ಕರಾವಳಿ

ಮಂಗಳೂರು: ವಿದ್ಯಾರ್ಥಿನಿಯ ಮಾನಭಂಗಕ್ಕೆ ಯತ್ನ| ಆರೋಪಿಯ ಬಂಧನ

ಸಮಗ್ರ ನ್ಯೂಸ್: ವಿಧ್ಯಾರ್ಥಿನಿಯೊಬ್ಬಳ ಮನೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಂಜಿಮೊಗರಿನ ಮುಸ್ತಫಾ (35) ಎಂದು ಗುರುತಿಸಲಾಗಿದೆ. ಆರೋಪಿಯು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದ ತರಕಾರಿ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದು, ವಿಧ್ಯಾರ್ಥಿನಿಯ ನಂಬರ್ ಪಡೆದುಕೊಂಡ ಆರೋಪಿ ಆಕೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ. ಅಲ್ಲದೆ ಆರೋಪಿ ಜುಲೈ 8ರಂದು ರಾತ್ರಿ 8.30ಕ್ಕೆ ವಿದ್ಯಾರ್ಥಿನಿಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಾನಭಂಗಕ್ಕೆ ಯತ್ನಿಸಿದ್ದಲ್ಲದೆ ಕೃತ್ಯವನ್ನು ಇತರರಿಗೆ ಹೇಳಿದರೆ

ಮಂಗಳೂರು: ವಿದ್ಯಾರ್ಥಿನಿಯ ಮಾನಭಂಗಕ್ಕೆ ಯತ್ನ| ಆರೋಪಿಯ ಬಂಧನ Read More »

ಸುಳ್ಯ: ಗಣಿಗಾರಿಕೆಯಿಂದ ಮತ್ತೇ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು|
ಮನವಿ ಕೊಟ್ಟರು ಅಧಿಕಾರಿಗಳು ಯಾಕಿಷ್ಟು ಮೌನ?

ಸಮಗ್ರ ನ್ಯೂಸ್: ಗಣಿಗಾರಿಕೆಯಿಂದ ಮತ್ತೆ ಅಕ್ಕಪಕ್ಕದ ಮನೆಗಳಿಗೆ ಹಾನಿಯಾದ ಘಟನೆ ದ.ಕ‌ ಜಿಲ್ಲೆಯ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಅಳವುಪಾರೆಯಲ್ಲಿ ನಡೆದಿದ್ದು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಗಣಿಗಾರಿಗೆ ನಿಲ್ಲಿಸುವಂತೆ ಜು.16ರಂದು ಮನವಿ ಸಲ್ಲಿಸಲಾಯಿತು. ಕೆಲವು ವರ್ಷಗಳಿಂದ ಅಳವುಪಾರೆಯಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಅಕ್ಕಪಕ್ಕದ ಮನೆಗಳಿಗೆ, ಶಾಲೆ ಮತ್ತು ದೇವಸ್ಥಾನಕ್ಕೆ ಹಾನಿಯಾಗಿರುವ ಬಗ್ಗೆ ವರದಿಯಾಗಿತ್ತು. ಅಲ್ಲದೆ ಅಲ್ಲಿಯ ಕೆಲವು ಸಂಘಟನೆಗಳು ಗಣಿಗಾರಿಕೆಯನ್ನು ನಿಲ್ಲಿಸುವಂತೆ ಅಧಿಕಾರಿಗಳಿಗೆ ಮನವಿ ಕೂಡ ಸಲ್ಲಿಸಿದ್ದರು. ಇದೇ ವೇಳೆಗೆ ಸುಳ್ಯ ಹಾಗೂ ಮಡಿಕೇರಿ ಭಾಗದಲ್ಲಿ

ಸುಳ್ಯ: ಗಣಿಗಾರಿಕೆಯಿಂದ ಮತ್ತೇ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು|
ಮನವಿ ಕೊಟ್ಟರು ಅಧಿಕಾರಿಗಳು ಯಾಕಿಷ್ಟು ಮೌನ?
Read More »

ಸುಳ್ಯ: ಟಯರ್ ಶಾಪ್ ನಲ್ಲಿ ರಾತ್ರೋರಾತ್ರಿ ಹತ್ತಿಕೊಂಡ ಬೆಂಕಿ; ಭಾರೀ ನಷ್ಟ

ಸಮಗ್ರ ನ್ಯೂಸ್: ಟಯರ್ ಅಂಗಡಿಯೊಂದಕ್ಕೆ ತಡ ರಾತ್ರಿ ಬೆಂಕಿ ತಗುಲಿದ ಪರಿಣಾಮ ಭಾರೀ ನಷ್ಟ ಉಂಟಾಗಿರುವ ಘಟನೆ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ‌ ಕಲ್ಲುಗುಂಡಿಯ ಕೂಲಿಶೆಡ್‌ನಲ್ಲಿ ನಡೆದಿದೆ. ಬೆಂಕಿ ಹತ್ತಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆ ಆಕಾಶದೆತ್ತರಕ್ಕೆ ಚಿಮ್ಮಿತ್ತು. ಟಯರ್, ಟ್ಯೂಬ್ ರಿಪೇರಿ ಮತ್ತು ಮಾರಾಟದ ಅಂಗಡಿಗೆ ಬೆಂಕಿ ತಗುಲಿದ್ದು ಸಮೀಪದ ಗೂಡಂಗಡಿ, ಸೈಕಲ್ ರಿಪೇರಿ ಅಂಗಡಿ, ಹೋಟೆಲ್‌ಗೂ ಹಾನಿಯಾಗಿದೆ. ಸುಳ್ಯದ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದುಬಂದಿದೆ.

ಸುಳ್ಯ: ಟಯರ್ ಶಾಪ್ ನಲ್ಲಿ ರಾತ್ರೋರಾತ್ರಿ ಹತ್ತಿಕೊಂಡ ಬೆಂಕಿ; ಭಾರೀ ನಷ್ಟ Read More »

ಸುಳ್ಯ: ಎರಡು ದಿನವಾದರೂ ಪತ್ತೆಯಾಗದ ಕರೆಂಟ್| ಸಚಿವರೇ ಈ ಕೆಲಸ ಯಾವತ್ತಾಗುತ್ತೆ?

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ಕರೆಂಟ್ ನಾಪತ್ತೆಯಾಗಿದ್ದು, ಜನರು ಪರದಾಡುತ್ತಿದ್ದಾರೆ. ಇಂತಹ ಸಮಸ್ಯೆಗಳನ್ನು ಜನರ ಮುಂದಿಟ್ಟರೆ ಇದಕ್ಕಿಂತ ಮೊದಲು ಮಾಡಿದ ಕೆಲಸಗಳನ್ನು ಹೇಳಿ ಎಂದು ಮೀನುಗಾರಿಕಾ ಸಚಿವರು 6 ಬಾರಿ ಶಾಸಕರೂ ಆಗಿರುವ ಎಸ್ ಅಂಗಾರರು ಗರಂ ಆಗ್ತಾರೆ. ಕ್ಷೇತ್ರದಲ್ಲಿ ನಿರಂತರ ಎರಡನೇ ದಿನವೂ ದಿನಪೂರ್ತಿ ಕರೆಂಟ್‌ ನಾಪತ್ತೆಯಾಗಿದ್ದು ಜನರು ಬಸವಳಿದು ಹೋಗಿದ್ದಾರೆ. ಸುಳ್ಯದ ಜನತೆ ವಿದ್ಯುತ್ ಸಮಸ್ಯೆ ಮುಗಿಯದ ಕರೆಯಾಗಿದೆ. ಜು 16ರಂದು ದಿನಪೂರ್ತಿ ವಿದ್ಯುತ್ ಇಲ್ಲದೆ ಸಾರ್ವಜನಿಕರು ಪರದಾಡುವ

ಸುಳ್ಯ: ಎರಡು ದಿನವಾದರೂ ಪತ್ತೆಯಾಗದ ಕರೆಂಟ್| ಸಚಿವರೇ ಈ ಕೆಲಸ ಯಾವತ್ತಾಗುತ್ತೆ? Read More »

ದಲಿತರ ಕಾಲೋನಿಗೆ‌ ಬಂದ ಅನುದಾನ ಬೇರೆಡೆಗೆ ವರ್ಗಾವಣೆ| ಶಾಸಕರೇ ಈ ಕೆಲಸ ‌ಮಾಡಿದ್ದಾರೆ ಎಂದು ಆರೋಪಿಸಿದ ಅಂಬೇಡ್ಕರ್ ರಕ್ಷಣಾ ವೇದಿಕೆ

ಸಮಗ್ರ ನ್ಯೂಸ್: ದಲಿತರ ಕಾಲೋನಿಗೆ ಬಂದ ಶೌಚಾಲಯ ಮತ್ತು ಸ್ನಾನ ಗೃಹ ಕಟ್ಟಡ ಸ್ಥಳ ಬದಲಾವಣೆಗೆ ಶಾಸಕ ಅಂಗಾರರೇ ಕಾರಣ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ಆರೋಪಿಸಿದೆ. ಕಾಲೋನಿಯಲ್ಲಿ ನೂತನ ಕಟ್ಟಡ ಮಾಡಿಕೊಡದಿದ್ದಲ್ಲಿ ಬಿಜೆಪಿ ಕಚೇರಿ ಮುಂದೆ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು. ಉಬರಡ್ಕ ಮಿತ್ತೂರು ಗ್ರಾಮದ ಕೊಡಿಯಾಲಬೈಲು ದಲಿತ ಕಾಲೋನಿಗೆ ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಶೌಚಾಲಯ ಮತ್ತು ಸ್ನಾನ ಘಟಕದ ಸಂಕೀರ್ಣ ಕಟ್ಟಡ ನಿರ್ಮಿಸಲು 30 ಲಕ್ಷ ಅನುದಾನ ಬಂದಿದ್ದು, ಬಂದಿರುವ

ದಲಿತರ ಕಾಲೋನಿಗೆ‌ ಬಂದ ಅನುದಾನ ಬೇರೆಡೆಗೆ ವರ್ಗಾವಣೆ| ಶಾಸಕರೇ ಈ ಕೆಲಸ ‌ಮಾಡಿದ್ದಾರೆ ಎಂದು ಆರೋಪಿಸಿದ ಅಂಬೇಡ್ಕರ್ ರಕ್ಷಣಾ ವೇದಿಕೆ Read More »

ಮದ್ಯ ಮಾರಾಟದಲ್ಲಿ ದ.ಕ ಟಾಪರ್ ಅಲ್ಲ| ಸ್ಪಷ್ಟನೆ ನೀಡಿದ ಅಬಕಾರಿ ಡಿಸಿ

ಸಮಗ್ರ ನ್ಯೂಸ್: ಮದ್ಯ ಮಾರಾಟದಲ್ಲಿ ದ.ಕ ಜಿಲ್ಲೆ ಇಡೀ ರಾಜ್ಯಕ್ಕೆ ಟಾಪರ್ ಎಂಬ ಸುದ್ದಿ ಭಾರೀ ಸಂಚಲನ ಮೂಡಿಸಿದ್ದು, ಸಾಮಾಜಿಕ ತಾಣಗಳಲ್ಲೂ ಭಾರೀ ವೈರಲ್ ಆಗಿತ್ತು. ಆದರೆ ಈ ಸುದ್ದಿಗೆ ಸಂಬಂಧಿಸಿದಂತೆ ಮಂಗಳೂರು ಅಬಕಾರಿ ಡಿಸಿ ಬಿಂದುಶ್ರೀ ಸ್ಪಷ್ಟನೆ ನೀಡಿದ್ದು, ಇದೊಂದು ಸುಳ್ಳು ಸುದ್ದಿ ಎಂದಿದ್ದಾರೆ. ಈ ಕುರಿತು ಸ್ಪಷ್ಟನೆ ‌ನೀಡಿದ ಮಂಗಳೂರು ಅಬಕಾರಿ ಡಿಸಿ ಬಿಂದುಶ್ರೀ, ಈ ವರದಿಯನ್ನು ನಾವು ಯಾರಿಗೂ ಕೊಟ್ಟಿಲ್ಲ. ‌ರಾಜ್ಯದಲ್ಲಿ ದ‌.ಕ ಜಿಲ್ಲೆಯಲ್ಲಿ ಅತೀ ಹೆಚ್ಚು ಮದ್ಯ ಮಾರಾಟ ಎನ್ನುವುದು ಸರಿಯಲ್ಲ.

ಮದ್ಯ ಮಾರಾಟದಲ್ಲಿ ದ.ಕ ಟಾಪರ್ ಅಲ್ಲ| ಸ್ಪಷ್ಟನೆ ನೀಡಿದ ಅಬಕಾರಿ ಡಿಸಿ Read More »

ನಟ ಪೃಥ್ವಿ ಅಂಬರ್ ಗೆ ಮಾತೃವಿಯೋಗ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ನ ಉದಯೋನ್ಮುಖ ನಟ, ದಿಯಾ ಖ್ಯಾತಿಯ ಪೃಥ್ವಿ ಅಂಬರ್​ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು (ಜುಲೈ 15) ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ಅಂತ್ಯಕ್ರಿಯೆ ಇಂದು ನಡೆಯಲಿದೆ. ದುರ್ಗಾಪರಮೇಶ್ವರಿ ಮಹಿಳಾ ಸಂಘದ ಕಾರ್ಯದರ್ಶಿಯಾಗಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನೂ ಇವರ ಪುತ್ರ ನಟ ಪೃಥ್ವಿ ಅಂಬರ್‌ ಸಿನಿಮಾ

ನಟ ಪೃಥ್ವಿ ಅಂಬರ್ ಗೆ ಮಾತೃವಿಯೋಗ Read More »

ಶಿರಾಡಿ ಘಾಟ್ ಸಂಚಾರ ಸ್ಥಗಿತ| ಕಿ.ಮೀ ಗಟ್ಟಲೆ ಟ್ರಾಫಿಕ್ ಜ್ಯಾಂ

ಸಮಗ್ರ ನ್ಯೂಸ್: ಸಕಲೇಶಪುರದ ದೋಣಿಗಲ್ ಬಳಿ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜ್ಯಾಂ ಉಂಟಾಗಿದೆ. ಭಾರೀ ಗಾತ್ರದ ಟ್ರಕ್ಕ್ ಗಳು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದು, ಸಂಚಾರ ಅಸ್ತವ್ಯಸ್ಥವಾಗಿದೆ. ಇದರಿಂದ ಗುಂಡ್ಯ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯ- ಧರ್ಮಸ್ಥಳ ಪ್ರಯಾಣಿಸುವ ವಾಹನಗಳಿಗೆ ತೊಂದರೆಯುಂಟಾಗಿದ್ದು, ಗಂಟೆಗಟ್ಟಲೆ ಟ್ರಾಫಿಕ್ ಜ್ಯಾಂ ಉಂಟಾಗಿದೆ. ಅಡ್ಡಹೊಳೆಯಿಂದ ಗುಂಡ್ಯ ಸಕಲೇಶಪುರ ರಸ್ತೆಯ ತುಂಬಾ ಟ್ರಕ್ಕುಗಳು ಸಾಲುಗಟ್ಟಿವೆ

ಶಿರಾಡಿ ಘಾಟ್ ಸಂಚಾರ ಸ್ಥಗಿತ| ಕಿ.ಮೀ ಗಟ್ಟಲೆ ಟ್ರಾಫಿಕ್ ಜ್ಯಾಂ Read More »

ಮಂಗಳೂರು: ಮಳಲಿ ಮಸೀದಿ ವಿವಾದ| ಹಿಂದೂ ಸಂಘಟನೆಗಳ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿ ರಚನೆ ವಿವಾದಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಜ್ಞಾನವಾಪಿ ಮಾದರಿಯಂತೆ ಹೈಕೋರ್ಟ್ ಕೂಡ ಕಮಿಷನರ್ ನೇಮಕ ಮಾಡಬೇಕೆಂದು ಹಿಂದು ಮುಖಂಡರು ಅರ್ಜಿ ಸಲ್ಲಿಸಿದ್ದರು. ಹಾಗೇ ಅರ್ಜಿ ಸಿಂಧುತ್ವ ತೀರ್ಮಾನಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಲು ಅರ್ಜಿಯಲ್ಲಿ ಕೋರಿದ್ದರು. ಅರ್ಜಿಗೆ ಜುಮ್ಮಾ ಮಸೀದಿ ಪರ ವಕೀಲ ಸಿರಿಲ್ ಪ್ರಸಾದ್ ಆಕ್ಷೇಪ ವ್ಯಕ್ತಪಡಿಸಿದ್ದು, ವಿಚಾರಣಾ ನ್ಯಾಯಾಲಯ ಅರ್ಜಿ ಸಿಂಧುತ್ವದ ಬಗ್ಗೆ ನಿರ್ಧರಿಸಬೇಕು. ಅರ್ಜಿ ಊರ್ಜಿತವಾಗದೇ ಕೋರ್ಟ್

ಮಂಗಳೂರು: ಮಳಲಿ ಮಸೀದಿ ವಿವಾದ| ಹಿಂದೂ ಸಂಘಟನೆಗಳ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »

ಮತ್ತೆ ನಡುಗಿದ ಕೊಡಗು ಗಡಿಭಾಗ; ಆತಂಕಗೊಂಡ ಜನತೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಭೂಕಂಪದ ಅನುಭವವಾಗಿದೆ. ಜಿಲ್ಲೆಯ ಚೆಂಬು ಕೂಡಡ್ಕ ಪರಿಸರದಲ್ಲಿ ಇಂದು ಬೆಳಿಗ್ಗೆ 10:10ರ ಸುಮಾರಿಗೆ ಭೂಮಿ ನಡುಗಿದ್ದು ಜನತೆ ಆತಂಕಗೊಂಡಿದ್ದಾರೆ. ಕಳೆದೊಂದು ತಿಂಗಳಿನಿಂದ ಹಲವು ಬಾರಿ ಚೆಂಬು, ಸಂಪಾಜೆ,‌ ಪೆರಾಜೆ, ತೊಡಿಕಾನ, ಅರಂತೋಡು ಭಾಗಗಳಲ್ಲಿ ‌ಭೂಮಿ ಕಂಪಿಸುತ್ತಿದ್ದು, ಜನರು ಜೀವಭಯದಿಂದಲೇ ಬದುಕುವಂತಾಗಿದೆ.

ಮತ್ತೆ ನಡುಗಿದ ಕೊಡಗು ಗಡಿಭಾಗ; ಆತಂಕಗೊಂಡ ಜನತೆ Read More »