ಕರಾವಳಿ

ಸುಳ್ಯ: ಮರ್ಕಂಜ 12:30ಕ್ಕೆ ಮತ್ತೊಮ್ಮೆ ಕಂಪಿಸಿದ ಭೂಮಿ…! ಕಾರಣ??

ಸುಳ್ಯ: ಮರ್ಕಂಜದಲ್ಲಿ ಮತ್ತೊಮ್ಮೆ ಭೂ ಕಂಪನ ಆಗಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮಧ್ಯಾಹ್ನ ಸುಮಾರು 12:30 ಕ್ಕೆ ಭಾರಿ ಶಬ್ದ ದೊಂದಿಗಿ ಕಂಪನ ಅಗಿದ್ದು, ಭೂಮಿ ಕಂಪನದ ಅನುಭವ ಆಗಿದ್ದು, ಈ ಅನುಭವ ಮರ್ಕಂಜದ ಅಳವುಪಾರೆಯಲ್ಲಿ ಭಾರೀ ಸ್ಪೋಟಕ ಬಳಸಿ‌ ಗಣಿಗಾರಿಕೆ ನಡೆಸಿರುವ ಬಗ್ಗೆ ಸ್ಥಳೀಯ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ. ಅದರೆ ಈ ಕಂಪನ ಅಳವುಪಾರೆಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಆಗಿರುವುದೇ ಅಥವಾ ಭೂಕಂಪನ ಆಗಿರುವುದೇ ಎನ್ನುವ ಅನುಮಾನ ಮೂಡಿದೆ. ಒಟ್ಟಿನಲ್ಲಿ ಮರ್ಕಂಜ ಜನತೆ ಭಯಭೀತರಾಗಿದ್ದಾರೆ.

ಸುಳ್ಯ: ಮರ್ಕಂಜ 12:30ಕ್ಕೆ ಮತ್ತೊಮ್ಮೆ ಕಂಪಿಸಿದ ಭೂಮಿ…! ಕಾರಣ?? Read More »

ದನಗಳನ್ನು ಕದ್ದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್ : ದನಗಳನ್ನು ಕದ್ದು ಕೊಂಡೊಯ್ದು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ, ಹಾಗೆಯೇ ಸ್ಥಳದಲ್ಲಿದ್ದ ಸಾವಿರಾರು ರೂ.ಮೌಲ್ಯದ ದನದ ಮಾಂಸವನ್ನು ವಶಕ್ಕೆ ಪಡೆದ ಘಟನೆಯೊಂದು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಗೋಳ್ತಮಜಲು ನಿವಾಸಿ ಮಹಮ್ಮದ್ ಹಾಗೂ ಸಾದಿಕ್ ಎಂದು ಗುರುತಿಸಲಾಗಿದೆ. ಮಹಮ್ಮದ್ ಎಂಬಾತ ಮನೆಯಲ್ಲಿ ದನಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಬಗ್ಗೆ ಸ್ಥಳೀಯರಿಂದ ಮಾಹಿತಿ ಲಭ್ಯವಾದ ಹಿನ್ನೆಲೆ ಎಸ್.ಐ ಅವಿನಾಶ್ ನೇತೃತ್ವದ ನಗರ

ದನಗಳನ್ನು ಕದ್ದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ Read More »

ಸುಳ್ಯ: ವರದಿ‌ ಕೈಸೇರುವವರೆಗೆ ಮರ್ಕಂಜದಲ್ಲಿ ಗಣಿಗಾರಿಕೆ ನಿಲ್ಲಿಸುವ ಭರವಸೆ, ಪ್ರತಿಭಟನೆ ಹಿಂತೆಗೆತ, ಗಣಿ ಇಲಾಖೆಯ ಮಹಜರಿಗೆ ಸಹಿ ಹಾಕದ ಸ್ಥಳೀಯರು

ಸಮಗ್ರ ನ್ಯೂಸ್: ಗಣಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ‌ ವರದಿ ಪ್ರಕಟಿಸುವ ತನಕ ಗಣಿಗಾರಿಕೆ ನಿಲ್ಲಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನ ಮರ್ಕಂಜ ಅಳವುಪಾರೆಯಲ್ಲಿ ನಡೆದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಳ್ಳಲಾಗಿದೆ. ಗ್ರಾಮಸ್ಥರ ಆಕ್ರೋಶದ ಹಿನ್ನೆಲೆಯಲ್ಲಿ ಜಿಲ್ಲಾ ಗಣಿ ಅಧಿಕಾರಿಗಳು ಮರ್ಕಂಜದಲ್ಲಿ ನಡೆಯುತ್ತಿರುವ ಕಗ್ಗಲ್ಲಿನ ಗಣಿಗಾರಿಕೆ ಹಾನಿ ಪ್ರದೇಶಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮರ್ಕಂಜದ ಮಿನುಂಗೂರು ದೇವಸ್ಥಾನ, ಮಾಡ್ನೂರು ಹಿ.ಪ್ರಾ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಈ ಕುರಿತು ವರದಿ ನೀಡುವುದಾಗಿ

ಸುಳ್ಯ: ವರದಿ‌ ಕೈಸೇರುವವರೆಗೆ ಮರ್ಕಂಜದಲ್ಲಿ ಗಣಿಗಾರಿಕೆ ನಿಲ್ಲಿಸುವ ಭರವಸೆ, ಪ್ರತಿಭಟನೆ ಹಿಂತೆಗೆತ, ಗಣಿ ಇಲಾಖೆಯ ಮಹಜರಿಗೆ ಸಹಿ ಹಾಕದ ಸ್ಥಳೀಯರು Read More »

ಸುಳ್ಯದಲ್ಲಿ 5ನೇ ಬಾರಿ ಕಂಪಿಸಿದ ಭೂಮಿ| ಆತಂಕದಲ್ಲಿ ಹೊರಗೋಡಿ ಬಂದ ಜನತೆ

ಸಮಗ್ರ ನ್ಯೂಸ್: ಮಧ್ಯರಾತ್ರಿಯಲ್ಲಿ ಭೂಕಂಪವಾದ ನಂತರ ಇದೀಗ ಮತ್ತೆ ಸುಳ್ಯದಲ್ಲಿ ಭೂಮಿ ಕಂಪಿಸಿದೆ. ತಾಲೂಕಿನ ಉಬರಡ್ಕ, ಚೆಂಬು, ಗೂನಡ್ಕದಲ್ಲಿ 10.45ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ್ದು ಜನತೆ ಆತಂಕ ದಿಂದ ಹೊರಗೋಡಿ ಬಂದಿದ್ದಾರೆ. ಕರ್ನಾಟಕ ರಾಜ್ಯ ನ್ಯಾಚುರಲ್ ಡಿಸಾಸ್ಟರ್ ಮಾನಿಟರಿಂಗ್ ಸೆಂಟರ್ ಅಧಿಕೃತ ಬುಲೆಟಿನ್ ಬಿಡುಗಡೆಗೊಳಿಸಿದ್ದು, ಇದರ ಪ್ರಕಾರ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮ ಸಮೀಪ ಭೂ ಕಂಪನ ಉಂಟಾಗಿದ್ದು ರಿಕ್ಟರ್ ಮಾಪಕದಲ್ಲಿ 2.1 ತೀವ್ರತೆ ದಾಖಲಾಗಿದೆ. ಇದರ ಪ್ರಭಾವದಿಂದ ಸುಳ್ಯ ತಾಲೂಕಿನ ಹಲವೆಡೆ

ಸುಳ್ಯದಲ್ಲಿ 5ನೇ ಬಾರಿ ಕಂಪಿಸಿದ ಭೂಮಿ| ಆತಂಕದಲ್ಲಿ ಹೊರಗೋಡಿ ಬಂದ ಜನತೆ Read More »

ಸುಳ್ಯ: ಮಧ್ಯರಾತ್ರಿಯ ಭೂಕಂಪನ|ತೀವ್ರತೆ ಎಷ್ಟು? ಕೇಂದ್ರ ಬಿಂದು ಯಾವುದು?

ಸಮಗ್ರ ನ್ಯೂಸ್: ತಡರಾತ್ರಿ ಭಾರಿ ಕಂಪನದಿಂದ ಭೂಮಿ ಕಂಪಿಸಿದ್ದು ಕೊಡಗು ಹಾಗೂ ದಕ್ಷಿಣ ಕನ್ನಡದ ಗಡಿ ಭಾಗದಲ್ಲಿ ಸಿಹಿನಿದ್ರೆಯಲ್ಲಿದ್ದ ಜನರು ಹೌಹಾರಿದ್ದಾರೆ. ಭೂಕಂಪದ ತೀವ್ರತೆ 1.8ರಷ್ಟು ದಾಖಲಾಗಿತ್ತು ಎಂದು KSNDM ಕೇಂದ್ರ ಸ್ಪಷ್ಟಪಡಿಸಿದೆ. ಕಂಪನವು ಭೂಮಿಯ ೧೦ ಕಿ.ಮೀ ಅಡಿಯಲ್ಲಿ ನಡೆದಿದೆ ಎನ್ನಲಾಗಿದೆ. ಎಂ. ಚೆಂಬು ಹಾಗೂ ಪೆರಾಜೆ ಗ್ರಾಮದ ಕೇಂದ್ರ ಬಿಂದುವಿನಿಂದ ಭೂಕಂಪ ಸಂಭವಿಸಿದೆ. ಮುಂಜಾನೆ 1.15.12 ಸೆಕೆಂಡ್ ನಲ್ಲಿ ಭೂಕಂಪನ ಸಂಭವಿಸಿತ್ತು.

ಸುಳ್ಯ: ಮಧ್ಯರಾತ್ರಿಯ ಭೂಕಂಪನ|ತೀವ್ರತೆ ಎಷ್ಟು? ಕೇಂದ್ರ ಬಿಂದು ಯಾವುದು? Read More »

ಸುಳ್ಯದ ಜನತೆ ಗಮನಿಸಿ…ಈ ಮಾಹಿತಿ ನಿಮಗಾಗಿ

ಸಮಗ್ರ ನ್ಯೂಸ್: ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕುಕ್ಕೆ ಸುಬ್ರಹ್ಮಣ್ಯದಿಂದ ಸುಳ್ಯ ಮಾರ್ಗವಾಗಿ ಮಡಿಕೇರಿಗೆ ಪ್ರಯಾಣಿಸಲಿದ್ದು, ಸುಳ್ಯ ನಗರ ಸೇರಿದಂತೆ ಸುಬ್ರಹ್ಮಣ್ಯ-ಸುಳ್ಯ- ಮಡಿಕೇರಿ ಮಾರ್ಗದಲ್ಲಿ ವಾಹನ ಚಾಲಕರು ಅಡ್ಡಾದಿಡ್ಡಿಯಾಗಿ ವಾಹನ ಪಾರ್ಕಿಂಗ್ ಮಾಡದಂತೆ, ವಾಹನ ಚಲಾಯಿಸದಂತೆ ಪೊಲೀಸ್ ಪ್ರಕಟಣೆ ಹೊರಡಿಸಲಾಗಿದೆ. ರಾಜ್ಯಪಾಲರಿಗೆ Z+ ಸೆಕ್ಯೂರಿಟಿ ಇದ್ದು ಸಾರ್ವಜನಿಕರು ಇಂದು ಮುಂಜಾನೆ 9 ರಿಂದ 11 ಗಂಟೆವರೆಗೆ ಸಹಕರಿಸುವಂತೆ ಕೋರಲಾಗಿದೆ.

ಸುಳ್ಯದ ಜನತೆ ಗಮನಿಸಿ…ಈ ಮಾಹಿತಿ ನಿಮಗಾಗಿ Read More »

ಸುಳ್ಯ: ಇಂದು ರಾತ್ರಿ ಮತ್ತೆ ಕಂಪಿಸಿದ ಭೂಮಿ

ಸಮಗ್ರ ನ್ಯೂಸ್: ಕೆಳವು ದಿನಗಳ ಹಿಂದಷ್ಟೇ ಭೂಕಂಪನವಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಮತ್ತೆ ಭೂಮಿ ಕಂಪಿಸಿದೆ. ಜು 1 ರಂದು ತಡರಾತ್ರಿ1.15 ರ ಸುಮಾರಿಗೆ ಈ ಕಂಪನವಾದ ಅನುಭವವಾಗಿದೆ. ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ್ದು2 ಸೆಕೆಂಡುಗಳ ಕಾಲ ಈ ವಿದ್ಯಮಾನ ನಡೆದಿದೆ. ಈ ವೇಳೆ ಶೀಟ್ ಗಳು, ಕಟ್ಟಡ ನಲುಗಿದ ಅನುಭವವಾಗಿದೆ. ಸಂಪಾಜೆ, ಗೂನಡ್ಕ, ಪೆರಾಜೆ, ಅರಂಬೂರು, ಶಾಂತಿನಗರ, ಹಳೆಗೇಟು ಭಾಗದಲ್ಲಿ ಭೂಮಿ ಕಂಪಿಸಿದ್ದು ಇನ್ನು ಹಲವರಿಗೆ ದೊಡ್ಡ ಶಬ್ದದ ಅನುಭವವಾಗಿದೆ‌ ಎಂದು ತಿಳಿದುಬಂದಿದೆ. ಗ್ರಾಮೀಣ

ಸುಳ್ಯ: ಇಂದು ರಾತ್ರಿ ಮತ್ತೆ ಕಂಪಿಸಿದ ಭೂಮಿ Read More »

ಭಾರೀ ಮಳೆ ಹಿನ್ನಲೆ ನಾಳೆ.(ಜು.1) ದ.ಕ ಜಿಲ್ಲೆಯಾದ್ಯಂತ ಶಾಲಾ ಕಾಲೇಜಿಗೆ ರಜೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಸಂಜೆಯಿಂದ ಭಾರಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ನಾಳೆ, ಶುಕ್ರವಾರ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಬೆಳಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಆದರೆ ಜಿಲ್ಲಾಡಳಿತ ನಾಳೆ ಸಹ ಅಸಹಜವಾಗಿ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇರುವ ಕಾರಣ ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳು ಶುಕ್ರವಾರ ರಜೆ ಘೋಷಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ

ಭಾರೀ ಮಳೆ ಹಿನ್ನಲೆ ನಾಳೆ.(ಜು.1) ದ.ಕ ಜಿಲ್ಲೆಯಾದ್ಯಂತ ಶಾಲಾ ಕಾಲೇಜಿಗೆ ರಜೆ Read More »

ಮಂಗಳೂರು; ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ದೇವಸ್ಥಾನ, ಮನೆ, ರಸ್ತೆಗಳಿಗೆ ನೀರು ನುಗ್ಗಿದೆ. ಮಂಗಳೂರಿನಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ ಮಳೆಗೆ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ. ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ನಿನ್ನೆ ರಾತ್ರಿಯಿಂದ ವರುಣನ ಆರ್ಭಟ ಮತ್ತಷ್ಟು ಹೆಚ್ಚಾಗಿದೆ. ಮಂಗಳೂರು – ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತಿದ್ದು, ಸಂಚಾರ ವ್ಯವಸ್ಥೆ ಹದಗೆಟ್ಟಿದೆ. ಮತ್ತೊಂದೆಡೆ ಕೇರಳ-ಮುಂಬೈ ಸಂಪರ್ಕಿಸುವ ಕೊಟ್ಟಾರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನುಗ್ಗಿ ವಾಹನ ಸವಾರರು

ಮಂಗಳೂರು; ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ Read More »

ಸುಳ್ಯ: ಗಣಿಗಾರಿಕೆ ನಿಲ್ಲಿಸುವಂತೆ ಆಗ್ರಹಿಸಿ ಜಡಿಮಳೆಯ ನಡುವೆ ಧರಣಿ| ಗ್ರಾಮಸ್ಥರ ಪ್ರತಿಭಟನೆಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಸಾಥ್

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ‌ಮರ್ಕಂಜದಲ್ಲಿನ ಅಳವುಪಾರೆ ಗಣಿಗಾರಿಕೆ ಪ್ರದೇಶಕ್ಕೆ ಗಣಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆನ್ನಲ್ಲೇ ಗ್ರಾಮಸ್ಥರಿಂದ ಧರಣಿ ಆರಂಭಗೊಂಡಿದೆ. ಗಣಿಗಾರಿಕೆಯಿಂದ ಸ್ಥಳೀಯರಿಗೆ, ಧಾರ್ಮಿಕ ಕಟ್ಟಡಗಳಿಗೆ, ಶಾಲೆ ಹಾಗೂ ಜನವಸತಿ ಪ್ರದೇಶಕ್ಕೆ ಹಾನಿಯಾಗುತ್ತಿದ್ದು ತಕ್ಷಣ ಗಣಿಗಾರಿಕೆ ನಿಲ್ಲಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಮರ್ಕಂಜದ ಹಳೆ ವಿದ್ಯಾರ್ಥಿ ಸಂಘ, ಭಜನಾ ಮಂದಿರದ ಪದಾಧಿಕಾರಿಗಳು, ಗ್ರಾಮಸ್ಥರು ಧರಣಿಯಲ್ಲಿ ತೊಡಗಿದ್ದಾರೆ. ಮರ್ಕಂಜದ ಅಳವುಪಾರೆ ಗಣಿಗಾರಿಕೆಗೆ ಪಂಚಾಯತ್ ನ ಪರವಾನಗಿ ನವೀಕರಣವಾಗದಿದ್ದರೂ ಅಕ್ರಮವಾಗಿ

ಸುಳ್ಯ: ಗಣಿಗಾರಿಕೆ ನಿಲ್ಲಿಸುವಂತೆ ಆಗ್ರಹಿಸಿ ಜಡಿಮಳೆಯ ನಡುವೆ ಧರಣಿ| ಗ್ರಾಮಸ್ಥರ ಪ್ರತಿಭಟನೆಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಸಾಥ್ Read More »