ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಚೆಕ್ ವಿತರಣೆ

ಸಮಗ್ರ ನ್ಯೂಸ್: ಕೊಡಿಯಾಲ ಕಾರ್ಯಕ್ಷೇತ್ರದಲ್ಲಿ 650494 ಧರ್ಮಶ್ರೀ ಸಂಘದ ಸದಸ್ಯರ ಕುಸುಮ ರೈ ಅವರ ಅನಾರೋಗ್ಯದ ಕಾರಣ ಆಸ್ಪತ್ರೆ ದಾಖಲಾಗಿದ್ದು ಆಗ ಮರಣ ಹೊಂದಿದ್ದು ಅವರ ಪತಿ ವಿಶ್ವನಾಥ ರೈ ರವರಿಗೆ ಸಂಪೂರ್ಣ ಸುರಕ್ಷಾ 40000/ ಚೆಕ್, ಮತ್ತು ಬೆಳ್ಳಾರೆ ವಲಯದ ಅಮರಪಡ್ನೂರು ಒಕ್ಕೂಟದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ Bc ಟ್ರಸ್ಟ್ ಸರೋಜಿನಿ ಅವರ ಪತಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಚಿಕಿತ್ಸೆಗೆ ಕ್ಷೇತ್ರದ ಸಂಪೂರ್ಣ ಸುರಕ್ಷದ 30000/ ಚೆಕ್ಕನ್ನು ವಿತರಣೆ ಮಾಡಲಾಯಿತು. ಕೊಡಿಯಾಲ […]

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಚೆಕ್ ವಿತರಣೆ Read More »

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಗಲಭೆಗಳಲ್ಲಿ ಭಾಗಿಯಾಗಿಲ್ಲವೆಂದು 13 ಮಂದಿ‌ಯಿಂದ ಕಲ್ಕುಡ ದೇವಸ್ಥಾನದಲ್ಲಿ ಪ್ರಾರ್ಥನೆ

ಸಮಗ್ರ ನ್ಯೂಸ್: ಎರಡು ವರ್ಷದ ಹಿಂದೆ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆಯಾದ ಅನಂತರದ ಯಾವುದೇ ಗಲಭೆಗಳಲ್ಲಿ ನಾವು ಭಾಗಿಯಾಗಿಲ್ಲ. ನಮ್ಮ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು 13 ಮಂದಿ ಯುವಕರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ಜು. 22ರಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ನಂದಕುಮಾರ್‌, ಕಮಲಾಕ್ಷ, ಅರುಣ್‌ ರೈ, ಪದ್ಮನಾಭ ತಡಗಜೆ, ಪ್ರಶಾಂತ್‌, ಆನಂದ ಯು., ಧರ್ಮಪಾಲ, ಚಿದಾನಂದ ಬಾಳಿಲ, ಹರೀಶ್‌ ಬಾಳಿಲ, ಡಿಪಿನ್‌ ಎಡಮಂಗಲ, ಶಿವಾನಂದ, ಹರ್ಷಿತ್‌, ನಿತೀಶ್‌ ಕೆ. ಅವರ ಮೇಲೆ ಕೇಸು ದಾಖಲಿಸಲಾಗಿತ್ತು.

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಗಲಭೆಗಳಲ್ಲಿ ಭಾಗಿಯಾಗಿಲ್ಲವೆಂದು 13 ಮಂದಿ‌ಯಿಂದ ಕಲ್ಕುಡ ದೇವಸ್ಥಾನದಲ್ಲಿ ಪ್ರಾರ್ಥನೆ Read More »

ಪುತ್ತೂರು: ಟ್ಯಾಂಕರ್ ಮತ್ತು‌ ಸ್ಕೂಟರ್‌ ನಡುವೆ ಭೀಕರ ಅಪಘಾತ| ವಿಕಲಚೇತನ ಸ್ಕೂಟಿ ಸವಾರ ದುರ್ಮರಣ

ಸಮಗ್ರ ನ್ಯೂಸ್: ಪುತ್ತೂರಿನ ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕ‌ರ್ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ ಮಂಗಳೂರು ಕಡೆ ಹೋಗುತ್ತಿದ್ದ ಟ್ಯಾಂಕರ್ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡ‌ರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.

ಪುತ್ತೂರು: ಟ್ಯಾಂಕರ್ ಮತ್ತು‌ ಸ್ಕೂಟರ್‌ ನಡುವೆ ಭೀಕರ ಅಪಘಾತ| ವಿಕಲಚೇತನ ಸ್ಕೂಟಿ ಸವಾರ ದುರ್ಮರಣ Read More »

ಸಾಹಿತಿ ಜ್ಯೋತಿಷಿ ಎಚ್. ಭೀಮರಾವ್ ವಾಷ್ಠರ್ ರಿಗೆ ಬೆಂಗಳೂರಿನಲ್ಲಿ ಸನ್ಮಾನ

ಸಮಗ್ರ ನ್ಯೂಸ್: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇರುವ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ಜರುಗಿದ ರಾಷ್ಟ್ರೀಯ ಬೆಳಕು ಸಾಹಿತ್ಯ ಸಂಭ್ರಮ -2024 ಸಮ್ಮೇಳನದಲ್ಲಿ ಸುಳ್ಯದ ಖ್ಯಾತ ಸಾಹಿತಿ, ಜ್ಯೋತಿಷಿ, ಗಾಯಕ ಎಚ್. ಭೀಮರಾವ್ ವಾಷ್ಠರ್ ಅವರನ್ನು ಬೆಳಕು ಸಂಸ್ಥೆಯ ಸ್ಥಾಪಕಧ್ಯಕ್ಷ ಅಣ್ಣಪ್ಪ ಮೇಟಿಗೌಡ ಅವರು ಸಮ್ಮಾನಿಸಿ ಗೌರವಿಸಿದರು. ಭೀಮರಾವ್ ವಾಷ್ಠರ್ ಅವರ ಅಪಾರ ಸಾಧನೆ ಪರಿಗಣಿಸಿ ಸನ್ಮಾನಿಸಿದ ಸಮಾರಂಭದ ವೇದಿಕೆಯಲ್ಲಿ ಖ್ಯಾತ ಕವಿ ಜಯಕವಿ ಜಯಪ್ಪ ಹೊನ್ನಾಳಿ, ವಿಹಾರಿ ಹರಿನರಸಿಂಹ ಉಪಾಧ್ಯಾಯ, ಲತಾ

ಸಾಹಿತಿ ಜ್ಯೋತಿಷಿ ಎಚ್. ಭೀಮರಾವ್ ವಾಷ್ಠರ್ ರಿಗೆ ಬೆಂಗಳೂರಿನಲ್ಲಿ ಸನ್ಮಾನ Read More »

ಪುತ್ತೂರು: ಲಾರಿ‌ ಟಯರ್ ಬದಲಿಸುವ ವೇಳೆ ಸ್ಪೋಟ| ಇಬ್ಬರು ಕಾರ್ಮಿಕರು ಗಂಭೀರ

ಸಮಗ್ರ ನ್ಯೂಸ್: ಲಾರಿಯೊಂದರ ಟಯರ್ ಬದಲಿಸುವ ವೇಳೆ ಟಯರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯಕ್ಕೆ ಒಳಗಾದ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ ರಾತ್ರಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸ್ಪೋಟದ ಭೀಕರತೆ ತೋರಿಸುತ್ತಿದೆ. ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ ಕರಾಯದ ಜನತಾ ಕಾಲನಿ ನಿವಾಸಿ ರಶೀದ್ ಎಂದು ಗುರುತಿಸಲಾಗಿದೆ. ಕಲ್ಲು ಸಾಗಾಟದ ಲಾರಿಯ ಟಯರ್‌ ಪಂಚರ್ ಆದ ಕಾರಣ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಬಳಿಕ ಟಯರ್ ಪಂಚರ್

ಪುತ್ತೂರು: ಲಾರಿ‌ ಟಯರ್ ಬದಲಿಸುವ ವೇಳೆ ಸ್ಪೋಟ| ಇಬ್ಬರು ಕಾರ್ಮಿಕರು ಗಂಭೀರ Read More »

ಸುಳ್ಯ: ಚಾಂದಿನಿಯ ಚಿಕಿತ್ಸೆಗಾಗಿ‌‌ ಸಿಎಂ ಪರಿಹಾರ ನಿಧಿಯಿಂದ 9 ಲಕ್ಷ ನೆರವು ಬಿಡುಗಡೆ|

ಸಮಗ್ರ ನ್ಯೂಸ್: ‘ಹೈಪರ್‌ ಐಜಿಇ ಸಿಂಡ್ರೋಮ್‌’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ, ಸುಳ್ಯ ತಾಲೂಕಿನ ಸುಳ್ಯ ನಗರದ ನಾವೂರಿನ ಬಡ ಕುಟುಂಬದ ಚಾಂದಿನಿ ಜಿ.ಡಿ. (33) ಎಂಬುವರ ಚಿಕಿತ್ಸೆ ವೆಚ್ಚ ಭರಿಸಲು ಸರ್ಕಾರ ಮತ್ತೆ ₹ 9 ಲಕ್ಷ ಅನುದಾನ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ₹ 4 ಲಕ್ಷ ಬಿಡುಗಡೆಯಾಗಿತ್ತು. ಉಳಿಕೆ ಮೊತ್ತ ಬಿಡುಗಡೆ ಆಗದ ಕಾರಣ ಚಿಕಿತ್ಸೆ ಮುಂದುವರಿಸಲು ಆಸ್ಪತ್ರೆಯವರು ನಿರಾಕರಿಸಿದ್ದರು. ಚಿಕಿತ್ಸೆ ಕೊಡಿಸಲು ಸಾಧ್ಯವಾಗದೇ ಇದ್ದರೆ ದಯಾಮರಣವನ್ನಾದರೂ ನೀಡಿ’ ಎಂದು ಕೋರಿ

ಸುಳ್ಯ: ಚಾಂದಿನಿಯ ಚಿಕಿತ್ಸೆಗಾಗಿ‌‌ ಸಿಎಂ ಪರಿಹಾರ ನಿಧಿಯಿಂದ 9 ಲಕ್ಷ ನೆರವು ಬಿಡುಗಡೆ| Read More »

ಉಪ್ಪಿನಂಗಡಿ: ಯುವತಿ ಸ್ನಾನ ಮಾಡುತ್ತಿದ್ದಾಗ‌ ಇಣುಕಿದ ಎರಡು ಮಕ್ಕಳ ತಂದೆ| ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಸಮಗ್ರ ನ್ಯೂಸ್: ಯುವತಿ ಬಚ್ಚಲು ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಕಿಟಕಿಯಿಂದ ನೋಡಲೆತ್ನಿಸಿದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಪೆರಿಯಡ್ಕ‌ ಎಂಬಲ್ಲಿ ಆದಿತ್ಯವಾರ ರಾತ್ರಿ ನಡೆದಿದೆ. ಆರೋಪಿತ ವ್ಯಕ್ತಿ ವಿವಾಹಿತನಾಗಿದ್ದು, 16 ಹಾಗೂ 9 ವರ್ಷದ ಇಬ್ಬರು ಮಕ್ಕಳ ತಂದೆಯಾಗಿದ್ದಾನೆ. ಯುವತಿ ಸ್ನಾನ ಮಾಡುತ್ತಿದ್ದಾಗ ಕಿಟಕಿಯ ಬಾಗಿಲನ್ನು ಸರಿಸಲು ಯತ್ನಿಸಿದ್ದ ವೇಳೆ ಉಂಟಾದ ಶಬ್ದದಿಂದ ಸಂಶಯಗೊಂಡ ಯುವತಿ ತನ್ನ ತಾಯಿಗೆ ಮಾಹಿತಿ ನೀಡಿದರು. ತಾಯಿ ಪರಿಶೀಲಿಸಿದಾಗ ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ರಹಿಮಾನ್ ಎಂದು ಗುರುತಿಸಿದ್ದರು.

ಉಪ್ಪಿನಂಗಡಿ: ಯುವತಿ ಸ್ನಾನ ಮಾಡುತ್ತಿದ್ದಾಗ‌ ಇಣುಕಿದ ಎರಡು ಮಕ್ಕಳ ತಂದೆ| ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು Read More »

ಸುಳ್ಯ: ಬಸ್ – ಸ್ಕೂಟಿ ನಡುವೆ ಅಪಘಾತ| ಗ್ರಾ.ಪಂ ಸದಸ್ಯ ದುರ್ಮರಣ

ಸಮಗ್ರ ನ್ಯೂಸ್: ಸ್ಕೂಟಿ ಹಾಗೂ ಬಸ್ ಪರಸ್ಪರ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಸುಳ್ಯ ತಾಲೂಕಿನ ನೆ.ಕೆಮ್ರಾಜೆ ಗ್ರಾ.ಪಂ. ಸದಸ್ಯ ಹಾಗೂ ಪಿಗ್ಮಿ ಸಂಗ್ರಾಹಕರಾಗಿರುವ ರಾಮಚಂದ್ರ ಪ್ರಭು ಅವರು ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಜಾಲ್ಸೂರು – ಸುಬ್ರಹ್ಮಣ್ಯ ರಾ.ಹೆದ್ದಾರಿಯ ಸೋಣಂಗೇರಿಯ ಸುತ್ತುಕೋಟೆ ಬಳಿ ಸಂಭವಿಸಿದೆ. ರಾಮಚಂದ್ರ ಪ್ರಭು ಅವರು ಸ್ಕೂಟಿಯಲ್ಲಿ ಸುಳ್ಯಕ್ಕೆ ಬರುತ್ತಿದ್ದ ವೇಳೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಸುತ್ತುಕೋಟೆ ಬಳಿ ಡಿಕ್ಕಿ ಹೊಡೆದಿದ್ದು, ರಾಮಚಂದ್ರ ಪ್ರಭುರವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟರೆಂದು

ಸುಳ್ಯ: ಬಸ್ – ಸ್ಕೂಟಿ ನಡುವೆ ಅಪಘಾತ| ಗ್ರಾ.ಪಂ ಸದಸ್ಯ ದುರ್ಮರಣ Read More »

ಹವಾಮಾನ ವರದಿ| ಜು.25ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ‌ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಗಳಿದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಜು. 25ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ 23ರ ವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಈ ಮೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿಮೀ ತಲುಪುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಬೆಳಗಾವಿ, ಬೀದರ್‌, ಕಲಬುರಗಿ

ಹವಾಮಾನ ವರದಿ| ಜು.25ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ‌ಮಳೆ ಸಾಧ್ಯತೆ Read More »

ಕಾಣಿಯೂರು: ಕಾಣೆಯಾಗಿದ್ದ ಯುವಕನ ಶವ ನದಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಪುತ್ತೂರು ತಾಲೂಕಿನ ಸರ್ವೆ ಎಂಬಲ್ಲಿ ಗೌರಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದ ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಸನ್ಮಿತ್‌ (21) ಮೃತದೇಹ ಪತ್ತೆಯಾಗಿದೆ. ಸರ್ವೆಯ ಗೌರಿ ಹೊಳೆಯ ಸೇತುವೆಯ ಬಳಿ ಮೃತದೇಹ ಪತ್ತೆಯಾಗಿದೆ. ಜು.19ರ ರಾತ್ರಿಯಿಂದ ಸನ್ಮಿತ್‌ ಕಾಣೆಯಾಗಿದ್ದು, ಆತನ ಸ್ಕೂಟರ್‌ ಮತ್ತಿತರ ವಸ್ತು ಸರ್ವೆ ಗೌರಿ ಹೊಳೆಯ ಸಮೀಪ ಪತ್ತೆಯಾಗಿತ್ತು. ಮೃತ ಸನ್ಮಿತ್‌ ತಂದೆ ಚಂದ್ರಗೌಡ ನೀಡಿದ ದೂರಿನಂತೆ ನಿನ್ನೆ ಬೆಳಿಗ್ಗಿನಿಂದಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹಕ್ಕಾಗಿ ಗೌರಿ

ಕಾಣಿಯೂರು: ಕಾಣೆಯಾಗಿದ್ದ ಯುವಕನ ಶವ ನದಿಯಲ್ಲಿ ಪತ್ತೆ Read More »