ಕರಾವಳಿ

ಕಾರು ನಿಯಂತ್ರಣ ತಪ್ಪಿ ಮರವಂತೆ ಬೀಚ್ ಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮರವಂತೆ ಬೀಚ್​ನಲ್ಲಿ ಕೆಂಪು ಬಣ್ಣದ ಸ್ವಿಫ್ಟ್​ ಕಾರು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರೋಶನ್​ ಆಚಾರ್ಯ ಶವ ಪತ್ತೆಯಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ನಿಯಂತ್ರಣ ತಪ್ಪಿದ ಪರಿಣಾಮ ನಾಲ್ವರು ಪ್ರಯಾಣಿಸುತ್ತಿದ್ದ ಸ್ವಿಫ್ಟ್​ ಕಾರು ಮರವಂತೆ ಕಡಲಿಗೆ ಹಾರಿತ್ತು. ಕೋಟೇಶ್ವರ ಮೂಲದ ವಿರಾಜ್​ ಆಚಾರ್ಯ ಸೀಟ್​ ಬೆಲ್ಟ್​ ಧರಿಸಿದ್ದ ಪರಿಣಾಮ ಅವರ ಮೃತದೇಹ ಕಾರಿನಲ್ಲಿಯೇ ಪತ್ತೆಯಾಗಿತ್ತು. ಇದೇ ಕಾರಿನಲ್ಲಿದ್ದ ಕಾರ್ತಿಕ್​ ಹಾಗೂ ಸಂದೀಪ್​ […]

ಕಾರು ನಿಯಂತ್ರಣ ತಪ್ಪಿ ಮರವಂತೆ ಬೀಚ್ ಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ Read More »

ಮುಂದುವರಿದ ವರುಣಾರ್ಭಟ| ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ಜು.5ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕುಗಳಿಗೆ ರಜೆ ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಜುಲೈ 5 ರಂದು ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌ ಆದೇಶ ಹೊರಡಿಸಿದ್ದಾರೆ. ಮುಂದಿನ ಎರಡು ದಿನಗಳ ಕಾಲ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ನಿನ್ನೆಯಷ್ಟೇ ಅಪರ ಜಿಲ್ಲಾಧಿಕಾರಿಗಳು ಅತೀ ಹೆಚ್ಚು ಮಳೆ ಸುರಿಯುತ್ತಿರುವ ಹೆಬ್ರಿ ತಾಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿದ್ದರು. ಆದರೆ

ಮುಂದುವರಿದ ವರುಣಾರ್ಭಟ| ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ಜು.5ರಂದು ರಜೆ ಘೋಷಣೆ Read More »

ಭಾರೀ ಮಳೆ ಹಿನ್ನಲೆ; ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 5 ರ ಮಂಗಳವಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಹಿನ್ನಲೆ; ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಸಂಪಾಜೆ ಭೂಕಂಪನ ಪ್ರದೇಶಕ್ಕೆ ಕೇಂದ್ರ ತಂಡ ಪರಿಶೀಲನೆ

ಸಮಗ್ರ ನ್ಯೂಸ್: ಕಳೆದ‌ ಕೆಲವಾರಗಳಿಂದ ಕಂಪಿಸುತ್ತಿರುವ ಸಂಪಾಜೆ ಗ್ರಾಮಕ್ಕೆ ಭೂಕಂಪ ಅಧ್ಯಯನ ತಂಡ ಆಗಮಿಸಿದ್ದು, ಭೂಕಂಪನ ಬಾಧಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದೆ. ಕೇಂದ್ರ ಸರಕಾರದ ಪ್ರಾಕೃತಿಕ ವಿಕೋಪ ಇಲಾಖೆಯ ಮುಖ್ಯಸ್ಥರಾದ ಅಝದ್ ಅಹಮದ್ ಭಟ್, ಸೆಂಥಿಲ್ ,ಮಂಗಳೂರು ವಿಭಾಗದ ಭೂ ಗರ್ಭ ಇಲಾಖೆಯ ಮಹದೇವ್, ತಹಸೀಲ್ದಾರ್ ಅನಿತಾಲಕ್ಷ್ಮಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜ, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ. ಎಮ್. ಶಾಹಿದ್ ತೆಕ್ಕಿಲ್, ಪಂಚಾಯತ್ ಸದಸ್ಯ ಎಸ್.

ಸಂಪಾಜೆ ಭೂಕಂಪನ ಪ್ರದೇಶಕ್ಕೆ ಕೇಂದ್ರ ತಂಡ ಪರಿಶೀಲನೆ Read More »

ಸುಳ್ಯ; ಬಿರುಕು ಬಿಟ್ಟ ಗುಳಿಕ್ಕಾನ ಪ್ರದೇಶಕ್ಕೆ ಭೇಟಿ ನೀಡಿದ ತಜ್ಞರ ತಂಡ

ಸಮಗ್ರ ನ್ಯೂಸ್ : ಬಿರುಕು ಬಿಟ್ಟು ಜನರ ಆತಂಕಕ್ಕೆ ಕಾರಣವಾದ ಸುಳ್ಯದ ಗುಳಿಕ್ಕಾನ ಪ್ರದೇಶಕ್ಕೆ ತಜ್ಞರ ತಂಡ ಭೇಟಿ ನೀಡಿದ್ದು, 2018 ರಲ್ಲಿ ಗುಳಿಕ್ಕಾನದ ಗುಡ್ಡದಲ್ಲಿ 200 ಮೀಟರ್ ದೂರದವರೆಗೆ ಭೂಮಿ ಆಳವಾಗಿ ಭಾಗ ಬಿಟ್ಟಿತು. ಈ ವೇಳೆ ಗುಳಿಕ್ಕಾನದ ಗುಡ್ಡ ಭಾಗದಲ್ಲಿ 10 ಕುಟುಂಬಗಳು ವಾಸಿಸುತ್ತಿದ್ದವು. ಇದೀಗ ಈ ಗುಡ್ಡ ಪ್ರದೇಶದಲ್ಲಿ ಜನ ವಾಸ ಮಾಡಲು ಸೂಕ್ತವಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸುವುದಕ್ಕೆ ತಂಡ ಆಗಮಿಸಿದೆ. ಸುಳ್ಯದ ಗುಳಿಕ್ಕಾನ ಪ್ರದೇಶ ಜನ ವಾಸಿಸಲು ಯೊಗ್ಯವಾಗಿದೆಯೇ ಎಂದು ತಿಳಿಯಲು

ಸುಳ್ಯ; ಬಿರುಕು ಬಿಟ್ಟ ಗುಳಿಕ್ಕಾನ ಪ್ರದೇಶಕ್ಕೆ ಭೇಟಿ ನೀಡಿದ ತಜ್ಞರ ತಂಡ Read More »

ಸ್ಕೂಟಿಗಳ ನಡುವೆ ಅಪಘಾತ; ಸುಳ್ಯದ ಪತ್ರಕರ್ತ ಕುಟುಂಬ ಸಣ್ಣ ಪುಟ್ಟ ಗಾಯಗಳಿಂದ ಪಾರು

ಸಮಗ್ರ ನ್ಯೂಸ್ : ಸುಳ್ಯದ ಜಟ್ಟಿಪಳ್ಳ ರಸ್ತೆಯಿಂದ ಮುಖ್ಯ ರಸ್ತೆಗೆ ಬರುವಲ್ಲಿ ಇಂದು ಬೆಳಗ್ಗೆ ಎರಡು ಸ್ಕೂಟಿಗಳ ನಡುವೆ ಅಪಘಾತ ಸಂಭವಿಸಿದೆ. ಸುಳ್ಯದ ಸುದ್ದಿ ಬಿಡುಗಡೆ ಪತ್ರಕರ್ತರಾಗಿರುವ ಶರೀಫ್ ಜಟ್ಟಿಪಳ್ಳ ಹಾಗೂ ಅವರ ಪತ್ನಿ, ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪತ್ರಕರ್ತ ಶರೀಫ್ ಅವರ ಪತ್ನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂಬ ಮಾಹಿತಿ ದೊರಕಿದ್ದು, ಈ ವಿಷಯದ ಬಗ್ಗೆ ಪೊಲೀಸ್ ಕೇಸ್ ದಾಖಲಾಗಿದೆ. ಭೀಕರ ಅಪಘಾತದ ದೃಶ್ಯ ಸಿಸಿ ಕ್ಯಾಮರಾ ದಲ್ಲಿ ಸೆರೆಯಾಗಿದ್ದು, ಇದೀಗ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ

ಸ್ಕೂಟಿಗಳ ನಡುವೆ ಅಪಘಾತ; ಸುಳ್ಯದ ಪತ್ರಕರ್ತ ಕುಟುಂಬ ಸಣ್ಣ ಪುಟ್ಟ ಗಾಯಗಳಿಂದ ಪಾರು Read More »

ಗೋವುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳಲ್ಲಿ; ಓರ್ವ ಎಸ್ಕೇಪ್

ಸಮಗ್ರ ನ್ಯೂಸ್ : ಗೋವುಗಳನ್ನು ಸಾಗಿಸುತ್ತಿದ್ದ ಕಳ್ಳರನ್ನು ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ಪತ್ತೆ ಹಿಡಿದ ಘಟನೆಯೊಂದು ಕಾರ್ಕಳದ ಹೆಬ್ರಿ ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಉಡುಪಿಯ ಮಲ್ಪೆ ಹೂಡೆಯಲ್ಲಿ ಅಕ್ರಮ ಕಸಾಯಿ ಖಾನೆ ನಡೆಸುತ್ತಿರುವ ಸಹೋದರರಾದ ಶಕೀಲ್ ಅಹಮದ್ ಮತ್ತು ಅಖಿಲ್ ಅಹಮದ್ ಬಂಧಿತ ಆರೋಪಿಗಳು. ರಾತ್ರಿ ವೇಳೆ ಮನೆಗಳಿಗೆ ನುಗ್ಗಿ ತಲ್ವಾರು ಹಿಡಿದು ದನ ಕದಿಯುತ್ತಿದ್ದ ಸಹೋದರರು ಬೇಳಂಜೆ ಗ್ರಾಮದ ಈಸ ಗದ್ದೆ ಎಂಬಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ಎರಡು ಜಾನುವಾರುಗಳನ್ನು

ಗೋವುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳಲ್ಲಿ; ಓರ್ವ ಎಸ್ಕೇಪ್ Read More »

ವಿಟ್ಲ: ಹಿಂದೂ ಯುವತಿಯನ್ನು‌ ಮದುವೆಯಾದ ಮುಸ್ಲಿಂ ಯುವಕ| ಸಂಘಟನೆಗಳಿಂದ ಲವ್ ಜಿಹಾದ್ ಆರೋಪ

ಸಮಗ್ರ ನ್ಯೂಸ್: ಅನ್ಯಕೋಮಿನ ಯುವಕನೋರ್ವ ಮೈಸೂರು ಮೂಲದ ಹಿಂದೂ ಯುವತಿಯನ್ನು ವಿವಾಹವಾದ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಟ್ಲ ನೀರಕಣಿ ಮಾರ್ನೆಮಿಗುಡ್ಡೆ ನಿವಾಸಿ ಉಬೈದ್(27) ಎಂಬ ಅನ್ಯಕೋಮಿನ ಯುವಕ ಮೈಸೂರು ಲೋಕನಾಯಕನ ನಗರದ ಸೌಂದರ್ಯ(24) ಎಂಬ ಹಿಂದೂ ಯುವತಿಯನ್ನು ಮದುವೆಯಾಗಿದ್ದಾನೆ. ಉಬೈದ್ ಮತ್ತು ಸೌಂದರ್ಯ ಮೈಸೂರಿನಲ್ಲಿ ರಿಜಿಸ್ಟರ್ ವಿವಾಹವಾಗಿದ್ದು, ಅವರ ಮದುವೆಯ ರಿಜಿಸ್ಟರ್ ಪತ್ರವು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಜೋಡಿ ಕೆಲ ದಿನ ಹಿಂದೆ ವಿಟ್ಲದಲ್ಲಿ ತಿರುಗಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಕೇರಳದಲ್ಲಿ ನಿಶ್ಚಿತಾರ್ಥವಾದ ಈ

ವಿಟ್ಲ: ಹಿಂದೂ ಯುವತಿಯನ್ನು‌ ಮದುವೆಯಾದ ಮುಸ್ಲಿಂ ಯುವಕ| ಸಂಘಟನೆಗಳಿಂದ ಲವ್ ಜಿಹಾದ್ ಆರೋಪ Read More »

ಭಾರೀ ಮಳೆ ಹಿನ್ನಲೆ; ಬೆಳ್ತಂಗಡಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 4 ರ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಹಿನ್ನಲೆ; ಬೆಳ್ತಂಗಡಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಮತ್ತೆ ಕೊಡಗು ಗಡಿಭಾಗದಲ್ಲಿ ಅಗೋಚರ ಸದ್ದು| ಭೂಮಿಯೊಳಗೆ ಕಂಪನ

ಸಮಗ್ರ ನ್ಯೂಸ್: ಭೂಕಂಪದ ಭಯದ ನೆರಳಲ್ಲಿ ಬದುಕುತ್ತಿರುವ ಕೊಡಗು ಹಾಗೂ ದಕ್ಷಿಣ ಕನ್ನಡ ಗಡಿ ಭಾಗದ ಜನರಿಗೆ ಈಗ ದಿನನಿತ್ಯ ಜೋರಾದ ಶಬ್ದ ಹಾಗೂ ಲಘು ಕಂಪನಗಳೊಂದಿಗೆ ಬದುಕುವಂತಾಗಿದೆ. ಸರಣಿ ಕಂಪನ ಅನುಭವಿಸಿ ಚಿಂತೆಯಲ್ಲಿರುವ ಪೆರಾಜೆ ಹಾಗೂ ಚೆಂಬುವಿನಲ್ಲಿ ಇದೀಗ ಭಾನುವಾರ ರಾತ್ರಿ 9.15 ರಿಂದ 9.20 ರ ವೇಳೆಯಲ್ಲಿ ಕಂಪನದ ಅನುಭವ ಆಗಿದೆ ಎಂಬ ಮಾಹಿತಿ ಲಭಿಸಿದೆ. ಭೂಮಿಯೊಡಲಿನಿಂದ ಮೊದಲಿಗೆ ಅಗೋಚರ ಶಬ್ಧ ಹಾಗೂ ನಂತರ ಸಣ್ಣ ಮಟ್ಟಿನ ಕಂಪನ ಆಗಿದೆ ಎಂದು ತಿಳಿಸಿದ್ದಾರೆ. ಹಿಂದಿನ

ಮತ್ತೆ ಕೊಡಗು ಗಡಿಭಾಗದಲ್ಲಿ ಅಗೋಚರ ಸದ್ದು| ಭೂಮಿಯೊಳಗೆ ಕಂಪನ Read More »