ಕರಾವಳಿ

ಕಡಬ; ದ್ವಜಾರೋಹಣದ ವೇಳೆ ಕುಸಿದು ಬಿದ್ದು, ನಿವೃತ್ತ ಸೈನಿಕ ಮೃತ್ಯು

ಕಡಬ: ಧ್ವಜಾರೋಹಣದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ನಿವೃತ್ತ ಸೈನಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆಯೊಂದು ಕಡಬದಲ್ಲಿ ನಡೆದಿದೆ. ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ಧ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣಕ್ಕೆ ಸಿದ್ದವಾಗುತ್ತಿದ್ದ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಡಬ; ದ್ವಜಾರೋಹಣದ ವೇಳೆ ಕುಸಿದು ಬಿದ್ದು, ನಿವೃತ್ತ ಸೈನಿಕ ಮೃತ್ಯು Read More »

ಕುಟುಂಬಸ್ಥರ ಒತ್ತಡಕ್ಕೆ ಗೆಲುವು| ಪ್ರವೀಣ್ ಕುಮಾರ್ ಬಿಡುಗಡೆ ಸಾಧ್ಯತೆ ಕಡಿಮೆ

ಸಮಗ್ರ ನ್ಯೂಸ್: ಚಿನ್ನಕ್ಕಾಗಿ ನಾಲ್ವರು ಸಂಬಂಧಿಕರನ್ನೇ ಹತ್ಯೆ ಮಾಡಿ ಜೈಲಿನಲ್ಲಿರುವ ಪ್ರವೀಣ್‌ ಕುಮಾರ್‌ ಬಿಡುಗಡೆಯಾಗುವ ಸಾಧ್ಯತೆ ಕಡಿಮೆ ಎಂದು ತಿಳಿದು ಬಂದಿದೆ. ಜೈಲಿನಲ್ಲಿ ಸನ್ನಡತೆಯ ಆಧಾರದಲ್ಲಿ ಸ್ವಾತಂತ್ರ್ಯೋತ್ಸವ ಸಂದರ್ಭ ಬಿಡುಗಡೆಯಾಗುವ ಕೈದಿಗಳಲ್ಲಿ ಪ್ರವೀಣ್‌ ಕುಮಾರ್‌ ಕೂಡ ಇದ್ದು ಬಿಡುಗಡೆಗೆ ಮುನ್ನ ಆತನ ಬಗ್ಗೆ ವರದಿ ನೀಡುವಂತೆ ಕಾರಾಗೃಹ ಇಲಾಖೆ ದ.ಕ.ಜಿಲ್ಲಾ ಪೊಲೀಸರಿಂದ ವರದಿ ಕೇಳಿತ್ತು. ಅದರಂತೆ ಕುಟುಂಬಸ್ಥರ ಹೇಳಿಕೆ ಪಡೆದುಕೊಳ್ಳಲಾಗಿತ್ತು. ಪ್ರವೀಣ್‌ನನ್ನು ಬಿಡುಗಡೆ ಮಾಡಬಾರದು, ಬಿಡುಗಡೆ ಮಾಡಿದರೆ ಕುಟುಂಬಕ್ಕೆ ಜೀವ ಭಯವಿದೆ. ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ

ಕುಟುಂಬಸ್ಥರ ಒತ್ತಡಕ್ಕೆ ಗೆಲುವು| ಪ್ರವೀಣ್ ಕುಮಾರ್ ಬಿಡುಗಡೆ ಸಾಧ್ಯತೆ ಕಡಿಮೆ Read More »

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸ್ ಆಪ್ ಚಾಟ್ ! ವಿಮಾನ ಸ್ಥಗಿತ

ಸಮಗ್ರ ನ್ಯೂಸ್: ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಬ್ಬರು ಯುವಕ-ಯುವತಿಯರು ಮಾಡುತ್ತಿದ್ದ ವಾಟ್ಸಾಪ್ ಚಾಟಿಂಗ್ ಆತಂಕ ಹುಟ್ಟಿಸಿತ್ತು. ರನ್ ವೇನಲ್ಲಿ ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಳಿಸಿ ತಪಾಸಣೆ ನಡೆಸಿದ ಘಟನೆ ಇಂದು ನಡೆದಿದೆ. ಇದೇ ಕಾರಣದಿಂದಾಗಿ ಇನ್ನೇನು ಮುಂಬೈಗೆ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ ವಿಮಾನವನ್ನು ಸ್ಥಗಿತಗೊಳಿಸಿದ ಘಟನೆ ನಡೆದಿದೆ. ಇಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿದ್ದಂತ ಇಬ್ಬರು ಯುವಕ-ಯುವತಿಯರು ಪರಸ್ಪರ ಚಾಟಿಂಗ್ ಮಾಡಿಕೊಂಡಿದ್ದರು. ಯುವತಿ ಬೆಂಗಳೂರಿಗೆ, ಯುವಕ ಮುಂಬೈಗೆ ತೆರಳೋದಕ್ಕೆ ಆಗಮಿಸಿದ್ದರು. ಯುವತಿ ನಿಲ್ದಾಣದಲ್ಲಿಯೇ ಯುವಕನೊಂದಿಗೆ

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸ್ ಆಪ್ ಚಾಟ್ ! ವಿಮಾನ ಸ್ಥಗಿತ Read More »

ಸುಳ್ಯದ ಆಡಳಿತಕ್ಕೆ ಭ್ರಮೆಯೋ? ಸುಳ್ಯಕ್ಕೆ ‌ಭ್ರಮೆಯೋ? ಕೀಬೋರ್ಡ್ ವಾರಿಯರ್ ಜೊತೆ ನ.ಪಂ ಅಧ್ಯಕ್ಷರ ಟಾಕ್ ವಾರ್!

ಸಮಗ್ರ ನ್ಯೂಸ್: ಜಾಲತಾಣಗಳಲ್ಲಿ ಸಮಸ್ಯೆ ಮುಂದಿಟ್ಟ ಆರ್.ಜೆ ತ್ರಿಶೂಲ್ ಗೆ ಕೀಬೋರ್ಡ್ ವಾರಿಯರ್ ಎಂದು ಕಮೆಂಟ್ ಹಾಕಿದ ಸುಳ್ಯ ನ.ಪಂ‌ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಮತ್ತೆ ಟ್ರೋಲಿಗೆ ಒಳಗಾಗಿದ್ದಾರೆ. ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಮತ್ತು ತ್ರಿಶೂಲ್ ನಡುವೆ ಮತ್ತೊಂದು ಟಾಕ್ ವಾರ್ ನಡೆದಿದ್ದು ಈ ಆಡಿಯೋ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಚರ್ಚೆ ಹುಟ್ಟು ಹಾಕಿದೆ. ಸುಳ್ಯ ನಗರದ ಹೃದಯ ಭಾಗದಲ್ಲಿ ಇರುವಂತಹ ಗುಂಡಿ ರಸ್ತೆಗಳ ಕುರಿತಂತೆ ಈ ಫೋನ್ ಸಂಭಾಷಣೆ ನಡೆದಿದ್ದು, ಮಾತಿನ ನಡುವೆ ವಿನಯಕುಮಾರ್

ಸುಳ್ಯದ ಆಡಳಿತಕ್ಕೆ ಭ್ರಮೆಯೋ? ಸುಳ್ಯಕ್ಕೆ ‌ಭ್ರಮೆಯೋ? ಕೀಬೋರ್ಡ್ ವಾರಿಯರ್ ಜೊತೆ ನ.ಪಂ ಅಧ್ಯಕ್ಷರ ಟಾಕ್ ವಾರ್! Read More »

ಸುಳ್ಯ: ಮತ್ತೆ ಕಂಪಿಸಿದ ಭೂಮಿ

ಸಮಗ್ರ ನ್ಯೂಸ್: ಕಳೆದ ಕೆಲ ದಿನಗಳಿಂದ ತಣ್ಣಗಾಗಿದ್ದ ಸುಳ್ಯದ ‌ಕೆಲಭಾಗಗಳಲ್ಲಿ ಇಂದು(ಆ.14) ಸಂಜೆ ಮತ್ತೆ ಭೂಮಿ ಕಂಪಿಸಿದೆ. ತಾಲೂಕಿನ ಕಲ್ಮಕಾರು, ಕೊಲ್ಲಮೊಗ್ರು ಗ್ರಾಮಗಳಲ್ಲಿ ಸಂಜೆ 6ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಗುತ್ತಿಗಾರು, ದೇವಚಳ್ಳ, ಮಡಪ್ಪಾಡಿ, ಮರ್ಕಂಜ ಭಾಗಗಳಲ್ಲಿ ಗುಡುಗಿನಂತಹ ಶಬ್ದ ಕೇಳಿಬಂದಿದೆ. ಕಲ್ಮಕಾರಿನ ಗುಳಿಕ್ಕಾನ ಭಾಗದಲ್ಲಿ ಭಾರೀ ಶಬ್ಧ ಕೇಳಿಬಂದಿದ್ದು, ನೆರೆ, ಜಲಪ್ರವಾಹದಿಂದ ಕಂಗೆಟ್ಟ ಈ ಭಾಗದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಸುಳ್ಯ: ಮತ್ತೆ ಕಂಪಿಸಿದ ಭೂಮಿ Read More »

ಕುದ್ರೋಳಿ ಕ್ಷೇತ್ರದ ಆವರಣದಲ್ಲಿ ದಾಖಲೆ ಬರೆದ ತ್ರಿವರ್ಣ ಧ್ವಜದ ಚಿತ್ರಾಕೃತಿ

ಮಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಪ್ರಯುಕ್ತ ಮಂಗಳೂರಿನ ಇತಿಹಾಸ ಪ್ರಸಿದ್ಧ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆವರಣದಲ್ಲಿ ಪುಷ್ಪ ಹಾಗೂ ಧಾನ್ಯಗಳನ್ನು ಬಳಸಿ ರಚಿಸಿದ ತ್ರಿವರ್ಣ ಧ್ವಜದ ಚಿತ್ರಾಕೃತಿ ಎಲ್ಲರ ಗಮನಸೆಳೆಯುತ್ತಿದ್ದು, ಬರೋಬ್ಬರಿ 900 ಕೆ.ಜಿ‌ ಧಾನ್ಯಗಳನ್ನು ಬಳಸಿ ಇದನ್ನು ರಚಿಸಿರುವುದು ಮತ್ತೊಂದು ದಾಖಲೆ. ಕಲಾವಿದ ಹಾಗೂ ಛಾಯಾಗ್ರಾಹಕ ಪುನಿಕ್ ಶೆಟ್ಟಿ ಅವರ ನೇತೃತ್ವದಲ್ಲಿ ಗುರುಬೆಳದಿಂಗಳು ಸಮಿತಿಯ ಮೂವತ್ತು ಸದಸ್ಯರು ಸೇರಿ 38 ಫೀಟ್ ವೃತ್ತದಲ್ಲಿ ಈ ವಿಶಿಷ್ಟ ರಚನೆಯನ್ನು ನಿರ್ಮಿಸಿದ್ದಾರೆ. 300ಕೆಜಿ ಸಾಗು , 300ಕೆಜಿ ಹೆಸರುಕಾಳು,

ಕುದ್ರೋಳಿ ಕ್ಷೇತ್ರದ ಆವರಣದಲ್ಲಿ ದಾಖಲೆ ಬರೆದ ತ್ರಿವರ್ಣ ಧ್ವಜದ ಚಿತ್ರಾಕೃತಿ Read More »

ಸುಳ್ಯ: ಕನಕಮಜಲಿನಿಂದ ಜಾಲ್ಸೂರಿನ ತನಕ ಬೃಹತ್ ಪಂಜಿನ ಮೆರವಣಿಗೆ

ಸಮಗ್ರ ನ್ಯೂಸ್: ಜಾಲ್ಸೂರು ವಲಯ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆಯು ಕನಕಮಜಲಿನಿಂದ ಜಾಲ್ಸೂರಿನ ತನಕ ಆ.13ರಂದು ಸಂಜೆ ಜರುಗಿತು. ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಿಂದ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳ ನೇತೃತ್ವದಲ್ಲಿ ಹೊರಟ ಬೃಹತ್ ಪಂಜಿನ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಜಾಲ್ಸೂರಿನವರೆಗೆ ಸಾಗಿ ಬಂದಿತು. ಬಳಿಕ ಜಾಲ್ಸೂರಿನ ಶ್ರೀನಿವಾಸ್ ಕಾಂಪ್ಲೆಕ್ಸ್ ವಠಾರದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಜಾಲ್ಸೂರು ವಲಯದ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ

ಸುಳ್ಯ: ಕನಕಮಜಲಿನಿಂದ ಜಾಲ್ಸೂರಿನ ತನಕ ಬೃಹತ್ ಪಂಜಿನ ಮೆರವಣಿಗೆ Read More »

ಎಬಿವಿಪಿ ಮಂಗಳೂರು ವತಿಯಿಂದ ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಬೃಹತ್ ತಿರಂಗ ಯಾತ್ರೆ

ಸಮಗ್ರ ನ್ಯೂಸ್: ಸ್ವತಂತ್ರ ಭಾರತದ ಹೋರಾಟಕ್ಕಾಗಿ ಮೊದಲ ಸ್ವಾತಂತ್ರ ಧ್ವಜವನ್ನು ಹಾರಿಸಿ, ಸ್ವತಂತ್ರವನ್ನ ಘೋಷಿಸಿಕೊಂಡ ಸ್ಥಳ ಬಾವುಟಗುಡ್ಡ ಆ ಸ್ಥಳವನ್ನು ನಾವೆಲ್ಲರೂ ಸ್ಮರಿಸಿಕೊಳ್ಳಬೇಕು ಎಂದು ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಮಣೆಕಂಠ ಕಳಸಾ ಮಾತನಾಡಿದರು. ಅವರು ಮಂಜೆಶ್ವರ ಗೋವಿಂದ ಪೈ ವೃತ್ತದಿಂದ ಬಾವುಟ ಗುಡ್ಡದವರೆಗೆ ಎಬಿವಿಪಿ ವತಿಯಿಂದ ನಡೆದ ಬೃಹತ್ ತಿರಂಗ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ತಿರಂಗವನ್ನು ಹಿಡಿದು, ಭಾರತ್ ಮಾತಾ ಕಿ ಜೈ ವಂದೇ ಮಾತರಂ ಘೋಷಣೆಗಳನ್ನು ಕೂಗುತ್ತಾ ತಿರಂಗ ಯಾತ್ರೆಯಲ್ಲಿ ಭಾಗವಹಿಸಿದ್ದರು.

ಎಬಿವಿಪಿ ಮಂಗಳೂರು ವತಿಯಿಂದ ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಬೃಹತ್ ತಿರಂಗ ಯಾತ್ರೆ Read More »

ಎಬಿವಿಪಿಯಿಂದ ಸುಬ್ರಹ್ಮಣ್ಯದಲ್ಲಿ “ಯುವಾಂಕುರ” ಅಂತರ್ ಕಾಲೇಜು ಸ್ಪರ್ಧೆ

ಸಮಗ್ರ ನ್ಯೂಸ್: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ ಆಯೋಜಿಸಿದ “ಯುವಾಂಕುರ” ರಾಷ್ಟ್ರಧಾರೆಯೋಳಿಂದು ಅಮೃತ ವರ್ಷದ ಹರ್ಷ ಎಂಬ ಸುಳ್ಯ ಹಾಗೂ ಕಡಬ ತಾಲೂಕು ಮಟ್ಟದ ಅಂತರ್ ಕಾಲೇಜು ಸ್ಪರ್ಧೆಯ ಉದ್ಘಾಟನಾ ಸಮಾರಂಭವನ್ನು ಬಾಲ ಭಟ್ ಹಿರಿಯ ಸ್ವಯಂಸೇವಕರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇವರು ನೆರವೇರಿಸಿದರು. ವೇದಿಕೆಯಲ್ಲಿ ABVP ವಿಭಾಗ ಸಂಚಲಕ್ ಆಗಿರುವ ಹರ್ಷಿತ್ ಹಾಗೂ ಸುಬ್ರಹ್ಮಣ್ಯ ನಗರ ಕಾರ್ಯದರ್ಶಿ ಸೃಜನ್ ರೈ ಉಪಸ್ಥಿತಿ ಇದ್ದರು. ಕಾರ್ಯಕ್ರಮದಲ್ಲಿ ಕುಣಿತ ಭಜನೆ, ದೇಶಭಕ್ತಿ ಗೀತೆ,

ಎಬಿವಿಪಿಯಿಂದ ಸುಬ್ರಹ್ಮಣ್ಯದಲ್ಲಿ “ಯುವಾಂಕುರ” ಅಂತರ್ ಕಾಲೇಜು ಸ್ಪರ್ಧೆ Read More »

ಸುಳ್ಯ: ಜಾಲತಾಣಗಳಲ್ಲಿ ಸಾಮಾಜಿಕ ಕಳಕಳಿ ತೆರೆದಿಟ್ಟ ಯುವಕ| ಉರಿ ತಡೆದುಕೊಳ್ಳಲಾಗದೆ ‘ಕೀಬೋರ್ಡ್ ವಾರಿಯರ್’ ಎಂದ ನ.ಪಂ ಅಧ್ಯಕ್ಷ|

ಸಮಗ್ರ ನ್ಯೂಸ್: ಸುಳ್ಯ ನಗರದಲ್ಲಿ ಹಲವಾರು ಸಮಸ್ಯೆಗಳ ಜೊತೆಗೆ ಜನ ಬದುಕುತ್ತಿದ್ದಾರೆ. ಮನವಿ ಕೊಟ್ಟರೂ ಆಮೆ ನಡಿಗೆಯ ಅಭಿವೃದ್ಧಿ ಮಾಡುತ್ತಿರುವ ಸ್ಥಳೀಯ ನ.ಪಂ‌ ಆಡಳಿತ ಜನರ ಸಮಸ್ಯೆಗಳನ್ನು ಆಲಿಸುವತ್ತ ಚಿಂತಿಸುತ್ತಿಲ್ಲ ಎಂಬುದು ನಗರವಾಸಿಗಳ ಆರೋಪ. ಆದರೆ ಕೆಲವೊಮ್ಮೆ ಇದರಿಂದ ಜನ ರೋಸಿ ಹೋದಾಗ ಜಾಲತಾಣಗಳಲ್ಲಿ ಸಮಸ್ಯೆಗಳ ಕುರಿತಂತೆ ಮಾತನಾಡುತ್ತಾರೆ. ಆದರೆ ನ.ಪಂ‌ ಮಾತ್ರ ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ಜನರನ್ನೇ ಅಪರಾದಿಗಳನ್ನಾಗಿ ಮಾಡುತ್ತಿದೆ. ಇದೀಗ ಮತ್ತೊಬ್ಬ ಯುವಕ ಸುಳ್ಯ ನ.ಪಂ‌ ಆಡಳಿತದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. https://m.facebook.com/story.php?story_fbid=640038614142407&id=100044088233880&sfnsn=wiwspmo

ಸುಳ್ಯ: ಜಾಲತಾಣಗಳಲ್ಲಿ ಸಾಮಾಜಿಕ ಕಳಕಳಿ ತೆರೆದಿಟ್ಟ ಯುವಕ| ಉರಿ ತಡೆದುಕೊಳ್ಳಲಾಗದೆ ‘ಕೀಬೋರ್ಡ್ ವಾರಿಯರ್’ ಎಂದ ನ.ಪಂ ಅಧ್ಯಕ್ಷ| Read More »