ಕರಾವಳಿ

ಮಂಗಳೂರು: ಕಂಬಳ ವೀರ ಶ್ರೀನಿವಾಸ ಗೌಡ ಸೇರಿ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ಕಂಬಳ ಓಟಗಾರ ಶ್ರೀನಿವಾಸಗೌಡ‌ ಸೇರಿ‌ ಮೂವರ ವಿರುದ್ಧ ವಂಚನೆ ಕ್ರಿಮಿನಲ್ ದೂರು ನೀಡಲಾಗಿದೆ. ಮಂಗಳೂರಿನ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕಂಬಳ ಸಮಿತಿ ಸದಸ್ಯ ಲೋಕೇಶ್ ಶೆಟ್ಟಿ ದೂರು ನೀಡಿದ್ದಾರೆ. ಶ್ರೀನಿವಾಸಗೌಡ, ಗುಣಪಾಲ ಕಡಂಬ, ರತ್ನಾಕರ ಅವರ ವಿರುದ್ಧ ದೂರು ನೀಡಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಸರ್ಕಾರ ಮತ್ತು ಸಾರ್ವಜನಿಕರಿಗೆ ವಂಚಿಸಿದ್ದಾರೆ. ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ ಹಣ ಸಂಗ್ರಹಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ. ಅಧಿಕೃತ ಮಾನ್ಯತೆ […]

ಮಂಗಳೂರು: ಕಂಬಳ ವೀರ ಶ್ರೀನಿವಾಸ ಗೌಡ ಸೇರಿ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು Read More »

ಚಾಕೊಲೇಟ್ ಗಂಟಲಲ್ಲಿ ಸಿಲುಕಿ ಎರಡನೇ ತರಗತಿ ವಿದ್ಯಾರ್ಥಿನಿ ದಾರುಣ ಸಾವು

ಸಮಗ್ರ ನ್ಯೂಸ್: ಕವರ್‌ ಸಹಿತ ಚಾಕಲೇಟ್‌ ನುಂಗಿ ಎರಡನೇ ತರಗತಿ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿರು ಘಟನೆ ಕುಂದಾಪುರ ತಾಲೂಕಿನ ಉಪ್ಪುಂದ ಬಿಜೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಳವಾಡಿಯಲ್ಲಿ ಬುಧವಾರ ನಡೆದಿದೆ. ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬವಳಾಡಿ ಗ್ರಾಮದ ನಿವಾಸಿ ಸಮನ್ವಿ ಮೃತ ಬಾಲಕಿ ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿ ಸಮನ್ವಿ ಖಾಸಗಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದು, ಮುಂಜಾನೆ ಶಾಲೆಗೆ ಹೊರಡುತ್ತಿರುವ ವೇಳೆ ಹಠ ಹಿಡಿದಿದ್ದಳು. ಮಗಳನ್ನು ಸಮಾಧಾನಪಡಿಸಲು ಅಮ್ಮ ಚಾಕಲೇಟ್‌ ನೀಡಿದ್ದಾರೆ. ಈ ವೇಳೆ ಶಾಲಾ

ಚಾಕೊಲೇಟ್ ಗಂಟಲಲ್ಲಿ ಸಿಲುಕಿ ಎರಡನೇ ತರಗತಿ ವಿದ್ಯಾರ್ಥಿನಿ ದಾರುಣ ಸಾವು Read More »

ಬಂಟ್ವಾಳ ; ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಕಾರು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡಿನಲ್ಲಿ ಮಾರುತಿ ಬಲೆರೊ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿದ ಬಿದ್ದ ಘಟನೆಯೊಂದು ಬುಧವಾರ ಮುಂಜಾನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡಿನಲ್ಲಿ ಘಟನೆ ನಡೆದಿದ್ದು, ಕಾರು ಚಾಲಕ ಕುಶಾಂತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದು, ಕಾರು ಜಖಂಗೊಂಡಿದೆ. ಸಂಪೂರ್ಣವಾಗಿ ಜಖಂಗೊಂಡ ಕಾರನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದೆ ಎಂಬ ಮಾಹಿತಿ ದೊರಕಿವೆ.

ಬಂಟ್ವಾಳ ; ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಕಾರು Read More »

ಮತ್ತೆ ಏರಿಕೆಯತ್ತ ಮುಖ ಮಾಡಿದ ಒಕ್ಕಣ್ಣ| ಕೆ.ಜಿ ಗೆ450ರ ಸನಿಹದಲ್ಲಿ ಚಾಲಿ ಅಡಿಕೆ

ಸಮಗ್ರ ನ್ಯೂಸ್: ಕೆಲವು ದಿನಗಳಿಂದ ತಟಸ್ಥವಾಗಿದ್ದ ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಸಿಕೊಂಡಿದೆ. ಕಳೆದ ಎರಡು ತಿಂಗಳಿನಿಂದ ಸ್ಥಿರವಾಗಿದ್ದ ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ಧಾರಣೆ ಏರಿಕೆಯತ್ತ ಮುಖ ಮಾಡಿದ್ದು ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿ.ಗೆ 450 ರೂ.ಗಳ ಅಂಚಿಗೆ ತಲುಪಿದೆ. ಕ್ಯಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 7 ರೂ., ಹಳೆ ಅಡಿಕೆಗೆ 10 ರೂ.ಗಳಷ್ಟು ಅಧಿಕ ಇದ್ದು ಬೆಳೆಗಾರರು ಹೊರ ಮಾರುಕಟ್ಟೆಯತ್ತ ದೃಷ್ಟಿ ನೆಟ್ಟಿದ್ದಾರೆ. ಕಳೆದ ಬಾರಿ ಹೊರ ಮಾರುಕಟ್ಟೆ ಧಾರಣೆಗೆ

ಮತ್ತೆ ಏರಿಕೆಯತ್ತ ಮುಖ ಮಾಡಿದ ಒಕ್ಕಣ್ಣ| ಕೆ.ಜಿ ಗೆ450ರ ಸನಿಹದಲ್ಲಿ ಚಾಲಿ ಅಡಿಕೆ Read More »

ಮಂಗಳೂರು: ಸಂಗೀತ ನಿರ್ದೇಶಕ ವನಿಲ್ ವೇಗಸ್ ಗೆ ಅತ್ಯುನ್ನತ ಗ್ರ್ಯಾಮಿ ಪ್ರಶಸ್ತಿ| ಮೊದಲ ಬಾರಿಗೆ ಕರಾವಳಿಗೆ ಒಲಿದ ಸಂಗೀತ ಗೌರವ

ಸಮಗ್ರ ನ್ಯೂಸ್: ಮಂಗಳೂರು ಮೂಲದ ಸಂಗೀತ ನಿರ್ದೇಶಕ ವನಿಲ್ ವೇಗಸ್ ರವರು ಸಂಗೀತ ಕ್ಷೇತ್ರದ ಅತ್ಯುನ್ನತ ಗ್ರ್ಯಾಮಿ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ. ಬೆಂಗಳೂರಿನ ರಿಕ್ಕಿ ಕೇಜ್ ತಂಡದ ಮುಖ್ಯಸ್ಥರಾಗಿರುವ ವನಿಲ್, ರಿಕ್ಕಿ ಕೇಜ್- ಸ್ಟೂವರ್ಟ್ ಕೋಪ್ಲಾಂಡ್ ನಿರ್ಮಿತ “ಡಿವೈನ್ ಟೈಡ್ಸ್” ಆಲ್ಬಂಗೆ ಇಂಜಿನೀಯರಿಂಗ್ ಮತ್ತು ಮಿಕ್ಸಿಂಗ್ ವಿಭಾಗದಲ್ಲಿ ಕೆಲಸ ನಿರ್ವಹಿಸಿದ್ದರು. ಅದೇ ವಿಭಾಗದಲ್ಲಿ ಈಗ ಜಗತ್ತಿನಲ್ಲಿಯೇ ಸಂಗೀತ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಗ್ರ್ಯಾಮಿ ಪ್ರಶಸ್ತಿಯನ್ನು ಪಡೆದು ಕರ್ನಾಟಕದ ಎರಡನೇ ಗ್ರ್ಯಾಮಿ ವಿಜೇತರೆಂಬ ಖ್ಯಾತಿಯನ್ನು ಪಡೆದಿದ್ದಾರೆ. 64 ವರ್ಷಗಳ ಗ್ರ್ಯಾಮಿ

ಮಂಗಳೂರು: ಸಂಗೀತ ನಿರ್ದೇಶಕ ವನಿಲ್ ವೇಗಸ್ ಗೆ ಅತ್ಯುನ್ನತ ಗ್ರ್ಯಾಮಿ ಪ್ರಶಸ್ತಿ| ಮೊದಲ ಬಾರಿಗೆ ಕರಾವಳಿಗೆ ಒಲಿದ ಸಂಗೀತ ಗೌರವ Read More »

ಸುಳ್ಯ ; ಕೆಎಸ್ಆರ್ ಟಿಸಿ ಬಸ್ ಚಾಲಕ ಬಸ್ ನಿಲ್ಲಿಸಿ ವಿಶ್ರಾಂತಿ ಪಡೆಯುವ ವೇಳೆ ಹೃದಯಾಘಾತದಿಂದ ನಿಧನ

ಸುಳ್ಯ: ಬಸ್ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಬಸ್ ನಿಲ್ದಾಣದಲ್ಲಿಯೇ ಮೃತಪಟ್ಟ ಘಟನೆ ಮರ್ಕಂಜ ಎಂಬಲ್ಲಿ ನಡೆದಿದೆ. ಮೃತರನ್ನು ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಲ್ಲೇಶ್ (56) ಎಂದು ಗುರುತಿಸಲಾಗಿದೆ. ಇವರು ಮರ್ಕಂಜ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ವಿಶ್ರಾಂತಿ ಪಡೆಯಲು ಹೋದ ವೇಳೆ ತೀವ್ರ ಎದೆನೋವು ಉಂಟಾಗಿ ಉಸಿರಾಟದ ತೊಂದರೆಯಾಗಿದ್ದು, ತಕ್ಷಣವೇ ಬಸ್ಸು ನಿರ್ವಾಹಕ ಸಿದ್ದಪ್ಪರವರು ಮಲ್ಲೇಶ್ ನನ್ನು ಜೀಪಿನಲ್ಲಿ ಸುಳ್ಯ ಆಸ್ಪತ್ರೆಗೆ ಕರೆದೊಯ್ದಿದಿದ್ದಾರೆ ಎನ್ನಲಾಗಿದೆ. ಆದರೆ ಅಷ್ಟು ಹೊತ್ತಿಗಾಗಲೇ ಮಲ್ಲೇಶ್ ರವರು

ಸುಳ್ಯ ; ಕೆಎಸ್ಆರ್ ಟಿಸಿ ಬಸ್ ಚಾಲಕ ಬಸ್ ನಿಲ್ಲಿಸಿ ವಿಶ್ರಾಂತಿ ಪಡೆಯುವ ವೇಳೆ ಹೃದಯಾಘಾತದಿಂದ ನಿಧನ Read More »

MRPL ನಲ್ಲಿ‌‌ ಕಾಣಿಸಿಕೊಂಡ ದಟ್ಟ ಹೊಗೆ; ಆತಂಕದಲ್ಲಿ ಮಂಗಳೂರು

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಮತ್ತೆ MRPL ಪ್ರದೇಶದಲ್ಲಿ ಆತಂಕ ಮೂಡಿಸಿದ್ದು, MRPLನಿಂದ ರಾತ್ರಿಯಿಡೀ ಭಾರೀ ಹೊಗೆ ಕಾಣಿಸಿಕೊಂಡಿದೆ. ಹೀಗಾಗಿ ಮಂಗಳೂರಿಗರು ರಾತ್ರಿಯಿಡೀ ಆತಂಕದಿಂದ ಕಾಲ ಕಳೆಯುವಂತಾಯಿತು. ಮಂಗಳೂರು ರಿಫೈನರಿ ಪೆಟ್ರೋ ಕೆಮಿಕಲ್​​​​ ಕಂಪನಿ ಆತಂಕ ಮೂಡಿಸಿದೆ. MRPLನಿಂದ ರಾತ್ರಿಯಿಡೀ ಭಾರೀ ಹೊಗೆ ಕಾಣಿಸಿಕೊಂಡಿದೆ. ಬಾನೆತ್ತರಕ್ಕೆ ಹಾರುತ್ತಿದ್ದ ಹೊಗೆ ಕಂಡು ಜನರು ತೀವ್ರ ಆತಂಕಗೊಂಡರು. MRPL ಸುಮಾರು 5000 ಎಕರೆ ಪ್ರದೇಶದಲ್ಲಿದೆ. ಮಧ್ಯರಾತ್ರಿ ನಂತರ ಪೆಟ್ರೋಲ್​​ ವಾಸನೆ ಜತೆ ಹೊಗೆ ಕಾಣಿಸಿಕೊಂಡಿದೆ. ಪದೇ-ಪದೇ MRPLನಲ್ಲಿ ಬೆಂಕಿ ಅವಘಡ ಸಂಭವಿಸುತ್ತವೆ.

MRPL ನಲ್ಲಿ‌‌ ಕಾಣಿಸಿಕೊಂಡ ದಟ್ಟ ಹೊಗೆ; ಆತಂಕದಲ್ಲಿ ಮಂಗಳೂರು Read More »

ಮಂಗಳೂರು: ವಿದ್ಯಾರ್ಥಿನಿಯ ಮಾನಭಂಗಕ್ಕೆ ಯತ್ನ| ಆರೋಪಿಯ ಬಂಧನ

ಸಮಗ್ರ ನ್ಯೂಸ್: ವಿಧ್ಯಾರ್ಥಿನಿಯೊಬ್ಬಳ ಮನೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಂಜಿಮೊಗರಿನ ಮುಸ್ತಫಾ (35) ಎಂದು ಗುರುತಿಸಲಾಗಿದೆ. ಆರೋಪಿಯು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದ ತರಕಾರಿ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದು, ವಿಧ್ಯಾರ್ಥಿನಿಯ ನಂಬರ್ ಪಡೆದುಕೊಂಡ ಆರೋಪಿ ಆಕೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ. ಅಲ್ಲದೆ ಆರೋಪಿ ಜುಲೈ 8ರಂದು ರಾತ್ರಿ 8.30ಕ್ಕೆ ವಿದ್ಯಾರ್ಥಿನಿಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಾನಭಂಗಕ್ಕೆ ಯತ್ನಿಸಿದ್ದಲ್ಲದೆ ಕೃತ್ಯವನ್ನು ಇತರರಿಗೆ ಹೇಳಿದರೆ

ಮಂಗಳೂರು: ವಿದ್ಯಾರ್ಥಿನಿಯ ಮಾನಭಂಗಕ್ಕೆ ಯತ್ನ| ಆರೋಪಿಯ ಬಂಧನ Read More »

ಸುಳ್ಯ: ಗಣಿಗಾರಿಕೆಯಿಂದ ಮತ್ತೇ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು|
ಮನವಿ ಕೊಟ್ಟರು ಅಧಿಕಾರಿಗಳು ಯಾಕಿಷ್ಟು ಮೌನ?

ಸಮಗ್ರ ನ್ಯೂಸ್: ಗಣಿಗಾರಿಕೆಯಿಂದ ಮತ್ತೆ ಅಕ್ಕಪಕ್ಕದ ಮನೆಗಳಿಗೆ ಹಾನಿಯಾದ ಘಟನೆ ದ.ಕ‌ ಜಿಲ್ಲೆಯ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಅಳವುಪಾರೆಯಲ್ಲಿ ನಡೆದಿದ್ದು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಗಣಿಗಾರಿಗೆ ನಿಲ್ಲಿಸುವಂತೆ ಜು.16ರಂದು ಮನವಿ ಸಲ್ಲಿಸಲಾಯಿತು. ಕೆಲವು ವರ್ಷಗಳಿಂದ ಅಳವುಪಾರೆಯಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಅಕ್ಕಪಕ್ಕದ ಮನೆಗಳಿಗೆ, ಶಾಲೆ ಮತ್ತು ದೇವಸ್ಥಾನಕ್ಕೆ ಹಾನಿಯಾಗಿರುವ ಬಗ್ಗೆ ವರದಿಯಾಗಿತ್ತು. ಅಲ್ಲದೆ ಅಲ್ಲಿಯ ಕೆಲವು ಸಂಘಟನೆಗಳು ಗಣಿಗಾರಿಕೆಯನ್ನು ನಿಲ್ಲಿಸುವಂತೆ ಅಧಿಕಾರಿಗಳಿಗೆ ಮನವಿ ಕೂಡ ಸಲ್ಲಿಸಿದ್ದರು. ಇದೇ ವೇಳೆಗೆ ಸುಳ್ಯ ಹಾಗೂ ಮಡಿಕೇರಿ ಭಾಗದಲ್ಲಿ

ಸುಳ್ಯ: ಗಣಿಗಾರಿಕೆಯಿಂದ ಮತ್ತೇ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು|
ಮನವಿ ಕೊಟ್ಟರು ಅಧಿಕಾರಿಗಳು ಯಾಕಿಷ್ಟು ಮೌನ?
Read More »

ಸುಳ್ಯ: ಟಯರ್ ಶಾಪ್ ನಲ್ಲಿ ರಾತ್ರೋರಾತ್ರಿ ಹತ್ತಿಕೊಂಡ ಬೆಂಕಿ; ಭಾರೀ ನಷ್ಟ

ಸಮಗ್ರ ನ್ಯೂಸ್: ಟಯರ್ ಅಂಗಡಿಯೊಂದಕ್ಕೆ ತಡ ರಾತ್ರಿ ಬೆಂಕಿ ತಗುಲಿದ ಪರಿಣಾಮ ಭಾರೀ ನಷ್ಟ ಉಂಟಾಗಿರುವ ಘಟನೆ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ‌ ಕಲ್ಲುಗುಂಡಿಯ ಕೂಲಿಶೆಡ್‌ನಲ್ಲಿ ನಡೆದಿದೆ. ಬೆಂಕಿ ಹತ್ತಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆ ಆಕಾಶದೆತ್ತರಕ್ಕೆ ಚಿಮ್ಮಿತ್ತು. ಟಯರ್, ಟ್ಯೂಬ್ ರಿಪೇರಿ ಮತ್ತು ಮಾರಾಟದ ಅಂಗಡಿಗೆ ಬೆಂಕಿ ತಗುಲಿದ್ದು ಸಮೀಪದ ಗೂಡಂಗಡಿ, ಸೈಕಲ್ ರಿಪೇರಿ ಅಂಗಡಿ, ಹೋಟೆಲ್‌ಗೂ ಹಾನಿಯಾಗಿದೆ. ಸುಳ್ಯದ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದುಬಂದಿದೆ.

ಸುಳ್ಯ: ಟಯರ್ ಶಾಪ್ ನಲ್ಲಿ ರಾತ್ರೋರಾತ್ರಿ ಹತ್ತಿಕೊಂಡ ಬೆಂಕಿ; ಭಾರೀ ನಷ್ಟ Read More »