ಕರಾವಳಿ

ದ.ಕ., ಉಡುಪಿಯಲ್ಲಿ ಜು.9 ರವರೆಗೆ ರೆಡ್ ಅಲರ್ಟ್

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆಯಬ್ಬರ ಮುಂದುವರಿದಿದ್ದು ಜು.7 ರಿಂದ ಜು.9 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜು.10ಮತ್ತು11 ರಂದು ಅರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಂಗಳೂರಿನಿಂದ ಕಾರವಾರ ಸಮುದ್ರದವರೆಗೆ

ದ.ಕ., ಉಡುಪಿಯಲ್ಲಿ ಜು.9 ರವರೆಗೆ ರೆಡ್ ಅಲರ್ಟ್ Read More »

ನಿರಂತರ ಮಳೆ: ಕುಕ್ಕೆಯಲ್ಲಿ ಭಕ್ತರು ವಿರಳ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದಿದ್ದು, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ನಿರಂತರ ಮಳೆಯಿಂದ ಭಕ್ತರು ತಮ್ಮ ಯಾತ್ರೆಗಳನ್ನೂ ಮುಂದೂಡಿದ್ದು, ಭಕ್ತರಿಂದ ತುಂಬಿ ತುಳುಕುತ್ತಿದ್ದ ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯು ಎರಡು ದಿನಗಳಿಂದ ಖಾಲಿ ಖಾಲಿಯಾಗಿದೆ. ಪೇಟೆಯಲ್ಲಿ ಯಾತ್ರಿಕರ ವಾಹನ ಓಡಾಟದ ಸಂಖ್ಯೆಯೂ ಇಳಿಮುಖಗೊಂಡಿದೆ. ವ್ಯಾಪಾರ ವ್ಯವಹಾರಗಳು ಇಳಿಮುಖ ಗೊಂಡಿವೆ ಎನ್ನುತ್ತಾರೆ ವ್ಯಾಪಾರಸ್ಥರು. ಇನ್ನು ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ನಾಲ್ಕು ದಿನಗಳಿಂದ ಸ್ನಾನಘಟ್ಟ ಮುಳುಗಡೆಯಾಗಿದೆ. ಭಕ್ತರು ನದಿತೀರದಲ್ಲೇ ಮಿಂದೇಳುತ್ತಾರೆ.

ನಿರಂತರ ಮಳೆ: ಕುಕ್ಕೆಯಲ್ಲಿ ಭಕ್ತರು ವಿರಳ Read More »

ಮಂಗಳೂರು: ಏರ್ ಪೋರ್ಟ್ ರನ್ ವೇ ಸಮೀಪ ರಸ್ತೆ ಕುಸಿತ

ಸಮಗ್ರ ನ್ಯೂಸ್: ಏರ್​ಪೋರ್ಟ್ ರನ್​ವೇ ಬದಿಯಲ್ಲೇ ರಸ್ತೆ ಕುಸಿದಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಅದ್ಯಪಾಡಿ ಬಳಿ ಇರುವ ರನ್ ವೇ ಸಮೀಪ ಕುಸಿತವಾಗಿದ್ದು, ಅದ್ಯಪಾಡಿಯಿಂದ ಕೈ ಕಂಬ ಹೋಗುವ ರಸ್ತೆ ಬಂದ್ ಮಾಡಲಾಗಿದೆ. ಏರ್​​ರ್ಪೋರ್ಟ್ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕ ಮಳೆ, ನೀರಿನ ಹೊರಹೊಮ್ಮುವಿಕೆಯಿಂದ ಕುಸಿತ ಉಂಟಾಗಿದೆ ಎನ್ನಲಾಗುತ್ತಿದೆ. ನಗರದಲ್ಲಿ ಭಾರೀ ಮಳೆ‌ ಮುಂದುವರೆದಿದೆ. ಮಂಗಳೂರು ವಿಮಾನ ನಿಲ್ದಾಣವು ಸೂಕ್ಷ್ಮ ಟೇಬಲ್ ಟಾಪ್ ರನ್​ವೇ ಹೊಂದಿರುವುದರಿಂದ ಈ ವಿದ್ಯಮಾನ ದೇಶದ ಗಮನ ಸೆಳೆದಿದೆ.

ಮಂಗಳೂರು: ಏರ್ ಪೋರ್ಟ್ ರನ್ ವೇ ಸಮೀಪ ರಸ್ತೆ ಕುಸಿತ Read More »

ಉದುರಿಹೋದ “ಕಾಡಮಲ್ಲಿಗೆ”| ಯಕ್ಷರಂಗದ ಧ್ರುವತಾರೆ ವಿಶ್ವನಾಥ ಶೆಟ್ಟಿ ಬೆಳ್ಳಾರೆ ಇನ್ನಿಲ್ಲ

ಸಮಗ್ರ ನ್ಯೂಸ್: ಹಿರಿಯ ಯಕ್ಷಗಾನ ಕಲಾವಿದ, ಯಕ್ಷರಂಗದ ಕಾಡಮಲ್ಲಿಗೆ ಖ್ಯಾತಿಯ ಬೆಳ್ಳಾರೆ ವಿಶ್ವನಾಥ ರೈ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಕನ್ನಡ ಮತ್ತು ತುಳು ಪ್ರಸಂಗಗಳಲ್ಲಿ ಮನೋಜ್ಞ ಅಭಿನಯದಿಂದ ಗಮನ ಸೆಳೆದಿದ್ದ ಬೆಳ್ಳಾರೆ ವಿಶ್ವನಾಥ ರೈ ಅವರು ಕರ್ನಾಟಕ ಮೇಳದಲ್ಲಿ ಮಂಡೆಚ್ಚ, ಅಳಿಕೆ, ಬೋಳಾರ, ಸಾಮಗ, ಮಿಜಾರು, ಪುಳಿಂಚ ಮೊದಲಾದ ಮಹಾನ್ ಚೇತನಗಳ ಒಡನಾಡಿಯಾಗಿದ್ದರು. ಅಳಿಕೆ ಯಕ್ಷನಿಧಿ, ಬೋಳಾರ ಪ್ರಶಸ್ತಿ ಮೊದಲಾದ ಪ್ರಶಸ್ತಿಗಳನ್ನು ಪಡೆದಿದ್ದರು. ಇತ್ತೀಚೆಗಷ್ಟೇ ಕಲ್ಲಡ್ಕದಲ್ಲಿ ಪುಳಿಂಚ ರಾಮಯ್ಯ ಶೆಟ್ಟಿ ಪ್ರಶಸ್ತಿಯನ್ನು ಸ್ವೀಕರಿಸಿದ್ದರು. 1949ರಲ್ಲಿ ಬೆಳ್ಳಾರೆಯಲ್ಲಿ

ಉದುರಿಹೋದ “ಕಾಡಮಲ್ಲಿಗೆ”| ಯಕ್ಷರಂಗದ ಧ್ರುವತಾರೆ ವಿಶ್ವನಾಥ ಶೆಟ್ಟಿ ಬೆಳ್ಳಾರೆ ಇನ್ನಿಲ್ಲ Read More »

ಬಂಟ್ವಾಳ: ಗುಡ್ಡ ಕುಸಿದು ಬಿದ್ದು ಇಬ್ಬರು ಕಣ್ಮರೆ; ಮತ್ತಿಬ್ಬರ ರಕ್ಷಣೆ

ಸಮಗ್ರ ನ್ಯೂಸ್: ಭಾರೀ ಮಳೆಗೆ ಮನೆ ಮೇಲೆ ಗುಡ್ಡವೊಂದು ಏಕಾಏಕಿ ಜರಿದು ಬಿದ್ದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ನಡೆದಿದೆ. ಮನೆ ಮೇಲೆ ಗುಡ್ಡ ಜರಿದ ಪರಿಣಾಮ ಮನೆಯೊಳಗೆ ನಾಲ್ವರು ಸಿಲುಕಿಕೊಂಡಿದ್ದಾರೆ. ತಕ್ಷಣ ಸ್ಥಳೀಯರಿಂದ ಇಬ್ಬರ ರಕ್ಷಣೆ ಮಾಡಲಾಗಿದ್ದು, ಉಳಿದ ಇಬ್ಬರಿಗಾಗಿ ಹುಡುಕಾಟ ನಡೆದಿದೆ. ಹೆನ್ರಿ ಕಾರ್ಲೊ ಎಂಬವರಿಗೆ ಸೇರಿದ ಕೊಠಡಿಯತ್ತ ಗುಡ್ಡ ಜರಿದು ಬಿದ್ದಿದೆ. ಕಾರ್ಲೋ ಅವರ ಮನೆಯ ತೋಟದ ಕೆಲಸಕ್ಕೆ ಬಂದಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕರು ಅನೇಕ ವರ್ಷಗಳಿಂದ

ಬಂಟ್ವಾಳ: ಗುಡ್ಡ ಕುಸಿದು ಬಿದ್ದು ಇಬ್ಬರು ಕಣ್ಮರೆ; ಮತ್ತಿಬ್ಬರ ರಕ್ಷಣೆ Read More »

ದ.ಕ‌ ದಲ್ಲಿ ಮುಂದುವರಿದ ವರುಣಾರ್ಭಟ| ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ(ಜು.7) ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 7 ರಂದು‌ ಗುರುವಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ನೇತ್ರಾವತಿ, ಕುಮಾರಧಾರಾ, ಗುರುಪುರ, ಗುಂಡ್ಯ‌ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹೊರಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ದ.ಕ‌ ದಲ್ಲಿ ಮುಂದುವರಿದ ವರುಣಾರ್ಭಟ| ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ(ಜು.7) ರಜೆ ಘೋಷಣೆ Read More »

ಕಿಶೋರ್ ಶೆಟ್ಟಿ ಅಂಗಿ ಬಿಚ್ಚಿಸಿ ನೀತಿ ಪಾಠ ಮಾಡಿದ ಕಮಿಷನರ್

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ಡ್ರಗ್ಸ್​ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಶೆಟ್ಟಿಯ ಅಂಗಿ ಬಿಚ್ಚಿ ಅವನು ಹಾಕಿಸಿಕೊಂಡಿದ್ದ ಟ್ಯಾಟು ನೋಡಿ ಮಂಗಳೂರು ಪೊಲೀಸ್ ಕಮಿಷನರ್ ಬುದ್ದಿವಾದ ಹೇಳಿದ್ದಾರೆ. ಸ್ಯಾಂಡಲ್ಲ್​​ವುಡ್ ಡ್ರಗ್ ಪ್ರಕರಣದಲ್ಲಿ ಮಂಗಳೂರಿನ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಬಂಧಿತನಾಗಿದ್ದ. ಇಂದು ಮಂಗಳೂರಿನಲ್ಲಿ ನಡೆದ ಎಂಒಬಿ ಪರೇಡ್​​​​ನಲ್ಲಿ ಇದ್ದ ಅವನನ್ನು ಪೊಲೀಸ್ ಕಮಿಷನರ್ ಎನ್‌.ಶಶಿಕುಮಾರ್ ಅವರು ಪ್ರಶ್ನಿಸಿದ್ದಾರೆ. ಡ್ರಗ್ಸ್​ ಪ್ರಕರಣದ ಆರೋಪಿ ಕಿಶೋರ್ ಶೆಟ್ಟಿ ಅಂಗಿ ಬಿಚ್ಚಿಸಿ ನೀತಿ ಪಾಠ ಮಾಡಿದ ಕಮಿಷನರ್​ಡ್ಯಾನ್ಸರ್ ಕಿಶೋರ್ ಅಮನ್

ಕಿಶೋರ್ ಶೆಟ್ಟಿ ಅಂಗಿ ಬಿಚ್ಚಿಸಿ ನೀತಿ ಪಾಠ ಮಾಡಿದ ಕಮಿಷನರ್ Read More »

ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಮೂರು ಕಾರುಗಳು ಜಖಂ

ಸಮಗ್ರ ನ್ಯೂಸ್: ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಮೂಡುಬಿದಿರೆಯ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಇಂಜಿನಿಯರಿಂಗ್ (ಎಂಐಟಿಇ) ಕಾಲೇಜಿನ ಕಾಂಪೌಂಡ್ ಗೋಡೆ ಕುಸಿದು ಮೂರು ಕಾರುಗಳು ಜಖಂಗೊಂಡಿವೆ. ಘಟನೆ ನಡೆದಾಗ ಹೊಸ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ನಡೆಯುತ್ತಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಮೂರು ಕಾರುಗಳು ಜಖಂ Read More »

ಪುತ್ತೂರು: ಹೆಬ್ಬಾವನ್ನು ಸಾಯಿಸಿ ಅರಣ್ಯ ಸಮಿತಿ ಬಾಗಿಲಿಗೆ ಕಟ್ಟಿ ಹಾಕಿದ ಇಬ್ಬರ ಸೆರೆ

ಸಮಗ್ರ ನ್ಯೂಸ್ : ಹೆಬ್ಬಾವೊಂದನ್ನು ಕೊಂದು ಅದನ್ನು ಪೆರ್ಲಂಪಾಡಿಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತಾಲೂಕಿನ ಕೊಳ್ತಿಗೆ ಗ್ರಾಮದ ಶೇಡಿಗುರಿ ನಿವಾಸಿ ಧನಂಜಯ (38) ಮತ್ತು ಜಯ(36) ಬಂಧಿತ ಆರೋಪಿಗಳು. ಅವರು ಮನೆಗೆ ಬಂದಿದ್ದ ಹೆಬ್ಬಾವನ್ನು ಕೊಂದು ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ್ದರು. ಹೆಬ್ಬಾವನ್ನು ಕೊಲ್ಲುವುದು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಜಾಮೀನು ರಹಿತ

ಪುತ್ತೂರು: ಹೆಬ್ಬಾವನ್ನು ಸಾಯಿಸಿ ಅರಣ್ಯ ಸಮಿತಿ ಬಾಗಿಲಿಗೆ ಕಟ್ಟಿ ಹಾಕಿದ ಇಬ್ಬರ ಸೆರೆ Read More »

ಮಂಗಳೂರು; ರಸ್ತೆ ಕಾಮಗಾರಿ,ಕಾಂಕ್ರಿಟೀಕರಣ ಗಳಿಂದ ಜನರಿಗೆ ತೊಂದರೆ ವ್ಯಾಪಕ ಟೀಕೆ, ವಿರೋಧ ವ್ಯಕ್ತ

ಸಮಗ್ರ ನ್ಯೂಸ್ : ಸ್ಮಾರ್ಟ್ ಸಿಟಿ ಮಂಗಳೂರು ನಗರದ ಸುತ್ತಮುತ್ತ ಎಲ್ಲಾ ಕಡೆ ರಸ್ತೆ ಕಾಮಗಾರಿಗಳು, ಕಾಂಕ್ರಿಟೀಕರಣ ನಡೆಯುತ್ತಿದ್ದು, ಇವುಗಳಿಂದ ಜನರಿಗೆ ತೊಂದರೆಯಾಗುತ್ತಿರುವ ಬಗ್ಗೆ ವ್ಯಾಪಕ ಟೀಕೆ, ವಿರೋಧಗಳು ವ್ಯಕ್ತವಾಗುತ್ತಿವೆ. ರಸ್ತೆ ಕಾಮಗಾರಿ ನಡೆಸಿದ ಬೆನ್ನಲ್ಲೇ ಅಗೆದು ಮತ್ತೆ ದುರಸ್ತಿಗೊಂಡಿದೆ. ಕಾಂಕ್ರಿಟೀಕರಣ ಕಾಮಗಾರಿಗಾಗಿ ಕೆಲ ತಿಂಗಳ ಕಾಲ ಮುಚ್ಚಿದ್ದ ರಸ್ತೆಯೊಂದು ಕಾಂಕ್ರಿಟೀಕರಣಗೊಂಡು ಸಂಚಾರಕ್ಕೆ ಮುಕ್ತಗೊಂಡ ಕೆಲ ದಿನಗಳಲ್ಲೇ ಯಂತ್ರದಿಂದ ಕಟ್ ಮಾಡಲ್ಪಟ್ಟಿದೆ. ನಗರದ ಪದವು- ಶರತ್ ಕಟ್ಟೆ ಯೆಯ್ಯಾಡಿ ಬೈಪಾಸ್ ರಸ್ತೆ ಹೊಸದಾಗಿ ಕಾಂಕ್ರಿಟೀಕರಣಗೊಂಡು ೧೦ ದಿನಗಳ

ಮಂಗಳೂರು; ರಸ್ತೆ ಕಾಮಗಾರಿ,ಕಾಂಕ್ರಿಟೀಕರಣ ಗಳಿಂದ ಜನರಿಗೆ ತೊಂದರೆ ವ್ಯಾಪಕ ಟೀಕೆ, ವಿರೋಧ ವ್ಯಕ್ತ Read More »