ಕರಾವಳಿ

26 ಸಾವಿರ ಸಂಬಳ; 100 ಖಾಲಿ ಹುದ್ದೆ, ಜು.12ಕ್ಕೆ ನೇರ ಸಂದರ್ಶನ| ಮಂಗಳೂರಿನ ಯುವಜನತೆ ಅಪ್ಲೈ‌ಮಾಡಿ…

ಸಮಗ್ರ ನ್ಯೂಸ್: ಅಮೆಜಾನ್ ಕಂಪನಿಯಲ್ಲಿ ತಿಂಗಳಿಗೆ 26 ಸಾವಿರ ವೇತನವುಳ್ಳ 100 ಡೆಲಿವರಿ ಬಾಯ್ ಹುದ್ದೆಗಳಿಗೆ ಜು.12ರ ಮಂಗಳವಾರ ಮಂಗಳೂರಿನ ಉರ್ವಾ ಮಾರುಕಟ್ಟೆಯ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಯಾವುದೇ ವಿದ್ಯಾರ್ಹತೆಯುಳ್ಳ ಆಸಕ್ತ ಉದ್ಯೋಗಾಕಾಂಕ್ಷಿಗಳು ದ್ವಿಚಕ್ರ ವಾಹನ ಪರವಾನಿಗೆ, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಆಂಡ್ರಾಯಿಡ್ ಸ್ಮಾರ್ಟ್‍ಫೋನ್ ಹಾಗೂ ಇತರೆ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಹಾಗೂ ಮಾಹಿತಿಗಾಗಿ ಕಚೇರಿ ದೂ.ಸಂಖ್ಯೆ:0824-2453222 ಅನ್ನು ಸಂಪರ್ಕಿಸುವಂತೆ ಜಿಲ್ಲಾ […]

26 ಸಾವಿರ ಸಂಬಳ; 100 ಖಾಲಿ ಹುದ್ದೆ, ಜು.12ಕ್ಕೆ ನೇರ ಸಂದರ್ಶನ| ಮಂಗಳೂರಿನ ಯುವಜನತೆ ಅಪ್ಲೈ‌ಮಾಡಿ… Read More »

ಕರಾವಳಿ ಜಿಲ್ಲೆಯಲ್ಲಿ ರೆಡ್ ಅಲರ್ಟ್| ಜು.12ರವರೆಗೂ ಮುಂದುವರಿಯಲಿದೆ ವರ್ಷಧಾರೆ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಬಿರುಸಿನ ಮಳೆ ಸುರಿಯುತ್ತಿದ್ದು, ಜು.10ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮುಂದುವರಿದಿದೆ. ಮುಂದಿನ 48 ಗಂಟೆಗಳಲ್ಲಿ ಮತ್ತೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜು.7 ರಿಂದ ರೆಡ್ ಅಲರ್ಟ್ ಘೋಷಣೆಯಾಗಿತ್ತು. ಆದರೇ ಇದೀಗ ಜು.10 ರವರೆಗೆ ಮುಂದುವರಿಯಲಿದೆ. ಈ ವೇಳೆ ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜು.11,

ಕರಾವಳಿ ಜಿಲ್ಲೆಯಲ್ಲಿ ರೆಡ್ ಅಲರ್ಟ್| ಜು.12ರವರೆಗೂ ಮುಂದುವರಿಯಲಿದೆ ವರ್ಷಧಾರೆ Read More »

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ಬಗ್ಗೆ ಚರ್ಚೆ

ಸಮಗ್ರ ನ್ಯೂಸ್: ಭಾರಿ ಮಳೆಯ ನಡುವೆ ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆಯ ಬಗ್ಗೆ ಚರ್ಚೆಯಾಗುತ್ತಿದೆ. ಮುಂದಿನ ವಾರದಿಂದ 10 ರೂಪಾಯಿಯಷ್ಟು ಏರಿಕೆ ಕಾಣಲಿದೆ. ಹಳೆ ಅಡಿಕೆ 550ರೂ ಆಸುಪಾಸಿನಲ್ಲಿ ಹಾಗೂ ಹೊಸ ಅಡಿಕೆ 445 ರೂ ಆಸುಪಾಸಿಗೆ ಏರಿಕೆ ಸಾಧ್ಯತೆ ಇದೆ. ಅಡಿಕೆ ಧಾರಣೆಯು ಕಳೆದ ಕೆಲವು ದಿನಗಳಿಂದ ಸ್ಥಿರತೆಯಲ್ಲಿತ್ತು. ಕ್ಯಾಂಪ್ಕೋ ಧಾರಣೆಯು ಹೊಸ ಅಡಿಕೆಗೆ 450 ರೂ ಗರಿಷ್ಠ ಧಾರಣೆ ಇದ್ದು 430 ರೂ. ಗೆ ಖರೀದಿ ನಡೆಯುತ್ತಿತ್ತು. ಹಳೆಯ ಅಡಿಕೆಧಾರಣೆಯು 550 ರೂ. ನಿಗದಿಯಾದರೂ 520

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ಬಗ್ಗೆ ಚರ್ಚೆ Read More »

ಮಂಗಳೂರು: ಧಾರಾಕಾರ ಮಳೆ ಹಿನ್ನೆಲೆ ವಾರಪೂರ್ತಿ ರಜೆ| ಪಠ್ಯ ಸರಿದೂಗಿಸಲು ಸಾರ್ವತ್ರಿಕ ರಜೆಗೆ ಕತ್ತರಿ -ಡಿಸಿ ಸೂಚನೆ

ಸಮಗ್ರ‌ನ್ಯೂಸ್: ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಶಾಲಾ ಕಾಲೇಜುಗಳಿಗೆ ನೀಡಲಾಗಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರ ಸಾರ್ವತ್ರಿಕ ರಜಾದಿನಗಳಂದು ಸರಿದೂಗಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ಮಂಗಳವಾರದಿಂದ ವಿಪರೀತ ಮಳೆ ಸುರಿಯುತ್ತಿದ್ದು, ನಿರಂತರವಾಗಿ ರೆಡ್ ಅಲರ್ಟ್ ಘೋಷಣೆಯಾಗುತ್ತಿದೆ. ಅಲ್ಲದೆ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ರಸ್ತೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಜಿಲ್ಲೆಯ ಕೆಲವೆಡೆ ಭೂಕುಸಿತದಂತಹ ಘಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ

ಮಂಗಳೂರು: ಧಾರಾಕಾರ ಮಳೆ ಹಿನ್ನೆಲೆ ವಾರಪೂರ್ತಿ ರಜೆ| ಪಠ್ಯ ಸರಿದೂಗಿಸಲು ಸಾರ್ವತ್ರಿಕ ರಜೆಗೆ ಕತ್ತರಿ -ಡಿಸಿ ಸೂಚನೆ Read More »

ಅವೈಜ್ಞಾನಿಕ ಕಾಮಗಾರಿ; ಕಲ್ಲಡ್ಕದಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್| ಸಾರ್ವಜನಿಕರಿಂದ ಹಿಡಿಶಾಪ

ಸಮಗ್ರ ನ್ಯೂಸ್: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಇಂದು ಬೆಳಿಗ್ಗೆಯಿಂದ ಸಂಚಾರಕ್ಕೆ ತಡೆ ಉಂಟಾಗಿದೆ. ಬೆಳಿಗ್ಗೆ ಸುಮಾರು ‌8 ಗಂಟೆಯ ವೇಳೆ ಆರಂಭವಾದ ಸಂಚಾರಕ್ಕೆ ಅಡಚಣೆ 10.30 ಗಂಟೆ ವರೆಗೂ ಮುಗಿದಿಲ್ಲ. ಕಲ್ಲಡ್ಕ ಅಮ್ಟೂರು ಕ್ರಾಸ್ ನ ಬಳಿ ಹೆದ್ದಾರಿಯಲ್ಲಿ ಬೃಹತ್ ಹೊಂಡ ವೊಂದು ನಿರ್ಮಾಣವಾದ ಹಿನ್ನೆಲೆಯಲ್ಲಿ ಪ್ರಾರಂಭವಾದ ಬ್ಲಾಕ್ ನಿರಂತರವಾಗಿ ಮುಂದುವರಿದಿದೆ.ಬೆಳಿಗ್ಗೆ ಹೊತ್ತು ಕೆಲಸಕ್ಕೆ ಹೋಗುವವರ ಜೊತೆ ಅಂಬ್ಯುಲೆನ್ಸ್ ವಾಹನಗಳು ಕೂಡ ತಾಸು ಗಟ್ಟಲೆ ಕ್ಯೂ ನಲ್ಲಿ ನಿಂತು ಪರದಾಡಬೇಕಾಯಿತು. ರಾಷ್ಟ್ರೀಯ ಹೆದ್ದಾರಿ

ಅವೈಜ್ಞಾನಿಕ ಕಾಮಗಾರಿ; ಕಲ್ಲಡ್ಕದಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್| ಸಾರ್ವಜನಿಕರಿಂದ ಹಿಡಿಶಾಪ Read More »

ದ.ಕ‌ ದಲ್ಲಿ ಮುಂದುವರಿದ ವರುಣಾರ್ಭಟ| ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.8,9 ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 8, 9ರಂದು‌ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ನೇತ್ರಾವತಿ, ಕುಮಾರಧಾರಾ, ಗುರುಪುರ, ಗುಂಡ್ಯ‌ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹೊರಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ದ.ಕ‌ ದಲ್ಲಿ ಮುಂದುವರಿದ ವರುಣಾರ್ಭಟ| ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.8,9 ರಂದು ರಜೆ ಘೋಷಣೆ Read More »

ಕಾನ್ಸ್ ಟೇಬಲ್ ಆಗಿ ಕರ್ತವ್ಯದಲ್ಲಿದ್ದ ಭವಿತ್ ರೈ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ

ಸಮಗ್ರ ನ್ಯೂಸ್ : ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಭವಿತ್ ರೈ ಪಾಲ್ತಾಡಿ ಅವರು ಹೆಡ್ ಕಾನ್ಸ್‌ಟೇಬಲ್ ಆಗಿ ಭಡ್ತಿ ಹೊಂದಿದ್ದಾರೆ. ಕಳ್ಳತನ, ದರೋಡೆ ಹಾಗೂ ಇನ್ನಿತರ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಇವರು, ಕಳೆದ ನಾಲ್ಕೂವರೆ ವರ್ಷಗಳಿಂದ ಕಡಬ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು ಈ ಮೊದಲು ಐದು ವರ್ಷಗಳ ಕಾಲ ವಿಟ್ಲ ಠಾಣೆಯಲ್ಲಿ ಕೂಡಾ ಕಾರ್ಯ ನಿರ್ವಹಿಸಿದ್ದರು.

ಕಾನ್ಸ್ ಟೇಬಲ್ ಆಗಿ ಕರ್ತವ್ಯದಲ್ಲಿದ್ದ ಭವಿತ್ ರೈ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ Read More »

ದ.ಕ., ಉಡುಪಿಯಲ್ಲಿ ಜು.9 ರವರೆಗೆ ರೆಡ್ ಅಲರ್ಟ್

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆಯಬ್ಬರ ಮುಂದುವರಿದಿದ್ದು ಜು.7 ರಿಂದ ಜು.9 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜು.10ಮತ್ತು11 ರಂದು ಅರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಂಗಳೂರಿನಿಂದ ಕಾರವಾರ ಸಮುದ್ರದವರೆಗೆ

ದ.ಕ., ಉಡುಪಿಯಲ್ಲಿ ಜು.9 ರವರೆಗೆ ರೆಡ್ ಅಲರ್ಟ್ Read More »

ನಿರಂತರ ಮಳೆ: ಕುಕ್ಕೆಯಲ್ಲಿ ಭಕ್ತರು ವಿರಳ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದಿದ್ದು, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ನಿರಂತರ ಮಳೆಯಿಂದ ಭಕ್ತರು ತಮ್ಮ ಯಾತ್ರೆಗಳನ್ನೂ ಮುಂದೂಡಿದ್ದು, ಭಕ್ತರಿಂದ ತುಂಬಿ ತುಳುಕುತ್ತಿದ್ದ ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯು ಎರಡು ದಿನಗಳಿಂದ ಖಾಲಿ ಖಾಲಿಯಾಗಿದೆ. ಪೇಟೆಯಲ್ಲಿ ಯಾತ್ರಿಕರ ವಾಹನ ಓಡಾಟದ ಸಂಖ್ಯೆಯೂ ಇಳಿಮುಖಗೊಂಡಿದೆ. ವ್ಯಾಪಾರ ವ್ಯವಹಾರಗಳು ಇಳಿಮುಖ ಗೊಂಡಿವೆ ಎನ್ನುತ್ತಾರೆ ವ್ಯಾಪಾರಸ್ಥರು. ಇನ್ನು ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ನಾಲ್ಕು ದಿನಗಳಿಂದ ಸ್ನಾನಘಟ್ಟ ಮುಳುಗಡೆಯಾಗಿದೆ. ಭಕ್ತರು ನದಿತೀರದಲ್ಲೇ ಮಿಂದೇಳುತ್ತಾರೆ.

ನಿರಂತರ ಮಳೆ: ಕುಕ್ಕೆಯಲ್ಲಿ ಭಕ್ತರು ವಿರಳ Read More »

ಮಂಗಳೂರು: ಏರ್ ಪೋರ್ಟ್ ರನ್ ವೇ ಸಮೀಪ ರಸ್ತೆ ಕುಸಿತ

ಸಮಗ್ರ ನ್ಯೂಸ್: ಏರ್​ಪೋರ್ಟ್ ರನ್​ವೇ ಬದಿಯಲ್ಲೇ ರಸ್ತೆ ಕುಸಿದಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಅದ್ಯಪಾಡಿ ಬಳಿ ಇರುವ ರನ್ ವೇ ಸಮೀಪ ಕುಸಿತವಾಗಿದ್ದು, ಅದ್ಯಪಾಡಿಯಿಂದ ಕೈ ಕಂಬ ಹೋಗುವ ರಸ್ತೆ ಬಂದ್ ಮಾಡಲಾಗಿದೆ. ಏರ್​​ರ್ಪೋರ್ಟ್ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕ ಮಳೆ, ನೀರಿನ ಹೊರಹೊಮ್ಮುವಿಕೆಯಿಂದ ಕುಸಿತ ಉಂಟಾಗಿದೆ ಎನ್ನಲಾಗುತ್ತಿದೆ. ನಗರದಲ್ಲಿ ಭಾರೀ ಮಳೆ‌ ಮುಂದುವರೆದಿದೆ. ಮಂಗಳೂರು ವಿಮಾನ ನಿಲ್ದಾಣವು ಸೂಕ್ಷ್ಮ ಟೇಬಲ್ ಟಾಪ್ ರನ್​ವೇ ಹೊಂದಿರುವುದರಿಂದ ಈ ವಿದ್ಯಮಾನ ದೇಶದ ಗಮನ ಸೆಳೆದಿದೆ.

ಮಂಗಳೂರು: ಏರ್ ಪೋರ್ಟ್ ರನ್ ವೇ ಸಮೀಪ ರಸ್ತೆ ಕುಸಿತ Read More »