ಕರಾವಳಿ

ವಾರ ಕಳೆದರೂ ತಗ್ಗದ ಕುಮಾರಧಾರ, ನೇತ್ರಾವತಿ| ಧರ್ಮಸ್ಥಳ, ಕುಕ್ಕೆಯಲ್ಲಿ ಮುಳುಗಡೆ ಸ್ಥಿತಿಯಲ್ಲೇ ಇರುವ ಸ್ನಾನಘಟ್ಟ

ಸಮಗ್ರ ನ್ಯೂಸ್: ಕಳೆದ ಹಲವು ದಿನಗಳಿಂದ ಕರಾವಳಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಕೊಂಚ ವಿರಾಮ ನೀಡಿದ್ದರೂ ಘಟ್ಟ ಪ್ರದೇಶಗಳಲ್ಲಿ ಮಳೆ‌ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನೇತ್ರಾವತಿ ಹಾಗೂ ಕುಮಾರಧಾರ ನದಿಗಳಲ್ಲಿ ನೀರಿನ ಮಟ್ಟದಲ್ಲಿ ಯಾವುದೇ ಇಳಿಕೆಯಾಗಿಲ್ಲ. ಬಂಟ್ವಾಳ ತಾಲೂಕಿನ ಕೆಲವೊಂದು ತಗ್ಗು ಪ್ರದೇಶ ನದಿ ನೀರಿನಿಂದ ಜಲಾವೃತಗೊಂಡಿದೆ. ನೆರೆಯ ಭೀತಿಯ ಹಿನ್ನೆಲೆ ಸ್ಥಳೀಯ ನಿವಾಸಿಗಳನ್ನು ಕೂಡ ಸ್ಥಳಾಂತರಿಸಲಾಗಿದೆ . ಈ ಬಾರಿಯ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಲವು ಸಾವುನೋವು ಸಂಭವಿಸಿದೆ. ಕರಾವಳಿಯಲ್ಲಿ ಮಳೆ ಆಗುತ್ತಿಲ್ಲವಾದ್ರೂ […]

ವಾರ ಕಳೆದರೂ ತಗ್ಗದ ಕುಮಾರಧಾರ, ನೇತ್ರಾವತಿ| ಧರ್ಮಸ್ಥಳ, ಕುಕ್ಕೆಯಲ್ಲಿ ಮುಳುಗಡೆ ಸ್ಥಿತಿಯಲ್ಲೇ ಇರುವ ಸ್ನಾನಘಟ್ಟ Read More »

ಮಂಗಳೂರಿನಲ್ಲಿ ಬೀಸಿದ ಭಾರೀ ಬಿರುಗಾಳಿ| ಶಾಲಾ ಮೇಲ್ಚಾವಣಿ ಕುಸಿದು ವಿದ್ಯಾರ್ಥಿ, ಶಿಕ್ಷಕಿಗೆ ಗಾಯ

ಸಮಗ್ರ ನ್ಯೂಸ್: ಶುಕ್ರವಾರ ಮಧ್ಯಾಹ್ನ ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಬೀಸಿದ ಬಿರುಗಾಳಿ ಮಳೆ ಅವಾಂತರ ಸೃಷ್ಟಿಸಿದೆ. ಶಾಲೆ, ಮನೆಯ ಮೇಲ್ಛಾವಣಿ ಕುಸಿದು, ಹಲವಾರು ವಿದ್ಯುತ್ ಕಂಬ ಧರಾಶಾಹಿಯಾಗಿರುವ ಘಟನೆ ಸುರತ್ಕಲ್ ನ ಕೃಷ್ಣಪುರದಲ್ಲಿ ನಡೆದಿದೆ. ಕೃಷ್ಣಪುರ ಕಾರುಣ್ಯ ವಿದ್ಯಾಲಯದ ಮೇಲ್ಛಾವಣಿ ಕುಸಿದು ಬಿದ್ದು ವಿದ್ಯಾರ್ಥಿ ಹಾಗೂ ಶಿಕ್ಷಕಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಬಡಾವಣೆಗೆ ಸಂಪರ್ಕವಿರುವ ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು, ವಿದ್ಯುತ್ ತಂತಿಗಳು ತುಂಡಾಗಿವೆ. ಪಕ್ಕದ ಮನೆಯ ಶೀಟ್ ಹಾರಿ ಬಂದು ಇನ್ನೊಂದು

ಮಂಗಳೂರಿನಲ್ಲಿ ಬೀಸಿದ ಭಾರೀ ಬಿರುಗಾಳಿ| ಶಾಲಾ ಮೇಲ್ಚಾವಣಿ ಕುಸಿದು ವಿದ್ಯಾರ್ಥಿ, ಶಿಕ್ಷಕಿಗೆ ಗಾಯ Read More »

ಬಂಟ್ವಾಳ: ತೀವ್ರ ಜ್ವರದ ಕಾರಣ ಉಸಿರು ಚೆಲ್ಲಿದ ಯುವಕ

ಸಮಗ್ರ ನ್ಯೂಸ್: ತೀವ್ರ ಜ್ವರದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಗುರುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಯುವಕನನ್ನು ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಎಂದು ಗುರುತಿಸಲಾಗಿದೆ. ಯುವಕ ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ವಾರದ ಹಿಂದೆ ಜ್ವರ ಬಂದಿತ್ತು. ಈ ಹಿನ್ನಲೆ ಚಿಕಿತ್ಸೆ ಪಡೆಯುತ್ತಿದ್ದ ಆತನಿಗೆ ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ

ಬಂಟ್ವಾಳ: ತೀವ್ರ ಜ್ವರದ ಕಾರಣ ಉಸಿರು ಚೆಲ್ಲಿದ ಯುವಕ Read More »

ಮಂಗಳೂರು-ಮಡಂಗಾವ್‌ ವಂದೇ ಭಾರತ್‌ ರೈಲು/ ಇನ್ಮುಂದೆ ಉಡುಪಿ ಮತ್ತು ಕಾರವಾರ ನಿಲ್ದಾಣದಲ್ಲಿ ನಿಲುಗಡೆ

ಸಮಗ್ರ ನ್ಯೂಸ್‌: ಅತ್ಯಂತ ವೇಗದ ರೈಲು ಎಂದು ಕರೆಯಲ್ಪಡುವ ವಂದೇ ಭಾರತ್ ರೈಲು ಪ್ರಸ್ತುತ ದೇಶದ ಹಲವು ಭಾಗಗಳಲ್ಲಿ ಸಂಚರಿಸುತ್ತಿದ್ದು, ವೇಗವನ್ನು ಹೆಚ್ಚಿಸಲು ಈ ರೈಲುಗಳು ಕಡಿಮೆ ನಿಲ್ದಾಣಗಳನ್ನು ಹೊಂದಿದ್ದವು.ಆದರೆ, ಪ್ರಯಾಣಿಕರ ಅನುಕೂಲವನ್ನು ಪರಿಗಣಿಸಿ ಕೆಲವು ಪ್ರಮುಖ ನಿಲ್ದಾಣಗಳಲ್ಲಿ ವಂದೇ ಭಾರತ್ ರೈಲುಗಳನ್ನು ನಿಲುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಇದೀಗ ಕೊಂಕಣ ರೈಲ್ವೇ ನಿಗಮದ ಅಧಿಕಾರಿಗಳು ಬೇಡಿಕೆಗೆ ಸ್ಪಂದಿಸಿದ್ದು, ಮಂಗಳೂರು ಸೆಂಟ್ರಲ್ ಸ್ಟೇಷನ್ ನಿಂದ ಮಡಂಗಾವ್ ವರೆಗೆ ವಾರದಲ್ಲಿ ಆರು ದಿನ ಸಂಚರಿಸುವ ವಂದೇ ಭಾರತ್ ರೈಲನ್ನು

ಮಂಗಳೂರು-ಮಡಂಗಾವ್‌ ವಂದೇ ಭಾರತ್‌ ರೈಲು/ ಇನ್ಮುಂದೆ ಉಡುಪಿ ಮತ್ತು ಕಾರವಾರ ನಿಲ್ದಾಣದಲ್ಲಿ ನಿಲುಗಡೆ Read More »

ಮಂಗಳೂರು: ತಡೆಗೋಡೆಗಳು ಬಿದ್ದು ಜೀವಹಾನಿಯಾಗುತ್ತಿದ್ದರೂ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ವಿಫಲ: ಎಸ್‌ಡಿಪಿಐ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ತಡೆಗೋಡೆಗಳು ಕುಸಿದು ಬಿದ್ದು ಜೀವಹಾನಿಗಳು ಸಂಭವಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಂಪೂರ್ಣ ವಿಫಲವಾಗಿದೆ‌‌ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಮಂಗಳೂರಿನ ಉಳ್ಳಾಲ ತಾಲೂಕಿನ ಕುತ್ತಾರು ಸಮೀಪ ತಡೆಗೋಡೆ ಬಿದ್ದು ಒಂದೇ ಕುಟುಂಬದ ನಾಲ್ಕು ಸದಸ್ಯರು ಮೃತಪಟ್ಟ ಬಳಿಕವೂ ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ವಿಫಲವಾಗಿದೆ. ಅದರ ನಂತರ

ಮಂಗಳೂರು: ತಡೆಗೋಡೆಗಳು ಬಿದ್ದು ಜೀವಹಾನಿಯಾಗುತ್ತಿದ್ದರೂ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ವಿಫಲ: ಎಸ್‌ಡಿಪಿಐ Read More »

ಬೈಕ್ ಸೈಡಿಗಿರಿಸಿ ಪೊದೆಯೊಳಗೆ ನುಸುಳಿದ ಯುವಜೋಡಿ| ಸ್ಥಳೀಯರು ಬಂದಾಗ ವಸ್ತುಗಳನ್ನು ಅಲ್ಲಲ್ಲೇ ಬಿಟ್ಟು ಎಸ್ಕೇಪ್

ಸಮಗ್ರ: ಯುವ‌ ಜೋಡಿಯೊಂದು ಮೈ ಬಿಸಿ ಮಾಡಿಕೊಳ್ಳೋದಕ್ಕೆ ಹೋಗಿ ಇನ್ನೇನು ಸಾರ್ವಜನಿಕರ ಕೈಗೆ ಸಿಕ್ಕಿ ಬೀಳುತ್ತೇವೆ ಎಂಬ ಸಮಯದಲ್ಲಿ ಎಸ್ಕೇಪ್ ಆದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೈಕ್ ಸವಾರನೊಬ್ಬ ಅಪ್ರಾಪ್ತ ಬಾಲಕಿಯನ್ನು ರಕ್ಷಿತಾರಣ್ಯಕ್ಕೆ ಕರೆದುಕೊಂಡು ಬಂದು ಮಿಲನ ಕ್ರಿಯೆ ನಡೆಸಲು ಮುಂದಾಗಿದ್ದಾನೆ. ಈ ಜೋಡಿ ತಮಗೆ ಬೇಕಾದ ಸಕಲ ವ್ಯವಸ್ಥೆಯನ್ನೂ ಮಾಡಿಕೊಂಡೇ ಬಂದಿದೆ. ಕಾಂಡೋಮ್, ಎಣ್ಣೆ, ಪಿಲ್ಸ್ ಯಾವುದೆಲ್ಲಾ ಬೇಕೋ ಅದನ್ನೆಲ್ಲಾ ಹಿಡಿದುಕೊಂಡು ಬಂದು ಏಕಾಂತದಲ್ಲಿ ಮೈಮರೆಯೋದಕ್ಕೆ ಸಿದ್ಧರಾಗಿದ್ದಾರೆ. ಕಾಡಿನೊಳಕ್ಕೆ ಹೊಕ್ಕ ಜೋಡಿ

ಬೈಕ್ ಸೈಡಿಗಿರಿಸಿ ಪೊದೆಯೊಳಗೆ ನುಸುಳಿದ ಯುವಜೋಡಿ| ಸ್ಥಳೀಯರು ಬಂದಾಗ ವಸ್ತುಗಳನ್ನು ಅಲ್ಲಲ್ಲೇ ಬಿಟ್ಟು ಎಸ್ಕೇಪ್ Read More »

ಮಂಗಳೂರು ಜೈಲಿನ ಮೇಲೆ ಪೋಲಿಸರ ದಾಳಿ: ಗಾಂಜಾ, ಡ್ರಗ್ಸ್, ಮೊಬೈಲ್ ಪತ್ತೆ

ಸಮಗ್ರ ನ್ಯೂಸ್: ಬೆಳ್ಳಂ ಬೆಳಗ್ಗೆ ಪೊಲೀಸರು ಮಂಗಳೂರು ಜೈಲಿನ ಮೇಲೆ ದಾಳಿ ಮಾಡಿದ್ದು, ಕಾರ್ಯಾಚರಣೆ ವೇಳೆ ಗಾಂಜಾ ಮತ್ತು ಡ್ರಗ್ಸ್  ಪತ್ತೆಯಾಗಿದೆ. ಜೊತೆಗೆ ಮೊಬೈಲ್ ಫೋನ್ಗಳು, ಡಿವೈಸ್ಗಳು ಪತ್ತೆಯಾಗಿವೆ. ಏಕಾಏಕಿ ದಾಳಿ ಮಾಡಿದ್ದರಿಂದ ನಡೆಯುತ್ತಿದ್ದ ಅಕ್ರಮ ಬಯಲಾಗಿದೆ. ಇಪ್ಪತ್ತೈದು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳು ಸಿಕ್ಕಿದ್ದು ಪೊಲೀಸರು ಆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಜೈಲು ಖೈದಿಗಳ

ಮಂಗಳೂರು ಜೈಲಿನ ಮೇಲೆ ಪೋಲಿಸರ ದಾಳಿ: ಗಾಂಜಾ, ಡ್ರಗ್ಸ್, ಮೊಬೈಲ್ ಪತ್ತೆ Read More »

110 ಕೆವಿ ಕಾಮಗಾರಿ ಸ್ಥಿತಿ ಹೇಗಿದೆ ತಿಳಿಸಿ| ಸದನದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ

ಸಮಗ್ರ ನ್ಯೂಸ್: ಸುಳ್ಯದಲ್ಲಿನ ವಿದ್ಯುತ್‌ ಸಮಸ್ಯೆ ಹಾಗೂ 110 ಕೆವಿ ವಿದ್ಯುತ್‌ ಸಬ್‌ಸ್ಟೇಷನ್‌ ಕಾಮಗಾರಿಯ ಬಗ್ಗೆ ವಿಧಾನಸಭೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ ಎತ್ತಿದರು. ಕಾಮಗಾರಿಯು ಯಾವ ಹಂತದಲ್ಲಿದೆ, ನಿರ್ಮಾಣ ಯಾವಾಗ ಪೂರ್ತಿಗೊಳ್ಳಲಿದೆ ಎಂದು ಶಾಸಕರು ಪ್ರಶ್ನಿಸಿದ್ದರು. ಸುಳ್ಯ 110ಕೆವಿ ಸಾಮರ್ಥ್ಯದ ವಿದ್ಯುತ್‌ ಉಪಕೇಂದ್ರ ಹಾಗೂ ಪ್ರಸರಣ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ. ವಿದ್ಯುತ್‌ ಉಪಕೇಂದ್ರದ ನಿಯಂತ್ರಣ ಕೊಠಡಿ ನಿರ್ಮಾಣ ಕಾರ್ಯ ಹಾಗೂ ಉಪಕೇಂದ್ರದ ಆವರಣ ಗೋಡೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಪ್ರಸರಣ ಮಾರ್ಗದ ಒಟ್ಟು 89

110 ಕೆವಿ ಕಾಮಗಾರಿ ಸ್ಥಿತಿ ಹೇಗಿದೆ ತಿಳಿಸಿ| ಸದನದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ Read More »

ಮಂಗಳೂರು: ಕಾಂಪೌಂಡ್ ಕುಸಿದು ಬಾಲಕ ಸಾವು

ಸಮಗ್ರ ನ್ಯೂಸ್: ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು, ಮನೆಯಲ್ಲಿದ್ದ ಬಾಲಕ ಮೃತಪಟ್ಟ ಘಟನೆ ಮಂಗಳೂರು ಹೊರ ವಲಯದ ಜೋಕಟ್ಟೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತರು. ತಡೆ ಗೋಡೆ ಕುಸಿದು ಬಿದ್ದ ಮನೆಗೆ ಬಾಲಕ ಶೈಲೇಶ್ ಅತಿಥಿಯಾಗಿ ಬಂದಿದ್ದ ಎಂದು ತಿಳಿದು ಬಂದಿದೆ.

ಮಂಗಳೂರು: ಕಾಂಪೌಂಡ್ ಕುಸಿದು ಬಾಲಕ ಸಾವು Read More »

ಉಡುಪಿ ಮಳೆ ಹಿನ್ನೆಲೆ ಕಾರ್ಕಳ, ಹೆಬ್ರಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜು.25) ರಜೆ

ಸಮಗ್ರ ನ್ಯೂಸ್: ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.25ರಂದು ರಜೆ ಸಾರಲಾಗಿದೆ. ಕಾರ್ಕಳ ತಹಶೀಲ್ದಾರ್ ನರಸಪ್ಪ ಅವರು ನಿನ್ನೆ ರಾತ್ರಿ ರಜೆ ಘೋಷಣೆ ಮಾಡಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಈಗಾಗಲೇ ಇದನ್ನು ಎಲ್ಲ ಮುಖ್ಯಶಿಕ್ಷಕರಿಗೆ ತಿಳಿಸಿದ್ದಾರೆ.ಕೆಲದಿನ ತುಸು ಬಿಡುವು ನೀಡಿದ್ದ ಮಳೆ ನಿನ್ನೆಯಿಂದ ಮತ್ತೆ ಅಬ್ಬರಿಸಲು ತೊಡಗಿದೆ. ಮಳೆಯ ಜೊತೆಗೆ ಭಾರಿ ವೇಗದಲ್ಲಿ ಗಾಳಿಯೂ ಬೀಸುತ್ತಿರುವುದರಿಂದ ಮಕ್ಕಳ ಸುರಕ್ಷೆಯ ದೃಷ್ಟಿಯಿಂದ

ಉಡುಪಿ ಮಳೆ ಹಿನ್ನೆಲೆ ಕಾರ್ಕಳ, ಹೆಬ್ರಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜು.25) ರಜೆ Read More »