ಕರಾವಳಿ

ನಾಳೆ ದ.ಕ ಜಿಲ್ಲೆಯಲ್ಲಿ ಬಂದ್ ಇಲ್ಲ – ಸಂಘಟನೆಗಳ ಸ್ಪಷ್ಟನೆ

ಸಮಗ್ರ ನ್ಯೂಸ್: ಜಾಲತಾಣಗಳಲ್ಲಿ ದ.ಕ ಜಿಲ್ಲೆಯಾದ್ಯಂತ ‌ಬಂದ್ ಗೆ‌ ಕರೆ ಕೊಟ್ಟಿರುವ ಸುದ್ದಿಯೊಂದು ಹರಿದಾಡುತ್ತಿದ್ದು, ನಾಳೆ ಜಿಲ್ಲೆಯಲ್ಲಿ ಯಾವುದೇ ಬಂದ್ ಇರುವುದಿಲ್ಲ ಎಂದು ಭಜರಂಗದಳ ಮುಖಂಡ ಶರಣ್ ಪಂಪ್ವೆಲ್ ತಿಳಿಸಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಅವರು ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶ ಸುಳ್ಳಾಗಿದ್ದು ಜನತೆ ಕಿವಿಗೊಡದಂತೆ ಮನವಿ‌ ಮಾಡಿದ್ದಾರೆ.

ನಾಳೆ ದ.ಕ ಜಿಲ್ಲೆಯಲ್ಲಿ ಬಂದ್ ಇಲ್ಲ – ಸಂಘಟನೆಗಳ ಸ್ಪಷ್ಟನೆ Read More »

“ಎಂಕ್ ಗೊತ್ತುಜ್ಜಿ, ರಾಜ್ಯಾಧ್ಯಕ್ಷೆರೆನ್ ಕೇನ್ಲೆ” | ಮೀನುಗಾರಿಕೆ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿದ್ದು ಸಚಿವ ಅಂಗಾರರಿಗೆ ಗೊತ್ತೇ ಇಲ್ವಂತೆ! – ಆಡಿಯೋ ವೈರಲ್

ಸಮಗ್ರ ನ್ಯೂಸ್: ಕಳೆದ ಎರಡು ವಾರಗಳ ಹಿಂದೆ, 47 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರಾಜ್ಯ ಸರ್ಕಾರ ವಾಪಸ್ ಮಾಡಿದ್ದು, ಇದೀಗ 20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದೆ. ಇದರಲ್ಲಿ ಈಗ ಮೀನುಗಾರಿಕೆ ಅಭಿವೃದ್ದಿ ನಿಗಮದ ಅಧ್ಯಕ್ಷರ ಆಯ್ಕೆ ಸ್ವತಃ ಬಂದರು ಮತ್ತು ಮೀನುಗಾರಿಕಾ ಸಚಿವರಿಗೆ ಗೊತ್ತೇ ಇಲ್ವಂತೆ. ಹೀಗೆಂದು ಸ್ವತಃ ಸಚಿವ ಅಂಗಾರರು‌ ಹೇಳಿದ್ದಾರೆನ್ನಲಾದ ಆಡಿಯೋ ವೈರಲ್ ಆಗ್ತಿದೆ. ಮೀನುಗಾರಿಕಾ ಸಚಿವ ಅಂಗಾರರ ಬಳಿ ಮೊಗವೀರ ಮುಖಂಡ , ಬಿಜೆಪಿ

“ಎಂಕ್ ಗೊತ್ತುಜ್ಜಿ, ರಾಜ್ಯಾಧ್ಯಕ್ಷೆರೆನ್ ಕೇನ್ಲೆ” | ಮೀನುಗಾರಿಕೆ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿದ್ದು ಸಚಿವ ಅಂಗಾರರಿಗೆ ಗೊತ್ತೇ ಇಲ್ವಂತೆ! – ಆಡಿಯೋ ವೈರಲ್ Read More »

ಶಂಭೂರು; ಸರಕಾರಿ ಪ್ರೌಢಶಾಲೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ಸಮಗ್ರ ನ್ಯೂಸ್ : ದೇಶದ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಮನಸ್ಸಿದ್ದರೂ ಅನೇಕರಿಗೆ ಆ ಅವಕಾಶ ಸಿಗುವುದಿಲ್ಲ. ಅವಕಾಶ ಸಿಕ್ಕಿದರೆ ಅದು ಒಂದು ಪುಣ್ಯದ ಕೆಲಸ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವವರ ಹೆಸರು ಚಿರಸ್ಥಾಯಿಯಾಗಿ ಉಳಿಯುವುದು ಅಲ್ಲದೆ ಭಾರತೀಯರು ಸೈನಿಕರಿಗೆ ಪೂರ್ಣ ಪ್ರಮಾಣದ ನೈತಿಕ ಬೆಂಬಲ ನೀಡುವುದು ಅತ್ಯಂತ ಸಂತಸದ ಸಂಗತಿ ಎಂದು ನಿವೃತ್ತ Honorary Captain S ಕೇಶವಾಚಾರಿ ಹೇಳಿದರು. ಅವರು ಶಂಭೂರಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಯ ಅಳುಪ ಸಮಾಜ ವಿಜ್ಞಾನ

ಶಂಭೂರು; ಸರಕಾರಿ ಪ್ರೌಢಶಾಲೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ Read More »

ಸುಳ್ಯ: ಅರಮನೆಗಯಕ್ಕೆ ಅಂಬೇಡ್ಕರ್ ರಕ್ಷಣಾ ವೇದಿಕೆ ಭೇಟಿ| ಊರವರಿಂದ ಮನವಿ ಸಂಗ್ರಹ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮರ್ಕಂಜ ಮತ್ತು ಅರಂತೋಡು ಗ್ರಾಮಕ್ಕೆ ಸಂಬಂಧಪಟ್ಟ ಅರಮನೆಗಯ ಎಂಬಲ್ಲಿ ಮುರಿದು ಹೋಗಿರುವ ತೂಗು ಸೇತುವೆ ಸ್ಥಳಕ್ಕೆ ಅಂಬೇಡ್ಕರ್ ರಕ್ಷಣಾ ವೇದಿಕೆ ಭೇಟಿ ನೀಡಿದ್ದು,‌ ಪರಿಶೀಲನೆ ನಡೆಸಿದೆ. ಈ ವೇಳೆ ಸುಮಾರು 30 ವರ್ಷಗಳಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಯವರಿಗೆ ಸೇತುವೆ ನಿರ್ಮಾಣ ಮಾಡಿ ಕೊಡಿ ಎಂದು ಎಷ್ಟು ಹೇಳಿದರೂ ಮಾಡಿಕೊಟ್ಟಿಲ್ಲ ಆದಕಾರಣ ಅಂಬೇಡ್ಕರ್ ರಕ್ಷಣಾ ವೇದಿಕೆಗೆ ನಿಮ್ಮ ಹೋರಾಟದ ಮುಖಾಂತರ ಸೇತುವೆ ನಿರ್ಮಿಸಿ ಕೊಡಬೇಕೆಂದು ಸಂಘಟನೆಗೆ ಊರವರು ತಿಳಿಸಿದ್ದರು. ಜು.23 ರಂದು ಅಂಬೇಡ್ಕರ್

ಸುಳ್ಯ: ಅರಮನೆಗಯಕ್ಕೆ ಅಂಬೇಡ್ಕರ್ ರಕ್ಷಣಾ ವೇದಿಕೆ ಭೇಟಿ| ಊರವರಿಂದ ಮನವಿ ಸಂಗ್ರಹ Read More »

ಫೋನ್‌ ಮೂಲಕವೇ ಅಂಗಾರ ಕ್ಯಾಬಿನೆಟ್ ಕಂಟ್ರೋಲ್ ಮಾಡ್ತಾರೆ – ಎಸ್.ಟಿ ಸೋಮಶೇಖರ್

ಸಮಗ್ರ ನ್ಯೂಸ್: ಕಸ್ತೂರಿ ರಂಗನ್ ವರದಿಯನ್ನು ಏಕಪಕ್ಷಿಯವಾಗಿ ತಿರಸ್ಕಾರ ಮಾಡಬೇಕು ಎಂದು ಸುಳ್ಯದಲ್ಲಿ ಕುಳಿತು ಫೋನ್ ಮೂಲಕ ಎಲ್ಲಾ ಸಚಿವರನ್ನು ರಿಮೋಟ್ ಕಂಟ್ರೋಲ್ ಮಾಡುವ ತಾಕತ್ತು ಇದ್ದರೆ ಅದು ಸಚಿವ ಅಂಗಾರ ಅವರಿಗೆ ಮಾತ್ರ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು. ಅವರು ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಸಹಕಾರಿ ಸಂಘದ ದೀನ್‌ದಯಾಳ್ ರೈತ ಸಭಾಭವನ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕ್ಯಾಬಿನೆಟ್​ನಲ್ಲಿ ಕಸ್ತೂರಿ ರಂಗನ್ ವರದಿ ಬಗ್ಗೆ ಪ್ರಸ್ತಾಪನೆ ಬಂತು. ಸಚಿವರಾದ ಅಂಗಾರ ಅವರು ಸುಳ್ಯದಿಂದಲೇ ಎಲ್ಲಾ ಮಂತ್ರಿಗಳಿಗೂ ಫೋನ್

ಫೋನ್‌ ಮೂಲಕವೇ ಅಂಗಾರ ಕ್ಯಾಬಿನೆಟ್ ಕಂಟ್ರೋಲ್ ಮಾಡ್ತಾರೆ – ಎಸ್.ಟಿ ಸೋಮಶೇಖರ್ Read More »

ಮಂಗಳೂರು: ಕಿಸ್ಸಿಂಗ್ ವಿಡಿಯೋ ಪ್ರಕರಣ; ಮತ್ತೆ 3 ವಿದ್ಯಾರ್ಥಿಗಳ ವಿಚಾರಣೆ

ಸಮಗ್ರ ನ್ಯೂಸ್: ಮಂಗಳೂರು ನಗರದ ಬಾವುಟಗುಡ್ಡೆ ಸಮೀಪದ ಅಪಾರ್ಟ್‌ಮೆಂಟ್ ನಲ್ಲಿ ನಡೆದಿದೆ ಎನ್ನಲಾದ ವಿದ್ಯಾರ್ಥಿಗಳ ಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೆ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ವಿದ್ಯಾರ್ಥಿನಿಯರ ಜತೆ ವಿದ್ಯಾರ್ಥಿಗಳು ಅಶ್ಲೀಲವಾಗಿ ವರ್ತಿಸಿದ್ದಲ್ಲದೆ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಈ ಕೃತ್ಯದಲ್ಲಿ ಹಲವರು ಭಾಗಿಯಾಗಿದ್ದು, 3 ಪೋಕ್ಸೊ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 8 ಮಂದಿಯನ್ನು ವಶಕ್ಕೆ ಪಡೆದಂತಾಗಿದೆ. ಪ್ರಕರಣ ಮಹಿಳಾ ಠಾಣೆಯಿಂದ ನಗರ ಅಪರಾಧ ಪತ್ತೆದಳ(ಸಿಸಿಬಿ)ಕ್ಕೆ ವರ್ಗಾವಣೆಯಾಗಿದ್ದು,

ಮಂಗಳೂರು: ಕಿಸ್ಸಿಂಗ್ ವಿಡಿಯೋ ಪ್ರಕರಣ; ಮತ್ತೆ 3 ವಿದ್ಯಾರ್ಥಿಗಳ ವಿಚಾರಣೆ Read More »

ಮಂಗಳೂರು ನಿಂದ ಹೊಸದುರ್ಗ ಕ್ಕೆ ಪ್ರತಿಷ್ಠಿತ ವೋಲ್ಟೋ ಸಾರಿಗೆ ಆರಂಭ

ಉಡುಪಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಂಗಳೂರು ವಿಭಾಗದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು-ಹೊಸದುರ್ಗ ಮಾರ್ಗದಲ್ಲಿ ಪ್ರತಿಷ್ಠಿತ ವೋಲ್ವೋ ಸಾರಿಗೆಯನ್ನು ಈಗಾಗಲೇ ಪ್ರಾರಂಭಿಸಲಾಗಿರುತ್ತದೆ. ಸಾರಿಗೆಯು ಮಂಗಳೂರಿನಿಂದ ರಾತ್ರಿ 9.30 ಕ್ಕೆ ಹೊರಟು ಸುರತ್ಕಲ್-ಪಡುಬಿದ್ರೆ-ಉಡುಪಿ-ಮಣಿಪಾಲ- ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ- ಶಿವಮೊಗ್ಗ-ಹೊಳೆಹೊನ್ನೂರು – ಚೆನ್ನಗಿರಿ-ಹೊಳಲ್ಕೆರೆ ಮಾರ್ಗವಾಗಿ ಹೊಸದುರ್ಗಕ್ಕೆ ಬೆಳಗ್ಗೆ 5.45 ಕ್ಕೆ ಹಾಗೂ ಮರುಪ್ರಯಾಣದಲ್ಲಿ ಹೊಸದುರ್ಗದಿಂದ ರಾತ್ರಿ 10 ಗಂಟೆಗೆ ಹೊರಟು ಬೆಳಗ್ಗೆ 6.15 ಕ್ಕೆ ಮಂಗಳೂರನ್ನು ತಲಪುತ್ತದೆ. ಸಾರಿಗೆಯಲ್ಲಿ ಮಂಗಳೂರಿನಿಂದ ಹೊಸದುರ್ಗಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ 700 ರೂ.

ಮಂಗಳೂರು ನಿಂದ ಹೊಸದುರ್ಗ ಕ್ಕೆ ಪ್ರತಿಷ್ಠಿತ ವೋಲ್ಟೋ ಸಾರಿಗೆ ಆರಂಭ Read More »

ಕಾರು ರಸ್ತೆ ಹೊಂಡಕ್ಕೆ ಬಿದ್ದು ವಿದ್ಯುತ್ ಕಂಬಕ್ಕೆ ಡಿಕ್ಕಿ

ಉಡುಪಿ : ಇಂದು ಬೆಳ್ಳಂಬೆಳ್ಳಗೆ ಕಾಪುವಿನಲ್ಲಿ ಕಾರು ರಸ್ತೆ ಹೊಂಡಕ್ಕೆ ಬಿದ್ದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆಯೊಂದು ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ಗುಂಡಿಗಳಿಂದ ಕೂಡಿದ್ದು ಮಳೆ ಬಂದ ಪರಿಣಾಮ ಗುಂಡಿಗಳಲ್ಲಿ ನೀರು ತುಂಬಿ ವಾಹನ ಸವಾರರಿಗೆ ಮೃತ್ಯುಕೂಪವಾಗಿ ಪರಿಣಮಿಸುತ್ತಿವೆ. ಕಾಪು ಬಳಿ ಕಾರು ರಸ್ತೆಯಲ್ಲಿದ್ದ ಹೊಂಡಕ್ಕೆ ಬಿದ್ದ ಪರಿಣಾಮ ಚಾಲಕಿಯ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕಾರಿನ ಚಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಾಪು ಠಾಣಾ ಪೊಲೀಸರು

ಕಾರು ರಸ್ತೆ ಹೊಂಡಕ್ಕೆ ಬಿದ್ದು ವಿದ್ಯುತ್ ಕಂಬಕ್ಕೆ ಡಿಕ್ಕಿ Read More »

ಪುತ್ತೂರು: ಪೂಜೆಗೆಂದು ತಂದ ಬೆಲ್ಲದೊಳಗಿತ್ತು ಬ್ಯಾಟರಿ

ಸಮಗ್ರ ನ್ಯೂಸ್: ಪೂಜೆಗೆಂದು ತಂದ‌ ಬೆಲ್ಲದೊಳಗೆ ಬ್ಯಾಟರಿ ಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರುನಲ್ಲಿ ನಡೆದಿದೆ. ಗ್ರಾಮದ ಪೆರ್ನಾಜೆ ರಾಮಕೃಷ್ಣ ಉಂಗ್ರುಪುಳಿತ್ತಾಯ ಎಂಬವರು‌ ಇಂದು ಬೆಳಗ್ಗೆ ಪೂಜೆಗೆಂದು ಬೆಲ್ಲ ತಂದಿದ್ದು ಈ ಬೆಲ್ಲದಲ್ಲಿ ಬ್ಯಾಟರಿ ಸಿಕ್ಕಿದೆ.

ಪುತ್ತೂರು: ಪೂಜೆಗೆಂದು ತಂದ ಬೆಲ್ಲದೊಳಗಿತ್ತು ಬ್ಯಾಟರಿ Read More »

ಮಂಗಳೂರು: ಕಂಬಕ್ಕೆ ಡಿಕ್ಕಿ ಹೊಡೆದ ರೈಲು

ರೈಲೊಂದು ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಂಕನಾಡಿ ರೈಲು ನಿಲ್ದಾಣದ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ. ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಪರಿಣಾಮ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಆದರೆ ಯಾವುದೇ ಅನಾಹುತ ಸಂಭವಿಸಿಲ್ಲ‌ ಎಂದು ತಿಳಿದುಬಂದಿದೆ.

ಮಂಗಳೂರು: ಕಂಬಕ್ಕೆ ಡಿಕ್ಕಿ ಹೊಡೆದ ರೈಲು Read More »