ಕರಾವಳಿ

ಉಕ್ಕೇರಿದ ಪಯಸ್ವಿನಿ; ಕಲ್ಲುಗುಂಡಿ ಸಂಪಾಜೆ ಜಲಾವೃತ| ಮಾಣಿ – ಮೈಸೂರು ಹೆದ್ದಾರಿ ಸಂಚಾರ ಬಂದ್| ಅಸ್ತವ್ಯಸ್ತವಾದ ಜನಜೀವನ

ಸಮಗ್ರ ನ್ಯೂಸ್: ನಿರಂತರ ಮಳೆಯಿಂದಾಗಿ‌ ಸುಳ್ಯ, ಮಡಿಕೇರಿ ತಾಲೂಕಿನ ಗಡಿಭಾಗ ಅಕ್ಷರಶಃ ನರಕ‌ ಸದೃಶವಾಗಿದೆ. ಕಲ್ಲುಗುಂಡಿ,ಸಂಪಾಜೆ, ಗೂನಡ್ಕ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಕಲ್ಲುಗುಂಡಿ ಬಳಿ ಸೇತುವೆ ಕುಸಿಯುವ ಭೀತಿ ಎದುರಾಗಿದ್ದು, ಸಂಚಾರಕ್ಕೆ ಸಂಚಕಾರ ಎದುರಾಗಿದೆ. ಇನ್ನು ಮಾಣಿ- ಮೈಸೂರು ಹೆದ್ದಾರಿಯ ಪಾಲಡ್ಕ, ಅರಂಬೂರು ಬಳಿ ಪಯಸ್ವಿನಿ ನದಿನೀರು ಹೆದ್ದಾರಿಗೆ ಹರಿದಿದ್ದು, ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದ ಟ್ರಾಫಿಕ್ ಜ್ಯಾಮ್ ಉಂಟಾಗಿದೆ. ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾಗಿರುವ ಕಲ್ಲುಗುಂಡಿಯಲ್ಲೂ ಪಯಸ್ವಿನಿ ನದಿ ಹರಿದ ಪರಿಣಾಮ […]

ಉಕ್ಕೇರಿದ ಪಯಸ್ವಿನಿ; ಕಲ್ಲುಗುಂಡಿ ಸಂಪಾಜೆ ಜಲಾವೃತ| ಮಾಣಿ – ಮೈಸೂರು ಹೆದ್ದಾರಿ ಸಂಚಾರ ಬಂದ್| ಅಸ್ತವ್ಯಸ್ತವಾದ ಜನಜೀವನ Read More »

ಕಡಬ: ರಾತ್ರೋರಾತ್ರಿ ಮನೆಗೆ ನುಗ್ಗಿದ ನದಿನೀರು; ನಿವಾಸಿಗಳ ಸ್ಥಳಾಂತರ

ಸಮಗ್ರ ನ್ಯೂಸ್: ಎರಡು ದಿನಗಳಿಂದ ಎಡೆಬಿಡದೆ ಆರ್ಭಟಿಸುತ್ತಿರುವ ಮಹಾ ಮಳೆಗೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮ ಕುಬಲಾಡಿ ಎಂಬಲ್ಲಿ ಹಳ್ಳದ ನೀರು ಮನೆಗೆ ನುಗ್ಗಿ ಮನೆ ಜಲಾವೃತವಾದ ಘಟನೆ ವರದಿಯಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳೀಯಾಡಳಿತದ ಅಧಿಕಾರಿಗಳು ಹಾಗೂ ಎನ್.ಡಿ.ಆರ್.ಎಫ್ ತಂಡದವರು ಮಧ್ಯರಾತ್ರಿಯೇ ಸ್ಥಳಕ್ಕೆ ತೆರಳಿ ಮನೆಯಲ್ಲಿದ್ದ ತನಿಯಪ್ಪ (54), ಭಾಗೀರಥಿ (50), ಚಂದಪ್ಪ (41), ರೇವತಿ (34) ಅರುಣಾ (15)ಅನಿತಾ (9) ಅಂಜಲಿ (6) ಸೇರಿ ಒಟ್ಟು 7 ಜನರನ್ನು ರಕ್ಷಿಸಿದ್ದು ಸದ್ಯ ಅವರನ್ನು ಸಂಬಂಧಿಕರ

ಕಡಬ: ರಾತ್ರೋರಾತ್ರಿ ಮನೆಗೆ ನುಗ್ಗಿದ ನದಿನೀರು; ನಿವಾಸಿಗಳ ಸ್ಥಳಾಂತರ Read More »

ಭಾರೀ ಮಳೆ ಹಿನ್ನಲೆ; ಸುಳ್ಯ,ಕಡಬ ತಾಲೂಕಿನ ಶಾಲಾ ಕಾಲೇಜುಗಳಿಗೆಆ.3ರಂದು ರಜೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ಮತ್ತು ‌ಕಡಬ ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಭಯ ತಾಲೂಕಿನ ‌ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ಆ.3ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನಲೆ; ಸುಳ್ಯ,ಕಡಬ ತಾಲೂಕಿನ ಶಾಲಾ ಕಾಲೇಜುಗಳಿಗೆಆ.3ರಂದು ರಜೆ Read More »

ರೆಸ್ಕ್ಯೂ ವೇಳೆ ಆಕಸ್ಮಿಕವಾಗಿ ನದಿಗೆ ಬಿದ್ದ ಕ್ರೇನ್ ಆಪರೇಟರ್| ನದಿಗೆ ಜಿಗಿದು ಪ್ರಾಣ ಉಳಿಸಿದ ಯುವಕ

ಸಮಗ್ರ ನ್ಯೂಸ್: ಸೇತುವೆಗೆ ಅಡ್ಡಲಾಗಿ ನಿಂತಿದ್ದ ಮರಗಳನ್ನು ಕ್ರೇನ್ ಮೂಲಕ ತೆರವುಗೊಳಿಸುವಾಗ ಆಕಸ್ಮಿಕವಾಗಿ ಕ್ರೇನ್ ಆಪರೇಟರ್ ನದಿಗೆ ಉರುಳಿದ್ದು, ಈ ವೇಳೆ ಯುವಕನೋರ್ವ ಆತನನ್ನು ರಕ್ಷಿಸಿದ ಘಟನೆ ಸುಳ್ಯ ತಾಲೂಕಿನ ಹರಿಹರಪಲ್ಲತ್ತಡ್ಕದಲ್ಲಿ ನಡೆದಿದೆ. ಕ್ರೇನ್ ಆಪರೇಟರ್ ಶರೀಪ್ ಎಂಬವರು ಇಲ್ಲಿನ ಸೇತುವೆಯ ಮೇಲೆ ಕ್ರೇನ್ ಮೂಲಕ ಮರದ ದಿಮ್ಮಿಗಳನ್ನು ತೆರವು ಮಾಡುತ್ತಿದ್ದರು. ಈ ವೇಳೆ ಅವರು ಆಯತಪ್ಪಿ ನದಿಗೆ ಬಿದ್ದಿದ್ದು‌ ಇದನ್ನು ಗಮನಿಸಿದ ಸ್ಥಳೀಯ ಸೋಮಶೇಖರ್ ಎಂಬವರು ನದಿಗೆ ಜಿಗಿದು ಆತನ ಪ್ರಾಣ ಉಳಿಸಿದ್ದಾರೆ.

ರೆಸ್ಕ್ಯೂ ವೇಳೆ ಆಕಸ್ಮಿಕವಾಗಿ ನದಿಗೆ ಬಿದ್ದ ಕ್ರೇನ್ ಆಪರೇಟರ್| ನದಿಗೆ ಜಿಗಿದು ಪ್ರಾಣ ಉಳಿಸಿದ ಯುವಕ Read More »

ದ.ಕ ದಲ್ಲಿ ಮತ್ತೆರಡು ದಿನ ನಿರ್ಬಂಧ ವಿಸ್ತರಣೆ;

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿರ್ಬಂಧಗಳನ್ನು ಎರಡು ದಿನಗಳ ಕಾಲ ವಿಸ್ತರಿಸಿ ಜಿಲ್ಲಾಡಳಿತ ಭಾನುವಾರ ಆದೇಶ ಹೊರಡಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಜುಲೈ 29 ರಂದು ಫಾಝಿಲ್ ಹತ್ಯೆಯ ಹಿನ್ನೆಲೆಯಲ್ಲಿ, ಆಗಸ್ಟ್ 3 ರವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಜಿಲ್ಲಾಡಳಿತ ಆದೇಶಿಸಿತ್ತು. ನಗರ ಪೊಲೀಸ್ ಅಧಿಕಾರಿಗಳ ಮನವಿಗೆ ಅನುಗುಣವಾಗಿ ಈಗ ಆಗಸ್ಟ್ 5 ರವರೆಗೆ ನಿರ್ಬಂಧಗಳನ್ನು ವಿಸ್ತರಿಸಲಾಗಿದೆ. ಆಸ್ಪತ್ರೆಗಳು ಮತ್ತು ಔಷಧಿ ಅಂಗಡಿಗಳು

ದ.ಕ ದಲ್ಲಿ ಮತ್ತೆರಡು ದಿನ ನಿರ್ಬಂಧ ವಿಸ್ತರಣೆ; Read More »

ಸುಳ್ಯ: ರಣಭೀಕರ ಮಳೆ| ರಾತ್ರೋರಾತ್ರಿ ನರಕವಾದ ಬದುಕು| ಸಾವನ್ನಪ್ಪಿದ ಎಳೆ ಜೀವಗಳು; ಅತಂತ್ರವಾದ ಜನಜೀವನ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಸುರಿದ ಭಾರೀ ಮಳೆಗೆ ಎರಡು ಎಳೆ ಜೀವಗಳು ಅಸು ನೀಗಿವೆ. ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಎಂಬಲ್ಲಿ ಈ ಘಟನೆ ನಡೆದಿದೆ. ಸೋಮವಾರ ಸಂಜೆ ಸುರಿದ ಮಹಾ ಮಳೆಗೆ ಸುಬ್ರಹ್ಮಣ್ಯ, ಕೊಲ್ಲಮೊಗರು, ಕಲ್ಮಕಾರು, ಬಾಳುಗೋಡು ಭಾಗದ ಜನರಲ್ಲಿ ಆತಂಕ ಸೃಷ್ಠಿಯಾಗಿದೆ. ಮಳೆಯ ಕಾರಣದಿಂದಾಗಿ ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವಿಗೀಡಾಗಿದ್ದು, ಪರ್ವತಮುಖಿ ನಿವಾಸಿ ಕುಶಾಲಪ್ಪ ಎನ್ನುವವರ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಧಾರುಣ ಸಾವು

ಸುಳ್ಯ: ರಣಭೀಕರ ಮಳೆ| ರಾತ್ರೋರಾತ್ರಿ ನರಕವಾದ ಬದುಕು| ಸಾವನ್ನಪ್ಪಿದ ಎಳೆ ಜೀವಗಳು; ಅತಂತ್ರವಾದ ಜನಜೀವನ Read More »

ಸುರತ್ಕಲ್: ಫಾಝಿಲ್ ಹತ್ಯೆ ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಸುರತ್ಕಲ್ ನಲ್ಲಿ ಫಾಝಿಲ್ ನನ್ನು ಹತ್ಯೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ನಿನ್ನೆ ತಡರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಫಾಸಿಲ್ ಕೊಲೆ ಆರೋಪಿಗಳನ್ನು ಬಂಧಿಸಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎನ್ನಲಾಗಿದೆ. ಕಾರ್ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು ಮಹತ್ವದ ಮಾಹಿತಿ ಕಲೆಹಾಕಿದ್ದರು, ವಿವಿಧ ತಂಡಗಳಲ್ಲಿ ಮಂಗಳೂರು, ಬೆಂಗಳೂರು ಮೊದಲಾದ ಕಡೆ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ನಿನ್ನೆ ರಾತ್ರಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಬೆಳ್ಳಾರೆಯಲ್ಲಿ ಬಿಜೆಪಿ

ಸುರತ್ಕಲ್: ಫಾಝಿಲ್ ಹತ್ಯೆ ಆರೋಪಿಗಳು ಅರೆಸ್ಟ್ Read More »

ಕುಕ್ಕೆ ಸುಬ್ರಹ್ಮಣ್ಯ: ಮೇಘಸ್ಪೋಟ;‌ ಗುಡ್ಡ ಕುಸಿದು ಎರಡು ಮಕ್ಕಳು ಮೃತ್ಯು

ಸಮಗ್ರ ನ್ಯೂಸ್: ಭಾರೀ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಬಳಿಯಲ್ಲಿ ಗುಡ್ಡ ಜರಿದು ಮನೆಯೊಂದು ಕುಸಿದು ಬಿದ್ದಿದ್ದು ಮನೆಯೊಳಗಿನ ಇಬ್ಬರು ಮಕ್ಕಳು ಮಣ್ಣಲ್ಲಿ ಹೂತು ಹೋಗಿದ್ದು ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಕುಮಾರದಾರ ಪರ್ವತಮುಖಿ ಬಳಿಯ ಕುಸುಮಾಧರ ಎಂಬವರ ಮನೆ ಕುಸಿತಗೊಂಡಿದ್ದು ಅವರ ಇಬ್ಬರು ಹೆಣ್ಣುಮಕ್ಕಳು ಮಣ್ಣು ಪಾಲಾಗಿದ್ದು, ನಿರಂತರ ಕಾರ್ಯಾಚರಣೆ ಬಳಿಕ ತಡರಾತ್ರಿ ಮೃತದೇಹಗಳನ್ನು ಹೊರತೆಗೆಯಲಾಯಿತು. ಮೇಘಸ್ಪೋಟ ಮತ್ತು‌ ಭಾರೀ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದ್ದು, ಎರಡು ದಿನ ಭಕ್ತಾದಿಗಳಿಗೆ ಪ್ರವೇಶ

ಕುಕ್ಕೆ ಸುಬ್ರಹ್ಮಣ್ಯ: ಮೇಘಸ್ಪೋಟ;‌ ಗುಡ್ಡ ಕುಸಿದು ಎರಡು ಮಕ್ಕಳು ಮೃತ್ಯು Read More »

ಭಾರೀ ಮಳೆ ಹಿನ್ನಲೆ; ಕಡಬ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ‌ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನಲೆ; ಕಡಬ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ Read More »

ಭಾರೀ ಮಳೆ ಹಿನ್ನಲೆ; ಸುಳ್ಯ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ‌ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನಲೆ; ಸುಳ್ಯ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ Read More »