ಕರಾವಳಿ

ಮುಸಲಧಾರೆಗೆ ಬೆದರಿದ ಕರಾವಳಿ| ಮಂಗಳೂರು ನಗರ ಜಲಾವೃತ; ತಗ್ಗು ಪ್ರದೇಶಗಳಲ್ಲಿ ನುಗ್ಗಿದ ಕೃತಕ ನೆರೆ| ಪರಿಸ್ಥಿತಿ ಹತೋಟಿಯಲ್ಲಿಡಲು ಜಿಲ್ಲಾಡಳಿತ ಸಜ್ಜು|

ಸಮಗ್ರ ನ್ಯೂಸ್: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸಿನ ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ದ್ವಿಚಕ್ರವಾಹನ ಸವಾರರು ಪರದಾಡುವಂತಾಗಿದೆ. ಮಂಗಳೂರಿನ ಕೆಲ ಖಾಸಗಿ ಶಾಲೆಗಳು ರಜೆ ಘೋಷಿಸಿವೆ. ಮಳೆ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ನಿಗಾ ವಹಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದರೆ ಎಲ್ಲಾ ಮುಂಜಾಗೃತೆ ವಹಿಸಿ ಕಾರ್ಯ ನಿರ್ವಹಿಸಲು ಶಾಲೆಗಳಿಗೆ ಸೂಚಿಸಲಾಗಿದೆ. ಮಕ್ಕಳು ಶಾಲೆಗೆ ಬರಲು ಅನಾನುಕೂಲವಾದ ಪ್ರದೇಶದಲ್ಲಿ ಅಂತಹ ಮಕ್ಕಳಿಗೆ ಈ ದಿನ ರಜೆ ನೀಡಲಾಗಿದೆ’ […]

ಮುಸಲಧಾರೆಗೆ ಬೆದರಿದ ಕರಾವಳಿ| ಮಂಗಳೂರು ನಗರ ಜಲಾವೃತ; ತಗ್ಗು ಪ್ರದೇಶಗಳಲ್ಲಿ ನುಗ್ಗಿದ ಕೃತಕ ನೆರೆ| ಪರಿಸ್ಥಿತಿ ಹತೋಟಿಯಲ್ಲಿಡಲು ಜಿಲ್ಲಾಡಳಿತ ಸಜ್ಜು| Read More »

ಸುಳ್ಯ: ಮರ್ಕಂಜ ಅಳವುಪಾರೆ ಗಣಿಗಾರಿಕೆ ಪ್ರದೇಶದಲ್ಲಿ ಗಣಿ ಅಧಿಕಾರಿಗಳಿಂದ ಪರಿಶೀಲನೆ

ಸಮಗ್ರ ನ್ಯೂಸ್: ಗ್ರಾಮಸ್ಥರಿಂದ ಭಾರೀ ವಿರೋಧಕ್ಕೆ ಕಾರಣವಾಗಿದ್ದ ಸುಳ್ಯ ತಾಲೂಕಿನ ಮರ್ಕಂಜದ ಅಳವುಪಾರೆ ಗಣಿಗಾರಿಕೆ ಪ್ರದೇಶಕ್ಕೆ ಗಣಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಳವುಪಾರೆಯಲ್ಲಿ ನಡೆಸಲಾಗುತ್ತಿರುವ ಗಣಿಗಾರಿಕೆ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಗಣಿಯಿಂದ ಸ್ಥಳೀಯರಿಗೆ ಭಾರೀ ತೊಂದರೆ ಆಗುತ್ತಿದ್ದು ಗಣಿಯನ್ನು ನಿಲ್ಲಿಸಲು ಅಂಬೇಡ್ಕರ್ ರಕ್ಷಣಾ ವೇದಿಕೆ ಮನವಿ ಸಲ್ಲಿಸಿತ್ತು. ಇದಕ್ಕೆ ಅಧಿಕಾರಿಗಳು ಸ್ಪಂದಿಸಿ ಸ್ಥಳ ಭೇಟಿ ನಡೆಸಿದ್ದಾರೆ.

ಸುಳ್ಯ: ಮರ್ಕಂಜ ಅಳವುಪಾರೆ ಗಣಿಗಾರಿಕೆ ಪ್ರದೇಶದಲ್ಲಿ ಗಣಿ ಅಧಿಕಾರಿಗಳಿಂದ ಪರಿಶೀಲನೆ Read More »

ಮಂಗಳೂರು: ಮರವೂರು ಸೇತುವೆಯಲ್ಲಿ ಬಿರುಕು, ಅಲ್ಲಲ್ಲಿ ಧರೆ ಕುಸಿತ| ಹೆದ್ದಾರಿಗಳಲ್ಲಿ ಸಂಚಾರ ಅಯೋಮಯ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಮಳೆ ಬಿರುಸುಗೊಂಡಿದೆ. ಮಂಗಳೂರು ನಗರ ಹಾಗೂ ಹೊರವಲಯದ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದರೆ, ಕೆಲವೆಡೆ ಮನೆ ಸಮೀಪ ದರೆ ಕುಸಿತ, ತಡೆಗೋಡೆ ಕುಸಿದಿರುವುದು ವರದಿಯಾಗಿದೆ. ಮರವೂರು ಸೇತುವೆ ಬಳು ರಸ್ತೆಯಲ್ಲಿ ಬಿರುಕು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲು ಪಿಡಬ್ಲ್ಯುಡಿ ಕಾರ್ಯನಿರ್ವಾಹಕ ಇಂಜಿನಿಯರ್ ಅವರನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ತಿಳಿಸಿದ್ದಾರೆ. ನಗರದ ಪ್ರಮುಖ ರಾಜಕಾಲುವೆಗಳು ತುಂಬಿ ಹರಿಯುತ್ತಿವೆ. ಮಳೆ ಇದೇರೀತಿ ಇನ್ನೂ ಕೆಲ ಗಂಟೆಗಳ ಕಾಲ ಮುಂದುವರಿದಲ್ಲಿ ರಾಜಕಾಲುವೆಗಳ

ಮಂಗಳೂರು: ಮರವೂರು ಸೇತುವೆಯಲ್ಲಿ ಬಿರುಕು, ಅಲ್ಲಲ್ಲಿ ಧರೆ ಕುಸಿತ| ಹೆದ್ದಾರಿಗಳಲ್ಲಿ ಸಂಚಾರ ಅಯೋಮಯ Read More »

ಮಂಗಳೂರು: ಭಾರೀ ಮಳೆ ಹಿನ್ನಲೆ; ಶಾಲಾ ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಬಿರುಸಾಗಿದ್ದು, ಬುಧವಾರದಂತೆ ಗುರುವಾರವೂ ಬಿಡದೆ ಸುರಿಯುತ್ತಿದೆ. ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ವಿಶೇಷ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಶಾಲೆಗಳು ಕಾರ್ಯ ನಿರ್ವಹಿಸಬೇಕು, ಮಕ್ಕಳು ಶಾಲೆಗೆ ಬರಲು ಅನಾನುಕೂಲವಾದ ಪ್ರದೇಶದಲ್ಲಿ ಅಂತಹ ಮಕ್ಕಳಿಗೆ ಈ ದಿನ ರಜೆ ನೀಡಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ

ಮಂಗಳೂರು: ಭಾರೀ ಮಳೆ ಹಿನ್ನಲೆ; ಶಾಲಾ ಕಾಲೇಜುಗಳಿಗೆ ರಜೆ Read More »

ವಿಟ್ಲ: ಬಸ್ಸು ತಂಗುದಾಣದಲ್ಲಿ ರಕ್ತ ಪತ್ತೆಯಾದ ಪ್ರಕರಣ

*ಸತ್ಯಾಂಶ ಬಯಲಿಗೆ* ಸಮಗ್ರ ನ್ಯೂಸ್ : ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಬಿದ್ದು ಸಾರ್ವಜನಿಕರ ಬಸ್ಸು ತಂಗುದಾಣದಲ್ಲಿ ರಕ್ತ ಪತ್ತೆಯಾಗಿರುವ ಘಟನೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿಟ್ಲ -ಪುತ್ತೂರು ರಸ್ತೆಯ ಬದನಾಜೆಯಲ್ಲಿ ನಡೆದಿದೆ. ಬದನಾಜೆ ಬಸ್ಸು ತಂಗುದಾಣದ ಪಕ್ಕದಲ್ಲಿ ಹಾಲು ಸಂಗ್ರಹಣಾ ಕೇಂದ್ರವಿದ್ದು, ಅಲ್ಲಿಗೆ ಬಂದವರು ರಕ್ತವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಸ್ಥಳಕ್ಕಾಗಮಿಸಿದ ವಿಟ್ಲ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಕೈಗೆತ್ತಿಕೊಂಡಾಗ ಪ್ರಕರಣದ ಸತ್ಯಾಂಶ ಬೆಳಕಿಗೆ ಬಂದಿದೆ. ನೆಲ್ಲಿಗುಡ್ಡೆ ಮೂಲದ ವ್ಯಕ್ತಿ ಕುಡಿತದ

ವಿಟ್ಲ: ಬಸ್ಸು ತಂಗುದಾಣದಲ್ಲಿ ರಕ್ತ ಪತ್ತೆಯಾದ ಪ್ರಕರಣ Read More »

ಮಂಗಳೂರು; ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿ , ಓರ್ವ ಮೃತ್ಯು, ಇಬ್ಬರಿಗೆ ಗಾಯ

ಸಮಗ್ರ ನ್ಯೂಸ್ : ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡ ಘಟನೆಯೊಂದು ಹೊರವಲಯದ ಮುಲ್ಕಿ ಕೊಲ್ನಾಡು ಕೈಗಾರಿಕಾ ಪ್ರದೇಶದ ರಸ್ತೆಯಲ್ಲಿ ನಡೆದಿದೆ. ಮೃತಚಾಲಕನನ್ನು ಕೆಎಸ್.ರಾವ್ ನಗರ ವಿಜಯಪುರ ಕಾಲೊನಿ ನಿವಾಸಿ ಯಶವಂತರಾಯ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಭಗವಂತರಾಯ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಇವರು ಕೂಲಿ ಕೆಲಸಕ್ಕೆಂದು ಟೆಂಪೋದಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯುತ್

ಮಂಗಳೂರು; ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿ , ಓರ್ವ ಮೃತ್ಯು, ಇಬ್ಬರಿಗೆ ಗಾಯ Read More »

ಉದ್ಯೋಗಿನಿ ಯೋಜನೆಯಲ್ಲಿ ಮಹಿಳೆಯರು ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಸಮಗ್ರ ನ್ಯೂಸ್ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನಗೊಂಡ ಉದ್ಯೋಗಿನಿ ಯೋಜನೆಯಲ್ಲಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಶೇ.50 ಹಾಗೂ ಇತರೆ ವರ್ಗದ ಮಹಿಳೆಯರಿಗೆ ರಾಷ್ಟ್ರೀಕೃತ ಬ್ಯಾಂಕಿನಿಂದ ಶೇ.30 ಸಹಾಯಧನ ಪಡೆಯಲು ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಂಬಂಧಿಸಿದ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದು ಜುಲೈ 31ರೊಳಗೆ ಭರ್ತಿ ಮಾಡಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ

ಉದ್ಯೋಗಿನಿ ಯೋಜನೆಯಲ್ಲಿ ಮಹಿಳೆಯರು ಸಹಾಯಧನ ಪಡೆಯಲು ಅರ್ಜಿ ಆಹ್ವಾನ Read More »

ವಿಟ್ಲ: ಬಸ್ ನಿಲ್ದಾಣದಲ್ಲಿ ಆತಂಕ ಮೂಡಿಸಿದ ರಕ್ತದ ಕಲೆಗಳು….!!

ಸಮಗ್ರ ನ್ಯೂಸ್ : ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಬಾಗದ ತುಣುಕುಗಳು ಪತ್ತೆಯಾದ ಘಟನೆ ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ನಡೆದಿದೆ. ಬದನಾಜೆ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆಯಾಗಿದ್ದು, ಈ ಘಟನೆ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ. ಬಸ್ ನಿಲ್ದಾಣದಲ್ಲಿ ಯಾರನ್ನಾದರೂ ಹತ್ಯೆ ಮಾಡಲಾಗಿತ್ತೇ ಅಥವಾ ಅಪಘಾತದಿಂದ ಗಾಯಗೊಂಡವರು ಯಾರದರೂ ಬಸ್ ನಿಲ್ದಾಣದಲ್ಲಿ ಕುಳಿತು ಮತ್ತೆ ಆಸ್ಪತ್ರೆಗೆ ತೆರಳಿರಬಹುದೇ ಎಂಬ ಅನುಮಾನಗಳು ಸಾರ್ವಜನಿಕರಲ್ಲಿ ಸೃಷ್ಟಿಯಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು

ವಿಟ್ಲ: ಬಸ್ ನಿಲ್ದಾಣದಲ್ಲಿ ಆತಂಕ ಮೂಡಿಸಿದ ರಕ್ತದ ಕಲೆಗಳು….!! Read More »

ಬಂಟ್ವಾಳ: ಸ್ಟೀಲ್ ಪಾತ್ರೆಗಳ ಕಳವುಗೈದ ಆರೋಪಿ ಬಂಧನ

ಸಮಗ್ರ ನ್ಯೂಸ್ : ಮಣಿನಾಲ್ಕೂರು ಗ್ರಾಮದ ಅಂಗರಗಂಡಿ ಹಂಡೀರು ಎಂಬಲ್ಲಿ ಮನೆಯೊಂದರಿಂದ ಸ್ಟೀಲ್ ಪಾತ್ರೆಗಳು ಮತ್ತು ಮನೆಬಳಕೆಯ ಸಾಮಾಗ್ರಿಗಳನ್ನು ಕಳವುಗೈದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತನನ್ನು ಅಂಗರಗಂಡಿ ನಿವಾಸಿ ಪ್ರವೀಣ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಪ್ರವೀಣ್‌ನ ಸಹೋದರ ಸತೀಶ್‌ ತಲೆಮರೆಸಿಕೊಂಡಿದ್ದಾನೆ. ಒಂಟಿ ಮಹಿಳೆ ವಾಸಿಸುತ್ತಿದ್ದ ಮನೆಯಲ್ಲಿ ಉಕ್ಕಿನ ಪಾತ್ರೆಗಳನ್ನು ತೊಳೆದು ಹೊರಗಿಟ್ಟಿದ್ದ ವೇಳೆ ಜೂನ್ 25ರಂದು ಆರೋಪಿಗಳು ಕಳವುಗೈದಿದ್ದರು. ಬಾಯ್ಲರ್‌ಗಳು, ಮೂರು ಸ್ಟೀಲ್ ಪಾತ್ರೆಗಳು ಹಾಗೂ ಎರಡು ಫೈಬರ್‍

ಬಂಟ್ವಾಳ: ಸ್ಟೀಲ್ ಪಾತ್ರೆಗಳ ಕಳವುಗೈದ ಆರೋಪಿ ಬಂಧನ Read More »

ಪ್ರಕೃತಿಯ ಮೇಲಿನ ದೌರ್ಜನ್ಯ, ಒತ್ತಡಗಳೇ ಭೂಕಂಪಕ್ಕೆ ಕಾರಣ| ಭವಿಷ್ಯದಲ್ಲಿ ಕೊಡಗು, ದ.ಕದಲ್ಲಿ 5.0ವರೆಗೂ ಭೂಕಂಪನ ಸಾಧ್ಯತೆ

ಸಮಗ್ರ ನ್ಯೂಸ್: ಪ್ರಕೃತಿಯ ಮೇಲೆ ಮಾನವನ ದೌರ್ಜನ್ಯ ಹಾಗೂ ನಿರಂತರ ಒತ್ತಡದಿಂದ ಭೂಮಿ ಕಂಪಿಸುತ್ತಿದ್ದು, ಭವಿಷ್ಯದಲ್ಲಿ 5.0 ತೀವ್ರತೆಯ ಭೂಕಂಪನವನ್ನು ಕಾಣುವ ಸಾಧ್ಯತೆ ಇದೆ ಎಂದು ಭೂಗರ್ಭ ಶಾಸ್ತ್ರ ಪರಿಣತರು ಅಭಿಪ್ರಾಯಪಟ್ಟಿದ್ದಾರೆ. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆ ಸಂಧಿಸುವ ಸುಳ್ಯ ತಾಲೂಕಿನ ಗಡಿ ಭಾಗದಲ್ಲಿ ವಾರದ ಅವಧಿಯಲ್ಲಿ ಮೂರು ಬಾರಿ ಸಂಭವಿಸಿದ ಕಡಿಮೆ ತೀವ್ರತೆಯ ಭೂಕಂಪನಗಳು ಕರಾವಳಿಯಲ್ಲಿ ಭೀತಿಗೆ ಕಾರಣವಾಗಿದೆ. ಭೂಕಂಪ ತಜ್ಞರ ಪ್ರಕಾರ ನಿರಂತರವಾಗಿ ಸೆಸ್ಮಿಕ್‌ (ಭೂಕಂಪನ) ಚಟುವಟಿಕೆ ಗಳು ಹೆಚ್ಚುತ್ತಿರುವುದು ಇದಕ್ಕೆ ಕಾರಣ.

ಪ್ರಕೃತಿಯ ಮೇಲಿನ ದೌರ್ಜನ್ಯ, ಒತ್ತಡಗಳೇ ಭೂಕಂಪಕ್ಕೆ ಕಾರಣ| ಭವಿಷ್ಯದಲ್ಲಿ ಕೊಡಗು, ದ.ಕದಲ್ಲಿ 5.0ವರೆಗೂ ಭೂಕಂಪನ ಸಾಧ್ಯತೆ Read More »