ವಾರ ಕಳೆದರೂ ತಗ್ಗದ ಕುಮಾರಧಾರ, ನೇತ್ರಾವತಿ| ಧರ್ಮಸ್ಥಳ, ಕುಕ್ಕೆಯಲ್ಲಿ ಮುಳುಗಡೆ ಸ್ಥಿತಿಯಲ್ಲೇ ಇರುವ ಸ್ನಾನಘಟ್ಟ
ಸಮಗ್ರ ನ್ಯೂಸ್: ಕಳೆದ ಹಲವು ದಿನಗಳಿಂದ ಕರಾವಳಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಕೊಂಚ ವಿರಾಮ ನೀಡಿದ್ದರೂ ಘಟ್ಟ ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನೇತ್ರಾವತಿ ಹಾಗೂ ಕುಮಾರಧಾರ ನದಿಗಳಲ್ಲಿ ನೀರಿನ ಮಟ್ಟದಲ್ಲಿ ಯಾವುದೇ ಇಳಿಕೆಯಾಗಿಲ್ಲ. ಬಂಟ್ವಾಳ ತಾಲೂಕಿನ ಕೆಲವೊಂದು ತಗ್ಗು ಪ್ರದೇಶ ನದಿ ನೀರಿನಿಂದ ಜಲಾವೃತಗೊಂಡಿದೆ. ನೆರೆಯ ಭೀತಿಯ ಹಿನ್ನೆಲೆ ಸ್ಥಳೀಯ ನಿವಾಸಿಗಳನ್ನು ಕೂಡ ಸ್ಥಳಾಂತರಿಸಲಾಗಿದೆ . ಈ ಬಾರಿಯ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಲವು ಸಾವುನೋವು ಸಂಭವಿಸಿದೆ. ಕರಾವಳಿಯಲ್ಲಿ ಮಳೆ ಆಗುತ್ತಿಲ್ಲವಾದ್ರೂ […]










