ಕರಾವಳಿ

ಸುಳ್ಯ: ಅರೆಭಾಷೆ ಅಕಾಡೆಮಿ, ಲಯನ್ಸ್ ಕ್ಲಬ್ ವತಿಯಿಂದ ‘ಆಟಿ ವೈಭವ’ ಕಾರ್ಯಕ್ರಮ

ಸಮಗ್ರ ನ್ಯೂಸ್: ಕರ್ನಾಟಕ ಸರಕಾರ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಮಡಿಕೇರಿ ಹಾಗೂ ಲಯನ್ಸ್ ಕ್ಲಬ್ ಆಟಿ ಸಂಸ್ಕೃತಿ ನೆಂಪಿಸುವ ಆಟಿ ವೈಭವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಆ.15 ರಂದು ಸುಳ್ಯದ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪಬೆಳಗಿಸುವ ಮೂಲಕ ಲಯನ್ ಚಂದ್ರಶೇಖರ ಕೆ. ಎಸ್ ಉದ್ಘಾಟಿಸಿದರು.ಲಯನ್ಸ್ ಕ್ಲಬ್ ನ ಅಧ್ಯಕ್ಷ ರಾಮಕೃಷ್ಣ ರೈ ಅಧ್ಯಕ್ಷತೆಯನ್ನು ವಹಿಸಿದ್ದರು.ವೇದಿಕೆಯಲ್ಲಿ ಲಯನ್ ಗಂಗಾಧರ್ ರೈ, ವಲಯಧ್ಯಕ್ಷರು ಲಯನ್ ರೂಪಶ್ರೀ ಜೆ ರೈ, ಲಯನ್ ರಮೇಶ್ ಶೆಟ್ಟಿ […]

ಸುಳ್ಯ: ಅರೆಭಾಷೆ ಅಕಾಡೆಮಿ, ಲಯನ್ಸ್ ಕ್ಲಬ್ ವತಿಯಿಂದ ‘ಆಟಿ ವೈಭವ’ ಕಾರ್ಯಕ್ರಮ Read More »

ಪುತ್ತೂರು: ಭಿನ್ನಕೋಮಿನ ಜೋಡಿಗೆ ರೂಂ ನೀಡಿದ ಲಾಡ್ಜ್ ಗೆ ಪೊಲೀಸ್ ದಾಳಿ| ದಾಳಿ ವೇಳೆ ಗೊತ್ತಾದ ಅಸಲಿ ಸತ್ಯ ಏನು?

ಸಮಗ್ರ ನ್ಯೂಸ್: ಹಿಂದೂ ಯುವತಿ- ಮುಸ್ಲಿಂ ಯುವಕ ಜೋಡಿಗೆ ರೂಂ ನೀಡಿದ ಲಾಡ್ಜ್ ಒಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನೆಹರು ನಗರದಲ್ಲಿ ನಡೆದಿದೆ. ಲಾಡ್ಜ್‌ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ನೆಹರು ನಗರದಲ್ಲಿರುವ ಲಾಡ್ಜ್‌ಗೆ ಪೊಲೀಸರು ದಾಳಿ ನಡೆಸಿದ್ದು, ರಿಸೆಪ್ಶನಿಸ್ಟ್ ಹಾಗೂ ಲೆಡ್ಜರ್ ಪುಸ್ತಕವನ್ನು ವಶಕ್ಕೆ ಪಡೆದಿದ್ದಾರೆ. ಯುವಕ- ಯುವತಿಯಿಂದ ಯಾವುದೇ ದಾಖಲೆಗಳನ್ನು ತೆಗೆದುಕೊಳ್ಳದೆ ರೂಮ್ ನೀಡಲಾಗಿದೆ ಎನ್ನುವ ಆರೋಪದ ಮೇರೆಗೆ ದಾಳಿ ನಡೆಸಲಾಗಿದೆ ಎಂದು

ಪುತ್ತೂರು: ಭಿನ್ನಕೋಮಿನ ಜೋಡಿಗೆ ರೂಂ ನೀಡಿದ ಲಾಡ್ಜ್ ಗೆ ಪೊಲೀಸ್ ದಾಳಿ| ದಾಳಿ ವೇಳೆ ಗೊತ್ತಾದ ಅಸಲಿ ಸತ್ಯ ಏನು? Read More »

ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ನೂತನ ರಕ್ಷಕ ಶಿಕ್ಷಕ ಸಂಘ ರಚನೆ

ಸಮಗ್ರ ನ್ಯೂಸ್: ಪುತ್ತೂರು ಕೃಷ್ಣನಗರದ ಬನ್ನೂರಿನ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘವನ್ನು ಆ. 10ರಂದು ರಚಿಸಲಾಯಿತು. ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷರಾಗಿ ಸೌಮ್ಯಶ್ರೀ ಶಿವಪ್ರಸಾದ್ ಹೆಗ್ಡೆ, ಉಪಾಧ್ಯಕ್ಷರಾಗಿ ಕಾವ್ಯ ಕೆ., ಕಾರ್ಯದರ್ಶಿಯಾಗಿ ಶಾಲಾ ಪ್ರಾಂಶುಪಾಲೆ ಸವಿತಾ ರವರು ಆಯ್ಕೆಯಾದರು. ಹಾಗೂ ಸದಸ್ಯರಾಗಿ ಯೋಗೀಶ್, ಸುಮಲತಾ, ಅಶ್ವಿನಿ, ರಾಧಿಕಾ ಹರೀಶ್ ಕೆ. ತೆಂಕಪಾಡಿ ಇವರು ಆಯ್ಕೆಯಾದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅವರು

ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ನೂತನ ರಕ್ಷಕ ಶಿಕ್ಷಕ ಸಂಘ ರಚನೆ Read More »

ರೈಲು‌‌ ಹಳಿಗಳ ಮೇಲೆ ಗುಡ್ಡ ಕುಸಿತದ ಮಣ್ಣು ತೆರವು| ಮಂಗಳೂರು – ಸಕಲೇಶಪುರ ರೈಲು ಸಂಚಾರ ಪುನರಾರಂಭ

ಸಮಗ್ರ ನ್ಯೂಸ್: ಸಕಲೇಶಪುರ ಟು ಬಾಳ್ಳುಪೇಟೆ ಮಾರ್ಗಮಧ್ಯದ ರೈಲು ಹಳಿಗಳ ಮೇಲೆ ಭೂ ಕುಸಿತ ಉಂಟಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು. ಭೂ ಕುಸಿತದ ಮಣ್ಣನ್ನು ತೆರವುಗೊಳಿಸಲಾಗಿದ್ದು, ಸಂಚಾರ ಸುರಕ್ಷತೆಯ ಪರೀಕ್ಷೆಯನ್ನು ನಡೆಸಲಾಗಿದೆ. ಹೀಗಾಗಿ ನಾಳೆ(ಆ.14)ರಿಂದ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಪುನರಾರಂಭಗೊಳಿಸಲಾಗುತ್ತಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಮಾಹಿತಿ ನೀಡಿದ್ದು, ಸಕಲೇಶಪುರ-ಬಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತಕ್ಕೆ ಸಂಬಂಧಿಸಿದಂತೆ, ಹಳಿಯನ್ನು ಪುನಃಸ್ಥಾಪಿಸಲಾಗಿದೆ ಮತ್ತು ರೈಲು ಕಾರ್ಯಾಚರಣೆಗೆ ಯೋಗ್ಯವಾಗಿದೆ ಎಂದು ಪ್ರಮಾಣೀಕರಿಸಲಾಗಿದೆ ಎಂದು ತಿಳಿಸಿದೆ. ದಿನಾಂಕ 11.08.2024ರ ನೈರುತ್ಯ

ರೈಲು‌‌ ಹಳಿಗಳ ಮೇಲೆ ಗುಡ್ಡ ಕುಸಿತದ ಮಣ್ಣು ತೆರವು| ಮಂಗಳೂರು – ಸಕಲೇಶಪುರ ರೈಲು ಸಂಚಾರ ಪುನರಾರಂಭ Read More »

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ಉಪನ್ಯಾಸಕ ವಿನ್ಯಾಸ್ ಹೊಸೋಳಿಕೆ ಅವರಿಗೆ ಮಂಗಳೂರು ವಿ.ವಿ ಯಿಂದ ಪಿ ಎಚ್ ಡಿ ಪದವಿ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ವಾಣಿಜ್ಯಶಾಸ್ತ್ರ ಮತ್ತು ಉದ್ಯಮ ಆಡಳಿತ ವಿಭಾಗದ ಉಪನ್ಯಾಸಕ ವಿನ್ಯಾಸ್ ಹೊಸೋಳಿಕೆ ಅವರು ಮಂಡಿಸಿದ “ಮಾರ್ಕೆಟಿಂಗ್ ಸ್ಟ್ರಾಟಜಿಸ್ ಆಫ್ ಸೋಷಿಯಲ್ ಎಂಟರ್ಪ್ರೈಸಸ್ – ಎ ಸ್ಟಡಿ ವಿಥ್ ಸೆಲೆಕ್ಟ್ ಸೋಶಿಯಲ್ ಎಂಟರ್ಪ್ರೈಸಸ್” ಎಂಬ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿಯನ್ನು ನೀಡಿದೆ. ಅವರು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಂಶುಪಾಲರು ಆದ ಪ್ರೋ. ಡಾ. ಉದಯ್ ಕುಮಾರ್ ಇರ್ವತ್ತೂರು ಇವರ ಮಾರ್ಗದರ್ಶನದಲ್ಲಿ ಮಂಡಿಸಿದ

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ಉಪನ್ಯಾಸಕ ವಿನ್ಯಾಸ್ ಹೊಸೋಳಿಕೆ ಅವರಿಗೆ ಮಂಗಳೂರು ವಿ.ವಿ ಯಿಂದ ಪಿ ಎಚ್ ಡಿ ಪದವಿ Read More »

ಸುಬ್ರಹ್ಮಣ್ಯ: ಪರಿಸರ ರಕ್ಷಣೆಗಾಗಿ‌ ಯುವಕರ ಮಾದರಿ‌ ಕಾರ್ಯ| ಕಮಿಲದ ಬಾಂಧವ್ಯ ಗೆಳೆಯರ ಬಳಗದಿಂದ ರಸ್ತೆ ಬದಿ ಸ್ವಚ್ಛತೆ| ಕಸ ಹಾಕುವವರ ಪತ್ತೆಗೆ ಸಿಸಿ ಕ್ಯಾಮೆರಾ ಅಳವಡಿಕೆ

ಸಮಗ್ರ ನ್ಯೂಸ್: ಸುಳ್ಯದ ಗುತ್ತಿಗಾರು ಗ್ರಾಮದ ಕಮಿಲದ ಬಾಂಧವ್ಯ ಗೆಳೆಯರ ಬಳಗವು ಭಾನುವಾರ ಬಳ್ಪ-ಕಮಿಲ ರಸ್ತೆಯ ಸುಮಾರು 2 ಕಿಮೀ ಕಾಡಿನ ನಡುವೆ ಹಾದು ಹೋಗುವ ರಸ್ತೆಯ ಇಕ್ಕೆಲೆಗಳಲ್ಲಿ ಸ್ವಚ್ಛತೆಯನ್ನು ಮಾಡಿದರು. ಕಾಡು-ಪರಿಸರ ಸಂರಕ್ಷಣೆ, ಸ್ವಚ್ಛತೆಯ ಉದ್ದೇಶದಿಂದ ಕೆಲಸಕ್ಕೆ ಇಳಿದ ಯುವಕರಿಗೆ ಕಾಡಿನ ದಾರಿಯಲ್ಲಿ ದೊರೆತದ್ದು 2 ಲೋಡ್‌ ಪಿಕ್‌ಅಪ್‌ನಲ್ಲಿ ತುಂಬುವಷ್ಟು ತ್ಯಾಜ್ಯ. ಇನ್ನೂ ಇದೆ. ಇದು ಒಂದು ದಿನ ಕೆಲಸ. ಕಮಿಲದ ಬಾಂಧವ್ಯ ಗೆಳೆಯರ ಬಳಗವು ಅರಣ್ಯದ ಕಾಳಜಿಯ ಉದ್ದೇಶದೊಂದಿಗೆ ಆರಂಭದಲ್ಲಿ ಕಾಡಿನ ದಾರಿಯಲ್ಲಿ ಸ್ವಚ್ಛತೆ

ಸುಬ್ರಹ್ಮಣ್ಯ: ಪರಿಸರ ರಕ್ಷಣೆಗಾಗಿ‌ ಯುವಕರ ಮಾದರಿ‌ ಕಾರ್ಯ| ಕಮಿಲದ ಬಾಂಧವ್ಯ ಗೆಳೆಯರ ಬಳಗದಿಂದ ರಸ್ತೆ ಬದಿ ಸ್ವಚ್ಛತೆ| ಕಸ ಹಾಕುವವರ ಪತ್ತೆಗೆ ಸಿಸಿ ಕ್ಯಾಮೆರಾ ಅಳವಡಿಕೆ Read More »

ಅಂಗನವಾಡಿಯಲ್ಲಿ ವಿತರಿಸಿದ‌ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ!!

ಸಮಗ್ರ ನ್ಯೂಸ್: ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ವಿತರಿಸಲಾದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂಬ ಆರೋಪ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಿಂದ ವರದಿಯಾಗಿದೆ. ಗರ್ಭಿಣಿಯರು, ಬಾಣಂತಿಯರಿಗೆ ಅಂಗನವಾಡಿ ಕೇಂದ್ರದಲ್ಲಿ ಈ ಪೊಟ್ಟಣಗಳನ್ನು ವಿತರಿಸಲಾಗಿತ್ತು. ಗರುಡಾಚಾರ್ಲಹಳ್ಳಿ ಗ್ರಾಮದ ನಿವಾಸಿ ರತ್ನಮ್ಮ ಎಂಬುವರಿಗೆ ನೀಡಿದ ಎರಡು ಬೆಲ್ಲದ ಪೊಟ್ಟಣಗಳ ಪೈಕಿ ಒಂದರಲ್ಲಿ ಈ ಸತ್ತ ಇಲಿ ಕಂಡುಬಂದಿವೆ. ಕೂಡಲೇ ಅವರು ಪೊಟ್ಟಣಗಳನ್ನು ಅಂಗನವಾಡಿ ಕಾರ್ಯಕರ್ತೆ ಗಮನಕ್ಕೆ ತಂದಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಅಂಗನವಾಡಿಗಳಿಗೆ ಪೂರೈಸುವ

ಅಂಗನವಾಡಿಯಲ್ಲಿ ವಿತರಿಸಿದ‌ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ!! Read More »

ವಿದ್ಯಾರ್ಥಿನಿ, ಶಿಕ್ಷಕಿ ಹಾಗೂ ಗ್ರಾ.ಪಂ ಅಧ್ಯಕ್ಷೆಗೆ ಸ್ವಾತಂತ್ರ್ಯೋತ್ಸವದ ಆಮಂತ್ರಣ| ಸುಳ್ಯದ ಅಚ್ರಪ್ಪಾಡಿ ಶಾಲೆ ಮಾಜಿ ಶಿಕ್ಷಕಿ ಶ್ವೇತಾ ವೇಣುಗೋಪಾಲ್ ಸೇರಿ ಜಿಲ್ಲೆಯ ಮೂವರಿಗೆ ಅವಕಾಶ

ಸಮಗ್ರ ನ್ಯೂಸ್: ಹೊಸದಿಲ್ಲಿಯಲ್ಲಿ ನಡೆಯುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ನಾಲ್ಕು ಪಿಎಂಶ್ರೀ ಶಾಲೆಗಳ ನಾಲ್ವರು ವಿದ್ಯಾರ್ಥಿಗಳು ಹಾಗೂ ನಾಲ್ವರು ಶಿಕ್ಷಕರು ವಿಶೇಷ ಅವಕಾಶ ಪಡೆದುಕೊಂಡಿದ್ದು, ಇದರಲ್ಲಿ ಮೈಸೂರು ಶೈಕ್ಷಣಿಕ ವಿಭಾಗದಿಂದ ದ.ಕ. ಜಿಲ್ಲೆಯ ಓರ್ವ ವಿದ್ಯಾರ್ಥಿನಿ, ಶಿಕ್ಷಕಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷೆಯೊಬ್ಬರಿಗೆ ಭಾಗವಹಿಸಲು ವಿಶೇಷ ಆಮಂತ್ರಣ ದೊರಕಿದೆ. ದ.ಕ. ಜಿಲ್ಲೆಯ ಮಂಗಳೂರಿನ ಶಕ್ತಿನಗರ ನಾಲ್ಯಪದವು ಕುವೆಂಪು ಶತಮಾನೋತ್ಸವ ಉನ್ನತೀಕರಿಸಿದ ಮಾದರಿ ಸ.ಹಿ.ಪ್ರಾ. ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಪೂರ್ವಿ ಯು. ಶೆಟ್ಟಿ ಹಾಗೂ

ವಿದ್ಯಾರ್ಥಿನಿ, ಶಿಕ್ಷಕಿ ಹಾಗೂ ಗ್ರಾ.ಪಂ ಅಧ್ಯಕ್ಷೆಗೆ ಸ್ವಾತಂತ್ರ್ಯೋತ್ಸವದ ಆಮಂತ್ರಣ| ಸುಳ್ಯದ ಅಚ್ರಪ್ಪಾಡಿ ಶಾಲೆ ಮಾಜಿ ಶಿಕ್ಷಕಿ ಶ್ವೇತಾ ವೇಣುಗೋಪಾಲ್ ಸೇರಿ ಜಿಲ್ಲೆಯ ಮೂವರಿಗೆ ಅವಕಾಶ Read More »

ಕಡಬ: ಸ್ಕೂಟರ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಪಾದಚಾರಿ ಸಾವು

ಸಮಗ್ರ ನ್ಯೂಸ್: ರಸ್ತೆದಾಟಲು ನಿಂತಿದ್ದ ವೃದ್ದರೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕೋಡಿಂಬಾಳದಿಂದ ವರದಿಯಾಗಿದೆ. ಕೋಡಿಂಬಾಳ ಗ್ರಾಮದ ಶ್ಯಾಮಿಯಾನ ಅಂಗಡಿಯೊಂದರ ಬಳಿ ಸ್ಕೂಟರ್ ಸವಾರ ಸ್ಕೂಟರ್ ಸವಾರ ಮಹಮ್ಮದ್ ನೌಫಾಲ್ ಎಂಬಾತ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿ ರಸ್ತೆಯ ಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಕೋಡಿಂಬಾಳದ ಹುಕ್ರ (ವ 75 ) ಎಂಬವರಿಗೆ ಡಿಕ್ಕಿ ಹೊಡೆದಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ . ಅಪಘಾತದ ಪರಿಣಾಮ

ಕಡಬ: ಸ್ಕೂಟರ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಪಾದಚಾರಿ ಸಾವು Read More »

ಉಳ್ಳಾಲ: ರೌಡಿ ಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಅಟ್ಟಾಡಿಸಿ ಕೊಲೆ| ತಾಯಿ ಜೊತೆ ಇದ್ದಾಗಲೇ ಹಂತಕರ ಮಚ್ಚಿಗೆ ಬಲಿಯಾದ ಸಮೀರ್

ಸಮಗ್ರ ನ್ಯೂಸ್: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ರಾ.ಹೆ.66ರ ಪಕ್ಕದಲ್ಲಿರುವ ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ಮಧ್ಯರಾತ್ರಿ ವೇಳೆ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ.

ಉಳ್ಳಾಲ: ರೌಡಿ ಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಅಟ್ಟಾಡಿಸಿ ಕೊಲೆ| ತಾಯಿ ಜೊತೆ ಇದ್ದಾಗಲೇ ಹಂತಕರ ಮಚ್ಚಿಗೆ ಬಲಿಯಾದ ಸಮೀರ್ Read More »