ಕರಾವಳಿ

ಸುಳ್ಯದಲ್ಲೂ ಬಲಿಗಾಗಿ ಕಾಯುತ್ತಿವೆ ಅಪಾಯಕಾರಿ ಕಾಲು ಸಂಕಗಳು!!ಶಾಸಕರೇ ಇನ್ನಾದರೂ ಗಮನಿಸಿ…

ಸಮಗ್ರ ನ್ಯೂಸ್: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ ವಿದ್ಯಾರ್ಥಿನಿ ನೀರುಪಾಲಾದ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ಸಂಭವಿಸಿದೆ. ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ 7ವರ್ಷ ನೀರು ಪಾಲಾಗಿರುವ ವಿದ್ಯಾರ್ಥಿ. ಸ.ಹಿ.ಪ್ರಾ ಶಾಲೆ ಚಪ್ಪರಿಕೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ ಸನ್ನಿಧಿ ಸೋಮವಾರ ಸಂಜೆ ಶಾಲೆಬಿಟ್ಟು ಮನೆಗೆ ಬರುವಾಗ ಬೀಜಮಕ್ಕಿ ಎಂಬಲ್ಲಿ ಕಾಲು ಸಂಕವಿದ್ದು ಈ ಕಾಲು ಸಂಕ ದಾಟುವಾಗ ಮಗು ಆಯತಪ್ಪಿ ಹಳ್ಳಕ್ಕೆ ಬಿದ್ದಿದ್ದಾಳೆ

ಸುಳ್ಯದಲ್ಲೂ ಬಲಿಗಾಗಿ ಕಾಯುತ್ತಿವೆ ಅಪಾಯಕಾರಿ ಕಾಲು ಸಂಕಗಳು!!ಶಾಸಕರೇ ಇನ್ನಾದರೂ ಗಮನಿಸಿ… Read More »

ಭಾರತ ಮಾತೆ ಕೈಯಲ್ಲಿ ಭಗವಾಧ್ವಜ| ಮಂಗಳೂರು ವಿವಿ ಕಾಲೇಜಿನಲ್ಲಿ ‌ಮತ್ತೆ ವಿವಾದ!

ಸಮಗ್ರ ನ್ಯೂಸ್: ಕಾಲೇಜು ಕ್ಯಾಂಪಸ್‌ನಲ್ಲಿ ‘ಭಾರತ್ ಮಾತಾ ಪೂಜನಾ’ ಕಾರ್ಯಕ್ರಮ ನಡೆಸಲು ಮುಂದಾದ ಮಂಗಳೂರು ವಿವಿ ಕಾಲೇಜು ವಿದ್ಯಾರ್ಥಿ ಸಂಘದ ‌ನಡೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಕಾರ್ಯಕ್ರಮದ ವಿರುದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ‌.ಕ ಜಿಲ್ಲಾಧಿಕಾರಿಗೆ ದೂರು ನೀಡಿದ್ದು, ಕಾರ್ಯಕ್ರಮ ರದ್ದು ಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರರಿಗೆ ಮನವಿ ಮಾಡಿದೆ. ಭಾರತ ಮಾತೆ ಕೇಸರಿ ಧ್ವಜ ಹಿಡಿದ ಫೋಟೋ ಬಳಸಿದ್ದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿರುವ ಕ್ಯಾಂಪಸ್ ಫ್ರಂಟ್, ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ

ಭಾರತ ಮಾತೆ ಕೈಯಲ್ಲಿ ಭಗವಾಧ್ವಜ| ಮಂಗಳೂರು ವಿವಿ ಕಾಲೇಜಿನಲ್ಲಿ ‌ಮತ್ತೆ ವಿವಾದ! Read More »

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಭೂ ಕುಸಿತ| ಆತಂಕದಲ್ಲಿ ಸ್ಥಳೀಯರು

ಸಮಗ್ರ ನ್ಯೂಸ್:‌ಕೊಡಗು ಜಿಲ್ಲೆಯಲ್ಲಿ ಭೂಕುಸಿತಗಳು ಮುಂದುವರೆದಿದ್ದು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಪುಷ್ಪಗಿರಿ ಬೆಟ್ಟದ ತಪ್ಪಲಿನಲ್ಲಿರುವ ಹರಪಲ್ಲಿ ಗ್ರಾಮದಲ್ಲಿ ಭಾರಿ ಭೂಕುಸಿತ ಉಂಟಾಗಿದೆ. ಕಿ.ಮೀ ಗಟ್ಟಲೇ ಬೆಟ್ಟ ಕುಸಿದಿದ್ದು ಸ್ಥಳೀಯರಲ್ಲಿ ಭಾರೀ ಆತಂಕ ಮನೆ ಮಾಡಿದೆ. ಹೆಚ್.ಎ.ಸೋಮಯ್ಯ ಅವರ ಮನೆ ಬಳಿ‌ ಭೂಮಿ ಕುಸಿದು ಹೋಗಿದೆ. ಮನೆಯಿಂದ 20 ಅಡಿ ದೂರದಲ್ಲಿ ಕುಸಿತ ಉಂಟಾಗಿದ್ದು, ಇದರಿಂದಾಗಿ ಸೋಮಯ್ಯ ಅವರ ಮನೆಅಪಾಯದಲ್ಲಿ ಇದೆ. ನಿನ್ನೆ ಸುರಿದ ಮಳೆಯಿಂದ ಉಂಟಾದ ಭೂಕುಸಿತಗೊಂಡಿದೆ. ಸ್ಥಳಕ್ಕೆ ಅಧಿಕಾರಿಗಳ ಭೇಟಿ ಪರಿಶೀಲನೆ ಮಾಡಿದ್ದಾರೆ. ಬೆಟ್ಟದ ಮೇಲ್ಭಾಗದಲ್ಲೂ

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಭೂ ಕುಸಿತ| ಆತಂಕದಲ್ಲಿ ಸ್ಥಳೀಯರು Read More »

ಪುತ್ತೂರು; ವ್ಯಕ್ತಿಯೊಬ್ಬರು ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ಅಸ್ವಸ್ಥ, ಆಸ್ಪತ್ರೆ ದಾಖಲು

ಪುತ್ತೂರು: ಕೆಎಸ್ಸಾರ್ಟಿಸಿ ಬಸ್‌ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬರು ಮೆಟ್ಟಿಲಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ಘಟನೆಯೊಂದು ಮಂಗಳವಾರ ರಾತ್ರಿ ನಡೆದಿದೆ. ಬಿಳಿ ಪಂಚೆ ಧರಿಸಿದ್ದ ವ್ಯಕ್ತಿ ಕೆಎಸ್ಸಾರ್ಟಿಸಿ ವಾಣಿಜ್ಯ ಸಂಕೀರ್ಣದ ಮೆಟ್ಟಿಲಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು, ಅವರ ತಲೆಗೆ ಗಾಯವಾಗಿದೆ. ತಕ್ಷಣವೇ ಸ್ಥಳೀಯ ವ್ಯಾಪಾರಸ್ಥರು ಸೇರಿ 108 ಆ್ಯಂಬುಲೆನ್ಸ್ ನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

ಪುತ್ತೂರು; ವ್ಯಕ್ತಿಯೊಬ್ಬರು ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ಅಸ್ವಸ್ಥ, ಆಸ್ಪತ್ರೆ ದಾಖಲು Read More »

ಸುಳ್ಯ: ಅಪಘಾತ ಪ್ರಕರಣ ಆರೋಪಿ ದೋಷಮುಕ್ತ

ಸುಳ್ಯ: ತಾಲೂಕಿನ ಮಿತ್ತಮಜಲು ಎಂಬಲ್ಲಿ ನಡೆದ ಅಪಘಾತಕ್ಕೆ ಸಂಬಂಧಿಸಿದಂತೆ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯ ಆರೋಪಿಯನ್ನು ದೋಷಮುಕ್ತ ಗೊಳಿಸಿದೆ. ದಿನಾಂಕ 13/05/2020 ರಂದು ನೆಲ್ಲೂರು ಕೆಮ್ರಾಜೆ ಗ್ರಾಮದ ಚೇತನ್ ಕುಮಾರ್ ಎಂಬುವವರು ತನ್ನ ವಾಹನದಲ್ಲಿ ಸುಳ್ಯ ಕಡೆಯಿಂದ ಶಶಿಕಾಂತ್ ಎಂಬುವವನನ್ನು ಕೂರಿಸಿಕೊಂಡು ಬರುತ್ತಿದ್ದರು. ಈ ಸಂದರ್ಭ ಮಿತ್ತಮಜಲ್ ನಲ್ಲಿ ಸುಳ್ಯ ಕಡೆಗೆ ಬರುತ್ತಿದ್ದ ಪಿಕ್ ಅಪ್ ವಾಹನದ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದು ಚೇತನ್ ಕುಮಾರ್ ಎಂಬುವವರ ಬೈಕ್ ಡಿಕ್ಕಿ ಹೊಡೆದಿದೆ.ಈ ಪರಿಣಾಮ

ಸುಳ್ಯ: ಅಪಘಾತ ಪ್ರಕರಣ ಆರೋಪಿ ದೋಷಮುಕ್ತ Read More »

ಸುಳ್ಯ: ಕಿಡಿಗೇಡಿಗಳು ಕಿತ್ತೆಸೆದ‌ ಬಹಿಷ್ಕಾರ ಬ್ಯಾನರ್| ಮತ್ತೆ ಅದೇ ಜಾಗದಲ್ಲಿ ಹೊಸ ಬ್ಯಾನರ್ ಹಾಕಿದ ಗ್ರಾಮಸ್ಥರು

ಸಮಗ್ರ ನ್ಯೂಸ್: ಅರಂತೋಡು ಮರ್ಕಂಜ ಎಲಿಮಲೆ ರಸ್ತೆಯಲ್ಲಿ ವೈ.ಎಂ.ಕೆ.ಚಡಾವು ಬಳಿ ಅಡ್ತಲೆ ನಿವಾಸಿಗಳು ಅಳವಡಿಸಿದ್ದ ಚುನಾವಣಾ ಬಹಿಷ್ಕಾರದ ಬ್ಯಾನರನ್ನು ಕಿಡಿಗೇಡಿಗಳು ನದಿಗೆ ಎಸೆದಿದ್ದು, ಅದೇ ಜಾಗದಲ್ಲಿ ಗ್ರಾಮಸ್ಥರು ಮತ್ತೆ ಬ್ಯಾನರ್ ಅಳವಡಿಸಿದ್ದಾರೆ. ಈ ರಸ್ತೆಯ ಮೂಲಕ ಅಂದು ಮುಖ್ಯಮಂತ್ರಿಗಳು ರಸ್ತೆಯಲ್ಲಿ ಸುಳ್ಯಕ್ಕೆ ಬರುವವರಿದ್ದರು. ಈ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಬ್ಯಾನರ್ ತೆಗಿದಿದ್ದಾರೆಂದು ಖಂಡಿಸಿ ಅಡ್ತಲೆಯ ನಾಗರಿಕರು ಬ್ಯಾನರ್ ಕಿತ್ತೆಸೆದವರಿಗೆ ಶಿಕ್ಷೆ ನೀಡುವಂತೆ ದೈವದ ಮೊರೆ ಹೋಗಿದ್ದರು. ಆ.7 ರಂದು ಪುನಃ ರಸ್ತೆಯ ಫಲಾನುಭವಿಗಳು ವೈ.ಎಂ.ಕೆ. ಬಳಿ ಚುನಾವಣಾ ಬಹಿಷ್ಕಾರದ

ಸುಳ್ಯ: ಕಿಡಿಗೇಡಿಗಳು ಕಿತ್ತೆಸೆದ‌ ಬಹಿಷ್ಕಾರ ಬ್ಯಾನರ್| ಮತ್ತೆ ಅದೇ ಜಾಗದಲ್ಲಿ ಹೊಸ ಬ್ಯಾನರ್ ಹಾಕಿದ ಗ್ರಾಮಸ್ಥರು Read More »

ತುಳು ಭಾಷೆ ಬಗ್ಗೆ ತುಚ್ಛ ಭಾವನೆ: ಉಪ್ಪಿನಂಗಡಿ ಕಾಲೇಜು ಪ್ರಾಚಾರ್ಯರ ವಿರುದ್ಧ ವಿದ್ಯಾರ್ಥಿಗಳು ಗರಂ

ಸಮಗ್ರ ನ್ಯೂಸ್: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಶೇಖರ ಎಂ.ಬಿ. ಅವರು ತುಳು ಭಾಷೆಯ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆಂದು ಆರೋಪಿಸಿ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದ ಘಟನೆ ಆ.8ರಂದು ನಡೆದಿದೆ. ಕಳೆದ ಆ.5 ಮತ್ತು ಆ.8ರಂದು ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ವತಿಯಿಂದ ಕಾಲೇಜಿನಲ್ಲಿ ‘ತುಳುನಾಡ ಐಸಿರಿ’ ಕಾರ್ಯಕ್ರಮ ನಡೆದಿತ್ತು. ಈ ಸಂದರ್ಭ ಕಾಲೇಜಿನ ಪ್ರಾಚಾರ್ಯರಾದ ಶೇಖರ ಎಂ.ಬಿ. ಅವರು ತುಳು ಭಾಷೆಯ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆನ್ನಲಾಗಿದೆ. ಈ ಬಗ್ಗೆ

ತುಳು ಭಾಷೆ ಬಗ್ಗೆ ತುಚ್ಛ ಭಾವನೆ: ಉಪ್ಪಿನಂಗಡಿ ಕಾಲೇಜು ಪ್ರಾಚಾರ್ಯರ ವಿರುದ್ಧ ವಿದ್ಯಾರ್ಥಿಗಳು ಗರಂ Read More »

ಮಂಗಳೂರು: ಫಾಜಿಲ್ ಮನೆಗೆ ಕರ್ನಾಟಕ ರಾಜ್ಯ ವಖ್ಫ್ ಮಂಡಳಿ ಅಧ್ಯಕ್ಷರ ಭೇಟಿ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಮಂಗಳಪೇಟೆಯ ಫಾಜಿಲ್ ಮನೆಗೆ ಕರ್ನಾಟಕ ರಾಜ್ಯ ವಖ್ಫ್ ಮಂಡಳಿ ಭೇಟಿ ಅಧ್ಯಕ್ಷರು ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಕರ್ನಾಟಕ ರಾಜ್ಯ ವಖ್ಫ್ ಮಂಡಳಿ ಅಧ್ಯಕ್ಷರಾದ ಮೌಲಾನ ಎನ್.ಕೆ.ಎಂ ಶಾಫಿ ಸಹದಿ ದ.ಕ. ಜಿಲ್ಲಾ ವಖ್ಫ್ ಮಂಡಳಿ ಚೆಯರ್ಮೆನ್ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಎಸ್.ಎಸ್.ಎಫ್. ಜಿಲ್ಲಾಧ್ಯಕ್ಷರಾದ ನವಾಜ್ ಸಖಾಫಿ, ದ.ಕ. ಜಿಲ್ಲಾ ವಖ್ಫ್ ಸಮಿತಿಯ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಮೊಗರ್ಪಣೆ, ಜಿಲ್ಲಾ ವಖ್ಫ್ ಸದಸ್ಯರುಗಳಾದ ಸೈದುದ್ದೀನ್, ಸಿರಾಜುದ್ದಿನ್, ಸ್ಥಳೀಯ

ಮಂಗಳೂರು: ಫಾಜಿಲ್ ಮನೆಗೆ ಕರ್ನಾಟಕ ರಾಜ್ಯ ವಖ್ಫ್ ಮಂಡಳಿ ಅಧ್ಯಕ್ಷರ ಭೇಟಿ Read More »

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿಗಳ ಜೊತೆಗೆ ಸುಳ್ಯ ಪಿಎಫ್ಐ ಕಚೇರಿ ಮಹಜರು ನಡೆಸಿದ ಪೊಲೀಸರು

ಸಮಗ್ರ‌ ನ್ಯೂಸ್ : ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಪೊಲೀಸರು ಭಾನುವಾರ ಇಬ್ಬರನ್ನು ಬಂಧಿಸಿದ್ದರು. ಇದೀಗ ಬಂಧಿತರನ್ನು ಬಿಗಿ ಬಂದೋಬಸ್ತು ಮೂಲಕ ಪಿಎಫ್ಐ ಕಚೇರಿಗೆ ಕರೆದುಕೊಂಡು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಸುಳ್ಯ ಪೊಲೀಸರು ಮಹಜರು ಪ್ರಕ್ರಿಯೆ ನಡೆಸುತ್ತಿದ್ದು, ಬಳಿಕ ಇಬ್ಬರನ್ನೂ ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಬಂಧಿತರಾಗಿರುವ ಅಬೀದ್ ಮತ್ತು ನೌಫಾಲ್ ಅವರನ್ನು ಸುಳ್ಯದ ಪಾಪ್ಯುಲರ್ ಫ್ರಂಟ್ ಅಫ್ ಇಂಡಿಯಾ ಕಛೇರಿಯಲ್ಲಿ ಮಹಜರು

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿಗಳ ಜೊತೆಗೆ ಸುಳ್ಯ ಪಿಎಫ್ಐ ಕಚೇರಿ ಮಹಜರು ನಡೆಸಿದ ಪೊಲೀಸರು Read More »

ಕರಾವಳಿಗರೇ ಎಚ್ಚರ; ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ಮಳೆ ಮತ್ತು ಮುಂದಿನ 48 ಗಂಟೆಗಳ ಹವಾಮಾನ ವರದಿ ಪ್ರಕಾರ ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕಾಗಿದೆ . ನಿನ್ನೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ . ಅತಿ ಭಾರಿ ಮಳೆಯ ಪ್ರಮಾಣ ಉಡುಪಿ ಜಿಲ್ಲೆ ಕೊಲ್ಲೂರು , ಕೊಡಗು ಜಿಲ್ಲೆಯ ಭಾಗಮಂಡಲ ತಲಾ 16 ಸೆ . ಮಿ ಮಳೆ ದಾಖಲಾಗಿದೆ . ಭಾರಿ ಮಳೆಯ

ಕರಾವಳಿಗರೇ ಎಚ್ಚರ; ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »