ಮುಸಲಧಾರೆಗೆ ಬೆದರಿದ ಕರಾವಳಿ| ಮಂಗಳೂರು ನಗರ ಜಲಾವೃತ; ತಗ್ಗು ಪ್ರದೇಶಗಳಲ್ಲಿ ನುಗ್ಗಿದ ಕೃತಕ ನೆರೆ| ಪರಿಸ್ಥಿತಿ ಹತೋಟಿಯಲ್ಲಿಡಲು ಜಿಲ್ಲಾಡಳಿತ ಸಜ್ಜು|
ಸಮಗ್ರ ನ್ಯೂಸ್: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸಿನ ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ದ್ವಿಚಕ್ರವಾಹನ ಸವಾರರು ಪರದಾಡುವಂತಾಗಿದೆ. ಮಂಗಳೂರಿನ ಕೆಲ ಖಾಸಗಿ ಶಾಲೆಗಳು ರಜೆ ಘೋಷಿಸಿವೆ. ಮಳೆ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ನಿಗಾ ವಹಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದರೆ ಎಲ್ಲಾ ಮುಂಜಾಗೃತೆ ವಹಿಸಿ ಕಾರ್ಯ ನಿರ್ವಹಿಸಲು ಶಾಲೆಗಳಿಗೆ ಸೂಚಿಸಲಾಗಿದೆ. ಮಕ್ಕಳು ಶಾಲೆಗೆ ಬರಲು ಅನಾನುಕೂಲವಾದ ಪ್ರದೇಶದಲ್ಲಿ ಅಂತಹ ಮಕ್ಕಳಿಗೆ ಈ ದಿನ ರಜೆ ನೀಡಲಾಗಿದೆ’ […]









