಣ ಕೊಡುವ ಪ್ರಾವಿಶನ್ ಇಲ್ಲ, ಆದರೂ ಮುಖ್ಯ ಮಂತ್ರಿಗಳ ಗಮನಕ್ಕೆ ತಂದು ವಿಶೇಷ ಪ್ಯಾಕೇಜ್ ಘೋಷಣೆ ನೀಡಿ ಅಂಗಡಿಗಳಿಗೂ ಪರಿಹಾರ

ಕುಕ್ಕೆ ಸುಬ್ರಹ್ಮಣ್ಯ: ಮಳೆಹಾನಿ ಪ್ರದೇಶಕ್ಕೆ ಉಸ್ತುವಾರಿ ಸಚಿವ ಸುನಿಲ್‌ಕುಮಾರ್ ಭೇಟಿ| ಪರಿಹಾರದ ಭರವಸೆ Read More »

ಆ.6 ರವರೆಗೆ ಕರಾವಳಿಗೆ ರೆಡ್ ಅಲರ್ಟ್

ಸಮಗ್ರ ನ್ಯೂಸ್: ಸೋಮವಾರ ಮಧ್ಯಾಹ್ನದ ಬಳಿಕ ಕರಾವಳಿಯಲ್ಲಿ ಸುರಿದ ಮಳೆಯೂ ಸುಳ್ಯ, ಕಡಬ ತಾಲೂಕಿನಲ್ಲಿ ಚಿತ್ರಣವನ್ನೇ ಬದಲಿಸಿದ್ದು , ಭೂಕುಸಿತ, ನೆರೆ ಜನ ಜೀವನವನ್ನೇ ಬುಡಮೇಲಾಗಿಸಿದೆ. ಇನ್ನೊಂದೆಡೆ ಆ. 6 ರವರೆಗೆ ಮುಂದಿನ ಮೂರು ದಿನ ಕರಾವಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಮಳೆ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಕರಾವಳಿಗರು ಮತ್ತಷ್ಟು ಎಚ್ಚರವಾಗಿರುವಂತೆ ಇಲಾಖೆ ಮುನ್ಸೂಚನೆ ನೀಡಿದೆ.

ಆ.6 ರವರೆಗೆ ಕರಾವಳಿಗೆ ರೆಡ್ ಅಲರ್ಟ್ Read More »

ಕುಕ್ಕೆ ಸುಬ್ರಹ್ಮಣ್ಯ: ಒಳ ಚರಂಡಿಯಿಂದ ಹೊರಬರುತ್ತಿರುವ ತ್ಯಾಜ್ಯ; ಭಕ್ತಾಧಿಗಳಿಂದ ಹಿಡಿಶಾಪ

ಸಮಗ್ರ ನ್ಯೂಸ್: ಕುಕ್ಕೇ ಶ್ರೀ ಸುಬ್ರಮಣ್ಯ ದೇವಸ್ಥಾನದ ಒಳ ಚರಂಡಿ ಅವ್ಯವಸ್ಥೆಯನ್ನು ಕೇಳುವವರಿಲ್ಲ. ಭಕ್ತಾಧಿಗಳಿಂದ ಹಿಡಿಶಾಪ ಹಾಕುತ್ತಿದ್ದಾರೆ. ತಮ್ಮ ಮನಸೋ ಇಚ್ಛೆಯಂತೆ ಒಳಚರಂಡಿ ಕಾಮಗಾರಿ ಮಾಡಿದ್ದು 5 ವರ್ಷಗಳೇ ಕಳೆದರೂ ಅಂದಿನಿಂದ ಇಂದಿನವರೆಗೂ ದುರ್ವಾಸನೆಯಿಂದ ಕೂಡಿದ್ದ ತ್ಯಾಜ್ಯ ಹೊರಬರುತ್ತಿದೆ. ಅದರಲ್ಲೂ ಕುಕ್ಕೇ ಸುಬ್ರಮಣ್ಯ ದೇವಳದಿಂದ ಆದಿಸುಬ್ರಮಣ್ಯ ದೇವಸ್ಥಾನಕ್ಕೆ ಭಕ್ತಾದಿಗಳು ಕಾಲ್ನಡಿಗೆಯಲ್ಲೇ ತೆರಳಬೇಕಾದ ಅನಿವಾರ್ಯತೆ ಇದೆ. ವಾರದ 2-3 ದಿನ ಒಳಚರಂಡಿಯಿಂದ ತ್ಯಾಜ್ಯ ಹೊರಬರುತ್ತಿದ್ದು, ಭಕ್ತಾದಿಗಳು ದೇವಸ್ಥಾನದ ವಿರುದ್ದ ಹಾಗೂ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸುತಿದ್ದಾರೆ. ಇದರ ಬಗ್ಗೆ

ಕುಕ್ಕೆ ಸುಬ್ರಹ್ಮಣ್ಯ: ಒಳ ಚರಂಡಿಯಿಂದ ಹೊರಬರುತ್ತಿರುವ ತ್ಯಾಜ್ಯ; ಭಕ್ತಾಧಿಗಳಿಂದ ಹಿಡಿಶಾಪ Read More »