ಉಕ್ಕೇರಿದ ಪಯಸ್ವಿನಿ; ಕಲ್ಲುಗುಂಡಿ ಸಂಪಾಜೆ ಜಲಾವೃತ| ಮಾಣಿ – ಮೈಸೂರು ಹೆದ್ದಾರಿ ಸಂಚಾರ ಬಂದ್| ಅಸ್ತವ್ಯಸ್ತವಾದ ಜನಜೀವನ
ಸಮಗ್ರ ನ್ಯೂಸ್: ನಿರಂತರ ಮಳೆಯಿಂದಾಗಿ ಸುಳ್ಯ, ಮಡಿಕೇರಿ ತಾಲೂಕಿನ ಗಡಿಭಾಗ ಅಕ್ಷರಶಃ ನರಕ ಸದೃಶವಾಗಿದೆ. ಕಲ್ಲುಗುಂಡಿ,ಸಂಪಾಜೆ, ಗೂನಡ್ಕ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಕಲ್ಲುಗುಂಡಿ ಬಳಿ ಸೇತುವೆ ಕುಸಿಯುವ ಭೀತಿ ಎದುರಾಗಿದ್ದು, ಸಂಚಾರಕ್ಕೆ ಸಂಚಕಾರ ಎದುರಾಗಿದೆ. ಇನ್ನು ಮಾಣಿ- ಮೈಸೂರು ಹೆದ್ದಾರಿಯ ಪಾಲಡ್ಕ, ಅರಂಬೂರು ಬಳಿ ಪಯಸ್ವಿನಿ ನದಿನೀರು ಹೆದ್ದಾರಿಗೆ ಹರಿದಿದ್ದು, ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದ ಟ್ರಾಫಿಕ್ ಜ್ಯಾಮ್ ಉಂಟಾಗಿದೆ. ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾಗಿರುವ ಕಲ್ಲುಗುಂಡಿಯಲ್ಲೂ ಪಯಸ್ವಿನಿ ನದಿ ಹರಿದ ಪರಿಣಾಮ […]








